Homeಮುಖಪುಟನಾಗ್ಪುರ ಗಲಭೆ | 'ಹೂಕೋಸು' ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

- Advertisement -
- Advertisement -

ಮೊಘಲ್ ದೊರೆ ಔರಂಗಜೇಬ್ ಅವರ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಬಿಜೆಪಿಯ ಪರ ಸಂಘಟನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನ ದುಷ್ಕರ್ಮಿಗಳ ನಡೆಸಿದ ಪ್ರತಿಭಟನೆಗಳ ನಂತರ ಮಹಾರಾಷ್ಟ್ರದ ನಾಗ್ಪುರದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಕೆಲವು ಬಲಪಂಥೀಯ ಸಾಮಾಜಿಕ ಮಾಧ್ಯಮ ಖಾತೆಗಳು ಮುಸ್ಲಿಮರ ಹತ್ಯಾಕಾಂಡ ನಡೆಸಬೇಕು ಎಂದು ಸೂಚಿಸಿ ಮತ್ತು ಅದನ್ನು ಪ್ರಚೋದಿಸುವ ಸಂಕೇತವಾಗಿ ಹೂಕೋಸಿನ ಚಿತ್ರಗಳನ್ನು ಹಂಚಿಕೊಳ್ಳುತ್ತಿವೆ. ಇದು 1989ರ ಭಾಗಲ್ಪುರ ಗಲಭೆಗಳನ್ನು ನೆನಪಿಸುತ್ತದೆ. ನಾಗ್ಪುರ ಗಲಭೆ

ನಾಗ್ಪುರ ಗಲಭೆಯ ವಿಚಾರವಾಗಿ ಬಲಫಂಥೀಯರು ಟ್ವಿಟರ್‌ನಲ್ಲಿ ಹೂ ಕೋಸಿನ ಚಿತ್ರ ಯಾಕೆ ಹಂಚಿಕೊಳ್ಳುತ್ತಿದ್ದಾರೆ?

ಬಲಪಂಥೀಯ ಎಕ್ಸ್ ಖಾತೆ @HPhobiaWatch, “ನಾಗ್ಪುರಕ್ಕೆ ಪರಿಹಾರವಿದೆ” ಎಂಬ ಶೀರ್ಷಿಕೆಯೊಂದಿಗೆ ಹೂಕೋಸು ಕೊಯ್ಲು ಮಾಡುವ ಮಹಿಳೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಇದೇ ಪೋಸ್ಟ್‌ಗೆ ಕಾಮೆಂಟ್ ಮಾಡುತ್ತಾ, @HitRunDFI ಎಂಬ ಮತ್ತೊಂದು ಖಾತೆ, “ಹಿಂದೂಗಳಿಗೆ ವಿನಂತಿ: ಈ ಬಾರಿ ಕುಳಿತುಕೊಳ್ಳುವ ಬಾತುಕೋಳಿಗಳಾಗಬೇಡಿ. ಗುರಿಯನ್ನು ಹೊಂದಿ, ಕನಿಷ್ಠ 2 ರಿಂದ 3 ಸಂಖ್ಯೆಯನ್ನು ಮನಸ್ಸಿನಲ್ಲಿಟ್ಟುಕೊಳ್ಳಿ ಮತ್ತು ಕಾರ್ಯನಿರ್ವಹಿಸಿ. ಅಲ್ಲದೆ, ನೀವು ಏನೂ ಮಾಡದಿದ್ದರೂ ಕೂಡಾ ಎಲ್ಲರೂ ನಿಮ್ಮನ್ನು ದೂಷಿಸುತ್ತಾರೆ ಎಂಬುದನ್ನು ನೆನಪಿಡಿ. ಆದ್ದರಿಂದ ಕೆಟ್ಟ PR ಬಗ್ಗೆ ಚಿಂತಿಸುವುದನ್ನು ನಿಲ್ಲಿಸಿ.” ಎಂದು ಬರೆದುಕೊಂಡಿದೆ.

