Homeಮುಖಪುಟನಾಗ್ಪುರ ಸ್ಥಳೀಯ ಚುನಾವಣೆ: ಬಿಜೆಪಿಗೆ ಭಾರಿ ಹಿನ್ನಡೆ, ಕಾಂಗ್ರೆಸ್ ಗೆ ಭರ್ಜರಿ ಗೆಲುವು

ನಾಗ್ಪುರ ಸ್ಥಳೀಯ ಚುನಾವಣೆ: ಬಿಜೆಪಿಗೆ ಭಾರಿ ಹಿನ್ನಡೆ, ಕಾಂಗ್ರೆಸ್ ಗೆ ಭರ್ಜರಿ ಗೆಲುವು

ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾದ ಆರೆಸ್ಸೆಸ್‌‌ನ ಪ್ರಧಾನ ಕಛೇರಿ ಕೂಡಾ ನಾಗ್ಪುರದಲ್ಲಿದೆ

- Advertisement -
- Advertisement -

ಆರೆಸ್ಸೆಸ್‌‌ನ ಕೇಂದ್ರ ಕಚೇರಿ ಇರುವ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ. ಪಂಚಾಯತ್ ಸಮಿತಿಯ ಚುನಾವಣೆಯಲ್ಲಿ ಅಧ್ಯಕ್ಷರು ಮತ್ತು ಉಫಾಧ್ಯಕ್ಷರ ಹುದ್ದೆಗಳಿಗೆ ನಡೆದ ಚುನಾವಣೆಯ ಫಲಿತಾಂಶಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿದೆ.

ಬಿಜೆಪಿ ಒಂದೇ ಒಂದು ಅಧ್ಯಕ್ಷ ಸ್ಥಾನವನ್ನು ಗೆದ್ದಿಲ್ಲ ಎಂದು ವರದಿಯಾಗಿದ್ದು, ಕೇವಲ ಮೂರು ಉಪಾಧ್ಯಕ್ಷ ಸ್ಥಾನಗಳನ್ನು ಮಾತ್ರ ಬಿಜೆಪಿ ಗೆದ್ದಕೊಂಡಿದೆ. ಶನಿವಾರ ನಡೆದ ಸ್ಥಳೀಯ ಚುನಾವಣೆಯಲ್ಲಿ ಜನರು ಮತ ಚಲಾಯಿಸಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಗ್ಪುರವು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಒಕ್ಕೂಟ ಸರ್ಕಾರದ ಸಚಿವ ನಿತಿನ್ ಗಡ್ಕರಿ ಅವರ ತವರು ಕ್ಷೇತ್ರವಾಗಿದೆ. ಜೊತೆಗೆ ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕ ಸಂಘಟನೆಯಾದ ಆರೆಸ್ಸೆಸ್‌‌ನ ಪ್ರಧಾನ ಕಛೇರಿ ಕೂಡಾ ನಾಗ್ಪುರದಲ್ಲಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಉಪಚುನಾವಣೆ: ಉದ್ಧವ್ ಠಾಕ್ರೆ ಬಣದ ಅಭ್ಯರ್ಥಿ ಗೆಲುವಿಗಾಗಿ ನಾಮಪತ್ರ ಹಿಂಪಡೆದ ಬಿಜೆಪಿ

ನಾಗ್ಪುರದ 13 ಪಂಚಾಯತ್‌‌ ಅಧ್ಯಕ್ಷ ಸ್ಥಾನಗಳಲ್ಲಿ ಒಂಬತ್ತು ಮತ್ತು 13 ಉಪಾಧ್ಯಕ್ಷ ಸ್ಥಾನಗಳಲ್ಲಿ ಎಂಟು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಎನ್‌ಸಿಪಿ ಮೂರು ಅಧ್ಯಕ್ಷ ಸ್ಥಾನಗಳನ್ನು ಗೆದ್ದರೆ, ಶಿವಸೇನೆ ಒಂದು ಹುದ್ದೆಯನ್ನು ಗೆದ್ದಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ ಮತ್ತು ಹಿರಿಯ ನಾಯಕರಾದ ನಿತಿನ್ ಗಡ್ಕರಿ, ದೇವೇಂದ್ರ ಫಡ್ನವಿಸ್ ಮತ್ತು ಚಂದ್ರಶೇಖರ್ ಬಾವಂಕುಲೆ ಅವರ ತವರು ನೆಲದಲ್ಲಿ ಪಕ್ಷವು ಸೋಲನ್ನು ಎದುರಿಸುತ್ತಿರುವಂತೆ ಪಂಚಾಯತ್ ಸಮಿತಿ ಫಲಿತಾಂಶಗಳು ಬಿಜೆಪಿ ಕಾರ್ಯಕರ್ತರನ್ನು ಹತಾಶಗೊಳಿಸಿವೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಗ್ರಾಮೀಣ ಘಟಕದ ಮುಖ್ಯಸ್ಥ ರಾಜೇಂದ್ರ ಮುಲಾಕ್ ಪಿಟಿಐಗೆ ತಿಳಿಸಿದ್ದಾರೆ.

ಸೋಲು ಗೆಲುವು ನಡೆಯುತ್ತಲೇ ಇರುತ್ತವೆ, ಆದರೆ ಅವರು ಸೋತಿರುವ ರೀತಿ ನೋಡಿದರೆ ಜಿಲ್ಲೆಯಲ್ಲಿ ಬಿಜೆಪಿ ಕಾರ‌್ಯಕರ್ತರಿಗೆ ಹಿಡಿತವಿಲ್ಲ ಎನ್ನುವುದನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

ಇದನ್ನೂ ಓದಿ: ‘ಶೂಟೌಟ್‌ ವೇಳೆ ಅವರು ಪಾನಮತ್ತರಾಗಿದ್ದರು’: ಯುಪಿ ಪೊಲೀಸರಿಂದ ಉತ್ತರಾಖಂಡ ಬಿಜೆಪಿ ನಾಯಕನ ಪತ್ನಿಯ ಹತ್ಯೆ

ಗ್ರಾಮ ಪಂಚಾಯಿತಿಗಳ ಸರಪಂಚ್ ಮತ್ತು ಸದಸ್ಯರ ಸ್ಥಾನಗಳಿಗೆ ಭಾನುವಾರ ಚುನಾವಣೆ ನಡೆದಿದ್ದು, ಸೋಮವಾರ ಫಲಿತಾಂಶ ಪ್ರಕಟವಾಗಲಿದೆ. ಜಿಲ್ಲಾ ಪರಿಷತ್ತಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಸೋಮವಾರ ಮತದಾನ ಮತ್ತು ಮತ ಎಣಿಕೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...