Homeಮುಖಪುಟನಾಗ್ಪುರ ಹಿಂಸಾಚಾರ | ಬಜರಂಗದಳ, ವಿಹೆಚ್‌ಪಿ ಕಾರ್ಯಕರ್ತರು ಸೇರಿ 78 ಮಂದಿಯ ಬಂಧನ

ನಾಗ್ಪುರ ಹಿಂಸಾಚಾರ | ಬಜರಂಗದಳ, ವಿಹೆಚ್‌ಪಿ ಕಾರ್ಯಕರ್ತರು ಸೇರಿ 78 ಮಂದಿಯ ಬಂಧನ

- Advertisement -
- Advertisement -

ಕಳೆದ ಸೋಮವಾರ (ಮಾ.17) ರಾತ್ರಿ ಹಿಂಸಾಚಾರ ನಡೆದ ಮಹಾರಾಷ್ಟ್ರದ ನಾಗ್ಪುರ ನಗರದ ವಿವಿಧ ಪ್ರದೇಶಗಳಲ್ಲಿ ಕರ್ಫ್ಯೂ ಮುಂದುವರಿದಿದ್ದು, ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಜರಂಗದಳ ಮತ್ತು ವಿಎಚ್‌ಪಿಯ ಎಂಟು ಸದಸ್ಯರು ಸೇರಿದಂತೆ 78 ಜನರನ್ನು ಪೊಲೀಸರು ಬಂಧಿಸಿದ್ದಾರೆ.

“ಗಲಭೆಯ ಹಿಂದಿನ ಪ್ರಮುಖ ಆರೋಪಿ ಎಂದು ಪೊಲೀಸರು ಗುರುತಿಸಿರುವ 38 ವರ್ಷದ ಫಾಹೀಮ್ ಖಾನ್ ಅವರನ್ನು ನಗರದ ಅವರ ಮನೆಯಿಂದ ಬುಧವಾರ ಬೆಳಗಿನ ಜಾವ ನಡೆಸಿದ ದಾಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಬುರ್ಖಾ ಮಾರಾಟಗಾರ ಹಾಗೂ ಸೈಕಲ್ ರಿಪೇರಿ ಅಂಗಡಿ ಮಾಲೀಕರ ಮಗನಾಗಿರುವ ಖಾನ್, 2024ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಸ್ಪರ್ಧಿಸಿ 1,000 ಮತಗಳನ್ನು ಗಳಿಸಿದ್ದರು” ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಮೊಘಲ್ ಚಕ್ರವರ್ತಿ ಔರಂಗಜೇಬ್ ಸಮಾಧಿಯನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಿ ಬಜರಂಗದಳ ಮತ್ತು ವಿಎಚ್‌ಪಿ ನಡೆಸಿದ ಪ್ರತಿಭಟನೆ ವೇಳೆ ಔರಂಗಜೇಬ್ ಪ್ರತಿಕೃತಿ ಮತ್ತು ಮುಸ್ಲಿಮರ ಧಾರ್ಮಿಕ ಚಾದರ್ ಸುಟ್ಟಿದ್ದಕ್ಕಾಗಿ ದೂರು ದಾಖಲಿಸಲು ನಾಗ್ಪುರದ ಗಣೇಶಪೇಟೆ ಪೊಲೀಸ್ ಠಾಣೆಗೆ ತೆರಳಿದ್ದ ಜನರ ಗುಂಪಿ ನೇತೃತ್ವವನ್ನು ಫಾಹೀಮ್ ಖಾನ್ ವಹಿಸಿದ್ದರು ಎಂದು ವರದಿ ಹೇಳಿದೆ.

