Homeಸಾಹಿತ್ಯ-ಸಂಸ್ಕೃತಿಕಥೆಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ 'ನಗ್ನ 99'

ಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ ‘ನಗ್ನ 99’

ಈ ರಂಗಕೃತಿಯು ನಾಟಕಕಾರರ "ಸಕಲರೊಳು ಲಿಂಗಾತ್ಮ ಕಾಣಾ" ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹನಮಂತ ಹಾಲಿಗೇರಿ

ಕನ್ನಡದ ಯುವ ಬರಹಗಾರ ಹನಮಂತ ಹಾಲಿಗೇರಿಯವರ ಇದುವರೆಗಿನ ಸಾಹಿತ್ಯ ಅದು ಸಮಾಜಮುಖಿಯಾಗಿರುವಂತದ್ದು. ಬದುಕು ಮತ್ತು ಬರಹ ಸಮಾಜಕ್ಕೆ ಒಳಿತನ್ನು ಮಾಡಬೇಕೆಂಬ ಆಶಯ ಅವರದು. ಅವರ ಕೆಂಗುಲಾಬಿ ಕಾದಂಬರಿ ಬಹಳ ಪ್ರಸಿದ್ದಿ ಪಡೆದು ಸಿನಿಮಾ ಆಗುವತ್ತ ಹೆಜ್ಜೆ ಇಟ್ಟರೆ, ಊರು ಸುಟ್ಟರೂ ಹನಮಪ್ಪ ಹೊರಗ ಎಂಬ ನಾಟಕ ಇದವರೆಗು 320 ಪ್ರದರ್ಶನಗಳನ್ನು ಕಂಡಿದ್ದು ಜೈ ಕೇಸರಿನಂದನ ಎಂಬ ಸಿನೆಮಾ ಆಗಿಯೂ ತೆರೆಕಂಡಿದೆ. ಇಂತಹ ಯುವಪ್ರತಿಭೆಯ ಹೊಸ ಕಥೆ ನಗ್ನ 99 ಎಂಬುದು ನಾಟಕರೂಪಕ್ಕೆ ಬಂದು ಪ್ರದರ್ಶನಕ್ಕೆ ಸಿದ್ದವಾಗಿದೆ.

ಏನಿದು ನಗ್ನ 99?

ಅರೆಹುಚ್ಚನೊಬ್ಬನ ಮಾನಸಿಕ ತೊಳಲಾಟಗಳ ಸುತ್ತ ಇರುವ ಈ ನಾಟಕ, ಸಮಾಜದ ತುಂಬಿಕೊಂಡಿರುವ ಹುಚ್ಚತನಗಳನ್ನು ಬಯಲಿಗೆಳೆಯುವ ಆಶಯ ಹೊಂದಿರುವಂಥದ್ದು. ಬುದ್ಧಿಮಾಂದ್ಯರಿಗೆ ಮತ್ತು ಅಂಗವಿಕಲರಿಗೂ ನಿಸರ್ಗದತ್ತ ಲೈಂಗಿಕ ಬದುಕು ದಕ್ಕಬೇಕು ಎಂಬ ಮನೋವೈಜ್ಞಾನಿಕ ನೆಲೆಯ ಆಶಯವನ್ನು ನಾಟಕ ಹೊಂದಿದೆ.

