Homeಸಾಹಿತ್ಯ-ಸಂಸ್ಕೃತಿಕಥೆಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ 'ನಗ್ನ 99'

ಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ ‘ನಗ್ನ 99’

ಈ ರಂಗಕೃತಿಯು ನಾಟಕಕಾರರ "ಸಕಲರೊಳು ಲಿಂಗಾತ್ಮ ಕಾಣಾ" ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹನಮಂತ ಹಾಲಿಗೇರಿ

ಕನ್ನಡದ ಯುವ ಬರಹಗಾರ ಹನಮಂತ ಹಾಲಿಗೇರಿಯವರ ಇದುವರೆಗಿನ ಸಾಹಿತ್ಯ ಅದು ಸಮಾಜಮುಖಿಯಾಗಿರುವಂತದ್ದು. ಬದುಕು ಮತ್ತು ಬರಹ ಸಮಾಜಕ್ಕೆ ಒಳಿತನ್ನು ಮಾಡಬೇಕೆಂಬ ಆಶಯ ಅವರದು. ಅವರ ಕೆಂಗುಲಾಬಿ ಕಾದಂಬರಿ ಬಹಳ ಪ್ರಸಿದ್ದಿ ಪಡೆದು ಸಿನಿಮಾ ಆಗುವತ್ತ ಹೆಜ್ಜೆ ಇಟ್ಟರೆ, ಊರು ಸುಟ್ಟರೂ ಹನಮಪ್ಪ ಹೊರಗ ಎಂಬ ನಾಟಕ ಇದವರೆಗು 320 ಪ್ರದರ್ಶನಗಳನ್ನು ಕಂಡಿದ್ದು ಜೈ ಕೇಸರಿನಂದನ ಎಂಬ ಸಿನೆಮಾ ಆಗಿಯೂ ತೆರೆಕಂಡಿದೆ. ಇಂತಹ ಯುವಪ್ರತಿಭೆಯ ಹೊಸ ಕಥೆ ನಗ್ನ 99 ಎಂಬುದು ನಾಟಕರೂಪಕ್ಕೆ ಬಂದು ಪ್ರದರ್ಶನಕ್ಕೆ ಸಿದ್ದವಾಗಿದೆ.

ಏನಿದು ನಗ್ನ 99?

ಅರೆಹುಚ್ಚನೊಬ್ಬನ ಮಾನಸಿಕ ತೊಳಲಾಟಗಳ ಸುತ್ತ ಇರುವ ಈ ನಾಟಕ, ಸಮಾಜದ ತುಂಬಿಕೊಂಡಿರುವ ಹುಚ್ಚತನಗಳನ್ನು ಬಯಲಿಗೆಳೆಯುವ ಆಶಯ ಹೊಂದಿರುವಂಥದ್ದು. ಬುದ್ಧಿಮಾಂದ್ಯರಿಗೆ ಮತ್ತು ಅಂಗವಿಕಲರಿಗೂ ನಿಸರ್ಗದತ್ತ ಲೈಂಗಿಕ ಬದುಕು ದಕ್ಕಬೇಕು ಎಂಬ ಮನೋವೈಜ್ಞಾನಿಕ ನೆಲೆಯ ಆಶಯವನ್ನು ನಾಟಕ ಹೊಂದಿದೆ.