“ಕೃಷಿಯು ಹಿಂಸಾತ್ಮಕ ಮನಸ್ಸುಗಳ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಬಹುಶಃ ನಾಗ್ಪುರಕ್ಕೆ ಹೆಚ್ಚಿನ ಹೂಕೋಸು ಕೃಷಿಯ ಅಗತ್ಯವಿರುತ್ತದೆ” ಎಂದು ಮತ್ತೊಂದು ಖಾತೆ @Karthik0412 ಬರೆದಿದೆ. ನಾಗ್ಪುರ ಗಲಭೆ

ಹೂಕೋಸು ಮೂಲಕ ಬಲಪಂಥಿಯರು ಏನು ಸೂಚಿಸುತ್ತಿದ್ದಾರೆ?

ಈ ಸಂದರ್ಭದಲ್ಲಿ ಹೂಕೋಸು ಮತ್ತು ಹೂಕೋಸು ಕೃಷಿಯ ಉಲ್ಲೇಖವು 1989 ರ ಭಾಗಲ್ಪುರ ಹಿಂಸಾಚಾರದ ನೇರ ಪ್ರತಿಪಾದನೆಯಾಗಿದೆ. ಈ ಗಲಭೆಯು ಬಾಬರಿ ಮಸೀದಿ ಧ್ವಂಸ ಮಾಡುವ ಅರೆಸ್ಸೆಸ್‌ ಮತ್ತು ಸಂಘಪರಿವಾರದ ಕೃತ್ಯದ ಸಮಯದಲ್ಲಿ ನಡೆಯಿತು. ಈ ವೇಳೆ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿಯ ದುಷ್ಕರ್ಮಿಗಳು ಸೇರಿದಂತೆ ಬಲಪಂಥೀಯ ಗುಂಪುಗಳ ಕೈಯಲ್ಲಿ 900 ಕ್ಕೂ ಹೆಚ್ಚು ಮುಸ್ಲಿಮರು ಕ್ರೂರವಾಗಿ ಹತರಾದರು.

ಹಿಂಸಾಚಾರದ ನಂತರ ಇದನ್ನು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಬಿಹಾರದ ಲೋಗೈನ್‌ನ ಹೂಕೋಸು ಹೊಲಗಳಿಂದ ನೂರಕ್ಕೂ ಹೆಚ್ಚು ಮುಸ್ಲಿಮರ ಮೃತ ದೇಹಗಳನ್ನು ಪತ್ತೆ ಮಾಡಲಾಗಿತ್ತು ಎಂದು ಈ ವರದಿಗಳು ಹೇಳಿದ್ದವು. ಸುಮಾರು ಎರಡು ತಿಂಗಳ ಕಾಲ ನಡೆದ ಮತ್ತು ಭಾಗಲ್ಪುರದ ಗ್ರಾಮೀಣ ಪ್ರದೇಶದ ಸುಮಾರು 200 ಹಳ್ಳಿಗಳ ಮೇಲೆ ಪರಿಣಾಮ ಬೀರಿದ ಈ ಹಿಂಸಾಚಾರದಲ್ಲಿ ಸಾವಿರಕ್ಕೂ ಹೆಚ್ಚು ಜನರು ಹತ್ಯೆಯಾಗಿದ್ದರು ಅಧಿಕೃತ ಮಾಹಿತಿಗಳು ತಿಳಿಸಿವೆ.

ಆದಾಗ್ಯೂ, ಇತರ ಮೂಲಗಳು ಸಾವಿನ ಸಂಖ್ಯೆಯನ್ನು 2000 ಎಂದು ಹೇಳುತ್ತವೆ. ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (PUDR) ವರದಿಯು, ಸತ್ತವರಲ್ಲಿ 93% ಮುಸ್ಲಿಮರು ಎಂದು ಸೂಚಿಸಿತ್ತು.

