Homeಮುಖಪುಟನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ಅಮಿತಾಬ್‌ ಬಚ್ಚನ್‌ ಪ್ರಧಾನ ಭೂಮಿಕೆಯಲ್ಲಿರುವ ಈ ಸಿನಿಮಾ, ಅಸ್ಪೃಶ್ಯ ಭಾರತದ ನಿಜಸ್ಥಿತಿಯನ್ನು ಅನಾವರಣ ಮಾಡುತ್ತದೆ.

- Advertisement -
- Advertisement -

‘ಸ್ಪೋರ್ಟ್ಸ್ ಡ್ರಾಮಾ’ ಎಂಬ ಜಾನರ್‌ನಲ್ಲಿ ನಾವು ಸಾಕಷ್ಟು ಸಿನಿಮಾಗಳನ್ನು ಈವರೆಗೆ ನೋಡಿದ್ದೇವೆ. ಭಾರತೀಯ ಚಿತ್ರರಂಗದಲ್ಲಿ ಕ್ರೀಡೆಯನ್ನು ಮುಖ್ಯವಾಗಿಟ್ಟುಕೊಂಡು ಬಂದಿರುವ ಹಲವು ಸಿನಿಮಾಗಳು ಪ್ರಚಂಡ ಯಶಸ್ಸನ್ನೂ ಗಳಿಸಿವೆ. ಆದರೆ ಈ ಕ್ರೀಡಾ ಜಗತ್ತಿನ ಸುತ್ತಲಿನ ಅಸ್ಪೃಶ್ಯ ಜಗತ್ತನ್ನು ಮುಟ್ಟಿದವರು ತೀರಾ ಕಡಿಮೆ.

ಅಮೆಜಾ‌ನ್‌ ಪ್ರೈಮ್‌ನಲ್ಲಿ ತೆರೆಕಂಡ ಪ.ರಂಜಿತ್‌ ನಿರ್ದೇಶನದ ‘ಸರ್ಪಟ್ಟ ಪರಂಬರೈ’ ಕ್ರೀಡಾ ಕಥನಕ್ಕೆ ಹೊಸ ರೂಪ ನೀಡಿತ್ತು. ಈ ನೆಲದ ಬೇರುಗಳನ್ನು ಸ್ಪರ್ಶಿಸಲು ಯತ್ನಿಸಿತ್ತು. ಸರ್ಪಟ್ಟ ಸಿನಿಮಾ ನೋಡುತ್ತಿದ್ದರೆ ಬಾಕ್ಸಿಂಗ್ ನಂತಹ ಕ್ರೀಡೆಯೊಳಗೆ ಪ್ರೇಕ್ಷಕನೂ ಪೆಟ್ಟು ತಿನ್ನುವುದು, ಪೆಟ್ಟು ಕೊಡುವುದು ಸಾಗುತ್ತದೆ. ಬಹುಶಃ ಶ್ರಮಸಂಸ್ಕೃತಿಯೊಂದಿಗೆ ಬೆರೆತ ನೆಲಮುಖಿ ಕ್ರೀಡೆಗಳಿಗೆ ಮಾತ್ರ ಈ ಥರದ ಅನುಭವ ತರಲು ಸಾಧ್ಯವೆನಿಸುತ್ತದೆ. ಅಲ್ಲೂ ಪಿತೂರಿಗಳಿವೆ, ಕ್ರೀಡಾ ಮನೋಭಾವವಿದೆ, ಮನುಷ್ಯನ ಪ್ರತಿಷ್ಟೆ ಇದೆ, ರಾಜಕೀಯವಿದೆ. ಎಲ್ಲಕ್ಕಿಂತ ಹೆಚ್ಚಾಗಿ ಮೂಟೆ ಹೊರುವವನ ಶ್ರಮವನ್ನೂ ಪ್ರತಿನಿಧಿಸುವ ಕ್ರೀಡಾಕ್ಷೇತ್ರವಿದೆ. ಇದು ಪ.ರಂಜಿತ್‌ ಕಟ್ಟಿಕೊಟ್ಟ ಲೋಕ. ಬೇರೆ ಯಾರೋ ಬಾಕ್ಸಿಂಗ್ ಕುರಿತು ಸಿನಿಮಾ ಮಾಡುವುದಕ್ಕೂ ಪ.ರಂಜಿತ್ ಬಾಕ್ಸಿಂಗ್ ಕುರಿತು ಸಿನಿಮಾ ಮಾಡುವುದಕ್ಕೂ ಇರುವ ವ್ಯತ್ಯಾಸ.

