Homeಮುಖಪುಟನಾಗ್ಪುರ ಗಲಭೆ | 'ಹೂಕೋಸು' ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

- Advertisement -
- Advertisement -

ಮೊಘಲ್ ದೊರೆ ಔರಂಗಜೇಬ್ ಅವರ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಬಿಜೆಪಿಯ ಪರ ಸಂಘಟನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನ ದುಷ್ಕರ್ಮಿಗಳ ನಡೆಸಿದ ಪ್ರತಿಭಟನೆಗಳ ನಂತರ ಮಹಾರಾಷ್ಟ್ರದ ನಾಗ್ಪುರದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಕೆಲವು ಬಲಪಂಥೀಯ ಸಾಮಾಜಿಕ ಮಾಧ್ಯಮ ಖಾತೆಗಳು ಮುಸ್ಲಿಮರ ಹತ್ಯಾಕಾಂಡ ನಡೆಸಬೇಕು ಎಂದು ಸೂಚಿಸಿ ಮತ್ತು ಅದನ್ನು ಪ್ರಚೋದಿಸುವ ಸಂಕೇತವಾಗಿ ಹೂಕೋಸಿನ ಚಿತ್ರಗಳನ್ನು ಹಂಚಿಕೊಳ್ಳುತ್ತಿವೆ. ಇದು 1989ರ ಭಾಗಲ್ಪುರ ಗಲಭೆಗಳನ್ನು ನೆನಪಿಸುತ್ತದೆ. ನಾಗ್ಪುರ ಗಲಭೆ

ನಾಗ್ಪುರ ಗಲಭೆಯ ವಿಚಾರವಾಗಿ ಬಲಫಂಥೀಯರು ಟ್ವಿಟರ್‌ನಲ್ಲಿ ಹೂ ಕೋಸಿನ ಚಿತ್ರ ಯಾಕೆ ಹಂಚಿಕೊಳ್ಳುತ್ತಿದ್ದಾರೆ?

ಬಲಪಂಥೀಯ ಎಕ್ಸ್ ಖಾತೆ @HPhobiaWatch, “ನಾಗ್ಪುರಕ್ಕೆ ಪರಿಹಾರವಿದೆ” ಎಂಬ ಶೀರ್ಷಿಕೆಯೊಂದಿಗೆ ಹೂಕೋಸು ಕೊಯ್ಲು ಮಾಡುವ ಮಹಿಳೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಇದೇ ಪೋಸ್ಟ್‌ಗೆ ಕಾಮೆಂಟ್ ಮಾಡುತ್ತಾ, @HitRunDFI ಎಂಬ ಮತ್ತೊಂದು ಖಾತೆ, “ಹಿಂದೂಗಳಿಗೆ ವಿನಂತಿ: ಈ ಬಾರಿ ಕುಳಿತುಕೊಳ್ಳುವ ಬಾತುಕೋಳಿಗಳಾಗಬೇಡಿ. ಗುರಿಯನ್ನು ಹೊಂದಿ, ಕನಿಷ್ಠ 2 ರಿಂದ 3 ಸಂಖ್ಯೆಯನ್ನು ಮನಸ್ಸಿನಲ್ಲಿಟ್ಟುಕೊಳ್ಳಿ ಮತ್ತು ಕಾರ್ಯನಿರ್ವಹಿಸಿ. ಅಲ್ಲದೆ, ನೀವು ಏನೂ ಮಾಡದಿದ್ದರೂ ಕೂಡಾ ಎಲ್ಲರೂ ನಿಮ್ಮನ್ನು ದೂಷಿಸುತ್ತಾರೆ ಎಂಬುದನ್ನು ನೆನಪಿಡಿ. ಆದ್ದರಿಂದ ಕೆಟ್ಟ PR ಬಗ್ಗೆ ಚಿಂತಿಸುವುದನ್ನು ನಿಲ್ಲಿಸಿ.” ಎಂದು ಬರೆದುಕೊಂಡಿದೆ.

