Homeಕರ್ನಾಟಕನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ - ಬಿಕೆ ಹರಿಪ್ರಸಾದ್

ನಾಗಪುರದ ಶಾಖೆಯ ಪುಂಗಿ ಊದಿಗೆ ನಾವು ಕುಣಿಯಲ್ಲ – ಬಿಕೆ ಹರಿಪ್ರಸಾದ್

- Advertisement -
- Advertisement -

ಬಿಜೆಪಿ ಶಾಸಕರಿಗೆ ನಮ್ಮ ಕೈಗೆ ದೊಣ್ಣೆ ಕೊಟ್ಟು ಹೊಡೆಸಿಕೊಳ್ಳುವುದರಲ್ಲೇ ಅತಿ ಪ್ರೀತಿ ಅನಿಸುತ್ತದೆ ಎಂದು ವಿಧಾನ ಪರಿಷತ್‌ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಹೇಳಿದ್ದು, “ಸ್ವಾಮಿ ಅರವಿಂದ ಬೆಲ್ಲದ ಅವರೇ, ಇತಿಹಾಸದ ಗೊತ್ತು ಗುರಿ ಇಲ್ಲದೇ ಪೇಲವ ರೀತಿ ಯಾಕೆ ತೌಡು ಕುಟ್ಟುತ್ತೀರಿ. ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ಅವರು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ದೇಶದ ಸಂವಿಧಾನ ರಚನೆಯ ಉದ್ದೇಶ, ದೂರದೃಷ್ಟಿ ಹಾಗೂ ಬಾಬಾ ಸಾಹೇಬರ ಶ್ರಮದ ಬಗ್ಗೆ ಎಳ್ಳಷ್ಟು ತಿಳಿವಳಿಕೆಯೂ ಇಲ್ಲದೆ ಇದ್ದರೆ ನಿಮ್ಮ ಕರ್ಮ. ಆದರೆ ಕನಿಷ್ಠ ಪಕ್ಷ ಸಂವಿಧಾನ ಹಾಗೂ ತುರ್ತುಪರಿಸ್ಥಿತಿಯ ಬಗ್ಗೆ ನಿಮ್ಮ ಪಕ್ಷ ಹಾಗೂ ನಿಮ್ಮ ನಾಯಕರ ನಿಲುವುಗಳ ಇತಿಹಾಸವನ್ನಾದರೂ ಓದಬಾರದೇ” ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕಾಂಗ್ರೆಸ್ ಪಕ್ಷ ಹಾಗೂ ನೆಹರೂ ಅವರ ಮುತುವರ್ಜಿಯಲ್ಲೇ ಬಾಬಾ ಸಾಹೇಬರಿಗೆ ನೀಡಿದ ಜವಾಬ್ದಾರಿಯಿಂದಲೇ ಜಗತ್ತಿನ ಅತೀ ದೊಡ್ಡ ಸಂವಿಧಾನ ರಚಿಸಲು ಸಾಧ್ಯವಾಗಿದೆ. ಅದಕ್ಕೆ ನಡೆದ ಚರ್ಚೆಗಳು, ಸಂವಿಧಾನ ರಚನಾ ಸಮಿತಿಯ ನಡಾವಳಿಗಳು ಕನ್ನಡದಲ್ಲೇ ಪ್ರತಿ ಸಿಗುತ್ತದೆ. ಸಾಧ್ಯವಾದರೆ ಓದುವ ಹವ್ಯಾಸವಾದರೂ ರೂಢಿಸಿಕೊಳ್ಳಿ” ಎಂದು ಅವರು ಲೇವಡಿ ಮಾಡಿದ್ದಾರೆ.

