Homeಕರ್ನಾಟಕನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ - ಬಿಕೆ ಹರಿಪ್ರಸಾದ್

ನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ – ಬಿಕೆ ಹರಿಪ್ರಸಾದ್

- Advertisement -
- Advertisement -

ಬಿಜೆಪಿ ಶಾಸಕರಿಗೆ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುವುದರಲ್ಲೇ ಅತಿ ಪ್ರೀತಿ ಅನಿಸುತ್ತದೆ ಎಂದು ವಿಧಾನ ಪರಿಷತ್‌ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಹೇಳಿದ್ದು, “ಸ್ವಾಮಿ ಅರವಿಂದ ಬೆಲ್ಲದ ಅವರೇ, ಇತಿಹಾಸದ ಗೊತ್ತು ಗುರಿ ಇಲ್ಲದೇ ಪೇಲವ ರೀತಿ ಯಾಕೆ ತೌಡು ಕುಟ್ಟುತ್ತೀರಿ. ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ದೇಶದ ಸಂವಿಧಾನ ರಚನೆಯ ಉದ್ದೇಶ, ದೂರದೃಷ್ಟಿ ಹಾಗೂ ಬಾಬಾ ಸಾಹೇಬರ ಶ್ರಮದ ಬಗ್ಗೆ ಎಳ್ಳಷ್ಟು ತಿಳಿವಳಿಕೆಯೂ ಇಲ್ಲದೆ ಇದ್ದರೆ ನಿಮ್ಮ ಕರ್ಮ. ಆದರೆ ಕನಿಷ್ಠ ಪಕ್ಷ ಸಂವಿಧಾನ ಹಾಗೂ ತುರ್ತುಪರಿಸ್ಥಿತಿಯ ಬಗ್ಗೆ ನಿಮ್ಮ ಪಕ್ಷ ಹಾಗೂ ನಿಮ್ಮ ನಾಯಕರ ನಿಲುವುಗಳ ಇತಿಹಾಸವನ್ನಾದರೂ ಓದಬಾರದೇ” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕಾಂಗ್ರೆಸ್ ಪಕ್ಷ ಹಾಗೂ ನೆಹರೂ ಅವರ ಮುತುವರ್ಜಿಯಲ್ಲೇ ಬಾಬಾ ಸಾಹೇಬರಿಗೆ ನೀಡಿದ ಜವಾಬ್ದಾರಿಯಿಂದಲೇ ಜಗತ್ತಿನ ಅತೀ ದೊಡ್ಡ ಸಂವಿಧಾನ ರಚಿಸಲು ಸಾಧ್ಯವಾಗಿದೆ. ಅದಕ್ಕೆ ನಡೆದ ಚರ್ಚೆಗಳು, ಸಂವಿಧಾನ ರಚನಾ ಸಮಿತಿಯ ನಡಾವಳಿಗಳು ಕನ್ನಡದಲ್ಲೇ ಪ್ರತಿ ಸಿಗುತ್ತದೆ. ಸಾಧ್ಯವಾದರೆ ಓದುವ ಹವ್ಯಾಸವಾದರೂ ರೂಢಿಸಿಕೊಳ್ಳಿ” ಎಂದು ಅವರು ಲೇವಡಿ ಮಾಡಿದ್ದಾರೆ.

“ಭಾರತ ಸಂವಿಧಾನ ಸ್ವೀಕರಿಸಲು ಅನರ್ಹ” ಎಂಬ ಶೀರ್ಷಿಕೆಯಲ್ಲಿ 1949 ನವೆಂಬರ್ 30ರಂದು ಆರ್ ಎಸ್ ಎಸ್ ನ ಮುಖವಾಣಿ “ಆರ್ಗನೈಸರ್” ಪತ್ರಿಕೆಯಲ್ಲಿ ಪ್ರಕಟವಾದ ಲೇಖನ ನೆನಪಿದೆಯೇ? ಆರ್.ಎಸ್.ಎಸ್ ನ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್, ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದ ಇತಿಹಾಸ ಅರಿವಿದೆಯೇ? ಗೋಳ್ವಾಲ್ಕರ್ ಬರೆದ ಆರ್ ಎಸ್ ಎಸ್ ನ “ಧರ್ಮಗ್ರಂಥ” “ಬಂಚ್ ಆಫ್ ಥಾಟ್ಸ್” ಕೃತಿಯಲ್ಲಿ ಸಂವಿಧಾನ , ತ್ರಿವರ್ಣ ಧ್ವಜದ ಬಗ್ಗೆ ನಿಮ್ಮ ಪರಿವಾರದ ನಿಲುವುಗಳನ್ನು ಸ್ಪಷ್ಟವಾಗಿ ಹೇಳಲಾಗಿದೆ ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆಯಾಗಿದೆ” ಎಂದು ಅವರು ಹೀಗೆಳೆದಿದ್ದಾರೆ. ಈ ಪುಸ್ತಕದ ಪ್ರತಿ ಖಾಲಿಯಾಗಿದ್ದರೆ ತರಿಸಿಕೊಡುತ್ತೇನೆ. ಒಮ್ಮೆ ಓದಿ ಇದರ ನಿಲುವಿಗೆ ವಿರುದ್ಧವಾಗಿದ್ದೇನೆ ಎಂದು ಹೇಳುವ ಧೈರ್ಯ ಮಾಡುತ್ತೀರಾ? ಎಂದು ಹರಿಪ್ರಸಾದ್ ಅವರು ಸವಾಲು ಹಾಕಿದ್ದಾರೆ.

