Homeಮುಖಪುಟನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ನಾಗರಾಜ್‌ ಮಂಜುಳೆಯ ‘ಝುಂಡ್‌’: ಕ್ರೀಡಾ ಜಗತ್ತಿನ ‘ಅಸ್ಪೃಶ್ಯ ಭಾರತ ದರ್ಶನ’

ಅಮಿತಾಬ್‌ ಬಚ್ಚನ್‌ ಪ್ರಧಾನ ಭೂಮಿಕೆಯಲ್ಲಿರುವ ಈ ಸಿನಿಮಾ, ಅಸ್ಪೃಶ್ಯ ಭಾರತದ ನಿಜಸ್ಥಿತಿಯನ್ನು ಅನಾವರಣ ಮಾಡುತ್ತದೆ.

- Advertisement -
- Advertisement -

‘ಸ್ಪೋರ್ಟ್ಸ್ ಡ್ರಾಮಾ’ ಎಂಬ ಜಾನರ್‌ನಲ್ಲಿ ನಾವು ಸಾಕಷ್ಟು ಸಿನಿಮಾಗಳನ್ನು ಈವರೆಗೆ ನೋಡಿದ್ದೇವೆ. ಭಾರತೀಯ ಚಿತ್ರರಂಗದಲ್ಲಿ ಕ್ರೀಡೆಯನ್ನು ಮುಖ್ಯವಾಗಿಟ್ಟುಕೊಂಡು ಬಂದಿರುವ ಹಲವು ಸಿನಿಮಾಗಳು ಪ್ರಚಂಡ ಯಶಸ್ಸನ್ನೂ ಗಳಿಸಿವೆ. ಆದರೆ ಈ ಕ್ರೀಡಾ ಜಗತ್ತಿನ ಸುತ್ತಲಿನ ಅಸ್ಪೃಶ್ಯ ಜಗತ್ತನ್ನು ಮುಟ್ಟಿದವರು ತೀರಾ ಕಡಿಮೆ.

ಅಮೆಜಾ‌ನ್‌ ಪ್ರೈಮ್‌ನಲ್ಲಿ ತೆರೆಕಂಡ ಪ.ರಂಜಿತ್‌ ನಿರ್ದೇಶನದ ‘ಸರ್ಪಟ್ಟ ಪರಂಬರೈ’ ಕ್ರೀಡಾ ಕಥನಕ್ಕೆ ಹೊಸ ರೂಪ ನೀಡಿತ್ತು. ಈ ನೆಲದ ಬೇರುಗಳನ್ನು ಸ್ಪರ್ಶಿಸಲು ಯತ್ನಿಸಿತ್ತು. ಸರ್ಪಟ್ಟ ಸಿನಿಮಾ ನೋಡುತ್ತಿದ್ದರೆ ಬಾಕ್ಸಿಂಗ್ ನಂತಹ ಕ್ರೀಡೆಯೊಳಗೆ ಪ್ರೇಕ್ಷಕನೂ ಪೆಟ್ಟು ತಿನ್ನುವುದು, ಪೆಟ್ಟು ಕೊಡುವುದು ಸಾಗುತ್ತದೆ. ಬಹುಶಃ ಶ್ರಮಸಂಸ್ಕೃತಿಯೊಂದಿಗೆ ಬೆರೆತ ನೆಲಮುಖಿ ಕ್ರೀಡೆಗಳಿಗೆ ಮಾತ್ರ ಈ ಥರದ ಅನುಭವ ತರಲು ಸಾಧ್ಯವೆನಿಸುತ್ತದೆ. ಅಲ್ಲೂ ಪಿತೂರಿಗಳಿವೆ, ಕ್ರೀಡಾ ಮನೋಭಾವವಿದೆ, ಮನುಷ್ಯನ ಪ್ರತಿಷ್ಟೆ ಇದೆ, ರಾಜಕೀಯವಿದೆ. ಎಲ್ಲಕ್ಕಿಂತ ಹೆಚ್ಚಾಗಿ ಮೂಟೆ ಹೊರುವವನ ಶ್ರಮವನ್ನೂ ಪ್ರತಿನಿಧಿಸುವ ಕ್ರೀಡಾಕ್ಷೇತ್ರವಿದೆ. ಇದು ಪ.ರಂಜಿತ್‌ ಕಟ್ಟಿಕೊಟ್ಟ ಲೋಕ. ಬೇರೆ ಯಾರೋ ಬಾಕ್ಸಿಂಗ್ ಕುರಿತು ಸಿನಿಮಾ ಮಾಡುವುದಕ್ಕೂ ಪ.ರಂಜಿತ್ ಬಾಕ್ಸಿಂಗ್ ಕುರಿತು ಸಿನಿಮಾ ಮಾಡುವುದಕ್ಕೂ ಇರುವ ವ್ಯತ್ಯಾಸ.

