Homeಸಾಹಿತ್ಯ-ಸಂಸ್ಕೃತಿಕಥೆಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ 'ನಗ್ನ 99'

ಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ ‘ನಗ್ನ 99’

ಈ ರಂಗಕೃತಿಯು ನಾಟಕಕಾರರ "ಸಕಲರೊಳು ಲಿಂಗಾತ್ಮ ಕಾಣಾ" ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹನಮಂತ ಹಾಲಿಗೇರಿ

ಕನ್ನಡದ ಯುವ ಬರಹಗಾರ ಹನಮಂತ ಹಾಲಿಗೇರಿಯವರ ಇದುವರೆಗಿನ ಸಾಹಿತ್ಯ ಅದು ಸಮಾಜಮುಖಿಯಾಗಿರುವಂತದ್ದು. ಬದುಕು ಮತ್ತು ಬರಹ ಸಮಾಜಕ್ಕೆ ಒಳಿತನ್ನು ಮಾಡಬೇಕೆಂಬ ಆಶಯ ಅವರದು. ಅವರ ಕೆಂಗುಲಾಬಿ ಕಾದಂಬರಿ ಬಹಳ ಪ್ರಸಿದ್ದಿ ಪಡೆದು ಸಿನಿಮಾ ಆಗುವತ್ತ ಹೆಜ್ಜೆ ಇಟ್ಟರೆ, ಊರು ಸುಟ್ಟರೂ ಹನಮಪ್ಪ ಹೊರಗ ಎಂಬ ನಾಟಕ ಇದವರೆಗು 320 ಪ್ರದರ್ಶನಗಳನ್ನು ಕಂಡಿದ್ದು ಜೈ ಕೇಸರಿನಂದನ ಎಂಬ ಸಿನೆಮಾ ಆಗಿಯೂ ತೆರೆಕಂಡಿದೆ. ಇಂತಹ ಯುವಪ್ರತಿಭೆಯ ಹೊಸ ಕಥೆ ನಗ್ನ 99 ಎಂಬುದು ನಾಟಕರೂಪಕ್ಕೆ ಬಂದು ಪ್ರದರ್ಶನಕ್ಕೆ ಸಿದ್ದವಾಗಿದೆ.

ಏನಿದು ನಗ್ನ 99?

ಅರೆಹುಚ್ಚನೊಬ್ಬನ ಮಾನಸಿಕ ತೊಳಲಾಟಗಳ ಸುತ್ತ ಇರುವ ಈ ನಾಟಕ, ಸಮಾಜದ ತುಂಬಿಕೊಂಡಿರುವ ಹುಚ್ಚತನಗಳನ್ನು ಬಯಲಿಗೆಳೆಯುವ ಆಶಯ ಹೊಂದಿರುವಂಥದ್ದು. ಬುದ್ಧಿಮಾಂದ್ಯರಿಗೆ ಮತ್ತು ಅಂಗವಿಕಲರಿಗೂ ನಿಸರ್ಗದತ್ತ ಲೈಂಗಿಕ ಬದುಕು ದಕ್ಕಬೇಕು ಎಂಬ ಮನೋವೈಜ್ಞಾನಿಕ ನೆಲೆಯ ಆಶಯವನ್ನು ನಾಟಕ ಹೊಂದಿದೆ.

