Homeಸಾಹಿತ್ಯ-ಸಂಸ್ಕೃತಿಕಥೆಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ 'ನಗ್ನ 99'

ಮನುಷ್ಯರನ್ನು ಮನುಷ್ಯರನ್ನಾಗಿ ನೋಡಲು ಕಲಿಸುವ ಮನುಷ್ಯತ್ವದ ನಾಟಕ ‘ನಗ್ನ 99’

ಈ ರಂಗಕೃತಿಯು ನಾಟಕಕಾರರ "ಸಕಲರೊಳು ಲಿಂಗಾತ್ಮ ಕಾಣಾ" ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಹನಮಂತ ಹಾಲಿಗೇರಿ

ಕನ್ನಡದ ಯುವ ಬರಹಗಾರ ಹನಮಂತ ಹಾಲಿಗೇರಿಯವರ ಇದುವರೆಗಿನ ಸಾಹಿತ್ಯ ಅದು ಸಮಾಜಮುಖಿಯಾಗಿರುವಂತದ್ದು. ಬದುಕು ಮತ್ತು ಬರಹ ಸಮಾಜಕ್ಕೆ ಒಳಿತನ್ನು ಮಾಡಬೇಕೆಂಬ ಆಶಯ ಅವರದು. ಅವರ ಕೆಂಗುಲಾಬಿ ಕಾದಂಬರಿ ಬಹಳ ಪ್ರಸಿದ್ದಿ ಪಡೆದು ಸಿನಿಮಾ ಆಗುವತ್ತ ಹೆಜ್ಜೆ ಇಟ್ಟರೆ, ಊರು ಸುಟ್ಟರೂ ಹನಮಪ್ಪ ಹೊರಗ ಎಂಬ ನಾಟಕ ಇದವರೆಗು 320 ಪ್ರದರ್ಶನಗಳನ್ನು ಕಂಡಿದ್ದು ಜೈ ಕೇಸರಿನಂದನ ಎಂಬ ಸಿನೆಮಾ ಆಗಿಯೂ ತೆರೆಕಂಡಿದೆ. ಇಂತಹ ಯುವಪ್ರತಿಭೆಯ ಹೊಸ ಕಥೆ ನಗ್ನ 99 ಎಂಬುದು ನಾಟಕರೂಪಕ್ಕೆ ಬಂದು ಪ್ರದರ್ಶನಕ್ಕೆ ಸಿದ್ದವಾಗಿದೆ.

ಏನಿದು ನಗ್ನ 99?

ಅರೆಹುಚ್ಚನೊಬ್ಬನ ಮಾನಸಿಕ ತೊಳಲಾಟಗಳ ಸುತ್ತ ಇರುವ ಈ ನಾಟಕ, ಸಮಾಜದ ತುಂಬಿಕೊಂಡಿರುವ ಹುಚ್ಚತನಗಳನ್ನು ಬಯಲಿಗೆಳೆಯುವ ಆಶಯ ಹೊಂದಿರುವಂಥದ್ದು. ಬುದ್ಧಿಮಾಂದ್ಯರಿಗೆ ಮತ್ತು ಅಂಗವಿಕಲರಿಗೂ ನಿಸರ್ಗದತ್ತ ಲೈಂಗಿಕ ಬದುಕು ದಕ್ಕಬೇಕು ಎಂಬ ಮನೋವೈಜ್ಞಾನಿಕ ನೆಲೆಯ ಆಶಯವನ್ನು ನಾಟಕ ಹೊಂದಿದೆ.

ವಯೋಮಾನಕ್ಕೆ ತಕ್ಕಂತೆ ಸಹಜ ಲೈಂಗಿಕತೆಗಾಗಿ ಹಪಹಪಿಸುತ್ತಿರುವ ಅರೆಹುಚ್ಚನ ವಯಕ್ತಿಕ ಬದುಕನ್ನು ಜಗಜ್ಜಾಹೀರುಗೊಳಿಸಲು ಸ್ಪರ್ಧೆಗಿಳಿಯುವ ಇಂದಿನ ದೃಶ್ಯ ಮಾದ್ಯಮಗಳ ಕ್ರೌರ್ಯದ ಹಸಿವನ್ನೂ ಸಹ ಈ ಕಥನ ಬೆತ್ತಲುಗೊಳಿಸುತ್ತದೆ. ಹುಚ್ಚನೊಬ್ಬ ಕಾಲೇಜು ಹುಡುಗಿಯರನ್ನ ದಾರಿಯಲ್ಲಿ ನಿಂತು ನೋಡುತ್ತಿದ್ದ ಎಂಬ ಏಕೈಕ ಕಾರಣಕ್ಕೆ ಅವನನ್ನು ಗಿಡಕ್ಕೆ ಕಟ್ಟಿಸುವ ಟಿವಿ ರಿಪೋರ್ಟರ್ ನಿತೀಶ್, ಕಾಲೇಜು ಹುಡುಗರಿಂದ ಆ ಹುಡುಗನ ಮುಖಮೋತಿಯೆನ್ನದೇ ರಕ್ತ ಒಸರುವಂತೆ ಹೊಡೆಸುವ ದೃಶ್ಯದಿಂದ ನಾಟಕ ಶುರುವಾಗುತ್ತದೆ.

