Homeಕರ್ನಾಟಕನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ - ಬಿಕೆ ಹರಿಪ್ರಸಾದ್

ನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ – ಬಿಕೆ ಹರಿಪ್ರಸಾದ್

- Advertisement -
- Advertisement -

ಬಿಜೆಪಿ ಶಾಸಕರಿಗೆ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುವುದರಲ್ಲೇ ಅತಿ ಪ್ರೀತಿ ಅನಿಸುತ್ತದೆ ಎಂದು ವಿಧಾನ ಪರಿಷತ್‌ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಹೇಳಿದ್ದು, “ಸ್ವಾಮಿ ಅರವಿಂದ ಬೆಲ್ಲದ ಅವರೇ, ಇತಿಹಾಸದ ಗೊತ್ತು ಗುರಿ ಇಲ್ಲದೇ ಪೇಲವ ರೀತಿ ಯಾಕೆ ತೌಡು ಕುಟ್ಟುತ್ತೀರಿ. ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ದೇಶದ ಸಂವಿಧಾನ ರಚನೆಯ ಉದ್ದೇಶ, ದೂರದೃಷ್ಟಿ ಹಾಗೂ ಬಾಬಾ ಸಾಹೇಬರ ಶ್ರಮದ ಬಗ್ಗೆ ಎಳ್ಳಷ್ಟು ತಿಳಿವಳಿಕೆಯೂ ಇಲ್ಲದೆ ಇದ್ದರೆ ನಿಮ್ಮ ಕರ್ಮ. ಆದರೆ ಕನಿಷ್ಠ ಪಕ್ಷ ಸಂವಿಧಾನ ಹಾಗೂ ತುರ್ತುಪರಿಸ್ಥಿತಿಯ ಬಗ್ಗೆ ನಿಮ್ಮ ಪಕ್ಷ ಹಾಗೂ ನಿಮ್ಮ ನಾಯಕರ ನಿಲುವುಗಳ ಇತಿಹಾಸವನ್ನಾದರೂ ಓದಬಾರದೇ” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕಾಂಗ್ರೆಸ್ ಪಕ್ಷ ಹಾಗೂ ನೆಹರೂ ಅವರ ಮುತುವರ್ಜಿಯಲ್ಲೇ ಬಾಬಾ ಸಾಹೇಬರಿಗೆ ನೀಡಿದ ಜವಾಬ್ದಾರಿಯಿಂದಲೇ ಜಗತ್ತಿನ ಅತೀ ದೊಡ್ಡ ಸಂವಿಧಾನ ರಚಿಸಲು ಸಾಧ್ಯವಾಗಿದೆ. ಅದಕ್ಕೆ ನಡೆದ ಚರ್ಚೆಗಳು, ಸಂವಿಧಾನ ರಚನಾ ಸಮಿತಿಯ ನಡಾವಳಿಗಳು ಕನ್ನಡದಲ್ಲೇ ಪ್ರತಿ ಸಿಗುತ್ತದೆ. ಸಾಧ್ಯವಾದರೆ ಓದುವ ಹವ್ಯಾಸವಾದರೂ ರೂಢಿಸಿಕೊಳ್ಳಿ” ಎಂದು ಅವರು ಲೇವಡಿ ಮಾಡಿದ್ದಾರೆ.

“ಭಾರತ ಸಂವಿಧಾನ ಸ್ವೀಕರಿಸಲು ಅನರ್ಹ” ಎಂಬ ಶೀರ್ಷಿಕೆಯಲ್ಲಿ 1949 ನವೆಂಬರ್ 30ರಂದು ಆರ್ ಎಸ್ ಎಸ್ ನ ಮುಖವಾಣಿ “ಆರ್ಗನೈಸರ್” ಪತ್ರಿಕೆಯಲ್ಲಿ ಪ್ರಕಟವಾದ ಲೇಖನ ನೆನಪಿದೆಯೇ? ಆರ್.ಎಸ್.ಎಸ್ ನ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್, ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದ ಇತಿಹಾಸ ಅರಿವಿದೆಯೇ? ಗೋಳ್ವಾಲ್ಕರ್ ಬರೆದ ಆರ್ ಎಸ್ ಎಸ್ ನ “ಧರ್ಮಗ್ರಂಥ” “ಬಂಚ್ ಆಫ್ ಥಾಟ್ಸ್” ಕೃತಿಯಲ್ಲಿ ಸಂವಿಧಾನ , ತ್ರಿವರ್ಣ ಧ್ವಜದ ಬಗ್ಗೆ ನಿಮ್ಮ ಪರಿವಾರದ ನಿಲುವುಗಳನ್ನು ಸ್ಪಷ್ಟವಾಗಿ ಹೇಳಲಾಗಿದೆ ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆಯಾಗಿದೆ” ಎಂದು ಅವರು ಹೀಗೆಳೆದಿದ್ದಾರೆ. ಈ ಪುಸ್ತಕದ ಪ್ರತಿ ಖಾಲಿಯಾಗಿದ್ದರೆ ತರಿಸಿಕೊಡುತ್ತೇನೆ. ಒಮ್ಮೆ ಓದಿ ಇದರ ನಿಲುವಿಗೆ ವಿರುದ್ಧವಾಗಿದ್ದೇನೆ ಎಂದು ಹೇಳುವ ಧೈರ್ಯ ಮಾಡುತ್ತೀರಾ? ಎಂದು ಹರಿಪ್ರಸಾದ್ ಅವರು ಸವಾಲು ಹಾಕಿದ್ದಾರೆ.

