Homeಮುಖಪುಟನಾಗ್ಪುರ ಹಿಂಸಾಚಾರ | ಬಜರಂಗದಳ, ವಿಹೆಚ್‌ಪಿ ಕಾರ್ಯಕರ್ತರು ಸೇರಿ 78 ಮಂದಿಯ ಬಂಧನ

ನಾಗ್ಪುರ ಹಿಂಸಾಚಾರ | ಬಜರಂಗದಳ, ವಿಹೆಚ್‌ಪಿ ಕಾರ್ಯಕರ್ತರು ಸೇರಿ 78 ಮಂದಿಯ ಬಂಧನ

- Advertisement -
- Advertisement -

ಕಳೆದ ಸೋಮವಾರ (ಮಾ.17) ರಾತ್ರಿ ಹಿಂಸಾಚಾರ ನಡೆದ ಮಹಾರಾಷ್ಟ್ರದ ನಾಗ್ಪುರ ನಗರದ ವಿವಿಧ ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿದಿದ್ದು, ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಜರಂಗದಳ ಮತ್ತು ವಿಎಚ್‌ಪಿಯ ಎಂಟು ಸದಸ್ಯರು ಸೇರಿದಂತೆ 78 ಜನರನ್ನು ಪೊಲೀಸರು ಬಂಧಿಸಿದ್ದಾರೆ.

“ಗಲಭೆಯ ಹಿಂದಿನ ಪ್ರಮುಖ ಆರೋಪಿ ಎಂದು ಪೊಲೀಸರು ಗುರುತಿಸಿರುವ 38 ವರ್ಷದ ಫಾಹೀಮ್ ಖಾನ್ ಅವರನ್ನು ನಗರದ ಅವರ ಮನೆಯಿಂದ ಬುಧವಾರ ಬೆಳಗಿನ ಜಾವ ನಡೆಸಿದ ದಾಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬುರ್ಖಾ ಮಾರಾಟಗಾರ ಹಾಗೂ ಸೈಕಲ್ ರಿಪೇರಿ ಅಂಗಡಿ ಮಾಲೀಕರ ಮಗನಾಗಿರುವ ಖಾನ್, 2024ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಸ್ಪರ್ಧಿಸಿ 1,000 ಮತಗಳನ್ನು ಗಳಿಸಿದ್ದರು” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿಯನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಿ ಬಜರಂಗದಳ ಮತ್ತು ವಿಎಚ್‌ಪಿ ನಡೆಸಿದ ಪ್ರತಿಭಟನೆ ವೇಳೆ ಔರಂಗಜೇಬ್ ಪ್ರತಿಕೃತಿ ಮತ್ತು ಮುಸ್ಲಿಮರ ಧಾರ್ಮಿಕ ಚಾದರ್ ಸುಟ್ಟಿದ್ದಕ್ಕಾಗಿ ದೂರು ದಾಖಲಿಸಲು ನಾಗ್ಪುರದ ಗಣೇಶಪೇಟೆ ಪೊಲೀಸ್ ಠಾಣೆಗೆ ತೆರಳಿದ್ದ ಜನರ ಗುಂಪಿ ನೇತೃತ್ವವನ್ನು ಫಾಹೀಮ್ ಖಾನ್ ವಹಿಸಿದ್ದರು ಎಂದು ವರದಿ ಹೇಳಿದೆ.