ಮುಂದೆ ಹಲವಾರು ತಿರುವುಗಳನ್ನು ಪಡೆದುಕೊಂಡು ಸಮಾಜದ ಒರೆಕೋರೆಗಳನ್ನು ವಿಡಂಭಿಸುವ ಈ ನಾಟಕ ಪ್ರೇಕ್ಷಕರನ್ನು ಚಿಂತನೆಗೆ ಹಚ್ಚುತ್ತದೆ, ತನ್ನ ಮನೆಯಲ್ಲಿನ ಸಾಕುಪ್ರಾಣಿಗಳು ಬೆದೆ ಬಂದಿದ್ದರೆ ಅವುಕ್ಕೆ ಊರೆಲ್ಲ ಹುಡುಕಾಡಿ ಸಂಗಾತಿಯನ್ನು ಕರೆತಂದು ಸಂಯೋಗ ಮಾಡಿಸುವ ಮನುಷ್ಯ, ತನ್ನ ಮನೆಯಲ್ಲಿನ ಬುದ್ಧಿ ಮಾಂದ್ಯರನ್ನು ಮಾತ್ರ ಪ್ರಾಣಿಗಳಿಗಿಂತ ಕಡೆಯಾಗಿ ನೋಡುವ ಮನೋ ಸ್ಥಿತಿ ಸಮಾಜದಲ್ಲಿದೆ. ಈ ವೈಪರಿತ್ಯದ ನಿಷ್ಕರುಣೆಯನ್ನು ಎತ್ತಿ ತೋರಿಸುವ ರಂಗಕೃತಿಯು ನಾಟಕಕಾರರ “ಸಕಲರೊಳು ಲಿಂಗಾತ್ಮ ಕಾಣಾ” ಎಂಬ ಕಥೆಯನ್ನು ಆಧರಿಸಿದ್ದುದಾಗಿದೆ.

ಹೇಮಂತ್ ಕುಮಾರ್

ಮೊದಲ ಪ್ರದರ್ಶನ ಇದೇ ಭಾನುವಾರ

ಹೆಜ್ಜೆ ಥಿಯೇಟರ್ (ರಿ) ನಿರ್ಮಾಣದಲ್ಲಿ ಮೂಡಿಬರಲಿರುವ ನಗ್ನ 99 ನಾಟಕದ ನಿರ್ದೇಶನದ ಜಬಾಬ್ದಾರಿಯನ್ನು ಸಂವಾದ ಸಂಸ್ಥೆಯಲ್ಲಿ ತೊಡಗಿಸಿಕೊಂಡಿರುವ ಹೇಮಂತ್ ಕುಮಾರ್ ರವರು ಹೊತ್ತಿದ್ದಾರೆ. ಈ ಮೊದಲು ಅವರು ‘ಕರ್ಣಭಾರ’ ನಾಟಕವನ್ನು ನಿರ್ದೇಶಿಸಿ ಪ್ರಸಂಶೆ ಪಡೆದಿದ್ದರು. ಜೂನ್ 02ರ ಭಾನುವಾರ ಸಂಜೆ 7:30ಕ್ಕೆ ಮಲ್ಲೇಶ್ವರಂನ ಸೇವಾಸದನದಲ್ಲಿ ನಗ್ನ 99 ನಾಟಕದ ಮೊದಲ ಪ್ರದರ್ಶನವಿದೆ. ಆಸಕ್ತರು ಟಿಕೆಟ್ ಗಾಗಿ 9535253595 ಈ ನಂಬರ್ ಗೆ ಸಂಪರ್ಕಿಸಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...