Homeಮುಖಪುಟವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಗುರುತಿಸಿದ ಪೊಲೀಸರು : ವರದಿ

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಗುರುತಿಸಿದ ಪೊಲೀಸರು : ವರದಿ

ಕಳೆದ 15 ದಿನಗಳಲ್ಲಿ ಸುಮಾರು 410 ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ

- Advertisement -
- Advertisement -

ಕಳೆದ ಕೆಲ ದಿನಗಳಿಂದ ವಿಮಾನಗಳಿಗೆ ಸತತವಾಗಿ ಹುಸಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದ ಗೊಂಡಿಯಾ ಮೂಲದ 35 ವರ್ಷದ ಜಗದೀಶ್ ಉಯ್ಕಿ ಎಂಬಾತ ನಕಲಿ ಬಾಂಬ್‌ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿರುವುದಾಗಿ ನಾಗ್ಪುರ ನಗರ ಪೊಲೀಸ್‌ನ ವಿಶೇಷ ವಿಭಾಗ ಗುರುತಿಸಿದೆ. ಈತ ಭಯೋತ್ಪಾದನೆ ಕುರಿತ ಪುಸ್ತಕದ ಲೇಖಕನಾಗಿದ್ದು, 2021ರಲ್ಲಿ ಪ್ರಕರಣವೊಂದರಲ್ಲಿ ಬಂಧಿಸಲಾಗಿತ್ತು ಎಂದು ಪೊಲೀಸರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸುತ್ತಿರುವುದು ಪೊಲೀಸರಿಗೆ ಗೊತ್ತಾದ ಬಳಿಕ ಜಗದೀಶ್ ಉಯ್ಕಿ ತಲೆಮರೆಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಶ್ವೇತಾ ಖೇಡ್ಕರ್ ನೇತೃತ್ವದ ತಂಡವು ತನಿಖೆ ನಡೆಸಿ ಜಗದೀಶ್ ಉಯ್ಕಿ ಇ-ಮೇಲ್ ಕಳುಹಿಸಿತ್ತಿರುವ ವಿಷಯವನ್ನು ಬಯಲಿಗೆಳೆದಿದೆ.

ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ), ರೈಲ್ವೆ ಸಚಿವರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿಗಳ ಕಚೇರಿ, ವಿಮಾನಯಾನ ಕಚೇರಿಗಳು, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಮತ್ತು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್‌) ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಉಯ್ಕಿ ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಗೆ ಗೊತ್ತಿರುವ ಗೌಪ್ಯ ಟೆರರ್ ಕೋಡ್ ಬಗ್ಗೆ ಹೇಳಿಕೊಳ್ಳಲು ಅವಕಾಶ ನೀಡದಿದ್ದರೆ ಪ್ರತಿಭಟಿಸುವುದಾಗಿ ಸೋಮವಾರ ಉಯ್ಕಿಯಿಂದ ಇ-ಮೇಲ್ ಒಂದು ಬಂದ ಬಳಿಕ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಅವರ ಮನೆ ಬಳಿ ನಾಗ್ಪುರ ಪೊಲೀಸರು ಭದ್ರತೆ ಹೆಚ್ಚಿಸಿದ್ದರು.

ಭಯೋತ್ಪಾದಕ ಬೆದರಿಕೆಗಳ ಬಗ್ಗೆ ತನಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲು ಅವಕಾಶ ಮಾಡಿಕೊಡುವಂತೆಯೂ ಜಗದೀಶ್ ಉಯ್ಕಿ ಬೇಡಿಕೆ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 21 ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಇ-ಮೇಲ್ ಕಳುಹಿಸಿದ್ದ ಉಯ್ಕಿ, ಅದನ್ನು ಡಿಜಿಪಿ ಮತ್ತು ಆರ್‌ಪಿಎಫ್‌ಗೆ ಫಾರ್ವರ್ಡ್‌ ಮಾಡಿದ್ದ. ಈ ಕಾರಣಕ್ಕೆ ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ಉಯ್ಕಿಯನ್ನು ಶೀಘ್ರದಲ್ಲೇ ಬಂಧಿಸಲು ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸು ಹೇಳಿದ್ದಾರೆ.

ಅಕ್ಟೋಬರ್ 28 ರವರೆಗೆ 15 ದಿನಗಳಲ್ಲಿ, ಭಾರತೀಯ ಸಂಸ್ಥೆಗಳ 410 ಕ್ಕೂ ಹೆಚ್ಚು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಗಳು ಬಂದಿವೆ. ಹೆಚ್ಚಿನ ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹಾಕಲಾಗಿತ್ತು. ಸೋಮವಾರ 60ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು.

ಇದನ್ನೂ ಓದಿ : ಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಎಫ್‌ಐಆರ್ : ಮಾಧ್ಯಮ ಒಕ್ಕೂಟಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...