“ಭಾರತ ಸಂವಿಧಾನ ಸ್ವೀಕರಿಸಲು ಅನರ್ಹ” ಎಂಬ ಶೀರ್ಷಿಕೆಯಲ್ಲಿ 1949 ನವೆಂಬರ್ 30ರಂದು ಆರ್ ಎಸ್ ಎಸ್ ನ ಮುಖವಾಣಿ “ಆರ್ಗನೈಸರ್” ಪತ್ರಿಕೆಯಲ್ಲಿ ಪ್ರಕಟವಾದ ಲೇಖನ ನೆನಪಿದೆಯೇ? ಆರ್.ಎಸ್.ಎಸ್ ನ ಅಧ್ಯಕ್ಷನಾಗಿದ್ದ ಗೋಳ್ವಾಳ್ಕರ್, ಅಂಬೇಡ್ಕರ್ ಅವರ ಸಂವಿಧಾನ ಜಾರಿಯನ್ನು ವಿರೋಧಿಸಿದ್ದ ಇತಿಹಾಸ ಅರಿವಿದೆಯೇ? ಗೋಳ್ವಾಲ್ಕರ್ ಬರೆದ ಆರ್ ಎಸ್ ಎಸ್ ನ “ಧರ್ಮಗ್ರಂಥ” “ಬಂಚ್ ಆಫ್ ಥಾಟ್ಸ್” ಕೃತಿಯಲ್ಲಿ ಸಂವಿಧಾನ , ತ್ರಿವರ್ಣ ಧ್ವಜದ ಬಗ್ಗೆ ನಿಮ್ಮ ಪರಿವಾರದ ನಿಲುವುಗಳನ್ನು ಸ್ಪಷ್ಟವಾಗಿ ಹೇಳಲಾಗಿದೆ ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಪುರದ ಶಾಖೆಯ

“ನಮ್ಮದು ಎಂದು ಹೇಳಲಾಗುತ್ತಿರುವ ಈ ಸಂವಿಧಾನವು, ಪಾಶ್ಚಾತ್ಯ ದೇಶಗಳ ಸಂವಿಧಾನಗಳಿಂದ ಬೇರೆ ಬೇರೆ ಕಲಮ್ಮುಗಳನ್ನು ಹೆಕ್ಕಿತಂದು ಒಟ್ಟುಗೂಡಿಸಿದ ಕಂತೆಯಾಗಿದೆ” ಎಂದು ಅವರು ಹೀಗೆಳೆದಿದ್ದಾರೆ. ಈ ಪುಸ್ತಕದ ಪ್ರತಿ ಖಾಲಿಯಾಗಿದ್ದರೆ ತರಿಸಿಕೊಡುತ್ತೇನೆ. ಒಮ್ಮೆ ಓದಿ ಇದರ ನಿಲುವಿಗೆ ವಿರುದ್ಧವಾಗಿದ್ದೇನೆ ಎಂದು ಹೇಳುವ ಧೈರ್ಯ ಮಾಡುತ್ತೀರಾ? ಎಂದು ಹರಿಪ್ರಸಾದ್ ಅವರು ಸವಾಲು ಹಾಕಿದ್ದಾರೆ.

ಬೆಲ್ಲದ ಅವರೇ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ಹೆಸರುವಾಸಿಯಾಗಿರುವ ಸಾವರ್ಕರ್ ಭಾರತಕ್ಕೆ ಮನುಸ್ಮೃತಿಯೇ ಶ್ರೇಷ್ಠ, ಈ ದೇಶ ಮುಂದಿನ ನಡೆಗಳು‌ ಮನುಸ್ಮೃತಿಯನ್ನೇ ಅನುಸರಿಸಬೇಕು ಎಂದು 1932 ತಮ್ಮ “ಕಿರ್ಲೋಸ್ಕರ್” ಲೇಖನದಲ್ಲಿ ಬರೆದಿದ್ದಾರೆ. ಈ ನಿಲುವಿನ ವಿರುದ್ಧ ನಾನಿದ್ದೇನೆ ಎಂದು ಹೇಳುವ ಕಿಂಚಿತ್ತಾದರೂ ಧೈರ್ಯ ಉಳಿದಿದೆಯಾ ಎಂದು ಪ್ರಶ್ನಿಸಿದ್ದಾರೆ.