ಡಿಸೆಂಬರ್ 1989 ರಲ್ಲಿ ಸತ್ಯೇಂದ್ರ ನಾರಾಯಣ್ ಸಿನ್ಹಾ ನೇತೃತ್ವದ ರಾಜ್ಯ ಸರ್ಕಾರವು ಸ್ಥಾಪಿಸಿದ ಭಾಗಲ್ಪುರ ಗಲಭೆ ವಿಚಾರಣಾ ಆಯೋಗದ ಸದಸ್ಯರ ವರದಿಯು, ಬಾಬರಿ ಮಸೀದಿ ಒಡೆಯಲು ಪ್ರಚೋಧಿಸುವ ರಾಮ ಜನ್ಮಭೂಮಿ ಮೆರವಣಿಗೆಯನ್ನು ಮುಸ್ಲಿಂ ಪ್ರಾಬಲ್ಯದ ಪ್ರದೇಶದ ಮೂಲಕ ಹಾದುಹೋಗಲು ಅವಕಾಶ ಮಾಡಿಕೊಟ್ಟಿದ್ದೆ ಇದಕ್ಕೆ ಕಾರಣ ಎಂದು ಹೇಳಿತ್ತು.

ಈ ವರದಿಯು ಆಡಳಿತವು ಹಿಂಸೆಯನ್ನು ತಡೆಯುವಲ್ಲಿ ತೋರಿದ ಅಸಮರ್ಥತೆ ಮತ್ತು ಉದಾಸೀನತೆಯನ್ನು ಎತ್ತಿ ತೋರಿಸಿತ್ತು. ಜೊತೆಗೆ ವರದಿಯಲ್ಲಿ, ಸೂಪರಿಂಟೆಂಡೆಂಟ್ ಕೆ.ಎಸ್. ತ್ರಿವೇದಿ “ಘಟಿಸಿದ ಗಲಭೆಗೆ ಸಂಪೂರ್ಣ ಹೊಣೆಗಾರ” ಎಂದು ಕಂಡುಕೊಂಡಿತ್ತು. ಈ ವೇಳೆ ಬಿಜೆಪಿ ಮತ್ತು ಅದರ ದುಷ್ಕರ್ಮಿಗಳ ಸಂಘಟನೆ ವಿಎಚ್‌ಪಿ ತ್ರಿವೇದಿ ವಿರುದ್ಧದ ಶಿಸ್ತು ಕ್ರಮವನ್ನು ಪ್ರಶ್ನಿಸಿದ್ದವು. ಇದರ ನಂತರ ಆಗಿನ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಸರ್ಕಾರ ಹೊರಡಿಸಿದ ಅವರ ವರ್ಗಾವಣೆಯನ್ನು ರದ್ದುಗೊಳಿಸಿದ್ದರು.

ಭಾಗಲ್ಪುರ ಹಿಂಸಾಚಾರವು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಕಲೆಯಾಗಿ ಉಳಿದಿದೆ. ಘಟನೆಯ ನಂತರ ಬಿಹಾರದಲ್ಲಿ ಅಧಿಕಾರಕ್ಕೆ ಬಂದ ಅನೇಕ ಸರ್ಕಾರಗಳು ಸರಿಯಾದ ತನಿಖೆಗಳನ್ನು ನಡೆಸಲು ಮತ್ತು ಬಲಿಪಶುಗಳಿಗೆ ನ್ಯಾಯ ಒದಗಿಸಲು ವಿಫಲವಾಗಿವೆ.

ಈ ಘಟನೆಯನ್ನು “ಗೋಬಿ ಕೆ ಕೆತ್” (ಹೂ ಕೋಸಿನ ತೋಟ) ಎಂದು ಕರೆಯಲಾಗುತ್ತದೆ ಮತ್ತು ಇದು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿದಿದೆ. ನಾಗ್ಪುರ ಗಲಭೆಯ ಸಂದರ್ಭದಲ್ಲಿ ಬಲಪಂಥೀಯರು ಹೂ ಕೋಸಿನ ಚಿತ್ರಗಳನ್ನು ಹಾಕುವ ಮೂಲಕ ಈ ಐತಿಹಾಸಿಕ ಘಟನೆಯನ್ನು ಸಾಂಕೇತಿಕವಾಗಿ ಸೂಚಿಸುತ್ತಿದ್ದಾರೆ. ಇದು ಒಂದು ರೀತಿಯ ಕೋಡೆಡ್ ಸಂದೇಶವಾಗಿದ್ದು, ಭಾಗಲ್ಪುರದಂತೆಯೇ ನಾಗ್ಪುರದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಉತ್ತೇಜಿಸುವ ಉದ್ದೇಶ ಇದಾಗಿದೆ ಎಂದು ಹಲವಾರು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಕೃಪೆ:TNIE

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...