Homeಸಾಹಿತ್ಯ-ಸಂಸ್ಕೃತಿಕಥೆಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ 'ನಗ್ನ 99'

ಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ ‘ನಗ್ನ 99’

ಈ ರಂಗಕೃತಿಯು ನಾಟಕಕಾರರ "ಸಕಲರೊಳು ಲಿಂಗಾತ್ಮ ಕಾಣಾ" ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹನಮಂತ ಹಾಲಿಗೇರಿ

ಕನ್ನಡದ ಯುವ ಬರಹಗಾರ ಹನಮಂತ ಹಾಲಿಗೇರಿಯವರ ಇದುವರೆಗಿನ ಸಾಹಿತ್ಯ ಅದು ಸಮಾಜಮುಖಿಯಾಗಿರುವಂತದ್ದು. ಬದುಕು ಮತ್ತು ಬರಹ ಸಮಾಜಕ್ಕೆ ಒಳಿತನ್ನು ಮಾಡಬೇಕೆಂಬ ಆಶಯ ಅವರದು. ಅವರ ಕೆಂಗುಲಾಬಿ ಕಾದಂಬರಿ ಬಹಳ ಪ್ರಸಿದ್ದಿ ಪಡೆದು ಸಿನಿಮಾ ಆಗುವತ್ತ ಹೆಜ್ಜೆ ಇಟ್ಟರೆ, ಊರು ಸುಟ್ಟರೂ ಹನಮಪ್ಪ ಹೊರಗ ಎಂಬ ನಾಟಕ ಇದವರೆಗು 320 ಪ್ರದರ್ಶನಗಳನ್ನು ಕಂಡಿದ್ದು ಜೈ ಕೇಸರಿನಂದನ ಎಂಬ ಸಿನೆಮಾ ಆಗಿಯೂ ತೆರೆಕಂಡಿದೆ. ಇಂತಹ ಯುವಪ್ರತಿಭೆಯ ಹೊಸ ಕಥೆ ನಗ್ನ 99 ಎಂಬುದು ನಾಟಕರೂಪಕ್ಕೆ ಬಂದು ಪ್ರದರ್ಶನಕ್ಕೆ ಸಿದ್ದವಾಗಿದೆ.

ಏನಿದು ನಗ್ನ 99?

ಅರೆಹುಚ್ಚನೊಬ್ಬನ ಮಾನಸಿಕ ತೊಳಲಾಟಗಳ ಸುತ್ತ ಇರುವ ಈ ನಾಟಕ, ಸಮಾಜದ ತುಂಬಿಕೊಂಡಿರುವ ಹುಚ್ಚತನಗಳನ್ನು ಬಯಲಿಗೆಳೆಯುವ ಆಶಯ ಹೊಂದಿರುವಂಥದ್ದು. ಬುದ್ಧಿಮಾಂದ್ಯರಿಗೆ ಮತ್ತು ಅಂಗವಿಕಲರಿಗೂ ನಿಸರ್ಗದತ್ತ ಲೈಂಗಿಕ ಬದುಕು ದಕ್ಕಬೇಕು ಎಂಬ ಮನೋವೈಜ್ಞಾನಿಕ ನೆಲೆಯ ಆಶಯವನ್ನು ನಾಟಕ ಹೊಂದಿದೆ.

