Homeಸಾಹಿತ್ಯ-ಸಂಸ್ಕೃತಿಕಥೆಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ 'ನಗ್ನ 99'

ಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ ‘ನಗ್ನ 99’

ಈ ರಂಗಕೃತಿಯು ನಾಟಕಕಾರರ "ಸಕಲರೊಳು ಲಿಂಗಾತ್ಮ ಕಾಣಾ" ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹನಮಂತ ಹಾಲಿಗೇರಿ

ಕನ್ನಡದ ಯುವ ಬರಹಗಾರ ಹನಮಂತ ಹಾಲಿಗೇರಿಯವರ ಇದುವರೆಗಿನ ಸಾಹಿತ್ಯ ಅದು ಸಮಾಜಮುಖಿಯಾಗಿರುವಂತದ್ದು. ಬದುಕು ಮತ್ತು ಬರಹ ಸಮಾಜಕ್ಕೆ ಒಳಿತನ್ನು ಮಾಡಬೇಕೆಂಬ ಆಶಯ ಅವರದು. ಅವರ ಕೆಂಗುಲಾಬಿ ಕಾದಂಬರಿ ಬಹಳ ಪ್ರಸಿದ್ದಿ ಪಡೆದು ಸಿನಿಮಾ ಆಗುವತ್ತ ಹೆಜ್ಜೆ ಇಟ್ಟರೆ, ಊರು ಸುಟ್ಟರೂ ಹನಮಪ್ಪ ಹೊರಗ ಎಂಬ ನಾಟಕ ಇದವರೆಗು 320 ಪ್ರದರ್ಶನಗಳನ್ನು ಕಂಡಿದ್ದು ಜೈ ಕೇಸರಿನಂದನ ಎಂಬ ಸಿನೆಮಾ ಆಗಿಯೂ ತೆರೆಕಂಡಿದೆ. ಇಂತಹ ಯುವಪ್ರತಿಭೆಯ ಹೊಸ ಕಥೆ ನಗ್ನ 99 ಎಂಬುದು ನಾಟಕರೂಪಕ್ಕೆ ಬಂದು ಪ್ರದರ್ಶನಕ್ಕೆ ಸಿದ್ದವಾಗಿದೆ.

ಏನಿದು ನಗ್ನ 99?

ಅರೆಹುಚ್ಚನೊಬ್ಬನ ಮಾನಸಿಕ ತೊಳಲಾಟಗಳ ಸುತ್ತ ಇರುವ ಈ ನಾಟಕ, ಸಮಾಜದ ತುಂಬಿಕೊಂಡಿರುವ ಹುಚ್ಚತನಗಳನ್ನು ಬಯಲಿಗೆಳೆಯುವ ಆಶಯ ಹೊಂದಿರುವಂಥದ್ದು. ಬುದ್ಧಿಮಾಂದ್ಯರಿಗೆ ಮತ್ತು ಅಂಗವಿಕಲರಿಗೂ ನಿಸರ್ಗದತ್ತ ಲೈಂಗಿಕ ಬದುಕು ದಕ್ಕಬೇಕು ಎಂಬ ಮನೋವೈಜ್ಞಾನಿಕ ನೆಲೆಯ ಆಶಯವನ್ನು ನಾಟಕ ಹೊಂದಿದೆ.

