Homeಮುಖಪುಟನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ಅಮಿತಾಬ್‌ ಬಚ್ಚನ್‌ ಪ್ರಧಾನ ಭೂಮಿಕೆಯಲ್ಲಿರುವ ಈ ಸಿನಿಮಾ, ಅಸ್ಪೃಶ್ಯ ಭಾರತದ ನಿಜಸ್ಥಿತಿಯನ್ನು ಅನಾವರಣ ಮಾಡುತ್ತದೆ.

- Advertisement -
- Advertisement -

‘ಸ್ಪೋರ್ಟ್ಸ್ ಡ್ರಾಮಾ’ ಎಂಬ ಜಾನರ್‌ನಲ್ಲಿ ನಾವು ಸಾಕಷ್ಟು ಸಿನಿಮಾಗಳನ್ನು ಈವರೆಗೆ ನೋಡಿದ್ದೇವೆ. ಭಾರತೀಯ ಚಿತ್ರರಂಗದಲ್ಲಿ ಕ್ರೀಡೆಯನ್ನು ಮುಖ್ಯವಾಗಿಟ್ಟುಕೊಂಡು ಬಂದಿರುವ ಹಲವು ಸಿನಿಮಾಗಳು ಪ್ರಚಂಡ ಯಶಸ್ಸನ್ನೂ ಗಳಿಸಿವೆ. ಆದರೆ ಈ ಕ್ರೀಡಾ ಜಗತ್ತಿನ ಸುತ್ತಲಿನ ಅಸ್ಪೃಶ್ಯ ಜಗತ್ತನ್ನು ಮುಟ್ಟಿದವರು ತೀರಾ ಕಡಿಮೆ.

ಅಮೆಜಾ‌ನ್‌ ಪ್ರೈಮ್‌ನಲ್ಲಿ ತೆರೆಕಂಡ ಪ.ರಂಜಿತ್‌ ನಿರ್ದೇಶನದ ‘ಸರ್ಪಟ್ಟ ಪರಂಬರೈ’ ಕ್ರೀಡಾ ಕಥನಕ್ಕೆ ಹೊಸ ರೂಪ ನೀಡಿತ್ತು. ಈ ನೆಲದ ಬೇರುಗಳನ್ನು ಸ್ಪರ್ಶಿಸಲು ಯತ್ನಿಸಿತ್ತು. ಸರ್ಪಟ್ಟ ಸಿನಿಮಾ ನೋಡುತ್ತಿದ್ದರೆ ಬಾಕ್ಸಿಂಗ್ ನಂತಹ ಕ್ರೀಡೆಯೊಳಗೆ ಪ್ರೇಕ್ಷಕನೂ ಪೆಟ್ಟು ತಿನ್ನುವುದು, ಪೆಟ್ಟು ಕೊಡುವುದು ಸಾಗುತ್ತದೆ. ಬಹುಶಃ ಶ್ರಮಸಂಸ್ಕೃತಿಯೊಂದಿಗೆ ಬೆರೆತ ನೆಲಮುಖಿ ಕ್ರೀಡೆಗಳಿಗೆ ಮಾತ್ರ ಈ ಥರದ ಅನುಭವ ತರಲು ಸಾಧ್ಯವೆನಿಸುತ್ತದೆ. ಅಲ್ಲೂ ಪಿತೂರಿಗಳಿವೆ, ಕ್ರೀಡಾ ಮನೋಭಾವವಿದೆ, ಮನುಷ್ಯನ ಪ್ರತಿಷ್ಟೆ ಇದೆ, ರಾಜಕೀಯವಿದೆ. ಎಲ್ಲಕ್ಕಿಂತ ಹೆಚ್ಚಾಗಿ ಮೂಟೆ ಹೊರುವವನ ಶ್ರಮವನ್ನೂ ಪ್ರತಿನಿಧಿಸುವ ಕ್ರೀಡಾಕ್ಷೇತ್ರವಿದೆ. ಇದು ಪ.ರಂಜಿತ್‌ ಕಟ್ಟಿಕೊಟ್ಟ ಲೋಕ. ಬೇರೆ ಯಾರೋ ಬಾಕ್ಸಿಂಗ್ ಕುರಿತು ಸಿನಿಮಾ ಮಾಡುವುದಕ್ಕೂ ಪ.ರಂಜಿತ್ ಬಾಕ್ಸಿಂಗ್ ಕುರಿತು ಸಿನಿಮಾ ಮಾಡುವುದಕ್ಕೂ ಇರುವ ವ್ಯತ್ಯಾಸ.

