Homeಮುಖಪುಟನಾಗ್ಪುರ ಗಲಭೆ | 'ಹೂಕೋಸು' ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

ನಾಗ್ಪುರ ಗಲಭೆ | ‘ಹೂಕೋಸು’ ಮೂಲಕ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುತ್ತಿರುವ ಬಿಜೆಪಿ ಪರ ಬಲಪಂಥೀಯರು!

- Advertisement -
- Advertisement -

ಮೊಘಲ್ ದೊರೆ ಔರಂಗಜೇಬ್ ಅವರ ಸಮಾಧಿಯನ್ನು ಕೆಡವಬೇಕೆಂದು ಒತ್ತಾಯಿಸಿ ಬಿಜೆಪಿಯ ಪರ ಸಂಘಟನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನ ದುಷ್ಕರ್ಮಿಗಳ ನಡೆಸಿದ ಪ್ರತಿಭಟನೆಗಳ ನಂತರ ಮಹಾರಾಷ್ಟ್ರದ ನಾಗ್ಪುರದಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಈ ನಡುವೆ ಕೆಲವು ಬಲಪಂಥೀಯ ಸಾಮಾಜಿಕ ಮಾಧ್ಯಮ ಖಾತೆಗಳು ಮುಸ್ಲಿಮರ ಹತ್ಯಾಕಾಂಡ ನಡೆಸಬೇಕು ಎಂದು ಸೂಚಿಸಿ ಮತ್ತು ಅದನ್ನು ಪ್ರಚೋದಿಸುವ ಸಂಕೇತವಾಗಿ ಹೂಕೋಸಿನ ಚಿತ್ರಗಳನ್ನು ಹಂಚಿಕೊಳ್ಳುತ್ತಿವೆ. ಇದು 1989ರ ಭಾಗಲ್ಪುರ ಗಲಭೆಗಳನ್ನು ನೆನಪಿಸುತ್ತದೆ. ನಾಗ್ಪುರ ಗಲಭೆ

ನಾಗ್ಪುರ ಗಲಭೆಯ ವಿಚಾರವಾಗಿ ಬಲಫಂಥೀಯರು ಟ್ವಿಟರ್‌ನಲ್ಲಿ ಹೂ ಕೋಸಿನ ಚಿತ್ರ ಯಾಕೆ ಹಂಚಿಕೊಳ್ಳುತ್ತಿದ್ದಾರೆ?

ಬಲಪಂಥೀಯ ಎಕ್ಸ್ ಖಾತೆ @HPhobiaWatch, “ನಾಗ್ಪುರಕ್ಕೆ ಪರಿಹಾರವಿದೆ” ಎಂಬ ಶೀರ್ಷಿಕೆಯೊಂದಿಗೆ ಹೂಕೋಸು ಕೊಯ್ಲು ಮಾಡುವ ಮಹಿಳೆಯ ಚಿತ್ರವನ್ನು ಪೋಸ್ಟ್ ಮಾಡಿದೆ. ಇದೇ ಪೋಸ್ಟ್‌ಗೆ ಕಾಮೆಂಟ್ ಮಾಡುತ್ತಾ, @HitRunDFI ಎಂಬ ಮತ್ತೊಂದು ಖಾತೆ, “ಹಿಂದೂಗಳಿಗೆ ವಿನಂತಿ: ಈ ಬಾರಿ ಕುಳಿತುಕೊಳ್ಳುವ ಬಾತುಕೋಳಿಗಳಾಗಬೇಡಿ. ಗುರಿಯನ್ನು ಹೊಂದಿ, ಕನಿಷ್ಠ 2 ರಿಂದ 3 ಸಂಖ್ಯೆಯನ್ನು ಮನಸ್ಸಿನಲ್ಲಿಟ್ಟುಕೊಳ್ಳಿ ಮತ್ತು ಕಾರ್ಯನಿರ್ವಹಿಸಿ. ಅಲ್ಲದೆ, ನೀವು ಏನೂ ಮಾಡದಿದ್ದರೂ ಕೂಡಾ ಎಲ್ಲರೂ ನಿಮ್ಮನ್ನು ದೂಷಿಸುತ್ತಾರೆ ಎಂಬುದನ್ನು ನೆನಪಿಡಿ. ಆದ್ದರಿಂದ ಕೆಟ್ಟ PR ಬಗ್ಗೆ ಚಿಂತಿಸುವುದನ್ನು ನಿಲ್ಲಿಸಿ.” ಎಂದು ಬರೆದುಕೊಂಡಿದೆ.

