Homeಕರ್ನಾಟಕನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ - ಬಿಕೆ ಹರಿಪ್ರಸಾದ್

ನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ – ಬಿಕೆ ಹರಿಪ್ರಸಾದ್

- Advertisement -
- Advertisement -

ಬಿಜೆಪಿ ಶಾಸಕರಿಗೆ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುವುದರಲ್ಲೇ ಅತಿ ಪ್ರೀತಿ ಅನಿಸುತ್ತದೆ ಎಂದು ವಿಧಾನ ಪರಿಷತ್‌ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಹೇಳಿದ್ದು, “ಸ್ವಾಮಿ ಅರವಿಂದ ಬೆಲ್ಲದ ಅವರೇ, ಇತಿಹಾಸದ ಗೊತ್ತು ಗುರಿ ಇಲ್ಲದೇ ಪೇಲವ ರೀತಿ ಯಾಕೆ ತೌಡು ಕುಟ್ಟುತ್ತೀರಿ. ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ದೇಶದ ಸಂವಿಧಾನ ರಚನೆಯ ಉದ್ದೇಶ, ದೂರದೃಷ್ಟಿ ಹಾಗೂ ಬಾಬಾ ಸಾಹೇಬರ ಶ್ರಮದ ಬಗ್ಗೆ ಎಳ್ಳಷ್ಟು ತಿಳಿವಳಿಕೆಯೂ ಇಲ್ಲದೆ ಇದ್ದರೆ ನಿಮ್ಮ ಕರ್ಮ. ಆದರೆ ಕನಿಷ್ಠ ಪಕ್ಷ ಸಂವಿಧಾನ ಹಾಗೂ ತುರ್ತುಪರಿಸ್ಥಿತಿಯ ಬಗ್ಗೆ ನಿಮ್ಮ ಪಕ್ಷ ಹಾಗೂ ನಿಮ್ಮ ನಾಯಕರ ನಿಲುವುಗಳ ಇತಿಹಾಸವನ್ನಾದರೂ ಓದಬಾರದೇ” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕಾಂಗ್ರೆಸ್ ಪಕ್ಷ ಹಾಗೂ ನೆಹರೂ ಅವರ ಮುತುವರ್ಜಿಯಲ್ಲೇ ಬಾಬಾ ಸಾಹೇಬರಿಗೆ ನೀಡಿದ ಜವಾಬ್ದಾರಿಯಿಂದಲೇ ಜಗತ್ತಿನ ಅತೀ ದೊಡ್ಡ ಸಂವಿಧಾನ ರಚಿಸಲು ಸಾಧ್ಯವಾಗಿದೆ. ಅದಕ್ಕೆ ನಡೆದ ಚರ್ಚೆಗಳು, ಸಂವಿಧಾನ ರಚನಾ ಸಮಿತಿಯ ನಡಾವಳಿಗಳು ಕನ್ನಡದಲ್ಲೇ ಪ್ರತಿ ಸಿಗುತ್ತದೆ. ಸಾಧ್ಯವಾದರೆ ಓದುವ ಹವ್ಯಾಸವಾದರೂ ರೂಢಿಸಿಕೊಳ್ಳಿ” ಎಂದು ಅವರು ಲೇವಡಿ ಮಾಡಿದ್ದಾರೆ.

“ಭಾರತ ಸಂವಿಧಾನ ಸ್ವೀಕರಿಸಲು ಅನರ್ಹ” ಎಂಬ ಶೀರ್ಷಿಕೆಯಲ್ಲಿ 1949 ನವೆಂಬರ್ 30ರಂದು ಆರ್ ಎಸ್ ಎಸ್ ನ ಮುಖವಾಣಿ “ಆರ್ಗನೈಸರ್” ಪತ್ರಿಕೆಯಲ್ಲಿ ಪ್ರಕಟವಾದ ಲೇಖನ ನೆನಪಿದೆಯೇ? ಆರ್.ಎಸ್.ಎಸ್ ನ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್, ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದ ಇತಿಹಾಸ ಅರಿವಿದೆಯೇ? ಗೋಳ್ವಾಲ್ಕರ್ ಬರೆದ ಆರ್ ಎಸ್ ಎಸ್ ನ “ಧರ್ಮಗ್ರಂಥ” “ಬಂಚ್ ಆಫ್ ಥಾಟ್ಸ್” ಕೃತಿಯಲ್ಲಿ ಸಂವಿಧಾನ , ತ್ರಿವರ್ಣ ಧ್ವಜದ ಬಗ್ಗೆ ನಿಮ್ಮ ಪರಿವಾರದ ನಿಲುವುಗಳನ್ನು ಸ್ಪಷ್ಟವಾಗಿ ಹೇಳಲಾಗಿದೆ ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆಯಾಗಿದೆ” ಎಂದು ಅವರು ಹೀಗೆಳೆದಿದ್ದಾರೆ. ಈ ಪುಸ್ತಕದ ಪ್ರತಿ ಖಾಲಿಯಾಗಿದ್ದರೆ ತರಿಸಿಕೊಡುತ್ತೇನೆ. ಒಮ್ಮೆ ಓದಿ ಇದರ ನಿಲುವಿಗೆ ವಿರುದ್ಧವಾಗಿದ್ದೇನೆ ಎಂದು ಹೇಳುವ ಧೈರ್ಯ ಮಾಡುತ್ತೀರಾ? ಎಂದು ಹರಿಪ್ರಸಾದ್ ಅವರು ಸವಾಲು ಹಾಕಿದ್ದಾರೆ.