ಪ.ರಂಜಿತ್‌ ನೀಡಿದ ಈ ಸುಮಧುರ ಅನುಭವದ ಬಳಿಕ ನಾಗರಾಜ್‌ ಮಂಜುಳೆಯವರು ನಿರ್ದೇಶಿಸಿರುವ ‘ಝುಂಡ್‌’ (ಹಿಂದಿ) ಸಿನಿಮಾ ಅಂಥದ್ದೇ ಕಥನವನ್ನು ಹೊತ್ತು ತಂದಿದೆ. ಅಮಿತಾಬ್‌ ಬಚ್ಚನ್‌ ಪ್ರಧಾನ ಭೂಮಿಕೆಯಲ್ಲಿರುವ ಈ ಸಿನಿಮಾ, ಅಸ್ಪೃಶ್ಯ ಭಾರತದ ನಿಜಸ್ಥಿತಿಯನ್ನು ಅನಾವರಣ ಮಾಡುತ್ತದೆ.

ಒಲಿಂಪಿಕ್ಸ್‌, ಫುಟ್ಬಾಲ್‌ ವರ್ಡ್‌ಕಪ್‌ ನಡೆದಾಗಲೆಲ್ಲ- ಭಾರತವೇಕೆ ಈ ಕ್ಷೇತ್ರದಲ್ಲಿ ಪ್ರಜ್ವಲಿಸುವುದಿಲ್ಲ, ಸಣ್ಣಪುಟ್ಟ ರಾಷ್ಟ್ರಗಳೇ ಹಲವು ಚಿನ್ನದ ಪದಕಗಳನ್ನು ಒಲಿಂಪಿಕ್ಸ್‌ನಲ್ಲಿ ಮುಡಿಗೇರಿಸಿಕೊಳ್ಳುವಾಗ, 130 ಕೋಟಿ ಜನಸಂಖ್ಯೆಯ ಭಾರತವೇಕೆ ಪದಕಗಳನ್ನು ಗೆಲ್ಲುವುದಿಲ್ಲ? ನಾವೇಕೆ ಸಾಕರ್‌ನಂತಹ ವಿಶ್ವವಿಖ್ಯಾತ ಕ್ರೀಡೆಯಲ್ಲಿ ಯಶಸ್ಸು ಸಾಧಿಸಿಲ್ಲ? ಎಂಬ ಪ್ರಶ್ನೆಗಳು ಸಾಮಾನ್ಯವಾಗಿ ಕೇಳಿಬರುತ್ತವೆ. ಈ ನಿಟ್ಟಿನಲ್ಲಿ ಭಾರತದ ಜಾತಿ ವ್ಯವಸ್ಥೆಗೂ ಕ್ರೀಡೆಯಲ್ಲಿ ಭಾರತ ಹಿಂದುಳಿದಿರುವುದಕ್ಕೂ ಇಲ್ಲಿನ ರೋಗಗ್ರಸ್ತ ವ್ಯವಸ್ಥೆಗೂ ಕಾರಣಗಳಿರುವುದನ್ನು ಢಾಳಾಗಿ ಶೋಧಿಸುತ್ತದೆ ‘ಝುಂಡ್’.

