Homeಮುಖಪುಟವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಗುರುತಿಸಿದ ಪೊಲೀಸರು : ವರದಿ

ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಗುರುತಿಸಿದ ಪೊಲೀಸರು : ವರದಿ

ಕಳೆದ 15 ದಿನಗಳಲ್ಲಿ ಸುಮಾರು 410 ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ

- Advertisement -
- Advertisement -

ಕಳೆದ ಕೆಲ ದಿನಗಳಿಂದ ವಿಮಾನಗಳಿಗೆ ಸತತವಾಗಿ ಹುಸಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದ ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ವರದಿಯಾಗಿದೆ.

ಮಹಾರಾಷ್ಟ್ರದ ಗೊಂಡಿಯಾ ಮೂಲದ 35 ವರ್ಷದ ಜಗದೀಶ್ ಉಯ್ಕಿ ಎಂಬಾತ ನಕಲಿ ಬಾಂಬ್‌ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿರುವುದಾಗಿ ನಾಗ್ಪುರ ನಗರ ಪೊಲೀಸ್‌ನ ವಿಶೇಷ ವಿಭಾಗ ಗುರುತಿಸಿದೆ. ಈತ ಭಯೋತ್ಪಾದನೆ ಕುರಿತ ಪುಸ್ತಕದ ಲೇಖಕನಾಗಿದ್ದು, 2021ರಲ್ಲಿ ಪ್ರಕರಣವೊಂದರಲ್ಲಿ ಬಂಧಿಸಲಾಗಿತ್ತು ಎಂದು ಪೊಲೀಸರು ಹೇಳಿರುವುದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸುತ್ತಿರುವುದು ಪೊಲೀಸರಿಗೆ ಗೊತ್ತಾದ ಬಳಿಕ ಜಗದೀಶ್ ಉಯ್ಕಿ ತಲೆಮರೆಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಉಪ ಪೊಲೀಸ್ ಆಯುಕ್ತೆ (ಡಿಸಿಪಿ) ಶ್ವೇತಾ ಖೇಡ್ಕರ್ ನೇತೃತ್ವದ ತಂಡವು ತನಿಖೆ ನಡೆಸಿ ಜಗದೀಶ್ ಉಯ್ಕಿ ಇ-ಮೇಲ್ ಕಳುಹಿಸಿತ್ತಿರುವ ವಿಷಯವನ್ನು ಬಯಲಿಗೆಳೆದಿದೆ.

ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ), ರೈಲ್ವೆ ಸಚಿವರು, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿಗಳ ಕಚೇರಿ, ವಿಮಾನಯಾನ ಕಚೇರಿಗಳು, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಮತ್ತು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್‌) ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಗೆ ಉಯ್ಕಿ ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಗೆ ಗೊತ್ತಿರುವ ಗೌಪ್ಯ ಟೆರರ್ ಕೋಡ್ ಬಗ್ಗೆ ಹೇಳಿಕೊಳ್ಳಲು ಅವಕಾಶ ನೀಡದಿದ್ದರೆ ಪ್ರತಿಭಟಿಸುವುದಾಗಿ ಸೋಮವಾರ ಉಯ್ಕಿಯಿಂದ ಇ-ಮೇಲ್ ಒಂದು ಬಂದ ಬಳಿಕ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಅವರ ಮನೆ ಬಳಿ ನಾಗ್ಪುರ ಪೊಲೀಸರು ಭದ್ರತೆ ಹೆಚ್ಚಿಸಿದ್ದರು.

ಭಯೋತ್ಪಾದಕ ಬೆದರಿಕೆಗಳ ಬಗ್ಗೆ ತನಗಿರುವ ವಿಷಯದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಲು ಅವಕಾಶ ಮಾಡಿಕೊಡುವಂತೆಯೂ ಜಗದೀಶ್ ಉಯ್ಕಿ ಬೇಡಿಕೆ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 21 ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಇ-ಮೇಲ್ ಕಳುಹಿಸಿದ್ದ ಉಯ್ಕಿ, ಅದನ್ನು ಡಿಜಿಪಿ ಮತ್ತು ಆರ್‌ಪಿಎಫ್‌ಗೆ ಫಾರ್ವರ್ಡ್‌ ಮಾಡಿದ್ದ. ಈ ಕಾರಣಕ್ಕೆ ರೈಲ್ವೆ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ಉಯ್ಕಿಯನ್ನು ಶೀಘ್ರದಲ್ಲೇ ಬಂಧಿಸಲು ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸು ಹೇಳಿದ್ದಾರೆ.

ಅಕ್ಟೋಬರ್ 28 ರವರೆಗೆ 15 ದಿನಗಳಲ್ಲಿ, ಭಾರತೀಯ ಸಂಸ್ಥೆಗಳ 410 ಕ್ಕೂ ಹೆಚ್ಚು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆಗಳು ಬಂದಿವೆ. ಹೆಚ್ಚಿನ ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಹಾಕಲಾಗಿತ್ತು. ಸೋಮವಾರ 60ಕ್ಕೂ ಹೆಚ್ಚು ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್‌ ಬೆದರಿಕೆ ಬಂದಿತ್ತು.

ಇದನ್ನೂ ಓದಿ : ಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಎಫ್‌ಐಆರ್ : ಮಾಧ್ಯಮ ಒಕ್ಕೂಟಗಳಿಂದ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...