ವಯೋಮಾನಕ್ಕೆ ತಕ್ಕಂತೆ ಸಹಜ ಲೈಂಗಿಕತೆಗಾಗಿ ಹಪಹಪಿಸುತ್ತಿರುವ ಅರೆಹುಚ್ಚನ ವಯಕ್ತಿಕ ಬದುಕನ್ನು ಜಗಜ್ಜಾಹೀರುಗೊಳಿಸಲು ಸ್ಪರ್ಧೆಗಿಳಿಯುವ ಇಂದಿನ ದೃಶ್ಯ ಮಾದ್ಯಮಗಳ ಕ್ರೌರ್ಯದ ಹಸಿವನ್ನೂ ಸಹ ಈ ಕಥನ ಬೆತ್ತಲುಗೊಳಿಸುತ್ತದೆ. ಹುಚ್ಚನೊಬ್ಬ ಕಾಲೇಜು ಹುಡುಗಿಯರನ್ನ ದಾರಿಯಲ್ಲಿ ನಿಂತು ನೋಡುತ್ತಿದ್ದ ಎಂಬ ಏಕೈಕ ಕಾರಣಕ್ಕೆ ಅವನನ್ನು ಗಿಡಕ್ಕೆ ಕಟ್ಟಿಸುವ ಟಿವಿ ರಿಪೋರ್ಟರ್ ನಿತೀಶ್, ಕಾಲೇಜು ಹುಡುಗರಿಂದ ಆ ಹುಡುಗನ ಮುಖಮೋತಿಯೆನ್ನದೇ ರಕ್ತ ಒಸರುವಂತೆ ಹೊಡೆಸುವ ದೃಶ್ಯದಿಂದ ನಾಟಕ ಶುರುವಾಗುತ್ತದೆ.

ಮುಂದೆ ಹಲವಾರು ತಿರುವುಗಳನ್ನು ಪಡೆದುಕೊಂಡು ಸಮಾಜದ ಒರೆಕೋರೆಗಳನ್ನು ವಿಡಂಭಿಸುವ ಈ ನಾಟಕ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತದೆ, ತನ್ನ ಮನೆಯಲ್ಲಿನ ಸಾಕುಪ್ರಾಣಿಗಳು ಬೆದೆ ಬಂದಿದ್ದರೆ ಅವುಕ್ಕೆ ಊರೆಲ್ಲ ಹುಡುಕಾಡಿ ಸಂಗಾತಿಯನ್ನು ಕರೆತಂದು ಸಂಯೋಗ ಮಾಡಿಸುವ ಮನುಷ್ಯ, ತನ್ನ ಮನೆಯಲ್ಲಿನ ಬುದ್ಧಿ ಮಾಂದ್ಯರನ್ನು ಮಾತ್ರ ಪ್ರಾಣಿಗಳಿಗಿಂತ ಕಡೆಯಾಗಿ ನೋಡುವ ಮನೋ ಸ್ಥಿತಿ ಸಮಾಜದಲ್ಲಿದೆ. ಈ ವೈಪರಿತ್ಯದ ನಿಷ್ಕರುಣೆಯನ್ನು ಎತ್ತಿ ತೋರಿಸುವ ರಂಗಕೃತಿಯು ನಾಟಕಕಾರರ “ಸಕಲರೊಳು ಲಿಂಗಾತ್ಮ ಕಾಣಾ” ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

ಹೇಮಂತ್ ಕುಮಾರ್

ಮೊದಲ ಪ್ರದರ್ಶನ ಇದೇ ಭಾನುವಾರ

ಹೆಜ್ಜೆ ಥಿಯೇಟರ್ (ರಿ) ನಿರ್ಮಾಣದಲ್ಲಿ ಮೂಡಿಬರಲಿರುವ ನಗ್ನ 99 ನಾಟಕದ ನಿರ್ದೇಶನದ ಜಬಾಬ್ದಾರಿಯನ್ನು ಸಂವಾದ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಹೇಮಂತ್ ಕುಮಾರ್ ರವರು ಹೊತ್ತಿದ್ದಾರೆ. ಈ ಮೊದಲು ಅವರು ‘ಕರ್ಣಭಾರ’ ನಾಟಕವನ್ನು ನಿರ್ದೇಶಿಸಿ ಪ್ರಸಂಶೆ ಪಡೆದಿದ್ದರು. ಜೂನ್ 02ರ ಭಾನುವಾರ ಸಂಜೆ 7:30ಕ್ಕೆ ಮಲ್ಲೇಶ್ವರಂನ ಸೇವಾಸದನದಲ್ಲಿ ನಗ್ನ 99 ನಾಟಕದ ಮೊದಲ ಪ್ರದರ್ಶನವಿದೆ. ಆಸಕ್ತರು ಟಿಕೆಟ್ ಗಾಗಿ 9535253595 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...