ಇದನ್ನೂ ಓದಿರಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’

‘ಸ್ಲಮ್‌ ಸಾಕರ್‌ ಇನ್‌ ಇಂಡಿಯಾ’ ಸ್ಥಾಪಕರಾದ ಸಾಮಾಜಿಕ ಕಾರ್ಯಕರ್ತ ವಿಜಯ್ ಬರ್ಸೆ ಅವರ ಜೀವನದಿಂದ ಪ್ರೇರಿತವಾದ ‘ಝುಂಡ್‌’ ವಿಜಯ್ ಬರ್ಸೆಯವರ ಜೀವನ ಕಥೆಯಾಗಿಯಷ್ಟೇ ಉಳಿಯುವುದಿಲ್ಲ. ಪೂರ್ಣ ಪ್ರಮಾಣದ ಕ್ರೀಡಾ ಕಥನವೂ ಅಲ್ಲ. ಭಾರತ ಸಾಮಾಜಿಕ ವ್ಯವಸ್ಥೆಯನ್ನು ಕ್ರೀಡೆಯ ನೆಪದಲ್ಲಿ ‘ಝುಂಡ್‌’ ಹೇಳಲು ಯತ್ನಿಸಿದೆ. ಪ್ರತಿಭೆಗಂಟಿರುವ ಅಸ್ಪೃಶ್ಯ ಜಗತ್ತನ್ನು ಬಿಚ್ಚಿಡುತ್ತದೆ.

ಫುಟ್‌ಬಾಲ್‌ ಕೋಚ್‌ ವಿಜಯ್‌ ಬರ್ಸೆ ಒಂದು ದಿನ ನಡೆದು ಹೋಗುತ್ತಿದ್ದಾಗ ಸ್ಲಮ್‌ ಹುಡುಗರು ಖಾಲಿ ಡಬ್ಬವನ್ನೇ ಫುಲ್‌ಬಾಲ್‌ ಮಾಡಿಕೊಂಡು ಆಟವಾಡುತ್ತಿರುವುದನ್ನು ಗಮನಿಸುತ್ತಾರೆ. ಈ ಹುಡುಗರು ಶಾಲಾ, ಕಾಲೇಜು ಮೆಟ್ಟಿಲೇರಿದವರಲ್ಲ. ಗಾಂಜಾ ಸೇವನೆ, ಮದ್ಯಪಾನ, ಧೂಮಪಾನ- ಹೀಗೆ ಹಲವು ಚಟಗಳ ದಾಸರಾದವರು. ಚಿಲ್ಲರೆ ಕಳ್ಳತನ ಮಾಡುವವರು. ಹೀಗೆ ಅಡ್ಡಾದಿಡ್ಡಿಯಾಗಿ ಬೆಳೆಯುತ್ತಿರುವ ಹುಡುಗರಲ್ಲಿ ಫುಲ್‌ಬಾಲ್‌ ಕೋಚ್‌ ಭಾರತದ ಭವಿಷ್ಯವನ್ನು ಕಾಣುತ್ತಾರೆ. ಮಾರನೇ ದಿನ ಫುಟ್‌ಬಾಲ್‌ ತಂದು, ತಾನೇ ದುಡ್ಡು ಕೊಟ್ಟು ಆಟವಾಡಿಸುತ್ತಾರೆ. ಹೀಗೆ ಕೆಲವು ದಿನ ದುಡ್ಡು ಕೊಟ್ಟು ಆಡವಾಡಿಸಿ, ಫುಟ್‌ಬಾಲ್‌ನ ರುಚಿಯನ್ನು ಆ ಹುಡುಗರಿಗೆ ಹತ್ತಿಸುತ್ತಾರೆ. ಒಂದು ದಿನ, “ನನ್ನ ಬಳಿ ದುಡ್ಡಿಲ್ಲ” ಎಂದು ಕೋಚ್‌ ಮನೆ ಬಾಗಿಲ ಹಾಕಿದಾಗ, “ನೀವು ದುಡ್ಡು ಕೊಡದಿದ್ದರೆ ಪರವಾಗಿಲ್ಲ, ಫುಲ್‌ಬಾಲ್‌ ಕೊಡಿ” ಎಂದು ಸ್ಲಮ್‌ ಹುಡುಗರು ಕೇಳುವಲ್ಲಿಗೆ ಮೊದಲ ಪರಿವರ್ತನೆ ಆರಂಭವಾಗುತ್ತದೆ.