ಪ.ರಂಜಿತ್‌ ನೀಡಿದ ಈ ಸುಮಧುರ ಅನುಭವದ ಬಳಿಕ ನಾಗರಾಜ್‌ ಮಂಜುಳೆಯವರು ನಿರ್ದೇಶಿಸಿರುವ ‘ಝುಂಡ್‌’ (ಹಿಂದಿ) ಸಿನಿಮಾ ಅಂಥದ್ದೇ ಕಥನವನ್ನು ಹೊತ್ತು ತಂದಿದೆ. ಅಮಿತಾಬ್‌ ಬಚ್ಚನ್‌ ಪ್ರಧಾನ ಭೂಮಿಕೆಯಲ್ಲಿರುವ ಈ ಸಿನಿಮಾ, ಅಸ್ಪೃಶ್ಯ ಭಾರತದ ನಿಜಸ್ಥಿತಿಯನ್ನು ಅನಾವರಣ ಮಾಡುತ್ತದೆ.

ಒಲಿಂಪಿಕ್ಸ್‌, ಫುಟ್ಬಾಲ್‌ ವರ್ಡ್‌ಕಪ್‌ ನಡೆದಾಗಲೆಲ್ಲ- ಭಾರತವೇಕೆ ಈ ಕ್ಷೇತ್ರದಲ್ಲಿ ಪ್ರಜ್ವಲಿಸುವುದಿಲ್ಲ, ಸಣ್ಣಪುಟ್ಟ ರಾಷ್ಟ್ರಗಳೇ ಹಲವು ಚಿನ್ನದ ಪದಕಗಳನ್ನು ಒಲಿಂಪಿಕ್ಸ್‌ನಲ್ಲಿ ಮುಡಿಗೇರಿಸಿಕೊಳ್ಳುವಾಗ, 130 ಕೋಟಿ ಜನಸಂಖ್ಯೆಯ ಭಾರತವೇಕೆ ಪದಕಗಳನ್ನು ಗೆಲ್ಲುವುದಿಲ್ಲ? ನಾವೇಕೆ ಸಾಕರ್‌ನಂತಹ ವಿಶ್ವವಿಖ್ಯಾತ ಕ್ರೀಡೆಯಲ್ಲಿ ಯಶಸ್ಸು ಸಾಧಿಸಿಲ್ಲ? ಎಂಬ ಪ್ರಶ್ನೆಗಳು ಸಾಮಾನ್ಯವಾಗಿ ಕೇಳಿಬರುತ್ತವೆ. ಈ ನಿಟ್ಟಿನಲ್ಲಿ ಭಾರತದ ಜಾತಿ ವ್ಯವಸ್ಥೆಗೂ ಕ್ರೀಡೆಯಲ್ಲಿ ಭಾರತ ಹಿಂದುಳಿದಿರುವುದಕ್ಕೂ ಇಲ್ಲಿನ ರೋಗಗ್ರಸ್ತ ವ್ಯವಸ್ಥೆಗೂ ಕಾರಣಗಳಿರುವುದನ್ನು ಢಾಳಾಗಿ ಶೋಧಿಸುತ್ತದೆ ‘ಝುಂಡ್’.