ಬೆಲ್ಲದ ಅವರೇ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ಹೆಸರುವಾಸಿಯಾಗಿರುವ ಸಾವರ್ಕರ್ ಭಾರತಕ್ಕೆ ಮನುಸ್ಮೃತಿಯೇ ಶ್ರೇಷ್ಠ, ಈ ದೇಶ ಮುಂದಿನ ನಡೆಗಳು‌ ಮನುಸ್ಮೃತಿಯನ್ನೇ ಅನುಸರಿಸಬೇಕು ಎಂದು 1932 ತಮ್ಮ “ಕಿರ್ಲೋಸ್ಕರ್” ಲೇಖನದಲ್ಲಿ ಬರೆದಿದ್ದಾರೆ. ಈ ನಿಲುವಿನ ವಿರುದ್ಧ ನಾನಿದ್ದೇನೆ ಎಂದು ಹೇಳುವ ಕಿಂಚಿತ್ತಾದರೂ ಧೈರ್ಯ ಉಳಿದಿದೆಯಾ ಎಂದು ಪ್ರಶ್ನಿಸಿದ್ದಾರೆ.

“ನೆಹರೂ ಅವರ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ನಿಮ್ಮ ಸಂಘದ ಶ್ಯಾಮ ಪ್ರಸಾದ್ ಮುಖರ್ಜಿಯ ಗೃಹ ಕಚೇರಿಯ ಮೇಲೆ ತ್ರಿವರ್ಣ ಧ್ವಜ ಹಾರಿಸದೆ ಸಂವಿಧಾನಕ್ಕೆ ಅಪಚಾರ ಮಾಡಿ, ಮೂರು ಸಂಖ್ಯೆಗಳು ನಮಗೆ ಅಪಶಕುನ ಎಂದಿದ್ದು ನೆನಪಿದೆಯೇ? ಭಾರತೀಯ ನಾಯಕರು ನಮ್ಮ ಕೈಗೆ ತ್ರಿವರ್ಣ ಧ್ವಜವನ್ನು ಕೊಡಬಹುದು. ಆದರೆ ನಾವ್ಯಾವತ್ತೂ ಅದನ್ನು ಗೌರವಿಸುವುದಿಲ್ಲ ಮತ್ತು ಅದನ್ನು ಒಪ್ಪಿಕೊಳ್ಳುವುದೂ ಇಲ್ಲ. ಎಂದು 1947ರಲ್ಲಿಯೇ ಆರ್.ಎಸ್.ಎಸ್ ಮುಖವಾಣಿ ‘ದಿ ಆರ್ಗನೈಸರ್’ ಪತ್ರಿಕೆಯಲ್ಲಿ ಬರೆದುಕೊಂಡಿದ್ದರ ಪ್ರತಿ ಇದ್ದರೆ ಒಮ್ಮೆ ಓದಿಕೊಳ್ಳಿ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ತುರ್ತುಸ್ಥಿತಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬೆಲ್ಲದ ಅವರಿಗೆ ತಮ್ಮ ನಾಯಕ ವಾಜಪೇಯಿಯವರು ತುರ್ತು ಪರಿಸ್ಥಿತಿ ಬೆಂಬಲಿಸಿ ಮುಚ್ಚಳಿಕೆ ಬರೆದು ಕೊಟ್ಟು ಪೆರೋಲ್ ಮೇಲೆ ಮನೆಯಲ್ಲಿ ಕಳೆದಿದ್ದು ನೆನಪಿಲ್ಲವೇ? ಇಡೀ ಸಂಘ ಪರಿವಾರದ ಮುಂಚೂಣಿಯ ನಾಯಕರು ತುರ್ತುಸ್ಥಿತಿ ಬೆಂಬಲಿಸಿ ನಡೆಸಿದ ಸಭೆಗಳು ಗುಪ್ತವಾಗಿ ಉಳಿಯಲು ಸಾಧ್ಯವೇ? ಈ ದಾಖಲೆಗಳು ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾಣೆಯಾಗಿದ್ದರೆ ಬಿಡುವು ಮಾಡಿಕೊಂಡು ನಿಮ್ಮದೇ ಪಕ್ಷದ ನಾಯಕ ಸುಬ್ರಮಣ್ಯ ಸ್ವಾಮಿಯವರ ಸಾಮಾಜಿಕ ಜಾಲತಾಣವನ್ನೊಮ್ಮೆ ಕಣ್ಣಾಡಿಸಿ, ಕಣ್ಣೀರಾದರೂ ಉಳಿದೀತು” ಎಂದು ಅವರು ಹೇಳಿದ್ದಾರೆ.

“ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂವಿಧಾನವೇ ನೀಡಿರುವ ಆರ್ಟಿಕಲ್ 368 ಹಕ್ಕಿನ ಪರವಾಗಿ ಕಾಂಗ್ರೆಸ್ ಪಕ್ಷ ಇದೆ. ಆದರೆ ಬಿಜೆಪಿ ಸಂವಿಧಾನವನ್ನೇ ಬದಲಾಯಿಸುವ ನಿಲುವು ಹೊಂದಿದೆ. ಸಂವಿಧಾನ ತಿದ್ದುಪಡಿಗೂ, ಬದಲಾವಣೆಗೂ ಭಾರಿ ಅಂತರವಿದೆ. ಈ ನೆಲದ ಕಾನೂನಿಗೆ ಅತೀತರಾಗಿದ್ದೇವೆ, ಜನೋಪಕಾರಿ ನಿಲುವುಗಳನ್ನು ತೆಗೆದುಕೊಳ್ಳಲು ಕಾಲ ಕಾಲಕ್ಕೆ ಸಂವಿಧಾನಕ್ಕೆ ತಿದ್ದುಪಡಿಯನ್ನು ತಂದಿದ್ದೇವೆ. ಕಳೆದ 75 ವರ್ಷಗಳಲ್ಲಿ 106 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಲಾಗಿದೆ. 70ಕ್ಕೂ ಹೆಚ್ಚು ಬಾರಿ ಕಾಂಗ್ರೆಸ್ ಆಡಳಿತದಲ್ಲಿ ಹಾಗೂ 36ಕ್ಕೂ ಹೆಚ್ಚು ಬಾರಿ ಕಾಂಗ್ರೇಸತರ ಸರ್ಕಾರದ ಆಡಳಿತದಲ್ಲಿ ತಿದ್ದುಪಡಿಗಳಾಗಿದೆ” ಎಂದು ಅವರು ವಿವರಿಸಿದ್ದಾರೆ.

“ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ತಿದ್ದುಪಡಿ ಮಾಡುವುದು ಆಯಾ ಕಾಲಘಟ್ಟದ ಜನರ ಹಕ್ಕು ಮತ್ತು ಅಧಿಕಾರ” ಎಂದು ಬಾಬಾ ಸಾಹೇಬರು 1949 ಜನವರಿ 25ರ ಭಾಷಣದಲ್ಲಿಯೂ ಸ್ಪಷ್ಟಪಡಿಸಿದ್ದಾರೆ. ಒಮ್ಮೆ ಅಂಬೇಡ್ಕರ್ ಭಾಷಣ ಮತ್ತು ಬರಹ ಪುಸ್ತಕದ ಪುಟಗಳನ್ನು ತಿರುವಿ ಹಾಕಿ. ಜನಪರವಲ್ಲದ, ಒಂದಿಷ್ಟು ಕಾನೂನುಗಳಿಗೆ ತೊಡಕು ಆಗಲಿದೆ ಎಂದರೆ ಅದನ್ನು ಪ್ರತಿಭಟಿಸುವ ಹಾಗೂ ವಿರೋಧ ವ್ಯಕ್ತಪಡಿಸುವ ಪ್ರಜಾಪ್ರಭುತ್ವದ ಸೌಂದರ್ಯವನ್ನು ನಮ್ಮಲ್ಲಿ ಉಳಿಸಿಕೊಂಡಿದ್ದೇವೆ. ಆದರೆ ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

“ಕೊನೆಯದಾಗಿ ಬೆಲ್ಲದ ಅವರೇ ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿಗೆ ತರುವ ಸಂಘಪರಿವಾರದ ಹೋರಾಟಕ್ಕೆ ನಿಮ್ಮ ಬೆಂಬಲವೂ ಇದ್ದರೇ, ಕಬ್ಬನ್ನು ಹಿಂಡಿ ಹಿಪ್ಪೆ ಮಾಡಿ ನೊಣ, ಇರುವೆಗಳಂತೆ ಶೂದ್ರರು, ದಲಿತರ , ಬಹುಜನರಿಗೆ ಹಂಚುತ್ತಾರೆ. ಆಗ ಕಬ್ಬಿನ ಸಿಪ್ಪೆ ಮಾತ್ರ ನಿಮಗೆ, ‘ಬೆಲ್ಲ’ ದ ರುಚಿ ಮಾತ್ರ ಪರಿವಾರದ್ದು ಸ್ವಲ್ಪ ಜಾಗೃತೆ ಇರಲಿ” ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...