ಪೊಲೀಸ್ ಠಾಣೆಯಿಂದ ಹೊರಬಂದ ಸ್ವಲ್ಪ ಸಮಯದ ನಂತರ, ಪ್ರತಿಭಟನೆ ಹಮ್ಮಿಕೊಂಡಿದ್ದ ಬಜರಂಗದಳ ಮತ್ತು ವಿಹೆಚ್‌ಪಿ ಕಾರ್ಯಕರ್ತರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರನ್ನು ದೂಷಿಸುವ ಮತ್ತು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರನ್ನು ಟೀಕಿಸುವ ವಿಡಿಯೋವನ್ನು ರೆಕಾರ್ಡ್ ಮಾಡಿದ್ದರು. ಈ ವಿಡಿಯೋ ತ್ವರಿತವಾಗಿ ವೈರಲ್ ಆಗಿದ್ದು, ಇದು ಆರ್‌ಎಸ್‌ಎಸ್ ಪ್ರಧಾನ ಕಚೇರಿಯಿಂದ ಕೇವಲ 2 ಕಿಮೀ ದೂರದಲ್ಲಿರುವ ಕೇಂದ್ರ ನಾಗ್ಪುರದ ಮಹಲ್‌ ಪ್ರದೇಶದಲ್ಲಿ ಗಲಭೆಗೆ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಗಣೇಶಪೇಟೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸುವ ಮುನ್ನವೇ ಎಂಟು ಮಂದಿ ಬಜರಂಗದಳ ಮತ್ತು ವಿಎಚ್‌ಪಿ ಸದಸ್ಯರು ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ. ಆದರೆ, ಒಂಬತ್ತು ಗಂಟೆಗಳ ವಿಚಾರಣೆಯ ನಂತರ ಇತರ 27 ಮಂದಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಹಿಂಸಾಚಾರದ ವೇಳೆ ತೀವ್ರವಾಗಿ ಗಾಯಗೊಂಡ ಒಬ್ಬರು ಅಪ್ರಾಪ್ತ ಮತ್ತು ವೆಂಟಿಲೇಟರ್ ಸಹಾಯದಲ್ಲಿರುವ 40 ವರ್ಷದ ವ್ಯಕ್ತಿ ಪ್ರಸ್ತುತ ಅಪಾಯದಿಂದ ಪಾರಾಗಿದ್ದಾರೆ. ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾದ ಆರು ಪ್ರಕರಣಗಳ ಶಂಕಿತರಿಗಾಗಿ ಹುಡುಕಾಟವನ್ನು ವಿಸ್ತರಿಸುವುದರ ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲು ಮತ್ತು ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ನಗರದಾದ್ಯಂತ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಪೊಲೀಸರು 1,200ಕ್ಕೂ ಹೆಚ್ಚು ಜನರ ಮೇಲೆ ವಿವಿಧ ಆರೋಪಗಳನ್ನು ಹೊರಿಸಿದ್ದಾರೆ. ಮಧ್ಯ ನಾಗ್ಪುರದಲ್ಲಿ ಹಿಂಸಾಚಾರ ನಡೆದ ಪ್ರದೇಶಗಳ 70 ಸೇರಿದಂತೆ ಕನಿಷ್ಠ 1,500 ಕಣ್ಗಾವಲು ಕ್ಯಾಮರಾಗಳ ವೈಫಲ್ಯ ಪೊಲೀಸರು ಪ್ರಯತ್ನಗಳಿಗೆ ಅಡ್ಡಿಯಾಗಿದೆ ಎಂದು ವರದಿಯಾಗಿದೆ.

11 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕರ್ಫ್ಯೂ ನಿರ್ಬಂಧಗಳನ್ನು ತೆಗೆದುಹಾಕುವಂತೆ ವ್ಯಾಪಾರ ಗುಂಪುಗಳು ಮತ್ತು ಇತರ ಸಮುದಾಯ ಸಂಘಟನೆಗಳಿಂದ ಒತ್ತಡ ಹೆಚ್ಚಾಗಿದ್ದು, ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಗುರುವಾರ ಅಧಿಕಾರಿಗಳು ಕರ್ಫ್ಯೂ ನಿರ್ಬಂಧವನ್ನು ಮರುಪರಿಶೀಲಿಸುವ ನಿರೀಕ್ಷೆಯಿದೆ.

ಆಪಾದಿತ ಮಾಸ್ಟರ್ ಮೈಂಡ್ ಫಾಹೀಮ್ ಖಾನ್ ಈ ಹಿಂದೆ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳನ್ನು ಆಯೋಜಿಸಿದ್ದರು. ಅವರ ವಿರುದ್ದ ದ್ವೇಷ ಭಾಷಣದ ಆರೋಪ ಹೊರಿಸಲಾಗಿತ್ತು. ಕಾಲೇಜು ಬಿಟ್ಟಿರುವ ಅವರು, 2019 ರಿಂದ ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಸಕ್ರಿಯವಾಗಿರುವ ಸುನ್ನಿ ಯೂಥ್ ಫೋರ್ಸ್‌ನೊಂದಿಗೆ ಸಂಯೋಜಿತವಾಗಿರುವ ಮೈನಾರಿಟಿ ಡೆಮಾಕ್ರಟಿಕ್ ಪಾರ್ಟಿಯ (MDP)ಸ್ಥಾಪಕ-ಸದಸ್ಯರಾಗಿದ್ದಾರೆ.

ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...