ಬೆಲ್ಲದ ಅವರೇ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ಹೆಸರುವಾಸಿಯಾಗಿರುವ ಸಾವರ್ಕರ್ ಭಾರತಕ್ಕೆ ಮನುಸ್ಮೃತಿಯೇ ಶ್ರೇಷ್ಠ, ಈ ದೇಶ ಮುಂದಿನ ನಡೆಗಳು‌ ಮನುಸ್ಮೃತಿಯನ್ನೇ ಅನುಸರಿಸಬೇಕು ಎಂದು 1932 ತಮ್ಮ “ಕಿರ್ಲೋಸ್ಕರ್” ಲೇಖನದಲ್ಲಿ ಬರೆದಿದ್ದಾರೆ. ಈ ನಿಲುವಿನ ವಿರುದ್ಧ ನಾನಿದ್ದೇನೆ ಎಂದು ಹೇಳುವ ಕಿಂಚಿತ್ತಾದರೂ ಧೈರ್ಯ ಉಳಿದಿದೆಯಾ ಎಂದು ಪ್ರಶ್ನಿಸಿದ್ದಾರೆ.

“ನೆಹರೂ ಅವರ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ನಿಮ್ಮ ಸಂಘದ ಶ್ಯಾಮ ಪ್ರಸಾದ್ ಮುಖರ್ಜಿಯ ಗೃಹ ಕಚೇರಿಯ ಮೇಲೆ ತ್ರಿವರ್ಣ ಧ್ವಜ ಹಾರಿಸದೆ ಸಂವಿಧಾನಕ್ಕೆ ಅಪಚಾರ ಮಾಡಿ, ಮೂರು ಸಂಖ್ಯೆಗಳು ನಮಗೆ ಅಪಶಕುನ ಎಂದಿದ್ದು ನೆನಪಿದೆಯೇ? ಭಾರತೀಯ ನಾಯಕರು ನಮ್ಮ ಕೈಗೆ ತ್ರಿವರ್ಣ ಧ್ವಜವನ್ನು ಕೊಡಬಹುದು. ಆದರೆ ನಾವ್ಯಾವತ್ತೂ ಅದನ್ನು ಗೌರವಿಸುವುದಿಲ್ಲ ಮತ್ತು ಅದನ್ನು ಒಪ್ಪಿಕೊಳ್ಳುವುದೂ ಇಲ್ಲ. ಎಂದು 1947ರಲ್ಲಿಯೇ ಆರ್.ಎಸ್.ಎಸ್ ಮುಖವಾಣಿ ‘ದಿ ಆರ್ಗನೈಸರ್’ ಪತ್ರಿಕೆಯಲ್ಲಿ ಬರೆದುಕೊಂಡಿದ್ದರ ಪ್ರತಿ ಇದ್ದರೆ ಒಮ್ಮೆ ಓದಿಕೊಳ್ಳಿ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ತುರ್ತುಸ್ಥಿತಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬೆಲ್ಲದ ಅವರಿಗೆ ತಮ್ಮ ನಾಯಕ ವಾಜಪೇಯಿಯವರು ತುರ್ತು ಪರಿಸ್ಥಿತಿ ಬೆಂಬಲಿಸಿ ಮುಚ್ಚಳಿಕೆ ಬರೆದು ಕೊಟ್ಟು ಪೆರೋಲ್ ಮೇಲೆ ಮನೆಯಲ್ಲಿ ಕಳೆದಿದ್ದು ನೆನಪಿಲ್ಲವೇ? ಇಡೀ ಸಂಘ ಪರಿವಾರದ ಮುಂಚೂಣಿಯ ನಾಯಕರು ತುರ್ತುಸ್ಥಿತಿ ಬೆಂಬಲಿಸಿ ನಡೆಸಿದ ಸಭೆಗಳು ಗುಪ್ತವಾಗಿ ಉಳಿಯಲು ಸಾಧ್ಯವೇ? ಈ ದಾಖಲೆಗಳು ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾಣೆಯಾಗಿದ್ದರೆ ಬಿಡುವು ಮಾಡಿಕೊಂಡು ನಿಮ್ಮದೇ ಪಕ್ಷದ ನಾಯಕ ಸುಬ್ರಮಣ್ಯ ಸ್ವಾಮಿಯವರ ಸಾಮಾಜಿಕ ಜಾಲತಾಣವನ್ನೊಮ್ಮೆ ಕಣ್ಣಾಡಿಸಿ, ಕಣ್ಣೀರಾದರೂ ಉಳಿದೀತು” ಎಂದು ಅವರು ಹೇಳಿದ್ದಾರೆ.

“ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂವಿಧಾನವೇ ನೀಡಿರುವ ಆರ್ಟಿಕಲ್ 368 ಹಕ್ಕಿನ ಪರವಾಗಿ ಕಾಂಗ್ರೆಸ್ ಪಕ್ಷ ಇದೆ. ಆದರೆ ಬಿಜೆಪಿ ಸಂವಿಧಾನವನ್ನೇ ಬದಲಾಯಿಸುವ ನಿಲುವು ಹೊಂದಿದೆ. ಸಂವಿಧಾನ ತಿದ್ದುಪಡಿಗೂ, ಬದಲಾವಣೆಗೂ ಭಾರಿ ಅಂತರವಿದೆ. ಈ ನೆಲದ ಕಾನೂನಿಗೆ ಅತೀತರಾಗಿದ್ದೇವೆ, ಜನೋಪಕಾರಿ ನಿಲುವುಗಳನ್ನು ತೆಗೆದುಕೊಳ್ಳಲು ಕಾಲ ಕಾಲಕ್ಕೆ ಸಂವಿಧಾನಕ್ಕೆ ತಿದ್ದುಪಡಿಯನ್ನು ತಂದಿದ್ದೇವೆ. ಕಳೆದ 75 ವರ್ಷಗಳಲ್ಲಿ 106 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಲಾಗಿದೆ. 70ಕ್ಕೂ ಹೆಚ್ಚು ಬಾರಿ ಕಾಂಗ್ರೆಸ್ ಆಡಳಿತದಲ್ಲಿ ಹಾಗೂ 36ಕ್ಕೂ ಹೆಚ್ಚು ಬಾರಿ ಕಾಂಗ್ರೇಸತರ ಸರ್ಕಾರದ ಆಡಳಿತದಲ್ಲಿ ತಿದ್ದುಪಡಿಗಳಾಗಿದೆ” ಎಂದು ಅವರು ವಿವರಿಸಿದ್ದಾರೆ.

“ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ತಿದ್ದುಪಡಿ ಮಾಡುವುದು ಆಯಾ ಕಾಲಘಟ್ಟದ ಜನರ ಹಕ್ಕು ಮತ್ತು ಅಧಿಕಾರ” ಎಂದು ಬಾಬಾ ಸಾಹೇಬರು 1949 ಜನವರಿ 25ರ ಭಾಷಣದಲ್ಲಿಯೂ ಸ್ಪಷ್ಟಪಡಿಸಿದ್ದಾರೆ. ಒಮ್ಮೆ ಅಂಬೇಡ್ಕರ್ ಭಾಷಣ ಮತ್ತು ಬರಹ ಪುಸ್ತಕದ ಪುಟಗಳನ್ನು ತಿರುವಿ ಹಾಕಿ. ಜನಪರವಲ್ಲದ, ಒಂದಿಷ್ಟು ಕಾನೂನುಗಳಿಗೆ ತೊಡಕು ಆಗಲಿದೆ ಎಂದರೆ ಅದನ್ನು ಪ್ರತಿಭಟಿಸುವ ಹಾಗೂ ವಿರೋಧ ವ್ಯಕ್ತಪಡಿಸುವ ಪ್ರಜಾಪ್ರಭುತ್ವದ ಸೌಂದರ್ಯವನ್ನು ನಮ್ಮಲ್ಲಿ ಉಳಿಸಿಕೊಂಡಿದ್ದೇವೆ. ಆದರೆ ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

“ಕೊನೆಯದಾಗಿ ಬೆಲ್ಲದ ಅವರೇ ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿಗೆ ತರುವ ಸಂಘಪರಿವಾರದ ಹೋರಾಟಕ್ಕೆ ನಿಮ್ಮ ಬೆಂಬಲವೂ ಇದ್ದರೇ, ಕಬ್ಬನ್ನು ಹಿಂಡಿ ಹಿಪ್ಪೆ ಮಾಡಿ ನೊಣ, ಇರುವೆಗಳಂತೆ ಶೂದ್ರರು, ದಲಿತರ , ಬಹುಜನರಿಗೆ ಹಂಚುತ್ತಾರೆ. ಆಗ ಕಬ್ಬಿನ ಸಿಪ್ಪೆ ಮಾತ್ರ ನಿಮಗೆ, ‘ಬೆಲ್ಲ’ ದ ರುಚಿ ಮಾತ್ರ ಪರಿವಾರದ್ದು ಸ್ವಲ್ಪ ಜಾಗೃತೆ ಇರಲಿ” ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...