“ನೆಹರೂ ಅವರ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ನಿಮ್ಮ ಸಂಘದ ಶ್ಯಾಮ ಪ್ರಸಾದ್ ಮುಖರ್ಜಿಯ ಗೃಹ ಕಚೇರಿಯ ಮೇಲೆ ತ್ರಿವರ್ಣ ಧ್ವಜ ಹಾರಿಸದೆ ಸಂವಿಧಾನಕ್ಕೆ ಅಪಚಾರ ಮಾಡಿ, ಮೂರು ಸಂಖ್ಯೆಗಳು ನಮಗೆ ಅಪಶಕುನ ಎಂದಿದ್ದು ನೆನಪಿದೆಯೇ? ಭಾರತೀಯ ನಾಯಕರು ನಮ್ಮ ಕೈಗೆ ತ್ರಿವರ್ಣ ಧ್ವಜವನ್ನು ಕೊಡಬಹುದು. ಆದರೆ ನಾವ್ಯಾವತ್ತೂ ಅದನ್ನು ಗೌರವಿಸುವುದಿಲ್ಲ ಮತ್ತು ಅದನ್ನು ಒಪ್ಪಿಕೊಳ್ಳುವುದೂ ಇಲ್ಲ. ಎಂದು 1947ರಲ್ಲಿಯೇ ಆರ್.ಎಸ್.ಎಸ್ ಮುಖವಾಣಿ ‘ದಿ ಆರ್ಗನೈಸರ್’ ಪತ್ರಿಕೆಯಲ್ಲಿ ಬರೆದುಕೊಂಡಿದ್ದರ ಪ್ರತಿ ಇದ್ದರೆ ಒಮ್ಮೆ ಓದಿಕೊಳ್ಳಿ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ತುರ್ತುಸ್ಥಿತಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಬೆಲ್ಲದ ಅವರಿಗೆ ತಮ್ಮ ನಾಯಕ ವಾಜಪೇಯಿಯವರು ತುರ್ತು ಪರಿಸ್ಥಿತಿ ಬೆಂಬಲಿಸಿ ಮುಚ್ಚಳಿಕೆ ಬರೆದು ಕೊಟ್ಟು ಪೆರೋಲ್ ಮೇಲೆ ಮನೆಯಲ್ಲಿ ಕಳೆದಿದ್ದು ನೆನಪಿಲ್ಲವೇ? ಇಡೀ ಸಂಘ ಪರಿವಾರದ ಮುಂಚೂಣಿಯ ನಾಯಕರು ತುರ್ತುಸ್ಥಿತಿ ಬೆಂಬಲಿಸಿ ನಡೆಸಿದ ಸಭೆಗಳು ಗುಪ್ತವಾಗಿ ಉಳಿಯಲು ಸಾಧ್ಯವೇ? ಈ ದಾಖಲೆಗಳು ಬಿಜೆಪಿ ಪಕ್ಷದ ಕಚೇರಿಯಲ್ಲಿ ಕಾಣೆಯಾಗಿದ್ದರೆ ಬಿಡುವು ಮಾಡಿಕೊಂಡು ನಿಮ್ಮದೇ ಪಕ್ಷದ ನಾಯಕ ಸುಬ್ರಮಣ್ಯ ಸ್ವಾಮಿಯವರ ಸಾಮಾಜಿಕ ಜಾಲತಾಣವನ್ನೊಮ್ಮೆ ಕಣ್ಣಾಡಿಸಿ, ಕಣ್ಣೀರಾದರೂ ಉಳಿದೀತು” ಎಂದು ಅವರು ಹೇಳಿದ್ದಾರೆ.

“ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂವಿಧಾನವೇ ನೀಡಿರುವ ಆರ್ಟಿಕಲ್ 368 ಹಕ್ಕಿನ ಪರವಾಗಿ ಕಾಂಗ್ರೆಸ್ ಪಕ್ಷ ಇದೆ. ಆದರೆ ಬಿಜೆಪಿ ಸಂವಿಧಾನವನ್ನೇ ಬದಲಾಯಿಸುವ ನಿಲುವು ಹೊಂದಿದೆ. ಸಂವಿಧಾನ ತಿದ್ದುಪಡಿಗೂ, ಬದಲಾವಣೆಗೂ ಭಾರಿ ಅಂತರವಿದೆ. ಈ ನೆಲದ ಕಾನೂನಿಗೆ ಅತೀತರಾಗಿದ್ದೇವೆ, ಜನೋಪಕಾರಿ ನಿಲುವುಗಳನ್ನು ತೆಗೆದುಕೊಳ್ಳಲು ಕಾಲ ಕಾಲಕ್ಕೆ ಸಂವಿಧಾನಕ್ಕೆ ತಿದ್ದುಪಡಿಯನ್ನು ತಂದಿದ್ದೇವೆ. ಕಳೆದ 75 ವರ್ಷಗಳಲ್ಲಿ 106 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಲಾಗಿದೆ. 70ಕ್ಕೂ ಹೆಚ್ಚು ಬಾರಿ ಕಾಂಗ್ರೆಸ್ ಆಡಳಿತದಲ್ಲಿ ಹಾಗೂ 36ಕ್ಕೂ ಹೆಚ್ಚು ಬಾರಿ ಕಾಂಗ್ರೇಸತರ ಸರ್ಕಾರದ ಆಡಳಿತದಲ್ಲಿ ತಿದ್ದುಪಡಿಗಳಾಗಿದೆ” ಎಂದು ಅವರು ವಿವರಿಸಿದ್ದಾರೆ.

“ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಸಂವಿಧಾನದ ತಿದ್ದುಪಡಿ ಮಾಡುವುದು ಆಯಾ ಕಾಲಘಟ್ಟದ ಜನರ ಹಕ್ಕು ಮತ್ತು ಅಧಿಕಾರ” ಎಂದು ಬಾಬಾ ಸಾಹೇಬರು 1949 ಜನವರಿ 25ರ ಭಾಷಣದಲ್ಲಿಯೂ ಸ್ಪಷ್ಟಪಡಿಸಿದ್ದಾರೆ. ಒಮ್ಮೆ ಅಂಬೇಡ್ಕರ್ ಭಾಷಣ ಮತ್ತು ಬರಹ ಪುಸ್ತಕದ ಪುಟಗಳನ್ನು ತಿರುವಿ ಹಾಕಿ. ಜನಪರವಲ್ಲದ, ಒಂದಿಷ್ಟು ಕಾನೂನುಗಳಿಗೆ ತೊಡಕು ಆಗಲಿದೆ ಎಂದರೆ ಅದನ್ನು ಪ್ರತಿಭಟಿಸುವ ಹಾಗೂ ವಿರೋಧ ವ್ಯಕ್ತಪಡಿಸುವ ಪ್ರಜಾಪ್ರಭುತ್ವದ ಸೌಂದರ್ಯವನ್ನು ನಮ್ಮಲ್ಲಿ ಉಳಿಸಿಕೊಂಡಿದ್ದೇವೆ. ಆದರೆ ನಾಗಪುರದ ಶಾಖೆಗಳಲ್ಲಿ ಪುಂಗಿ ಊದಿದ ರೀತಿಯಲ್ಲಿ ನಾವು ಕುಣಿಯುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.

“ಕೊನೆಯದಾಗಿ ಬೆಲ್ಲದ ಅವರೇ ಸಂವಿಧಾನದ ಬದಲಾಗಿ ಮನುಸ್ಮೃತಿ ಜಾರಿಗೆ ತರುವ ಸಂಘಪರಿವಾರದ ಹೋರಾಟಕ್ಕೆ ನಿಮ್ಮ ಬೆಂಬಲವೂ ಇದ್ದರೇ, ಕಬ್ಬನ್ನು ಹಿಂಡಿ ಹಿಪ್ಪೆ ಮಾಡಿ ನೊಣ, ಇರುವೆಗಳಂತೆ ಶೂದ್ರರು, ದಲಿತರ , ಬಹುಜನರಿಗೆ ಹಂಚುತ್ತಾರೆ. ಆಗ ಕಬ್ಬಿನ ಸಿಪ್ಪೆ ಮಾತ್ರ ನಿಮಗೆ, ‘ಬೆಲ್ಲ’ ದ ರುಚಿ ಮಾತ್ರ ಪರಿವಾರದ್ದು ಸ್ವಲ್ಪ ಜಾಗೃತೆ ಇರಲಿ” ಎಂದು ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ಭೀಮಾ ಕೊರೆಗಾಂವ್‌ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್‌ಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...