ಪೊಲೀಸ್ ಠಾಣೆಯಿಂದ ಹೊರಬಂದ ಸ್ವಲ್ಪ ಸಮಯದ ನಂತರ, ಪ್ರತಿಭಟನೆ ಹಮ್ಮಿಕೊಂಡಿದ್ದ ಬಜರಂಗದಳ ಮತ್ತು ವಿಹೆಚ್‌ಪಿ ಕಾರ್ಯಕರ್ತರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸರನ್ನು ದೂಷಿಸುವ ಮತ್ತು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರನ್ನು ಟೀಕಿಸುವ ವಿಡಿಯೋವನ್ನು ರೆಕಾರ್ಡ್ ಮಾಡಿದ್ದರು. ಈ ವಿಡಿಯೋ ತ್ವರಿತವಾಗಿ ವೈರಲ್ ಆಗಿದ್ದು, ಇದು ಆರ್‌ಎಸ್‌ಎಸ್ ಪ್ರಧಾನ ಕಚೇರಿಯಿಂದ ಕೇವಲ 2 ಕಿಮೀ ದೂರದಲ್ಲಿರುವ ಕೇಂದ್ರ ನಾಗ್ಪುರದ ಮಹಲ್‌ ಪ್ರದೇಶದಲ್ಲಿ ಗಲಭೆಗೆ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಗಣೇಶಪೇಟೆ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸುವ ಮುನ್ನವೇ ಎಂಟು ಮಂದಿ ಬಜರಂಗದಳ ಮತ್ತು ವಿಎಚ್‌ಪಿ ಸದಸ್ಯರು ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ನ್ಯಾಯಾಲಯವು ಅವರಿಗೆ ಜಾಮೀನು ನೀಡಿದೆ. ಆದರೆ, ಒಂಬತ್ತು ಗಂಟೆಗಳ ವಿಚಾರಣೆಯ ನಂತರ ಇತರ 27 ಮಂದಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಹಿಂಸಾಚಾರದ ವೇಳೆ ತೀವ್ರವಾಗಿ ಗಾಯಗೊಂಡ ಒಬ್ಬರು ಅಪ್ರಾಪ್ತ ಮತ್ತು ವೆಂಟಿಲೇಟರ್ ಸಹಾಯದಲ್ಲಿರುವ 40 ವರ್ಷದ ವ್ಯಕ್ತಿ ಪ್ರಸ್ತುತ ಅಪಾಯದಿಂದ ಪಾರಾಗಿದ್ದಾರೆ. ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದಾಖಲಾದ ಆರು ಪ್ರಕರಣಗಳ ಶಂಕಿತರಿಗಾಗಿ ಹುಡುಕಾಟವನ್ನು ವಿಸ್ತರಿಸುವುದರ ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲು ಮತ್ತು ಹೆಚ್ಚುವರಿ ಸಾಕ್ಷ್ಯಗಳನ್ನು ಸಂಗ್ರಹಿಸಲು ನಗರದಾದ್ಯಂತ ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಪೊಲೀಸರು 1,200ಕ್ಕೂ ಹೆಚ್ಚು ಜನರ ಮೇಲೆ ವಿವಿಧ ಆರೋಪಗಳನ್ನು ಹೊರಿಸಿದ್ದಾರೆ. ಮಧ್ಯ ನಾಗ್ಪುರದಲ್ಲಿ ಹಿಂಸಾಚಾರ ನಡೆದ ಪ್ರದೇಶಗಳ 70 ಸೇರಿದಂತೆ ಕನಿಷ್ಠ 1,500 ಕಣ್ಗಾವಲು ಕ್ಯಾಮರಾಗಳ ವೈಫಲ್ಯ ಪೊಲೀಸರು ಪ್ರಯತ್ನಗಳಿಗೆ ಅಡ್ಡಿಯಾಗಿದೆ ಎಂದು ವರದಿಯಾಗಿದೆ.

11 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕರ್ಫ್ಯೂ ನಿರ್ಬಂಧಗಳನ್ನು ತೆಗೆದುಹಾಕುವಂತೆ ವ್ಯಾಪಾರ ಗುಂಪುಗಳು ಮತ್ತು ಇತರ ಸಮುದಾಯ ಸಂಘಟನೆಗಳಿಂದ ಒತ್ತಡ ಹೆಚ್ಚಾಗಿದ್ದು, ಹಿರಿಯ ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಗುರುವಾರ ಅಧಿಕಾರಿಗಳು ಕರ್ಫ್ಯೂ ನಿರ್ಬಂಧವನ್ನು ಮರುಪರಿಶೀಲಿಸುವ ನಿರೀಕ್ಷೆಯಿದೆ.

ಆಪಾದಿತ ಮಾಸ್ಟರ್ ಮೈಂಡ್ ಫಾಹೀಮ್ ಖಾನ್ ಈ ಹಿಂದೆ ಧಾರ್ಮಿಕ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆಗಳನ್ನು ಆಯೋಜಿಸಿದ್ದರು. ಅವರ ವಿರುದ್ದ ದ್ವೇಷ ಭಾಷಣದ ಆರೋಪ ಹೊರಿಸಲಾಗಿತ್ತು. ಕಾಲೇಜು ಬಿಟ್ಟಿರುವ ಅವರು, 2019 ರಿಂದ ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದಲ್ಲಿ ಸಕ್ರಿಯವಾಗಿರುವ ಸುನ್ನಿ ಯೂಥ್ ಫೋರ್ಸ್‌ನೊಂದಿಗೆ ಸಂಯೋಜಿತವಾಗಿರುವ ಮೈನಾರಿಟಿ ಡೆಮಾಕ್ರಟಿಕ್ ಪಾರ್ಟಿಯ (MDP)ಸ್ಥಾಪಕ-ಸದಸ್ಯರಾಗಿದ್ದಾರೆ.

ಬಲಪಂಥೀಯ ನಿರೂಪಕ ಸುಧೀರ್ ಚೌಧರಿಯೊಂದಿಗೆ ₹15 ಕೋಟಿಗೆ ಒಪ್ಪಂದ ಮಾಡಿಕೊಂಡ ಡಿಡಿ ನ್ಯೂಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...