ಇದನ್ನೂ ಓದಿರಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’

‘ಸ್ಲಮ್‌ ಸಾಕರ್‌ ಇನ್‌ ಇಂಡಿಯಾ’ ಸ್ಥಾಪಕರಾದ ಸಾಮಾಜಿಕ ಕಾರ್ಯಕರ್ತ ವಿಜಯ್ ಬರ್ಸೆ ಅವರ ಜೀವನದಿಂದ ಪ್ರೇರಿತವಾದ ‘ಝುಂಡ್‌’ ವಿಜಯ್ ಬರ್ಸೆಯವರ ಜೀವನ ಕಥೆಯಾಗಿಯಷ್ಟೇ ಉಳಿಯುವುದಿಲ್ಲ. ಪೂರ್ಣ ಪ್ರಮಾಣದ ಕ್ರೀಡಾ ಕಥನವೂ ಅಲ್ಲ. ಭಾರತ ಸಾಮಾಜಿಕ ವ್ಯವಸ್ಥೆಯನ್ನು ಕ್ರೀಡೆಯ ನೆಪದಲ್ಲಿ ‘ಝುಂಡ್‌’ ಹೇಳಲು ಯತ್ನಿಸಿದೆ. ಪ್ರತಿಭೆಗಂಟಿರುವ ಅಸ್ಪೃಶ್ಯ ಜಗತ್ತನ್ನು ಬಿಚ್ಚಿಡುತ್ತದೆ.

ಫುಟ್‌ಬಾಲ್‌ ಕೋಚ್‌ ವಿಜಯ್‌ ಬರ್ಸೆ ಒಂದು ದಿನ ನಡೆದು ಹೋಗುತ್ತಿದ್ದಾಗ ಸ್ಲಮ್‌ ಹುಡುಗರು ಖಾಲಿ ಡಬ್ಬವನ್ನೇ ಫುಲ್‌ಬಾಲ್‌ ಮಾಡಿಕೊಂಡು ಆಟವಾಡುತ್ತಿರುವುದನ್ನು ಗಮನಿಸುತ್ತಾರೆ. ಈ ಹುಡುಗರು ಶಾಲಾ, ಕಾಲೇಜು ಮೆಟ್ಟಿಲೇರಿದವರಲ್ಲ. ಗಾಂಜಾ ಸೇವನೆ, ಮದ್ಯಪಾನ, ಧೂಮಪಾನ- ಹೀಗೆ ಹಲವು ಚಟಗಳ ದಾಸರಾದವರು. ಚಿಲ್ಲರೆ ಕಳ್ಳತನ ಮಾಡುವವರು. ಹೀಗೆ ಅಡ್ಡಾದಿಡ್ಡಿಯಾಗಿ ಬೆಳೆಯುತ್ತಿರುವ ಹುಡುಗರಲ್ಲಿ ಫುಲ್‌ಬಾಲ್‌ ಕೋಚ್‌ ಭಾರತದ ಭವಿಷ್ಯವನ್ನು ಕಾಣುತ್ತಾರೆ. ಮಾರನೇ ದಿನ ಫುಟ್‌ಬಾಲ್‌ ತಂದು, ತಾನೇ ದುಡ್ಡು ಕೊಟ್ಟು ಆಟವಾಡಿಸುತ್ತಾರೆ. ಹೀಗೆ ಕೆಲವು ದಿನ ದುಡ್ಡು ಕೊಟ್ಟು ಆಡವಾಡಿಸಿ, ಫುಟ್‌ಬಾಲ್‌ನ ರುಚಿಯನ್ನು ಆ ಹುಡುಗರಿಗೆ ಹತ್ತಿಸುತ್ತಾರೆ. ಒಂದು ದಿನ, “ನನ್ನ ಬಳಿ ದುಡ್ಡಿಲ್ಲ” ಎಂದು ಕೋಚ್‌ ಮನೆ ಬಾಗಿಲ ಹಾಕಿದಾಗ, “ನೀವು ದುಡ್ಡು ಕೊಡದಿದ್ದರೆ ಪರವಾಗಿಲ್ಲ, ಫುಲ್‌ಬಾಲ್‌ ಕೊಡಿ” ಎಂದು ಸ್ಲಮ್‌ ಹುಡುಗರು ಕೇಳುವಲ್ಲಿಗೆ ಮೊದಲ ಪರಿವರ್ತನೆ ಆರಂಭವಾಗುತ್ತದೆ.