“ಕೃಷಿಯು ಹಿಂಸಾತ್ಮಕ ಮನಸ್ಸುಗಳ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಬಹುಶಃ ನಾಗ್ಪುರಕ್ಕೆ ಹೆಚ್ಚಿನ ಹೂಕೋಸು ಕೃಷಿಯ ಅಗತ್ಯವಿರುತ್ತದೆ” ಎಂದು ಮತ್ತೊಂದು ಖಾತೆ @Karthik0412 ಬರೆದಿದೆ. ನಾಗ್ಪುರ ಗಲಭೆ

ಹೂಕೋಸು ಮೂಲಕ ಬಲಪಂಥಿಯರು ಏನು ಸೂಚಿಸುತ್ತಿದ್ದಾರೆ?

ಈ ಸಂದರ್ಭದಲ್ಲಿ ಹೂಕೋಸು ಮತ್ತು ಹೂಕೋಸು ಕೃಷಿಯ ಉಲ್ಲೇಖವು 1989 ರ ಭಾಗಲ್ಪುರ ಹಿಂಸಾಚಾರದ ನೇರ ಪ್ರತಿಪಾದನೆಯಾಗಿದೆ. ಈ ಗಲಭೆಯು ಬಾಬರಿ ಮಸೀದಿ ಧ್ವಂಸ ಮಾಡುವ ಅರೆಸ್ಸೆಸ್‌ ಮತ್ತು ಸಂಘಪರಿವಾರದ ಕೃತ್ಯದ ಸಮಯದಲ್ಲಿ ನಡೆಯಿತು. ಈ ವೇಳೆ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿಯ ದುಷ್ಕರ್ಮಿಗಳು ಸೇರಿದಂತೆ ಬಲಪಂಥೀಯ ಗುಂಪುಗಳ ಕೈಯಲ್ಲಿ 900 ಕ್ಕೂ ಹೆಚ್ಚು ಮುಸ್ಲಿಮರು ಕ್ರೂರವಾಗಿ ಹತರಾದರು.

ಹಿಂಸಾಚಾರದ ನಂತರ ಇದನ್ನು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಬಿಹಾರದ ಲೋಗೈನ್‌ನ ಹೂಕೋಸು ಹೊಲಗಳಿಂದ ನೂರಕ್ಕೂ ಹೆಚ್ಚು ಮುಸ್ಲಿಮರ ಮೃತ ದೇಹಗಳನ್ನು ಪತ್ತೆ ಮಾಡಲಾಗಿತ್ತು ಎಂದು ಈ ವರದಿಗಳು ಹೇಳಿದ್ದವು. ಸುಮಾರು ಎರಡು ತಿಂಗಳ ಕಾಲ ನಡೆದ ಮತ್ತು ಭಾಗಲ್ಪುರದ ಗ್ರಾಮೀಣ ಪ್ರದೇಶದ ಸುಮಾರು 200 ಹಳ್ಳಿಗಳ ಮೇಲೆ ಪರಿಣಾಮ ಬೀರಿದ ಈ ಹಿಂಸಾಚಾರದಲ್ಲಿ ಸಾವಿರಕ್ಕೂ ಹೆಚ್ಚು ಜನರು ಹತ್ಯೆಯಾಗಿದ್ದರು ಅಧಿಕೃತ ಮಾಹಿತಿಗಳು ತಿಳಿಸಿವೆ.

ಆದಾಗ್ಯೂ, ಇತರ ಮೂಲಗಳು ಸಾವಿನ ಸಂಖ್ಯೆಯನ್ನು 2000 ಎಂದು ಹೇಳುತ್ತವೆ. ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (PUDR) ವರದಿಯು, ಸತ್ತವರಲ್ಲಿ 93% ಮುಸ್ಲಿಮರು ಎಂದು ಸೂಚಿಸಿತ್ತು.