ಪ.ರಂಜಿತ್‌ ನೀಡಿದ ಈ ಸುಮಧುರ ಅನುಭವದ ಬಳಿಕ ನಾಗರಾಜ್‌ ಮಂಜುಳೆಯವರು ನಿರ್ದೇಶಿಸಿರುವ ‘ಝುಂಡ್‌’ (ಹಿಂದಿ) ಸಿನಿಮಾ ಅಂಥದ್ದೇ ಕಥನವನ್ನು ಹೊತ್ತು ತಂದಿದೆ. ಅಮಿತಾಬ್‌ ಬಚ್ಚನ್‌ ಪ್ರಧಾನ ಭೂಮಿಕೆಯಲ್ಲಿರುವ ಈ ಸಿನಿಮಾ, ಅಸ್ಪೃಶ್ಯ ಭಾರತದ ನಿಜಸ್ಥಿತಿಯನ್ನು ಅನಾವರಣ ಮಾಡುತ್ತದೆ.

ಒಲಿಂಪಿಕ್ಸ್‌, ಫುಟ್ಬಾಲ್‌ ವರ್ಡ್‌ಕಪ್‌ ನಡೆದಾಗಲೆಲ್ಲ- ಭಾರತವೇಕೆ ಈ ಕ್ಷೇತ್ರದಲ್ಲಿ ಪ್ರಜ್ವಲಿಸುವುದಿಲ್ಲ, ಸಣ್ಣಪುಟ್ಟ ರಾಷ್ಟ್ರಗಳೇ ಹಲವು ಚಿನ್ನದ ಪದಕಗಳನ್ನು ಒಲಿಂಪಿಕ್ಸ್‌ನಲ್ಲಿ ಮುಡಿಗೇರಿಸಿಕೊಳ್ಳುವಾಗ, 130 ಕೋಟಿ ಜನಸಂಖ್ಯೆಯ ಭಾರತವೇಕೆ ಪದಕಗಳನ್ನು ಗೆಲ್ಲುವುದಿಲ್ಲ? ನಾವೇಕೆ ಸಾಕರ್‌ನಂತಹ ವಿಶ್ವವಿಖ್ಯಾತ ಕ್ರೀಡೆಯಲ್ಲಿ ಯಶಸ್ಸು ಸಾಧಿಸಿಲ್ಲ? ಎಂಬ ಪ್ರಶ್ನೆಗಳು ಸಾಮಾನ್ಯವಾಗಿ ಕೇಳಿಬರುತ್ತವೆ. ಈ ನಿಟ್ಟಿನಲ್ಲಿ ಭಾರತದ ಜಾತಿ ವ್ಯವಸ್ಥೆಗೂ ಕ್ರೀಡೆಯಲ್ಲಿ ಭಾರತ ಹಿಂದುಳಿದಿರುವುದಕ್ಕೂ ಇಲ್ಲಿನ ರೋಗಗ್ರಸ್ತ ವ್ಯವಸ್ಥೆಗೂ ಕಾರಣಗಳಿರುವುದನ್ನು ಢಾಳಾಗಿ ಶೋಧಿಸುತ್ತದೆ ‘ಝುಂಡ್’.

ಇದನ್ನೂ ಓದಿರಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’

‘ಸ್ಲಮ್‌ ಸಾಕರ್‌ ಇನ್‌ ಇಂಡಿಯಾ’ ಸ್ಥಾಪಕರಾದ ಸಾಮಾಜಿಕ ಕಾರ್ಯಕರ್ತ ವಿಜಯ್ ಬರ್ಸೆ ಅವರ ಜೀವನದಿಂದ ಪ್ರೇರಿತವಾದ ‘ಝುಂಡ್‌’ ವಿಜಯ್ ಬರ್ಸೆಯವರ ಜೀವನ ಕಥೆಯಾಗಿಯಷ್ಟೇ ಉಳಿಯುವುದಿಲ್ಲ. ಪೂರ್ಣ ಪ್ರಮಾಣದ ಕ್ರೀಡಾ ಕಥನವೂ ಅಲ್ಲ. ಭಾರತ ಸಾಮಾಜಿಕ ವ್ಯವಸ್ಥೆಯನ್ನು ಕ್ರೀಡೆಯ ನೆಪದಲ್ಲಿ ‘ಝುಂಡ್‌’ ಹೇಳಲು ಯತ್ನಿಸಿದೆ. ಪ್ರತಿಭೆಗಂಟಿರುವ ಅಸ್ಪೃಶ್ಯ ಜಗತ್ತನ್ನು ಬಿಚ್ಚಿಡುತ್ತದೆ.