`ಝುಂಡ್‌’ ಸಿನಿಮಾದ ಒಂದು ದೃಶ್ಯ

ಸ್ಲಮ್‌ ಪಕ್ಕದಲ್ಲಿಯೇ ಕಾಲೇಜು. ಆ ಕಾಲೇಜಿಗೆ ದೊಡ್ಡದಾದ ಕಾಂಪೌಂಡ್‌. ಶುಚಿಯಾಗಿರುವ ಅಂಗಳ. ಸ್ಮಮ್‌ ಕಾಣದಂತೆ ಎತ್ತರವಾದ ಕಟ್ಟಡ. ಸ್ಲಮ್‌ ಹಾಗೂ ಕಾಲೇಜಿನ ಅಂಗಳವನ್ನು ಒಂದೇ ಫ್ರೇಮ್‌ನಲ್ಲಿ ಹಿಡಿಯುವ ಹಲವು ದೃಶ್ಯಗಳು ಚಿತ್ರದಲ್ಲಿ ಬಂದು ಹೋಗುತ್ತವೆ. ಒಂದು ಅಂಬಾನಿ ಭಾರತವಾದರೆ ಮತ್ತೊಂದು ಅಸ್ಪೃಶ್ಯ ಭಾರತ. ಸ್ಲಮ್‌ನಲ್ಲಿರುವ ಒಂದಿಷ್ಟು ಜಾಗದಲ್ಲೇ ಹುಡುಗರು ಫುಟ್‌ಬಾಲ್ ಆಡುತ್ತಾರೆ. ಯಾವುದೇ ಸರಿಯಾದ ತರಬೇತಿ ಇಲ್ಲದ ಸ್ಲಮ್‌ ಹುಡುಗರು, ಸಾಕರ್‌ ತರಬೇತಿ ಪಡೆದ ಹುಡುಗರನ್ನು ಸೋಲಿಸುವಲ್ಲಿಗೆ ಎರಡನೇ ಅಧ್ಯಾಯ ಆರಂಭವಾಗುತ್ತದೆ. ಆ ಸ್ಲಮ್‌ ಹುಡುಗರ ಒಡಲ ಸಂಕಟವೂ ಪ್ರೇಕ್ಷಕರ ಮುಂದೆ ತೆರೆದುಕೊಳ್ಳುತ್ತದೆ.

ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿಯಲ್ಲಿ ಇಡೀ ಸ್ಲಮ್‌ ಕುಣಿದು ಕುಪ್ಪಳಿಸುವ ದೃಶ್ಯವನ್ನು ನಾಗರಾಜ್‌ ಮಂಜುಳೆ ಚಿತ್ರಿಸಿದ್ದಾರೆ. ಬಾಲಿವುಡ್‌ ಸಿನಿಮಾ ಲೋಕದಲ್ಲಿ ಈವರೆಗೆ ಗಣಪತಿ ಜಯಂತಿ, ಶಿವಾಜಿ ಜಯಂತಿಯನ್ನು ನೋಡುತ್ತಿದ್ದೆವು. ಇದೇ ಮೊದಲ ಬಾರಿಗೆ ಅಂಬೇಡ್ಕರ್‌‌ ಜಯಂತಿಯನ್ನು ನಾಗರಾಜ್‌ ಮಂಜುಳೆ ಪ್ರದರ್ಶಿಸಿದ್ದಾರೆ ಎಂದು ಅನೇಕರು ಪ್ರಶಂಸಿಸಿದ್ದಾರೆ.