ವಯೋಮಾನಕ್ಕೆ ತಕ್ಕಂತೆ ಸಹಜ ಲೈಂಗಿಕತೆಗಾಗಿ ಹಪಹಪಿಸುತ್ತಿರುವ ಅರೆಹುಚ್ಚನ ವಯಕ್ತಿಕ ಬದುಕನ್ನು ಜಗಜ್ಜಾಹೀರುಗೊಳಿಸಲು ಸ್ಪರ್ಧೆಗಿಳಿಯುವ ಇಂದಿನ ದೃಶ್ಯ ಮಾದ್ಯಮಗಳ ಕ್ರೌರ್ಯದ ಹಸಿವನ್ನೂ ಸಹ ಈ ಕಥನ ಬೆತ್ತಲುಗೊಳಿಸುತ್ತದೆ. ಹುಚ್ಚನೊಬ್ಬ ಕಾಲೇಜು ಹುಡುಗಿಯರನ್ನ ದಾರಿಯಲ್ಲಿ ನಿಂತು ನೋಡುತ್ತಿದ್ದ ಎಂಬ ಏಕೈಕ ಕಾರಣಕ್ಕೆ ಅವನನ್ನು ಗಿಡಕ್ಕೆ ಕಟ್ಟಿಸುವ ಟಿವಿ ರಿಪೋರ್ಟರ್ ನಿತೀಶ್, ಕಾಲೇಜು ಹುಡುಗರಿಂದ ಆ ಹುಡುಗನ ಮುಖಮೋತಿಯೆನ್ನದೇ ರಕ್ತ ಒಸರುವಂತೆ ಹೊಡೆಸುವ ದೃಶ್ಯದಿಂದ ನಾಟಕ ಶುರುವಾಗುತ್ತದೆ.

ಮುಂದೆ ಹಲವಾರು ತಿರುವುಗಳನ್ನು ಪಡೆದುಕೊಂಡು ಸಮಾಜದ ಒರೆಕೋರೆಗಳನ್ನು ವಿಡಂಭಿಸುವ ಈ ನಾಟಕ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತದೆ, ತನ್ನ ಮನೆಯಲ್ಲಿನ ಸಾಕುಪ್ರಾಣಿಗಳು ಬೆದೆ ಬಂದಿದ್ದರೆ ಅವುಕ್ಕೆ ಊರೆಲ್ಲ ಹುಡುಕಾಡಿ ಸಂಗಾತಿಯನ್ನು ಕರೆತಂದು ಸಂಯೋಗ ಮಾಡಿಸುವ ಮನುಷ್ಯ, ತನ್ನ ಮನೆಯಲ್ಲಿನ ಬುದ್ಧಿ ಮಾಂದ್ಯರನ್ನು ಮಾತ್ರ ಪ್ರಾಣಿಗಳಿಗಿಂತ ಕಡೆಯಾಗಿ ನೋಡುವ ಮನೋ ಸ್ಥಿತಿ ಸಮಾಜದಲ್ಲಿದೆ. ಈ ವೈಪರಿತ್ಯದ ನಿಷ್ಕರುಣೆಯನ್ನು ಎತ್ತಿ ತೋರಿಸುವ ರಂಗಕೃತಿಯು ನಾಟಕಕಾರರ “ಸಕಲರೊಳು ಲಿಂಗಾತ್ಮ ಕಾಣಾ” ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

ಹೇಮಂತ್ ಕುಮಾರ್

ಮೊದಲ ಪ್ರದರ್ಶನ ಇದೇ ಭಾನುವಾರ

ಹೆಜ್ಜೆ ಥಿಯೇಟರ್ (ರಿ) ನಿರ್ಮಾಣದಲ್ಲಿ ಮೂಡಿಬರಲಿರುವ ನಗ್ನ 99 ನಾಟಕದ ನಿರ್ದೇಶನದ ಜಬಾಬ್ದಾರಿಯನ್ನು ಸಂವಾದ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಹೇಮಂತ್ ಕುಮಾರ್ ರವರು ಹೊತ್ತಿದ್ದಾರೆ. ಈ ಮೊದಲು ಅವರು ‘ಕರ್ಣಭಾರ’ ನಾಟಕವನ್ನು ನಿರ್ದೇಶಿಸಿ ಪ್ರಸಂಶೆ ಪಡೆದಿದ್ದರು. ಜೂನ್ 02ರ ಭಾನುವಾರ ಸಂಜೆ 7:30ಕ್ಕೆ ಮಲ್ಲೇಶ್ವರಂನ ಸೇವಾಸದನದಲ್ಲಿ ನಗ್ನ 99 ನಾಟಕದ ಮೊದಲ ಪ್ರದರ್ಶನವಿದೆ. ಆಸಕ್ತರು ಟಿಕೆಟ್ ಗಾಗಿ 9535253595 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...