Homeಕರ್ನಾಟಕನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ - ಬಿಕೆ ಹರಿಪ್ರಸಾದ್

ನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ – ಬಿಕೆ ಹರಿಪ್ರಸಾದ್

- Advertisement -
- Advertisement -

ಬಿಜೆಪಿ ಶಾಸಕರಿಗೆ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುವುದರಲ್ಲೇ ಅತಿ ಪ್ರೀತಿ ಅನಿಸುತ್ತದೆ ಎಂದು ವಿಧಾನ ಪರಿಷತ್‌ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಹೇಳಿದ್ದು, “ಸ್ವಾಮಿ ಅರವಿಂದ ಬೆಲ್ಲದ ಅವರೇ, ಇತಿಹಾಸದ ಗೊತ್ತು ಗುರಿ ಇಲ್ಲದೇ ಪೇಲವ ರೀತಿ ಯಾಕೆ ತೌಡು ಕುಟ್ಟುತ್ತೀರಿ. ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ದೇಶದ ಸಂವಿಧಾನ ರಚನೆಯ ಉದ್ದೇಶ, ದೂರದೃಷ್ಟಿ ಹಾಗೂ ಬಾಬಾ ಸಾಹೇಬರ ಶ್ರಮದ ಬಗ್ಗೆ ಎಳ್ಳಷ್ಟು ತಿಳಿವಳಿಕೆಯೂ ಇಲ್ಲದೆ ಇದ್ದರೆ ನಿಮ್ಮ ಕರ್ಮ. ಆದರೆ ಕನಿಷ್ಠ ಪಕ್ಷ ಸಂವಿಧಾನ ಹಾಗೂ ತುರ್ತುಪರಿಸ್ಥಿತಿಯ ಬಗ್ಗೆ ನಿಮ್ಮ ಪಕ್ಷ ಹಾಗೂ ನಿಮ್ಮ ನಾಯಕರ ನಿಲುವುಗಳ ಇತಿಹಾಸವನ್ನಾದರೂ ಓದಬಾರದೇ” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕಾಂಗ್ರೆಸ್ ಪಕ್ಷ ಹಾಗೂ ನೆಹರೂ ಅವರ ಮುತುವರ್ಜಿಯಲ್ಲೇ ಬಾಬಾ ಸಾಹೇಬರಿಗೆ ನೀಡಿದ ಜವಾಬ್ದಾರಿಯಿಂದಲೇ ಜಗತ್ತಿನ ಅತೀ ದೊಡ್ಡ ಸಂವಿಧಾನ ರಚಿಸಲು ಸಾಧ್ಯವಾಗಿದೆ. ಅದಕ್ಕೆ ನಡೆದ ಚರ್ಚೆಗಳು, ಸಂವಿಧಾನ ರಚನಾ ಸಮಿತಿಯ ನಡಾವಳಿಗಳು ಕನ್ನಡದಲ್ಲೇ ಪ್ರತಿ ಸಿಗುತ್ತದೆ. ಸಾಧ್ಯವಾದರೆ ಓದುವ ಹವ್ಯಾಸವಾದರೂ ರೂಢಿಸಿಕೊಳ್ಳಿ” ಎಂದು ಅವರು ಲೇವಡಿ ಮಾಡಿದ್ದಾರೆ.

“ಭಾರತ ಸಂವಿಧಾನ ಸ್ವೀಕರಿಸಲು ಅನರ್ಹ” ಎಂಬ ಶೀರ್ಷಿಕೆಯಲ್ಲಿ 1949 ನವೆಂಬರ್ 30ರಂದು ಆರ್ ಎಸ್ ಎಸ್ ನ ಮುಖವಾಣಿ “ಆರ್ಗನೈಸರ್” ಪತ್ರಿಕೆಯಲ್ಲಿ ಪ್ರಕಟವಾದ ಲೇಖನ ನೆನಪಿದೆಯೇ? ಆರ್.ಎಸ್.ಎಸ್ ನ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್, ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದ ಇತಿಹಾಸ ಅರಿವಿದೆಯೇ? ಗೋಳ್ವಾಲ್ಕರ್ ಬರೆದ ಆರ್ ಎಸ್ ಎಸ್ ನ “ಧರ್ಮಗ್ರಂಥ” “ಬಂಚ್ ಆಫ್ ಥಾಟ್ಸ್” ಕೃತಿಯಲ್ಲಿ ಸಂವಿಧಾನ , ತ್ರಿವರ್ಣ ಧ್ವಜದ ಬಗ್ಗೆ ನಿಮ್ಮ ಪರಿವಾರದ ನಿಲುವುಗಳನ್ನು ಸ್ಪಷ್ಟವಾಗಿ ಹೇಳಲಾಗಿದೆ ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆಯಾಗಿದೆ” ಎಂದು ಅವರು ಹೀಗೆಳೆದಿದ್ದಾರೆ. ಈ ಪುಸ್ತಕದ ಪ್ರತಿ ಖಾಲಿಯಾಗಿದ್ದರೆ ತರಿಸಿಕೊಡುತ್ತೇನೆ. ಒಮ್ಮೆ ಓದಿ ಇದರ ನಿಲುವಿಗೆ ವಿರುದ್ಧವಾಗಿದ್ದೇನೆ ಎಂದು ಹೇಳುವ ಧೈರ್ಯ ಮಾಡುತ್ತೀರಾ? ಎಂದು ಹರಿಪ್ರಸಾದ್ ಅವರು ಸವಾಲು ಹಾಕಿದ್ದಾರೆ.