ವಯೋಮಾನಕ್ಕೆ ತಕ್ಕಂತೆ ಸಹಜ ಲೈಂಗಿಕತೆಗಾಗಿ ಹಪಹಪಿಸುತ್ತಿರುವ ಅರೆಹುಚ್ಚನ ವಯಕ್ತಿಕ ಬದುಕನ್ನು ಜಗಜ್ಜಾಹೀರುಗೊಳಿಸಲು ಸ್ಪರ್ಧೆಗಿಳಿಯುವ ಇಂದಿನ ದೃಶ್ಯ ಮಾದ್ಯಮಗಳ ಕ್ರೌರ್ಯದ ಹಸಿವನ್ನೂ ಸಹ ಈ ಕಥನ ಬೆತ್ತಲುಗೊಳಿಸುತ್ತದೆ. ಹುಚ್ಚನೊಬ್ಬ ಕಾಲೇಜು ಹುಡುಗಿಯರನ್ನ ದಾರಿಯಲ್ಲಿ ನಿಂತು ನೋಡುತ್ತಿದ್ದ ಎಂಬ ಏಕೈಕ ಕಾರಣಕ್ಕೆ ಅವನನ್ನು ಗಿಡಕ್ಕೆ ಕಟ್ಟಿಸುವ ಟಿವಿ ರಿಪೋರ್ಟರ್ ನಿತೀಶ್, ಕಾಲೇಜು ಹುಡುಗರಿಂದ ಆ ಹುಡುಗನ ಮುಖಮೋತಿಯೆನ್ನದೇ ರಕ್ತ ಒಸರುವಂತೆ ಹೊಡೆಸುವ ದೃಶ್ಯದಿಂದ ನಾಟಕ ಶುರುವಾಗುತ್ತದೆ.

ಮುಂದೆ ಹಲವಾರು ತಿರುವುಗಳನ್ನು ಪಡೆದುಕೊಂಡು ಸಮಾಜದ ಒರೆಕೋರೆಗಳನ್ನು ವಿಡಂಭಿಸುವ ಈ ನಾಟಕ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತದೆ, ತನ್ನ ಮನೆಯಲ್ಲಿನ ಸಾಕುಪ್ರಾಣಿಗಳು ಬೆದೆ ಬಂದಿದ್ದರೆ ಅವುಕ್ಕೆ ಊರೆಲ್ಲ ಹುಡುಕಾಡಿ ಸಂಗಾತಿಯನ್ನು ಕರೆತಂದು ಸಂಯೋಗ ಮಾಡಿಸುವ ಮನುಷ್ಯ, ತನ್ನ ಮನೆಯಲ್ಲಿನ ಬುದ್ಧಿ ಮಾಂದ್ಯರನ್ನು ಮಾತ್ರ ಪ್ರಾಣಿಗಳಿಗಿಂತ ಕಡೆಯಾಗಿ ನೋಡುವ ಮನೋ ಸ್ಥಿತಿ ಸಮಾಜದಲ್ಲಿದೆ. ಈ ವೈಪರಿತ್ಯದ ನಿಷ್ಕರುಣೆಯನ್ನು ಎತ್ತಿ ತೋರಿಸುವ ರಂಗಕೃತಿಯು ನಾಟಕಕಾರರ “ಸಕಲರೊಳು ಲಿಂಗಾತ್ಮ ಕಾಣಾ” ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

ಹೇಮಂತ್ ಕುಮಾರ್

ಮೊದಲ ಪ್ರದರ್ಶನ ಇದೇ ಭಾನುವಾರ

ಹೆಜ್ಜೆ ಥಿಯೇಟರ್ (ರಿ) ನಿರ್ಮಾಣದಲ್ಲಿ ಮೂಡಿಬರಲಿರುವ ನಗ್ನ 99 ನಾಟಕದ ನಿರ್ದೇಶನದ ಜಬಾಬ್ದಾರಿಯನ್ನು ಸಂವಾದ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಹೇಮಂತ್ ಕುಮಾರ್ ರವರು ಹೊತ್ತಿದ್ದಾರೆ. ಈ ಮೊದಲು ಅವರು ‘ಕರ್ಣಭಾರ’ ನಾಟಕವನ್ನು ನಿರ್ದೇಶಿಸಿ ಪ್ರಸಂಶೆ ಪಡೆದಿದ್ದರು. ಜೂನ್ 02ರ ಭಾನುವಾರ ಸಂಜೆ 7:30ಕ್ಕೆ ಮಲ್ಲೇಶ್ವರಂನ ಸೇವಾಸದನದಲ್ಲಿ ನಗ್ನ 99 ನಾಟಕದ ಮೊದಲ ಪ್ರದರ್ಶನವಿದೆ. ಆಸಕ್ತರು ಟಿಕೆಟ್ ಗಾಗಿ 9535253595 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...