Homeಮುಖಪುಟನಾಗ್ಪುರ ಗಲಭೆ | 'ಹೂಕೋಸು' ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

- Advertisement -
- Advertisement -

ಮೊಘಲ್ ದೊರೆ ಔರಂಗಜೇಬ್ ಅವರ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಬಿಜೆಪಿಯ ಪರ ಸಂಘಟನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನ ದುಷ್ಕರ್ಮಿಗಳ ನಡೆಸಿದ ಪ್ರತಿಭಟನೆಗಳ ನಂತರ ಮಹಾರಾಷ್ಟ್ರದ ನಾಗ್ಪುರದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಕೆಲವು ಬಲಪಂಥೀಯ ಸಾಮಾಜಿಕ ಮಾಧ್ಯಮ ಖಾತೆಗಳು ಮುಸ್ಲಿಮರ ಹತ್ಯಾಕಾಂಡ ನಡೆಸಬೇಕು ಎಂದು ಸೂಚಿಸಿ ಮತ್ತು ಅದನ್ನು ಪ್ರಚೋದಿಸುವ ಸಂಕೇತವಾಗಿ ಹೂಕೋಸಿನ ಚಿತ್ರಗಳನ್ನು ಹಂಚಿಕೊಳ್ಳುತ್ತಿವೆ. ಇದು 1989ರ ಭಾಗಲ್ಪುರ ಗಲಭೆಗಳನ್ನು ನೆನಪಿಸುತ್ತದೆ. ನಾಗ್ಪುರ ಗಲಭೆ

ನಾಗ್ಪುರ ಗಲಭೆಯ ವಿಚಾರವಾಗಿ ಬಲಫಂಥೀಯರು ಟ್ವಿಟರ್‌ನಲ್ಲಿ ಹೂ ಕೋಸಿನ ಚಿತ್ರ ಯಾಕೆ ಹಂಚಿಕೊಳ್ಳುತ್ತಿದ್ದಾರೆ?

ಬಲಪಂಥೀಯ ಎಕ್ಸ್ ಖಾತೆ @HPhobiaWatch, “ನಾಗ್ಪುರಕ್ಕೆ ಪರಿಹಾರವಿದೆ” ಎಂಬ ಶೀರ್ಷಿಕೆಯೊಂದಿಗೆ ಹೂಕೋಸು ಕೊಯ್ಲು ಮಾಡುವ ಮಹಿಳೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಇದೇ ಪೋಸ್ಟ್‌ಗೆ ಕಾಮೆಂಟ್ ಮಾಡುತ್ತಾ, @HitRunDFI ಎಂಬ ಮತ್ತೊಂದು ಖಾತೆ, “ಹಿಂದೂಗಳಿಗೆ ವಿನಂತಿ: ಈ ಬಾರಿ ಕುಳಿತುಕೊಳ್ಳುವ ಬಾತುಕೋಳಿಗಳಾಗಬೇಡಿ. ಗುರಿಯನ್ನು ಹೊಂದಿ, ಕನಿಷ್ಠ 2 ರಿಂದ 3 ಸಂಖ್ಯೆಯನ್ನು ಮನಸ್ಸಿನಲ್ಲಿಟ್ಟುಕೊಳ್ಳಿ ಮತ್ತು ಕಾರ್ಯನಿರ್ವಹಿಸಿ. ಅಲ್ಲದೆ, ನೀವು ಏನೂ ಮಾಡದಿದ್ದರೂ ಕೂಡಾ ಎಲ್ಲರೂ ನಿಮ್ಮನ್ನು ದೂಷಿಸುತ್ತಾರೆ ಎಂಬುದನ್ನು ನೆನಪಿಡಿ. ಆದ್ದರಿಂದ ಕೆಟ್ಟ PR ಬಗ್ಗೆ ಚಿಂತಿಸುವುದನ್ನು ನಿಲ್ಲಿಸಿ.” ಎಂದು ಬರೆದುಕೊಂಡಿದೆ.