ಬೆಲ್ಲದ ಅವರೇ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ಹೆಸರುವಾಸಿಯಾಗಿರುವ ಸಾವರ್ಕರ್ ಭಾರತಕ್ಕೆ ಮನುಸ್ಮೃತಿಯೇ ಶ್ರೇಷ್ಠ, ಈ ದೇಶ ಮುಂದಿನ ನಡೆಗಳು‌ ಮನುಸ್ಮೃತಿಯನ್ನೇ ಅನುಸರಿಸಬೇಕು ಎಂದು 1932 ತಮ್ಮ “ಕಿರ್ಲೋಸ್ಕರ್” ಲೇಖನದಲ್ಲಿ ಬರೆದಿದ್ದಾರೆ. ಈ ನಿಲುವಿನ ವಿರುದ್ಧ ನಾನಿದ್ದೇನೆ ಎಂದು ಹೇಳುವ ಕಿಂಚಿತ್ತಾದರೂ ಧೈರ್ಯ ಉಳಿದಿದೆಯಾ ಎಂದು ಪ್ರಶ್ನಿಸಿದ್ದಾರೆ.

“ನೆಹರೂ ಅವರ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ನಿಮ್ಮ ಸಂಘದ ಶ್ಯಾಮ ಪ್ರಸಾದ್ ಮುಖರ್ಜಿಯ ಗೃಹ ಕಚೇರಿಯ ಮೇಲೆ ತ್ರಿವರ್ಣ ಧ್ವಜ ಹಾರಿಸದೆ ಸಂವಿಧಾನಕ್ಕೆ ಅಪಚಾರ ಮಾಡಿ, ಮೂರು ಸಂಖ್ಯೆಗಳು ನಮಗೆ ಅಪಶಕುನ ಎಂದಿದ್ದು ನೆನಪಿದೆಯೇ? ಭಾರತೀಯ ನಾಯಕರು ನಮ್ಮ ಕೈಗೆ ತ್ರಿವರ್ಣ ಧ್ವಜವನ್ನು ಕೊಡಬಹುದು. ಆದರೆ ನಾವ್ಯಾವತ್ತೂ ಅದನ್ನು ಗೌರವಿಸುವುದಿಲ್ಲ ಮತ್ತು ಅದನ್ನು ಒಪ್ಪಿಕೊಳ್ಳುವುದೂ ಇಲ್ಲ. ಎಂದು 1947ರಲ್ಲಿಯೇ ಆರ್.ಎಸ್.ಎಸ್ ಮುಖವಾಣಿ ‘ದಿ ಆರ್ಗನೈಸರ್’ ಪತ್ರಿಕೆಯಲ್ಲಿ ಬರೆದುಕೊಂಡಿದ್ದರ ಪ್ರತಿ ಇದ್ದರೆ ಒಮ್ಮೆ ಓದಿಕೊಳ್ಳಿ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ತುರ್ತುಸ್ಥಿತಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬೆಲ್ಲದ ಅವರಿಗೆ ತಮ್ಮ ನಾಯಕ ವಾಜಪೇಯಿಯವರು ತುರ್ತು ಪರಿಸ್ಥಿತಿ ಬೆಂಬಲಿಸಿ ಮುಚ್ಚಳಿಕೆ ಬರೆದು ಕೊಟ್ಟು ಪೆರೋಲ್ ಮೇಲೆ ಮನೆಯಲ್ಲಿ ಕಳೆದಿದ್ದು ನೆನಪಿಲ್ಲವೇ? ಇಡೀ ಸಂಘ ಪರಿವಾರದ ಮುಂಚೂಣಿಯ ನಾಯಕರು ತುರ್ತುಸ್ಥಿತಿ ಬೆಂಬಲಿಸಿ ನಡೆಸಿದ ಸಭೆಗಳು ಗುಪ್ತವಾಗಿ ಉಳಿಯಲು ಸಾಧ್ಯವೇ? ಈ ದಾಖಲೆಗಳು ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾಣೆಯಾಗಿದ್ದರೆ ಬಿಡುವು ಮಾಡಿಕೊಂಡು ನಿಮ್ಮದೇ ಪಕ್ಷದ ನಾಯಕ ಸುಬ್ರಮಣ್ಯ ಸ್ವಾಮಿಯವರ ಸಾಮಾಜಿಕ ಜಾಲತಾಣವನ್ನೊಮ್ಮೆ ಕಣ್ಣಾಡಿಸಿ, ಕಣ್ಣೀರಾದರೂ ಉಳಿದೀತು” ಎಂದು ಅವರು ಹೇಳಿದ್ದಾರೆ.

“ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂವಿಧಾನವೇ ನೀಡಿರುವ ಆರ್ಟಿಕಲ್ 368 ಹಕ್ಕಿನ ಪರವಾಗಿ ಕಾಂಗ್ರೆಸ್ ಪಕ್ಷ ಇದೆ. ಆದರೆ ಬಿಜೆಪಿ ಸಂವಿಧಾನವನ್ನೇ ಬದಲಾಯಿಸುವ ನಿಲುವು ಹೊಂದಿದೆ. ಸಂವಿಧಾನ ತಿದ್ದುಪಡಿಗೂ, ಬದಲಾವಣೆಗೂ ಭಾರಿ ಅಂತರವಿದೆ. ಈ ನೆಲದ ಕಾನೂನಿಗೆ ಅತೀತರಾಗಿದ್ದೇವೆ, ಜನೋಪಕಾರಿ ನಿಲುವುಗಳನ್ನು ತೆಗೆದುಕೊಳ್ಳಲು ಕಾಲ ಕಾಲಕ್ಕೆ ಸಂವಿಧಾನಕ್ಕೆ ತಿದ್ದುಪಡಿಯನ್ನು ತಂದಿದ್ದೇವೆ. ಕಳೆದ 75 ವರ್ಷಗಳಲ್ಲಿ 106 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಲಾಗಿದೆ. 70ಕ್ಕೂ ಹೆಚ್ಚು ಬಾರಿ ಕಾಂಗ್ರೆಸ್ ಆಡಳಿತದಲ್ಲಿ ಹಾಗೂ 36ಕ್ಕೂ ಹೆಚ್ಚು ಬಾರಿ ಕಾಂಗ್ರೇಸತರ ಸರ್ಕಾರದ ಆಡಳಿತದಲ್ಲಿ ತಿದ್ದುಪಡಿಗಳಾಗಿದೆ” ಎಂದು ಅವರು ವಿವರಿಸಿದ್ದಾರೆ.

“ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ತಿದ್ದುಪಡಿ ಮಾಡುವುದು ಆಯಾ ಕಾಲಘಟ್ಟದ ಜನರ ಹಕ್ಕು ಮತ್ತು ಅಧಿಕಾರ” ಎಂದು ಬಾಬಾ ಸಾಹೇಬರು 1949 ಜನವರಿ 25ರ ಭಾಷಣದಲ್ಲಿಯೂ ಸ್ಪಷ್ಟಪಡಿಸಿದ್ದಾರೆ. ಒಮ್ಮೆ ಅಂಬೇಡ್ಕರ್ ಭಾಷಣ ಮತ್ತು ಬರಹ ಪುಸ್ತಕದ ಪುಟಗಳನ್ನು ತಿರುವಿ ಹಾಕಿ. ಜನಪರವಲ್ಲದ, ಒಂದಿಷ್ಟು ಕಾನೂನುಗಳಿಗೆ ತೊಡಕು ಆಗಲಿದೆ ಎಂದರೆ ಅದನ್ನು ಪ್ರತಿಭಟಿಸುವ ಹಾಗೂ ವಿರೋಧ ವ್ಯಕ್ತಪಡಿಸುವ ಪ್ರಜಾಪ್ರಭುತ್ವದ ಸೌಂದರ್ಯವನ್ನು ನಮ್ಮಲ್ಲಿ ಉಳಿಸಿಕೊಂಡಿದ್ದೇವೆ. ಆದರೆ ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

“ಕೊನೆಯದಾಗಿ ಬೆಲ್ಲದ ಅವರೇ ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿಗೆ ತರುವ ಸಂಘಪರಿವಾರದ ಹೋರಾಟಕ್ಕೆ ನಿಮ್ಮ ಬೆಂಬಲವೂ ಇದ್ದರೇ, ಕಬ್ಬನ್ನು ಹಿಂಡಿ ಹಿಪ್ಪೆ ಮಾಡಿ ನೊಣ, ಇರುವೆಗಳಂತೆ ಶೂದ್ರರು, ದಲಿತರ , ಬಹುಜನರಿಗೆ ಹಂಚುತ್ತಾರೆ. ಆಗ ಕಬ್ಬಿನ ಸಿಪ್ಪೆ ಮಾತ್ರ ನಿಮಗೆ, ‘ಬೆಲ್ಲ’ ದ ರುಚಿ ಮಾತ್ರ ಪರಿವಾರದ್ದು ಸ್ವಲ್ಪ ಜಾಗೃತೆ ಇರಲಿ” ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...