Homeಮುಖಪುಟನಾಗ್ಪುರ ಸ್ಥಳೀಯ ಚುನಾವಣೆ: ಬಿಜೆಪಿಗೆ ಭಾರಿ ಹಿನ್ನಡೆ, ಕಾಂಗ್ರೆಸ್ ಗೆ ಭರ್ಜರಿ ಗೆಲುವು

ನಾಗ್ಪುರ ಸ್ಥಳೀಯ ಚುನಾವಣೆ: ಬಿಜೆಪಿಗೆ ಭಾರಿ ಹಿನ್ನಡೆ, ಕಾಂಗ್ರೆಸ್ ಗೆ ಭರ್ಜರಿ ಗೆಲುವು

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾದ ಆರೆಸ್ಸೆಸ್‌‌ನ ಪ್ರಧಾನ ಕಛೇರಿ ಕೂಡಾ ನಾಗ್ಪುರದಲ್ಲಿದೆ

- Advertisement -
- Advertisement -

ಆರೆಸ್ಸೆಸ್‌‌ನ ಕೇಂದ್ರ ಕಚೇರಿ ಇರುವ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಪಂಚಾಯತ್ ಸಮಿತಿಯ ಚುನಾವಣೆಯಲ್ಲಿ ಅಧ್ಯಕ್ಷರು ಮತ್ತು ಉಫಾಧ್ಯಕ್ಷರ ಹುದ್ದೆಗಳಿಗೆ ನಡೆದ ಚುನಾವಣೆಯ ಫಲಿತಾಂಶಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದೆ.

ಬಿಜೆಪಿ ಒಂದೇ ಒಂದು ಅಧ್ಯಕ್ಷ ಸ್ಥಾನವನ್ನು ಗೆದ್ದಿಲ್ಲ ಎಂದು ವರದಿಯಾಗಿದ್ದು, ಕೇವಲ ಮೂರು ಉಪಾಧ್ಯಕ್ಷ ಸ್ಥಾನಗಳನ್ನು ಮಾತ್ರ ಬಿಜೆಪಿ ಗೆದ್ದಕೊಂಡಿದೆ. ಶನಿವಾರ ನಡೆದ ಸ್ಥಳೀಯ ಚುನಾವಣೆಯಲ್ಲಿ ಜನರು ಮತ ಚಲಾಯಿಸಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಗ್ಪುರವು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಒಕ್ಕೂಟ ಸರ್ಕಾರದ ಸಚಿವ ನಿತಿನ್ ಗಡ್ಕರಿ ಅವರ ತವರು ಕ್ಷೇತ್ರವಾಗಿದೆ. ಜೊತೆಗೆ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾದ ಆರೆಸ್ಸೆಸ್‌‌ನ ಪ್ರಧಾನ ಕಛೇರಿ ಕೂಡಾ ನಾಗ್ಪುರದಲ್ಲಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಉಪಚುನಾವಣೆ: ಉದ್ಧವ್ ಠಾಕ್ರೆ ಬಣದ ಅಭ್ಯರ್ಥಿ ಗೆಲುವಿಗಾಗಿ ನಾಮಪತ್ರ ಹಿಂಪಡೆದ ಬಿಜೆಪಿ

ನಾಗ್ಪುರದ 13 ಪಂಚಾಯತ್‌‌ ಅಧ್ಯಕ್ಷ ಸ್ಥಾನಗಳಲ್ಲಿ ಒಂಬತ್ತು ಮತ್ತು 13 ಉಪಾಧ್ಯಕ್ಷ ಸ್ಥಾನಗಳಲ್ಲಿ ಎಂಟು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಎನ್‌ಸಿಪಿ ಮೂರು ಅಧ್ಯಕ್ಷ ಸ್ಥಾನಗಳನ್ನು ಗೆದ್ದರೆ, ಶಿವಸೇನೆ ಒಂದು ಹುದ್ದೆಯನ್ನು ಗೆದ್ದಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಹಿರಿಯ ನಾಯಕರಾದ ನಿತಿನ್ ಗಡ್ಕರಿ, ದೇವೇಂದ್ರ ಫಡ್ನವಿಸ್ ಮತ್ತು ಚಂದ್ರಶೇಖರ್ ಬಾವಂಕುಲೆ ಅವರ ತವರು ನೆಲದಲ್ಲಿ ಪಕ್ಷವು ಸೋಲನ್ನು ಎದುರಿಸುತ್ತಿರುವಂತೆ ಪಂಚಾಯತ್ ಸಮಿತಿ ಫಲಿತಾಂಶಗಳು ಬಿಜೆಪಿ ಕಾರ್ಯಕರ್ತರನ್ನು ಹತಾಶಗೊಳಿಸಿವೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಗ್ರಾಮೀಣ ಘಟಕದ ಮುಖ್ಯಸ್ಥ ರಾಜೇಂದ್ರ ಮುಲಾಕ್ ಪಿಟಿಐಗೆ ತಿಳಿಸಿದ್ದಾರೆ.

ಸೋಲು ಗೆಲುವು ನಡೆಯುತ್ತಲೇ ಇರುತ್ತವೆ, ಆದರೆ ಅವರು ಸೋತಿರುವ ರೀತಿ ನೋಡಿದರೆ ಜಿಲ್ಲೆಯಲ್ಲಿ ಬಿಜೆಪಿ ಕಾರ‌್ಯಕರ್ತರಿಗೆ ಹಿಡಿತವಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: ‘ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

ಗ್ರಾಮ ಪಂಚಾಯಿತಿಗಳ ಸರಪಂಚ್ ಮತ್ತು ಸದಸ್ಯರ ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆದಿದ್ದು, ಸೋಮವಾರ ಫಲಿತಾಂಶ ಪ್ರಕಟವಾಗಲಿದೆ. ಜಿಲ್ಲಾ ಪರಿಷತ್ತಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ಮತದಾನ ಮತ್ತು ಮತ ಎಣಿಕೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...