“ಕೃಷಿಯು ಹಿಂಸಾತ್ಮಕ ಮನಸ್ಸುಗಳ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಬಹುಶಃ ನಾಗ್ಪುರಕ್ಕೆ ಹೆಚ್ಚಿನ ಹೂಕೋಸು ಕೃಷಿಯ ಅಗತ್ಯವಿರುತ್ತದೆ” ಎಂದು ಮತ್ತೊಂದು ಖಾತೆ @Karthik0412 ಬರೆದಿದೆ. ನಾಗ್ಪುರ ಗಲಭೆ

ಹೂಕೋಸು ಮೂಲಕ ಬಲಪಂಥಿಯರು ಏನು ಸೂಚಿಸುತ್ತಿದ್ದಾರೆ?

ಈ ಸಂದರ್ಭದಲ್ಲಿ ಹೂಕೋಸು ಮತ್ತು ಹೂಕೋಸು ಕೃಷಿಯ ಉಲ್ಲೇಖವು 1989 ರ ಭಾಗಲ್ಪುರ ಹಿಂಸಾಚಾರದ ನೇರ ಪ್ರತಿಪಾದನೆಯಾಗಿದೆ. ಈ ಗಲಭೆಯು ಬಾಬರಿ ಮಸೀದಿ ಧ್ವಂಸ ಮಾಡುವ ಅರೆಸ್ಸೆಸ್‌ ಮತ್ತು ಸಂಘಪರಿವಾರದ ಕೃತ್ಯದ ಸಮಯದಲ್ಲಿ ನಡೆಯಿತು. ಈ ವೇಳೆ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿಯ ದುಷ್ಕರ್ಮಿಗಳು ಸೇರಿದಂತೆ ಬಲಪಂಥೀಯ ಗುಂಪುಗಳ ಕೈಯಲ್ಲಿ 900 ಕ್ಕೂ ಹೆಚ್ಚು ಮುಸ್ಲಿಮರು ಕ್ರೂರವಾಗಿ ಹತರಾದರು.

ಹಿಂಸಾಚಾರದ ನಂತರ ಇದನ್ನು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಬಿಹಾರದ ಲೋಗೈನ್‌ನ ಹೂಕೋಸು ಹೊಲಗಳಿಂದ ನೂರಕ್ಕೂ ಹೆಚ್ಚು ಮುಸ್ಲಿಮರ ಮೃತ ದೇಹಗಳನ್ನು ಪತ್ತೆ ಮಾಡಲಾಗಿತ್ತು ಎಂದು ಈ ವರದಿಗಳು ಹೇಳಿದ್ದವು. ಸುಮಾರು ಎರಡು ತಿಂಗಳ ಕಾಲ ನಡೆದ ಮತ್ತು ಭಾಗಲ್ಪುರದ ಗ್ರಾಮೀಣ ಪ್ರದೇಶದ ಸುಮಾರು 200 ಹಳ್ಳಿಗಳ ಮೇಲೆ ಪರಿಣಾಮ ಬೀರಿದ ಈ ಹಿಂಸಾಚಾರದಲ್ಲಿ ಸಾವಿರಕ್ಕೂ ಹೆಚ್ಚು ಜನರು ಹತ್ಯೆಯಾಗಿದ್ದರು ಅಧಿಕೃತ ಮಾಹಿತಿಗಳು ತಿಳಿಸಿವೆ.

ಆದಾಗ್ಯೂ, ಇತರ ಮೂಲಗಳು ಸಾವಿನ ಸಂಖ್ಯೆಯನ್ನು 2000 ಎಂದು ಹೇಳುತ್ತವೆ. ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (PUDR) ವರದಿಯು, ಸತ್ತವರಲ್ಲಿ 93% ಮುಸ್ಲಿಮರು ಎಂದು ಸೂಚಿಸಿತ್ತು.