`ಝುಂಡ್‌’ ಸಿನಿಮಾದ ಒಂದು ದೃಶ್ಯ

ರಾಷ್ಟ್ರಮಟ್ಟದ ಸ್ಲಮ್‌ ಟೂರ್ನಿಮೆಂಟ್‌ ನಡೆಸುವುದು ಹಾಗೂ ಸ್ಲಮ್‌ ಹುಡುಗರು ಅಂತಾರಾಷ್ಟ್ರೀಯ ಫುಟ್‌ಬಾಲ್ ಟೂರ್ನಿಗೆ ಆಯ್ಕೆಯಾಗುವುದರ ಕುರಿತು ಸಿನಿಮಾದ ದ್ವಿತಿಯಾರ್ಧ ಸಾಗುತ್ತದೆ. ಸಣ್ಣಪುಟ್ಟ ಕ್ರೈಮ್‌ನಲ್ಲಿ ಸಿಲುಕಿರುವ ಈ ಹುಡುಗರು ಅನುಭವಿಸುವ ಸಂಕಟ ಅಷ್ಟಿಷ್ಟಲ್ಲ. ಅದ್ಭುತವಾಗಿ ಫುಟ್ಬಾಲ್‌ ಕಲಿತ್ತಿದ್ದಕ್ಕಿಂತ ಇಂಟರ್‌ ನ್ಯಾಷನಲ್‌ ಟೂರ್ನಿಗೆ ಹೋಗುವುದಕ್ಕಾಗಿ ಈ ಹುಡುಗರು ಎದುರಿಸುವ ಸವಾಲೇ ಇಡೀ ಚಿತ್ರದ ನಿಜದ ಸಂದೇಶ. ಸರಿಯಾದ ದಾಖಲೆಗಳಿಲ್ಲ. ಅಧಿಕಾರಿ ವರ್ಗದ ಸಹಕಾರವಿಲ್ಲ. ಪ್ರೋತ್ಸಾಹ ದೊರಕುವುದಿಲ್ಲ. ಓಡುವ ಕಾಲಿಗೆ ಗುಂಡು ಕಟ್ಟಿದ ವ್ಯವಸ್ಥೆ ನಮ್ಮ ಕಣ್ಣೆದುರು ನಿಲ್ಲುತ್ತದೆ. ಈ ಸಮಸ್ಯೆಗಳ ಬೇರುಗಳು ಯಾವುವು? ಅದೇ ಜಾತಿ ವ್ಯವಸ್ಥೆ. ಭಾರತದ ಪ್ರಗತಿಯ ಕಾಲಿಗೆ ಕಟ್ಟಿದ ಗುಂಡು- ಈ ಜಾತಿ, ಅಸ್ಪೃಶ್ಯ ಸಮಾಜ. ನ್ಯಾಯಾಧೀಶರ ಮುಂದೆ ನಿಂತು ಕೋಚ್‌ ಹೇಳುತ್ತಾರೆ- “ತರಬೇತಿ ಶಾಲೆಯಷ್ಟೇ ಭಾರತವಲ್ಲ. ಅದರಾಚೆಯ ಭಾರತವಿದು.”

ಅಜಯ್‌ ಅತುಲ್‌ ಅವರ ಸಂಗೀತ ಸಿನಿಮಾ ಕಥೆಯ ತೂಕವನ್ನು ಹೆಚ್ಚಿಸಿದೆ. ಹೊಸ ಹುಡುಗರಿಂದ ಅಭಿನಯವನ್ನು ಹೊರತೆಗೆಯುವಲ್ಲಿ ನಾಗರಾಜ್‌ ಯಶಸ್ವಿಯಾಗಿದ್ದಾರೆ. ಸುಮಾರು ಮೂರು ಗಂಟೆ ಇರುವ ‘ಝುಂಡ್‌’ ಮೊದಲಾರ್ಧ ವೇಗವಾಗಿದ್ದು, ದ್ವಿತೀಯಾರ್ಧ ಸ್ವಲ್ಪ ನಿಧಾನವೆನಿಸಿದರೂ ವ್ಯವಸ್ಥೆಯನ್ನು ವಿಮರ್ಶೆಗೊಡ್ಡುತ್ತದೆ.


ಇದನ್ನೂ ಓದಿರಿ: ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...