ವಯೋಮಾನಕ್ಕೆ ತಕ್ಕಂತೆ ಸಹಜ ಲೈಂಗಿಕತೆಗಾಗಿ ಹಪಹಪಿಸುತ್ತಿರುವ ಅರೆಹುಚ್ಚನ ವಯಕ್ತಿಕ ಬದುಕನ್ನು ಜಗಜ್ಜಾಹೀರುಗೊಳಿಸಲು ಸ್ಪರ್ಧೆಗಿಳಿಯುವ ಇಂದಿನ ದೃಶ್ಯ ಮಾದ್ಯಮಗಳ ಕ್ರೌರ್ಯದ ಹಸಿವನ್ನೂ ಸಹ ಈ ಕಥನ ಬೆತ್ತಲುಗೊಳಿಸುತ್ತದೆ. ಹುಚ್ಚನೊಬ್ಬ ಕಾಲೇಜು ಹುಡುಗಿಯರನ್ನ ದಾರಿಯಲ್ಲಿ ನಿಂತು ನೋಡುತ್ತಿದ್ದ ಎಂಬ ಏಕೈಕ ಕಾರಣಕ್ಕೆ ಅವನನ್ನು ಗಿಡಕ್ಕೆ ಕಟ್ಟಿಸುವ ಟಿವಿ ರಿಪೋರ್ಟರ್ ನಿತೀಶ್, ಕಾಲೇಜು ಹುಡುಗರಿಂದ ಆ ಹುಡುಗನ ಮುಖಮೋತಿಯೆನ್ನದೇ ರಕ್ತ ಒಸರುವಂತೆ ಹೊಡೆಸುವ ದೃಶ್ಯದಿಂದ ನಾಟಕ ಶುರುವಾಗುತ್ತದೆ.

ಮುಂದೆ ಹಲವಾರು ತಿರುವುಗಳನ್ನು ಪಡೆದುಕೊಂಡು ಸಮಾಜದ ಒರೆಕೋರೆಗಳನ್ನು ವಿಡಂಭಿಸುವ ಈ ನಾಟಕ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತದೆ, ತನ್ನ ಮನೆಯಲ್ಲಿನ ಸಾಕುಪ್ರಾಣಿಗಳು ಬೆದೆ ಬಂದಿದ್ದರೆ ಅವುಕ್ಕೆ ಊರೆಲ್ಲ ಹುಡುಕಾಡಿ ಸಂಗಾತಿಯನ್ನು ಕರೆತಂದು ಸಂಯೋಗ ಮಾಡಿಸುವ ಮನುಷ್ಯ, ತನ್ನ ಮನೆಯಲ್ಲಿನ ಬುದ್ಧಿ ಮಾಂದ್ಯರನ್ನು ಮಾತ್ರ ಪ್ರಾಣಿಗಳಿಗಿಂತ ಕಡೆಯಾಗಿ ನೋಡುವ ಮನೋ ಸ್ಥಿತಿ ಸಮಾಜದಲ್ಲಿದೆ. ಈ ವೈಪರಿತ್ಯದ ನಿಷ್ಕರುಣೆಯನ್ನು ಎತ್ತಿ ತೋರಿಸುವ ರಂಗಕೃತಿಯು ನಾಟಕಕಾರರ “ಸಕಲರೊಳು ಲಿಂಗಾತ್ಮ ಕಾಣಾ” ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

ಹೇಮಂತ್ ಕುಮಾರ್

ಮೊದಲ ಪ್ರದರ್ಶನ ಇದೇ ಭಾನುವಾರ

ಹೆಜ್ಜೆ ಥಿಯೇಟರ್ (ರಿ) ನಿರ್ಮಾಣದಲ್ಲಿ ಮೂಡಿಬರಲಿರುವ ನಗ್ನ 99 ನಾಟಕದ ನಿರ್ದೇಶನದ ಜಬಾಬ್ದಾರಿಯನ್ನು ಸಂವಾದ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಹೇಮಂತ್ ಕುಮಾರ್ ರವರು ಹೊತ್ತಿದ್ದಾರೆ. ಈ ಮೊದಲು ಅವರು ‘ಕರ್ಣಭಾರ’ ನಾಟಕವನ್ನು ನಿರ್ದೇಶಿಸಿ ಪ್ರಸಂಶೆ ಪಡೆದಿದ್ದರು. ಜೂನ್ 02ರ ಭಾನುವಾರ ಸಂಜೆ 7:30ಕ್ಕೆ ಮಲ್ಲೇಶ್ವರಂನ ಸೇವಾಸದನದಲ್ಲಿ ನಗ್ನ 99 ನಾಟಕದ ಮೊದಲ ಪ್ರದರ್ಶನವಿದೆ. ಆಸಕ್ತರು ಟಿಕೆಟ್ ಗಾಗಿ 9535253595 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...