ಡಿಸೆಂಬರ್ 1989 ರಲ್ಲಿ ಸತ್ಯೇಂದ್ರ ನಾರಾಯಣ್ ಸಿನ್ಹಾ ನೇತೃತ್ವದ ರಾಜ್ಯ ಸರ್ಕಾರವು ಸ್ಥಾಪಿಸಿದ ಭಾಗಲ್ಪುರ ಗಲಭೆ ವಿಚಾರಣಾ ಆಯೋಗದ ಸದಸ್ಯರ ವರದಿಯು, ಬಾಬರಿ ಮಸೀದಿ ಒಡೆಯಲು ಪ್ರಚೋಧಿಸುವ ರಾಮ ಜನ್ಮಭೂಮಿ ಮೆರವಣಿಗೆಯನ್ನು ಮುಸ್ಲಿಂ ಪ್ರಾಬಲ್ಯದ ಪ್ರದೇಶದ ಮೂಲಕ ಹಾದುಹೋಗಲು ಅವಕಾಶ ಮಾಡಿಕೊಟ್ಟಿದ್ದೆ ಇದಕ್ಕೆ ಕಾರಣ ಎಂದು ಹೇಳಿತ್ತು.

ಈ ವರದಿಯು ಆಡಳಿತವು ಹಿಂಸೆಯನ್ನು ತಡೆಯುವಲ್ಲಿ ತೋರಿದ ಅಸಮರ್ಥತೆ ಮತ್ತು ಉದಾಸೀನತೆಯನ್ನು ಎತ್ತಿ ತೋರಿಸಿತ್ತು. ಜೊತೆಗೆ ವರದಿಯಲ್ಲಿ, ಸೂಪರಿಂಟೆಂಡೆಂಟ್ ಕೆ.ಎಸ್. ತ್ರಿವೇದಿ “ಘಟಿಸಿದ ಗಲಭೆಗೆ ಸಂಪೂರ್ಣ ಹೊಣೆಗಾರ” ಎಂದು ಕಂಡುಕೊಂಡಿತ್ತು. ಈ ವೇಳೆ ಬಿಜೆಪಿ ಮತ್ತು ಅದರ ದುಷ್ಕರ್ಮಿಗಳ ಸಂಘಟನೆ ವಿಎಚ್‌ಪಿ ತ್ರಿವೇದಿ ವಿರುದ್ಧದ ಶಿಸ್ತು ಕ್ರಮವನ್ನು ಪ್ರಶ್ನಿಸಿದ್ದವು. ಇದರ ನಂತರ ಆಗಿನ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಸರ್ಕಾರ ಹೊರಡಿಸಿದ ಅವರ ವರ್ಗಾವಣೆಯನ್ನು ರದ್ದುಗೊಳಿಸಿದ್ದರು.

ಭಾಗಲ್ಪುರ ಹಿಂಸಾಚಾರವು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಕಲೆಯಾಗಿ ಉಳಿದಿದೆ. ಘಟನೆಯ ನಂತರ ಬಿಹಾರದಲ್ಲಿ ಅಧಿಕಾರಕ್ಕೆ ಬಂದ ಅನೇಕ ಸರ್ಕಾರಗಳು ಸರಿಯಾದ ತನಿಖೆಗಳನ್ನು ನಡೆಸಲು ಮತ್ತು ಬಲಿಪಶುಗಳಿಗೆ ನ್ಯಾಯ ಒದಗಿಸಲು ವಿಫಲವಾಗಿವೆ.

ಈ ಘಟನೆಯನ್ನು “ಗೋಬಿ ಕೆ ಕೆತ್” (ಹೂ ಕೋಸಿನ ತೋಟ) ಎಂದು ಕರೆಯಲಾಗುತ್ತದೆ ಮತ್ತು ಇದು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿದಿದೆ. ನಾಗ್ಪುರ ಗಲಭೆಯ ಸಂದರ್ಭದಲ್ಲಿ ಬಲಪಂಥೀಯರು ಹೂ ಕೋಸಿನ ಚಿತ್ರಗಳನ್ನು ಹಾಕುವ ಮೂಲಕ ಈ ಐತಿಹಾಸಿಕ ಘಟನೆಯನ್ನು ಸಾಂಕೇತಿಕವಾಗಿ ಸೂಚಿಸುತ್ತಿದ್ದಾರೆ. ಇದು ಒಂದು ರೀತಿಯ ಕೋಡೆಡ್ ಸಂದೇಶವಾಗಿದ್ದು, ಭಾಗಲ್ಪುರದಂತೆಯೇ ನಾಗ್ಪುರದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಉತ್ತೇಜಿಸುವ ಉದ್ದೇಶ ಇದಾಗಿದೆ ಎಂದು ಹಲವಾರು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಕೃಪೆ:TNIE

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...