“ಕೃಷಿಯು ಹಿಂಸಾತ್ಮಕ ಮನಸ್ಸುಗಳ ಮೇಲೆ ಶಾಂತಗೊಳಿಸುವ ಪರಿಣಾಮವನ್ನು ಬೀರುತ್ತದೆ. ಬಹುಶಃ ನಾಗ್ಪುರಕ್ಕೆ ಹೆಚ್ಚಿನ ಹೂಕೋಸು ಕೃಷಿಯ ಅಗತ್ಯವಿರುತ್ತದೆ” ಎಂದು ಮತ್ತೊಂದು ಖಾತೆ @Karthik0412 ಬರೆದಿದೆ. ನಾಗ್ಪುರ ಗಲಭೆ

ಹೂಕೋಸು ಮೂಲಕ ಬಲಪಂಥಿಯರು ಏನು ಸೂಚಿಸುತ್ತಿದ್ದಾರೆ?

ಈ ಸಂದರ್ಭದಲ್ಲಿ ಹೂಕೋಸು ಮತ್ತು ಹೂಕೋಸು ಕೃಷಿಯ ಉಲ್ಲೇಖವು 1989 ರ ಭಾಗಲ್ಪುರ ಹಿಂಸಾಚಾರದ ನೇರ ಪ್ರತಿಪಾದನೆಯಾಗಿದೆ. ಈ ಗಲಭೆಯು ಬಾಬರಿ ಮಸೀದಿ ಧ್ವಂಸ ಮಾಡುವ ಅರೆಸ್ಸೆಸ್‌ ಮತ್ತು ಸಂಘಪರಿವಾರದ ಕೃತ್ಯದ ಸಮಯದಲ್ಲಿ ನಡೆಯಿತು. ಈ ವೇಳೆ ಬಿಹಾರದ ಭಾಗಲ್ಪುರ ಜಿಲ್ಲೆಯಲ್ಲಿ ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿಯ ದುಷ್ಕರ್ಮಿಗಳು ಸೇರಿದಂತೆ ಬಲಪಂಥೀಯ ಗುಂಪುಗಳ ಕೈಯಲ್ಲಿ 900 ಕ್ಕೂ ಹೆಚ್ಚು ಮುಸ್ಲಿಮರು ಕ್ರೂರವಾಗಿ ಹತರಾದರು.

ಹಿಂಸಾಚಾರದ ನಂತರ ಇದನ್ನು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಬಿಹಾರದ ಲೋಗೈನ್‌ನ ಹೂಕೋಸು ಹೊಲಗಳಿಂದ ನೂರಕ್ಕೂ ಹೆಚ್ಚು ಮುಸ್ಲಿಮರ ಮೃತ ದೇಹಗಳನ್ನು ಪತ್ತೆ ಮಾಡಲಾಗಿತ್ತು ಎಂದು ಈ ವರದಿಗಳು ಹೇಳಿದ್ದವು. ಸುಮಾರು ಎರಡು ತಿಂಗಳ ಕಾಲ ನಡೆದ ಮತ್ತು ಭಾಗಲ್ಪುರದ ಗ್ರಾಮೀಣ ಪ್ರದೇಶದ ಸುಮಾರು 200 ಹಳ್ಳಿಗಳ ಮೇಲೆ ಪರಿಣಾಮ ಬೀರಿದ ಈ ಹಿಂಸಾಚಾರದಲ್ಲಿ ಸಾವಿರಕ್ಕೂ ಹೆಚ್ಚು ಜನರು ಹತ್ಯೆಯಾಗಿದ್ದರು ಅಧಿಕೃತ ಮಾಹಿತಿಗಳು ತಿಳಿಸಿವೆ.

ಆದಾಗ್ಯೂ, ಇತರ ಮೂಲಗಳು ಸಾವಿನ ಸಂಖ್ಯೆಯನ್ನು 2000 ಎಂದು ಹೇಳುತ್ತವೆ. ಪೀಪಲ್ಸ್ ಯೂನಿಯನ್ ಫಾರ್ ಡೆಮಾಕ್ರಟಿಕ್ ರೈಟ್ಸ್ (PUDR) ವರದಿಯು, ಸತ್ತವರಲ್ಲಿ 93% ಮುಸ್ಲಿಮರು ಎಂದು ಸೂಚಿಸಿತ್ತು.