`ಝುಂಡ್‌’ ಸಿನಿಮಾದ ಒಂದು ದೃಶ್ಯ

ಸ್ಲಮ್‌ ಪಕ್ಕದಲ್ಲಿಯೇ ಕಾಲೇಜು. ಆ ಕಾಲೇಜಿಗೆ ದೊಡ್ಡದಾದ ಕಾಂಪೌಂಡ್‌. ಶುಚಿಯಾಗಿರುವ ಅಂಗಳ. ಸ್ಮಮ್‌ ಕಾಣದಂತೆ ಎತ್ತರವಾದ ಕಟ್ಟಡ. ಸ್ಲಮ್‌ ಹಾಗೂ ಕಾಲೇಜಿನ ಅಂಗಳವನ್ನು ಒಂದೇ ಫ್ರೇಮ್‌ನಲ್ಲಿ ಹಿಡಿಯುವ ಹಲವು ದೃಶ್ಯಗಳು ಚಿತ್ರದಲ್ಲಿ ಬಂದು ಹೋಗುತ್ತವೆ. ಒಂದು ಅಂಬಾನಿ ಭಾರತವಾದರೆ ಮತ್ತೊಂದು ಅಸ್ಪೃಶ್ಯ ಭಾರತ. ಸ್ಲಮ್‌ನಲ್ಲಿರುವ ಒಂದಿಷ್ಟು ಜಾಗದಲ್ಲೇ ಹುಡುಗರು ಫುಟ್‌ಬಾಲ್ ಆಡುತ್ತಾರೆ. ಯಾವುದೇ ಸರಿಯಾದ ತರಬೇತಿ ಇಲ್ಲದ ಸ್ಲಮ್‌ ಹುಡುಗರು, ಸಾಕರ್‌ ತರಬೇತಿ ಪಡೆದ ಹುಡುಗರನ್ನು ಸೋಲಿಸುವಲ್ಲಿಗೆ ಎರಡನೇ ಅಧ್ಯಾಯ ಆರಂಭವಾಗುತ್ತದೆ. ಆ ಸ್ಲಮ್‌ ಹುಡುಗರ ಒಡಲ ಸಂಕಟವೂ ಪ್ರೇಕ್ಷಕರ ಮುಂದೆ ತೆರೆದುಕೊಳ್ಳುತ್ತದೆ.

ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿಯಲ್ಲಿ ಇಡೀ ಸ್ಲಮ್‌ ಕುಣಿದು ಕುಪ್ಪಳಿಸುವ ದೃಶ್ಯವನ್ನು ನಾಗರಾಜ್‌ ಮಂಜುಳೆ ಚಿತ್ರಿಸಿದ್ದಾರೆ. ಬಾಲಿವುಡ್‌ ಸಿನಿಮಾ ಲೋಕದಲ್ಲಿ ಈವರೆಗೆ ಗಣಪತಿ ಜಯಂತಿ, ಶಿವಾಜಿ ಜಯಂತಿಯನ್ನು ನೋಡುತ್ತಿದ್ದೆವು. ಇದೇ ಮೊದಲ ಬಾರಿಗೆ ಅಂಬೇಡ್ಕರ್‌‌ ಜಯಂತಿಯನ್ನು ನಾಗರಾಜ್‌ ಮಂಜುಳೆ ಪ್ರದರ್ಶಿಸಿದ್ದಾರೆ ಎಂದು ಅನೇಕರು ಪ್ರಶಂಸಿಸಿದ್ದಾರೆ.