ಬೆಲ್ಲದ ಅವರೇ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ಹೆಸರುವಾಸಿಯಾಗಿರುವ ಸಾವರ್ಕರ್ ಭಾರತಕ್ಕೆ ಮನುಸ್ಮೃತಿಯೇ ಶ್ರೇಷ್ಠ, ಈ ದೇಶ ಮುಂದಿನ ನಡೆಗಳು‌ ಮನುಸ್ಮೃತಿಯನ್ನೇ ಅನುಸರಿಸಬೇಕು ಎಂದು 1932 ತಮ್ಮ “ಕಿರ್ಲೋಸ್ಕರ್” ಲೇಖನದಲ್ಲಿ ಬರೆದಿದ್ದಾರೆ. ಈ ನಿಲುವಿನ ವಿರುದ್ಧ ನಾನಿದ್ದೇನೆ ಎಂದು ಹೇಳುವ ಕಿಂಚಿತ್ತಾದರೂ ಧೈರ್ಯ ಉಳಿದಿದೆಯಾ ಎಂದು ಪ್ರಶ್ನಿಸಿದ್ದಾರೆ.

“ನೆಹರೂ ಅವರ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ನಿಮ್ಮ ಸಂಘದ ಶ್ಯಾಮ ಪ್ರಸಾದ್ ಮುಖರ್ಜಿಯ ಗೃಹ ಕಚೇರಿಯ ಮೇಲೆ ತ್ರಿವರ್ಣ ಧ್ವಜ ಹಾರಿಸದೆ ಸಂವಿಧಾನಕ್ಕೆ ಅಪಚಾರ ಮಾಡಿ, ಮೂರು ಸಂಖ್ಯೆಗಳು ನಮಗೆ ಅಪಶಕುನ ಎಂದಿದ್ದು ನೆನಪಿದೆಯೇ? ಭಾರತೀಯ ನಾಯಕರು ನಮ್ಮ ಕೈಗೆ ತ್ರಿವರ್ಣ ಧ್ವಜವನ್ನು ಕೊಡಬಹುದು. ಆದರೆ ನಾವ್ಯಾವತ್ತೂ ಅದನ್ನು ಗೌರವಿಸುವುದಿಲ್ಲ ಮತ್ತು ಅದನ್ನು ಒಪ್ಪಿಕೊಳ್ಳುವುದೂ ಇಲ್ಲ. ಎಂದು 1947ರಲ್ಲಿಯೇ ಆರ್.ಎಸ್.ಎಸ್ ಮುಖವಾಣಿ ‘ದಿ ಆರ್ಗನೈಸರ್’ ಪತ್ರಿಕೆಯಲ್ಲಿ ಬರೆದುಕೊಂಡಿದ್ದರ ಪ್ರತಿ ಇದ್ದರೆ ಒಮ್ಮೆ ಓದಿಕೊಳ್ಳಿ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ತುರ್ತುಸ್ಥಿತಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬೆಲ್ಲದ ಅವರಿಗೆ ತಮ್ಮ ನಾಯಕ ವಾಜಪೇಯಿಯವರು ತುರ್ತು ಪರಿಸ್ಥಿತಿ ಬೆಂಬಲಿಸಿ ಮುಚ್ಚಳಿಕೆ ಬರೆದು ಕೊಟ್ಟು ಪೆರೋಲ್ ಮೇಲೆ ಮನೆಯಲ್ಲಿ ಕಳೆದಿದ್ದು ನೆನಪಿಲ್ಲವೇ? ಇಡೀ ಸಂಘ ಪರಿವಾರದ ಮುಂಚೂಣಿಯ ನಾಯಕರು ತುರ್ತುಸ್ಥಿತಿ ಬೆಂಬಲಿಸಿ ನಡೆಸಿದ ಸಭೆಗಳು ಗುಪ್ತವಾಗಿ ಉಳಿಯಲು ಸಾಧ್ಯವೇ? ಈ ದಾಖಲೆಗಳು ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾಣೆಯಾಗಿದ್ದರೆ ಬಿಡುವು ಮಾಡಿಕೊಂಡು ನಿಮ್ಮದೇ ಪಕ್ಷದ ನಾಯಕ ಸುಬ್ರಮಣ್ಯ ಸ್ವಾಮಿಯವರ ಸಾಮಾಜಿಕ ಜಾಲತಾಣವನ್ನೊಮ್ಮೆ ಕಣ್ಣಾಡಿಸಿ, ಕಣ್ಣೀರಾದರೂ ಉಳಿದೀತು” ಎಂದು ಅವರು ಹೇಳಿದ್ದಾರೆ.

“ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂವಿಧಾನವೇ ನೀಡಿರುವ ಆರ್ಟಿಕಲ್ 368 ಹಕ್ಕಿನ ಪರವಾಗಿ ಕಾಂಗ್ರೆಸ್ ಪಕ್ಷ ಇದೆ. ಆದರೆ ಬಿಜೆಪಿ ಸಂವಿಧಾನವನ್ನೇ ಬದಲಾಯಿಸುವ ನಿಲುವು ಹೊಂದಿದೆ. ಸಂವಿಧಾನ ತಿದ್ದುಪಡಿಗೂ, ಬದಲಾವಣೆಗೂ ಭಾರಿ ಅಂತರವಿದೆ. ಈ ನೆಲದ ಕಾನೂನಿಗೆ ಅತೀತರಾಗಿದ್ದೇವೆ, ಜನೋಪಕಾರಿ ನಿಲುವುಗಳನ್ನು ತೆಗೆದುಕೊಳ್ಳಲು ಕಾಲ ಕಾಲಕ್ಕೆ ಸಂವಿಧಾನಕ್ಕೆ ತಿದ್ದುಪಡಿಯನ್ನು ತಂದಿದ್ದೇವೆ. ಕಳೆದ 75 ವರ್ಷಗಳಲ್ಲಿ 106 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಲಾಗಿದೆ. 70ಕ್ಕೂ ಹೆಚ್ಚು ಬಾರಿ ಕಾಂಗ್ರೆಸ್ ಆಡಳಿತದಲ್ಲಿ ಹಾಗೂ 36ಕ್ಕೂ ಹೆಚ್ಚು ಬಾರಿ ಕಾಂಗ್ರೇಸತರ ಸರ್ಕಾರದ ಆಡಳಿತದಲ್ಲಿ ತಿದ್ದುಪಡಿಗಳಾಗಿದೆ” ಎಂದು ಅವರು ವಿವರಿಸಿದ್ದಾರೆ.

“ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ತಿದ್ದುಪಡಿ ಮಾಡುವುದು ಆಯಾ ಕಾಲಘಟ್ಟದ ಜನರ ಹಕ್ಕು ಮತ್ತು ಅಧಿಕಾರ” ಎಂದು ಬಾಬಾ ಸಾಹೇಬರು 1949 ಜನವರಿ 25ರ ಭಾಷಣದಲ್ಲಿಯೂ ಸ್ಪಷ್ಟಪಡಿಸಿದ್ದಾರೆ. ಒಮ್ಮೆ ಅಂಬೇಡ್ಕರ್ ಭಾಷಣ ಮತ್ತು ಬರಹ ಪುಸ್ತಕದ ಪುಟಗಳನ್ನು ತಿರುವಿ ಹಾಕಿ. ಜನಪರವಲ್ಲದ, ಒಂದಿಷ್ಟು ಕಾನೂನುಗಳಿಗೆ ತೊಡಕು ಆಗಲಿದೆ ಎಂದರೆ ಅದನ್ನು ಪ್ರತಿಭಟಿಸುವ ಹಾಗೂ ವಿರೋಧ ವ್ಯಕ್ತಪಡಿಸುವ ಪ್ರಜಾಪ್ರಭುತ್ವದ ಸೌಂದರ್ಯವನ್ನು ನಮ್ಮಲ್ಲಿ ಉಳಿಸಿಕೊಂಡಿದ್ದೇವೆ. ಆದರೆ ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

“ಕೊನೆಯದಾಗಿ ಬೆಲ್ಲದ ಅವರೇ ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿಗೆ ತರುವ ಸಂಘಪರಿವಾರದ ಹೋರಾಟಕ್ಕೆ ನಿಮ್ಮ ಬೆಂಬಲವೂ ಇದ್ದರೇ, ಕಬ್ಬನ್ನು ಹಿಂಡಿ ಹಿಪ್ಪೆ ಮಾಡಿ ನೊಣ, ಇರುವೆಗಳಂತೆ ಶೂದ್ರರು, ದಲಿತರ , ಬಹುಜನರಿಗೆ ಹಂಚುತ್ತಾರೆ. ಆಗ ಕಬ್ಬಿನ ಸಿಪ್ಪೆ ಮಾತ್ರ ನಿಮಗೆ, ‘ಬೆಲ್ಲ’ ದ ರುಚಿ ಮಾತ್ರ ಪರಿವಾರದ್ದು ಸ್ವಲ್ಪ ಜಾಗೃತೆ ಇರಲಿ” ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...