ಡಿಸೆಂಬರ್ 1989 ರಲ್ಲಿ ಸತ್ಯೇಂದ್ರ ನಾರಾಯಣ್ ಸಿನ್ಹಾ ನೇತೃತ್ವದ ರಾಜ್ಯ ಸರ್ಕಾರವು ಸ್ಥಾಪಿಸಿದ ಭಾಗಲ್ಪುರ ಗಲಭೆ ವಿಚಾರಣಾ ಆಯೋಗದ ಸದಸ್ಯರ ವರದಿಯು, ಬಾಬರಿ ಮಸೀದಿ ಒಡೆಯಲು ಪ್ರಚೋಧಿಸುವ ರಾಮ ಜನ್ಮಭೂಮಿ ಮೆರವಣಿಗೆಯನ್ನು ಮುಸ್ಲಿಂ ಪ್ರಾಬಲ್ಯದ ಪ್ರದೇಶದ ಮೂಲಕ ಹಾದುಹೋಗಲು ಅವಕಾಶ ಮಾಡಿಕೊಟ್ಟಿದ್ದೆ ಇದಕ್ಕೆ ಕಾರಣ ಎಂದು ಹೇಳಿತ್ತು.

ಈ ವರದಿಯು ಆಡಳಿತವು ಹಿಂಸೆಯನ್ನು ತಡೆಯುವಲ್ಲಿ ತೋರಿದ ಅಸಮರ್ಥತೆ ಮತ್ತು ಉದಾಸೀನತೆಯನ್ನು ಎತ್ತಿ ತೋರಿಸಿತ್ತು. ಜೊತೆಗೆ ವರದಿಯಲ್ಲಿ, ಸೂಪರಿಂಟೆಂಡೆಂಟ್ ಕೆ.ಎಸ್. ತ್ರಿವೇದಿ “ಘಟಿಸಿದ ಗಲಭೆಗೆ ಸಂಪೂರ್ಣ ಹೊಣೆಗಾರ” ಎಂದು ಕಂಡುಕೊಂಡಿತ್ತು. ಈ ವೇಳೆ ಬಿಜೆಪಿ ಮತ್ತು ಅದರ ದುಷ್ಕರ್ಮಿಗಳ ಸಂಘಟನೆ ವಿಎಚ್‌ಪಿ ತ್ರಿವೇದಿ ವಿರುದ್ಧದ ಶಿಸ್ತು ಕ್ರಮವನ್ನು ಪ್ರಶ್ನಿಸಿದ್ದವು. ಇದರ ನಂತರ ಆಗಿನ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಸರ್ಕಾರ ಹೊರಡಿಸಿದ ಅವರ ವರ್ಗಾವಣೆಯನ್ನು ರದ್ದುಗೊಳಿಸಿದ್ದರು.

ಭಾಗಲ್ಪುರ ಹಿಂಸಾಚಾರವು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಕಲೆಯಾಗಿ ಉಳಿದಿದೆ. ಘಟನೆಯ ನಂತರ ಬಿಹಾರದಲ್ಲಿ ಅಧಿಕಾರಕ್ಕೆ ಬಂದ ಅನೇಕ ಸರ್ಕಾರಗಳು ಸರಿಯಾದ ತನಿಖೆಗಳನ್ನು ನಡೆಸಲು ಮತ್ತು ಬಲಿಪಶುಗಳಿಗೆ ನ್ಯಾಯ ಒದಗಿಸಲು ವಿಫಲವಾಗಿವೆ.

ಈ ಘಟನೆಯನ್ನು “ಗೋಬಿ ಕೆ ಕೆತ್” (ಹೂ ಕೋಸಿನ ತೋಟ) ಎಂದು ಕರೆಯಲಾಗುತ್ತದೆ ಮತ್ತು ಇದು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿದಿದೆ. ನಾಗ್ಪುರ ಗಲಭೆಯ ಸಂದರ್ಭದಲ್ಲಿ ಬಲಪಂಥೀಯರು ಹೂ ಕೋಸಿನ ಚಿತ್ರಗಳನ್ನು ಹಾಕುವ ಮೂಲಕ ಈ ಐತಿಹಾಸಿಕ ಘಟನೆಯನ್ನು ಸಾಂಕೇತಿಕವಾಗಿ ಸೂಚಿಸುತ್ತಿದ್ದಾರೆ. ಇದು ಒಂದು ರೀತಿಯ ಕೋಡೆಡ್ ಸಂದೇಶವಾಗಿದ್ದು, ಭಾಗಲ್ಪುರದಂತೆಯೇ ನಾಗ್ಪುರದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಉತ್ತೇಜಿಸುವ ಉದ್ದೇಶ ಇದಾಗಿದೆ ಎಂದು ಹಲವಾರು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಕೃಪೆ:TNIE

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...