ವಯೋಮಾನಕ್ಕೆ ತಕ್ಕಂತೆ ಸಹಜ ಲೈಂಗಿಕತೆಗಾಗಿ ಹಪಹಪಿಸುತ್ತಿರುವ ಅರೆಹುಚ್ಚನ ವಯಕ್ತಿಕ ಬದುಕನ್ನು ಜಗಜ್ಜಾಹೀರುಗೊಳಿಸಲು ಸ್ಪರ್ಧೆಗಿಳಿಯುವ ಇಂದಿನ ದೃಶ್ಯ ಮಾದ್ಯಮಗಳ ಕ್ರೌರ್ಯದ ಹಸಿವನ್ನೂ ಸಹ ಈ ಕಥನ ಬೆತ್ತಲುಗೊಳಿಸುತ್ತದೆ. ಹುಚ್ಚನೊಬ್ಬ ಕಾಲೇಜು ಹುಡುಗಿಯರನ್ನ ದಾರಿಯಲ್ಲಿ ನಿಂತು ನೋಡುತ್ತಿದ್ದ ಎಂಬ ಏಕೈಕ ಕಾರಣಕ್ಕೆ ಅವನನ್ನು ಗಿಡಕ್ಕೆ ಕಟ್ಟಿಸುವ ಟಿವಿ ರಿಪೋರ್ಟರ್ ನಿತೀಶ್, ಕಾಲೇಜು ಹುಡುಗರಿಂದ ಆ ಹುಡುಗನ ಮುಖಮೋತಿಯೆನ್ನದೇ ರಕ್ತ ಒಸರುವಂತೆ ಹೊಡೆಸುವ ದೃಶ್ಯದಿಂದ ನಾಟಕ ಶುರುವಾಗುತ್ತದೆ.

ಮುಂದೆ ಹಲವಾರು ತಿರುವುಗಳನ್ನು ಪಡೆದುಕೊಂಡು ಸಮಾಜದ ಒರೆಕೋರೆಗಳನ್ನು ವಿಡಂಭಿಸುವ ಈ ನಾಟಕ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತದೆ, ತನ್ನ ಮನೆಯಲ್ಲಿನ ಸಾಕುಪ್ರಾಣಿಗಳು ಬೆದೆ ಬಂದಿದ್ದರೆ ಅವುಕ್ಕೆ ಊರೆಲ್ಲ ಹುಡುಕಾಡಿ ಸಂಗಾತಿಯನ್ನು ಕರೆತಂದು ಸಂಯೋಗ ಮಾಡಿಸುವ ಮನುಷ್ಯ, ತನ್ನ ಮನೆಯಲ್ಲಿನ ಬುದ್ಧಿ ಮಾಂದ್ಯರನ್ನು ಮಾತ್ರ ಪ್ರಾಣಿಗಳಿಗಿಂತ ಕಡೆಯಾಗಿ ನೋಡುವ ಮನೋ ಸ್ಥಿತಿ ಸಮಾಜದಲ್ಲಿದೆ. ಈ ವೈಪರಿತ್ಯದ ನಿಷ್ಕರುಣೆಯನ್ನು ಎತ್ತಿ ತೋರಿಸುವ ರಂಗಕೃತಿಯು ನಾಟಕಕಾರರ “ಸಕಲರೊಳು ಲಿಂಗಾತ್ಮ ಕಾಣಾ” ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

ಹೇಮಂತ್ ಕುಮಾರ್

ಮೊದಲ ಪ್ರದರ್ಶನ ಇದೇ ಭಾನುವಾರ

ಹೆಜ್ಜೆ ಥಿಯೇಟರ್ (ರಿ) ನಿರ್ಮಾಣದಲ್ಲಿ ಮೂಡಿಬರಲಿರುವ ನಗ್ನ 99 ನಾಟಕದ ನಿರ್ದೇಶನದ ಜಬಾಬ್ದಾರಿಯನ್ನು ಸಂವಾದ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಹೇಮಂತ್ ಕುಮಾರ್ ರವರು ಹೊತ್ತಿದ್ದಾರೆ. ಈ ಮೊದಲು ಅವರು ‘ಕರ್ಣಭಾರ’ ನಾಟಕವನ್ನು ನಿರ್ದೇಶಿಸಿ ಪ್ರಸಂಶೆ ಪಡೆದಿದ್ದರು. ಜೂನ್ 02ರ ಭಾನುವಾರ ಸಂಜೆ 7:30ಕ್ಕೆ ಮಲ್ಲೇಶ್ವರಂನ ಸೇವಾಸದನದಲ್ಲಿ ನಗ್ನ 99 ನಾಟಕದ ಮೊದಲ ಪ್ರದರ್ಶನವಿದೆ. ಆಸಕ್ತರು ಟಿಕೆಟ್ ಗಾಗಿ 9535253595 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...