ಡಿಸೆಂಬರ್ 1989 ರಲ್ಲಿ ಸತ್ಯೇಂದ್ರ ನಾರಾಯಣ್ ಸಿನ್ಹಾ ನೇತೃತ್ವದ ರಾಜ್ಯ ಸರ್ಕಾರವು ಸ್ಥಾಪಿಸಿದ ಭಾಗಲ್ಪುರ ಗಲಭೆ ವಿಚಾರಣಾ ಆಯೋಗದ ಸದಸ್ಯರ ವರದಿಯು, ಬಾಬರಿ ಮಸೀದಿ ಒಡೆಯಲು ಪ್ರಚೋಧಿಸುವ ರಾಮ ಜನ್ಮಭೂಮಿ ಮೆರವಣಿಗೆಯನ್ನು ಮುಸ್ಲಿಂ ಪ್ರಾಬಲ್ಯದ ಪ್ರದೇಶದ ಮೂಲಕ ಹಾದುಹೋಗಲು ಅವಕಾಶ ಮಾಡಿಕೊಟ್ಟಿದ್ದೆ ಇದಕ್ಕೆ ಕಾರಣ ಎಂದು ಹೇಳಿತ್ತು.

ಈ ವರದಿಯು ಆಡಳಿತವು ಹಿಂಸೆಯನ್ನು ತಡೆಯುವಲ್ಲಿ ತೋರಿದ ಅಸಮರ್ಥತೆ ಮತ್ತು ಉದಾಸೀನತೆಯನ್ನು ಎತ್ತಿ ತೋರಿಸಿತ್ತು. ಜೊತೆಗೆ ವರದಿಯಲ್ಲಿ, ಸೂಪರಿಂಟೆಂಡೆಂಟ್ ಕೆ.ಎಸ್. ತ್ರಿವೇದಿ “ಘಟಿಸಿದ ಗಲಭೆಗೆ ಸಂಪೂರ್ಣ ಹೊಣೆಗಾರ” ಎಂದು ಕಂಡುಕೊಂಡಿತ್ತು. ಈ ವೇಳೆ ಬಿಜೆಪಿ ಮತ್ತು ಅದರ ದುಷ್ಕರ್ಮಿಗಳ ಸಂಘಟನೆ ವಿಎಚ್‌ಪಿ ತ್ರಿವೇದಿ ವಿರುದ್ಧದ ಶಿಸ್ತು ಕ್ರಮವನ್ನು ಪ್ರಶ್ನಿಸಿದ್ದವು. ಇದರ ನಂತರ ಆಗಿನ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಸರ್ಕಾರ ಹೊರಡಿಸಿದ ಅವರ ವರ್ಗಾವಣೆಯನ್ನು ರದ್ದುಗೊಳಿಸಿದ್ದರು.

ಭಾಗಲ್ಪುರ ಹಿಂಸಾಚಾರವು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಕಲೆಯಾಗಿ ಉಳಿದಿದೆ. ಘಟನೆಯ ನಂತರ ಬಿಹಾರದಲ್ಲಿ ಅಧಿಕಾರಕ್ಕೆ ಬಂದ ಅನೇಕ ಸರ್ಕಾರಗಳು ಸರಿಯಾದ ತನಿಖೆಗಳನ್ನು ನಡೆಸಲು ಮತ್ತು ಬಲಿಪಶುಗಳಿಗೆ ನ್ಯಾಯ ಒದಗಿಸಲು ವಿಫಲವಾಗಿವೆ.

ಈ ಘಟನೆಯನ್ನು “ಗೋಬಿ ಕೆ ಕೆತ್” (ಹೂ ಕೋಸಿನ ತೋಟ) ಎಂದು ಕರೆಯಲಾಗುತ್ತದೆ ಮತ್ತು ಇದು ಭಾರತದ ಇತಿಹಾಸದಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿದಿದೆ. ನಾಗ್ಪುರ ಗಲಭೆಯ ಸಂದರ್ಭದಲ್ಲಿ ಬಲಪಂಥೀಯರು ಹೂ ಕೋಸಿನ ಚಿತ್ರಗಳನ್ನು ಹಾಕುವ ಮೂಲಕ ಈ ಐತಿಹಾಸಿಕ ಘಟನೆಯನ್ನು ಸಾಂಕೇತಿಕವಾಗಿ ಸೂಚಿಸುತ್ತಿದ್ದಾರೆ. ಇದು ಒಂದು ರೀತಿಯ ಕೋಡೆಡ್ ಸಂದೇಶವಾಗಿದ್ದು, ಭಾಗಲ್ಪುರದಂತೆಯೇ ನಾಗ್ಪುರದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಉತ್ತೇಜಿಸುವ ಉದ್ದೇಶ ಇದಾಗಿದೆ ಎಂದು ಹಲವಾರು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಕೃಪೆ:TNIE

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...