`ಝುಂಡ್‌’ ಸಿನಿಮಾದ ಒಂದು ದೃಶ್ಯ

ರಾಷ್ಟ್ರಮಟ್ಟದ ಸ್ಲಮ್‌ ಟೂರ್ನಿಮೆಂಟ್‌ ನಡೆಸುವುದು ಹಾಗೂ ಸ್ಲಮ್‌ ಹುಡುಗರು ಅಂತಾರಾಷ್ಟ್ರೀಯ ಫುಟ್‌ಬಾಲ್ ಟೂರ್ನಿಗೆ ಆಯ್ಕೆಯಾಗುವುದರ ಕುರಿತು ಸಿನಿಮಾದ ದ್ವಿತಿಯಾರ್ಧ ಸಾಗುತ್ತದೆ. ಸಣ್ಣಪುಟ್ಟ ಕ್ರೈಮ್‌ನಲ್ಲಿ ಸಿಲುಕಿರುವ ಈ ಹುಡುಗರು ಅನುಭವಿಸುವ ಸಂಕಟ ಅಷ್ಟಿಷ್ಟಲ್ಲ. ಅದ್ಭುತವಾಗಿ ಫುಟ್ಬಾಲ್‌ ಕಲಿತ್ತಿದ್ದಕ್ಕಿಂತ ಇಂಟರ್‌ ನ್ಯಾಷನಲ್‌ ಟೂರ್ನಿಗೆ ಹೋಗುವುದಕ್ಕಾಗಿ ಈ ಹುಡುಗರು ಎದುರಿಸುವ ಸವಾಲೇ ಇಡೀ ಚಿತ್ರದ ನಿಜದ ಸಂದೇಶ. ಸರಿಯಾದ ದಾಖಲೆಗಳಿಲ್ಲ. ಅಧಿಕಾರಿ ವರ್ಗದ ಸಹಕಾರವಿಲ್ಲ. ಪ್ರೋತ್ಸಾಹ ದೊರಕುವುದಿಲ್ಲ. ಓಡುವ ಕಾಲಿಗೆ ಗುಂಡು ಕಟ್ಟಿದ ವ್ಯವಸ್ಥೆ ನಮ್ಮ ಕಣ್ಣೆದುರು ನಿಲ್ಲುತ್ತದೆ. ಈ ಸಮಸ್ಯೆಗಳ ಬೇರುಗಳು ಯಾವುವು? ಅದೇ ಜಾತಿ ವ್ಯವಸ್ಥೆ. ಭಾರತದ ಪ್ರಗತಿಯ ಕಾಲಿಗೆ ಕಟ್ಟಿದ ಗುಂಡು- ಈ ಜಾತಿ, ಅಸ್ಪೃಶ್ಯ ಸಮಾಜ. ನ್ಯಾಯಾಧೀಶರ ಮುಂದೆ ನಿಂತು ಕೋಚ್‌ ಹೇಳುತ್ತಾರೆ- “ತರಬೇತಿ ಶಾಲೆಯಷ್ಟೇ ಭಾರತವಲ್ಲ. ಅದರಾಚೆಯ ಭಾರತವಿದು.”

ಅಜಯ್‌ ಅತುಲ್‌ ಅವರ ಸಂಗೀತ ಸಿನಿಮಾ ಕಥೆಯ ತೂಕವನ್ನು ಹೆಚ್ಚಿಸಿದೆ. ಹೊಸ ಹುಡುಗರಿಂದ ಅಭಿನಯವನ್ನು ಹೊರತೆಗೆಯುವಲ್ಲಿ ನಾಗರಾಜ್‌ ಯಶಸ್ವಿಯಾಗಿದ್ದಾರೆ. ಸುಮಾರು ಮೂರು ಗಂಟೆ ಇರುವ ‘ಝುಂಡ್‌’ ಮೊದಲಾರ್ಧ ವೇಗವಾಗಿದ್ದು, ದ್ವಿತೀಯಾರ್ಧ ಸ್ವಲ್ಪ ನಿಧಾನವೆನಿಸಿದರೂ ವ್ಯವಸ್ಥೆಯನ್ನು ವಿಮರ್ಶೆಗೊಡ್ಡುತ್ತದೆ.


ಇದನ್ನೂ ಓದಿರಿ: ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...