ಫುಟ್‌ಬಾಲ್‌ ಕೋಚ್‌ ವಿಜಯ್‌ ಬರ್ಸೆ ಒಂದು ದಿನ ನಡೆದು ಹೋಗುತ್ತಿದ್ದಾಗ ಸ್ಲಮ್‌ ಹುಡುಗರು ಖಾಲಿ ಡಬ್ಬವನ್ನೇ ಫುಲ್‌ಬಾಲ್‌ ಮಾಡಿಕೊಂಡು ಆಟವಾಡುತ್ತಿರುವುದನ್ನು ಗಮನಿಸುತ್ತಾರೆ. ಈ ಹುಡುಗರು ಶಾಲಾ, ಕಾಲೇಜು ಮೆಟ್ಟಿಲೇರಿದವರಲ್ಲ. ಗಾಂಜಾ ಸೇವನೆ, ಮದ್ಯಪಾನ, ಧೂಮಪಾನ- ಹೀಗೆ ಹಲವು ಚಟಗಳ ದಾಸರಾದವರು. ಚಿಲ್ಲರೆ ಕಳ್ಳತನ ಮಾಡುವವರು. ಹೀಗೆ ಅಡ್ಡಾದಿಡ್ಡಿಯಾಗಿ ಬೆಳೆಯುತ್ತಿರುವ ಹುಡುಗರಲ್ಲಿ ಫುಲ್‌ಬಾಲ್‌ ಕೋಚ್‌ ಭಾರತದ ಭವಿಷ್ಯವನ್ನು ಕಾಣುತ್ತಾರೆ. ಮಾರನೇ ದಿನ ಫುಟ್‌ಬಾಲ್‌ ತಂದು, ತಾನೇ ದುಡ್ಡು ಕೊಟ್ಟು ಆಟವಾಡಿಸುತ್ತಾರೆ. ಹೀಗೆ ಕೆಲವು ದಿನ ದುಡ್ಡು ಕೊಟ್ಟು ಆಡವಾಡಿಸಿ, ಫುಟ್‌ಬಾಲ್‌ನ ರುಚಿಯನ್ನು ಆ ಹುಡುಗರಿಗೆ ಹತ್ತಿಸುತ್ತಾರೆ. ಒಂದು ದಿನ, “ನನ್ನ ಬಳಿ ದುಡ್ಡಿಲ್ಲ” ಎಂದು ಕೋಚ್‌ ಮನೆ ಬಾಗಿಲ ಹಾಕಿದಾಗ, “ನೀವು ದುಡ್ಡು ಕೊಡದಿದ್ದರೆ ಪರವಾಗಿಲ್ಲ, ಫುಲ್‌ಬಾಲ್‌ ಕೊಡಿ” ಎಂದು ಸ್ಲಮ್‌ ಹುಡುಗರು ಕೇಳುವಲ್ಲಿಗೆ ಮೊದಲ ಪರಿವರ್ತನೆ ಆರಂಭವಾಗುತ್ತದೆ.

`ಝುಂಡ್‌’ ಸಿನಿಮಾದ ಒಂದು ದೃಶ್ಯ

ಸ್ಲಮ್‌ ಪಕ್ಕದಲ್ಲಿಯೇ ಕಾಲೇಜು. ಆ ಕಾಲೇಜಿಗೆ ದೊಡ್ಡದಾದ ಕಾಂಪೌಂಡ್‌. ಶುಚಿಯಾಗಿರುವ ಅಂಗಳ. ಸ್ಮಮ್‌ ಕಾಣದಂತೆ ಎತ್ತರವಾದ ಕಟ್ಟಡ. ಸ್ಲಮ್‌ ಹಾಗೂ ಕಾಲೇಜಿನ ಅಂಗಳವನ್ನು ಒಂದೇ ಫ್ರೇಮ್‌ನಲ್ಲಿ ಹಿಡಿಯುವ ಹಲವು ದೃಶ್ಯಗಳು ಚಿತ್ರದಲ್ಲಿ ಬಂದು ಹೋಗುತ್ತವೆ. ಒಂದು ಅಂಬಾನಿ ಭಾರತವಾದರೆ ಮತ್ತೊಂದು ಅಸ್ಪೃಶ್ಯ ಭಾರತ. ಸ್ಲಮ್‌ನಲ್ಲಿರುವ ಒಂದಿಷ್ಟು ಜಾಗದಲ್ಲೇ ಹುಡುಗರು ಫುಟ್‌ಬಾಲ್ ಆಡುತ್ತಾರೆ. ಯಾವುದೇ ಸರಿಯಾದ ತರಬೇತಿ ಇಲ್ಲದ ಸ್ಲಮ್‌ ಹುಡುಗರು, ಸಾಕರ್‌ ತರಬೇತಿ ಪಡೆದ ಹುಡುಗರನ್ನು ಸೋಲಿಸುವಲ್ಲಿಗೆ ಎರಡನೇ ಅಧ್ಯಾಯ ಆರಂಭವಾಗುತ್ತದೆ. ಆ ಸ್ಲಮ್‌ ಹುಡುಗರ ಒಡಲ ಸಂಕಟವೂ ಪ್ರೇಕ್ಷಕರ ಮುಂದೆ ತೆರೆದುಕೊಳ್ಳುತ್ತದೆ.

ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿಯಲ್ಲಿ ಇಡೀ ಸ್ಲಮ್‌ ಕುಣಿದು ಕುಪ್ಪಳಿಸುವ ದೃಶ್ಯವನ್ನು ನಾಗರಾಜ್‌ ಮಂಜುಳೆ ಚಿತ್ರಿಸಿದ್ದಾರೆ. ಬಾಲಿವುಡ್‌ ಸಿನಿಮಾ ಲೋಕದಲ್ಲಿ ಈವರೆಗೆ ಗಣಪತಿ ಜಯಂತಿ, ಶಿವಾಜಿ ಜಯಂತಿಯನ್ನು ನೋಡುತ್ತಿದ್ದೆವು. ಇದೇ ಮೊದಲ ಬಾರಿಗೆ ಅಂಬೇಡ್ಕರ್‌‌ ಜಯಂತಿಯನ್ನು ನಾಗರಾಜ್‌ ಮಂಜುಳೆ ಪ್ರದರ್ಶಿಸಿದ್ದಾರೆ ಎಂದು ಅನೇಕರು ಪ್ರಶಂಸಿಸಿದ್ದಾರೆ.

`ಝುಂಡ್‌’ ಸಿನಿಮಾದ ಒಂದು ದೃಶ್ಯ

ರಾಷ್ಟ್ರಮಟ್ಟದ ಸ್ಲಮ್‌ ಟೂರ್ನಿಮೆಂಟ್‌ ನಡೆಸುವುದು ಹಾಗೂ ಸ್ಲಮ್‌ ಹುಡುಗರು ಅಂತಾರಾಷ್ಟ್ರೀಯ ಫುಟ್‌ಬಾಲ್ ಟೂರ್ನಿಗೆ ಆಯ್ಕೆಯಾಗುವುದರ ಕುರಿತು ಸಿನಿಮಾದ ದ್ವಿತಿಯಾರ್ಧ ಸಾಗುತ್ತದೆ. ಸಣ್ಣಪುಟ್ಟ ಕ್ರೈಮ್‌ನಲ್ಲಿ ಸಿಲುಕಿರುವ ಈ ಹುಡುಗರು ಅನುಭವಿಸುವ ಸಂಕಟ ಅಷ್ಟಿಷ್ಟಲ್ಲ. ಅದ್ಭುತವಾಗಿ ಫುಟ್ಬಾಲ್‌ ಕಲಿತ್ತಿದ್ದಕ್ಕಿಂತ ಇಂಟರ್‌ ನ್ಯಾಷನಲ್‌ ಟೂರ್ನಿಗೆ ಹೋಗುವುದಕ್ಕಾಗಿ ಈ ಹುಡುಗರು ಎದುರಿಸುವ ಸವಾಲೇ ಇಡೀ ಚಿತ್ರದ ನಿಜದ ಸಂದೇಶ. ಸರಿಯಾದ ದಾಖಲೆಗಳಿಲ್ಲ. ಅಧಿಕಾರಿ ವರ್ಗದ ಸಹಕಾರವಿಲ್ಲ. ಪ್ರೋತ್ಸಾಹ ದೊರಕುವುದಿಲ್ಲ. ಓಡುವ ಕಾಲಿಗೆ ಗುಂಡು ಕಟ್ಟಿದ ವ್ಯವಸ್ಥೆ ನಮ್ಮ ಕಣ್ಣೆದುರು ನಿಲ್ಲುತ್ತದೆ. ಈ ಸಮಸ್ಯೆಗಳ ಬೇರುಗಳು ಯಾವುವು? ಅದೇ ಜಾತಿ ವ್ಯವಸ್ಥೆ. ಭಾರತದ ಪ್ರಗತಿಯ ಕಾಲಿಗೆ ಕಟ್ಟಿದ ಗುಂಡು- ಈ ಜಾತಿ, ಅಸ್ಪೃಶ್ಯ ಸಮಾಜ. ನ್ಯಾಯಾಧೀಶರ ಮುಂದೆ ನಿಂತು ಕೋಚ್‌ ಹೇಳುತ್ತಾರೆ- “ತರಬೇತಿ ಶಾಲೆಯಷ್ಟೇ ಭಾರತವಲ್ಲ. ಅದರಾಚೆಯ ಭಾರತವಿದು.”

ಅಜಯ್‌ ಅತುಲ್‌ ಅವರ ಸಂಗೀತ ಸಿನಿಮಾ ಕಥೆಯ ತೂಕವನ್ನು ಹೆಚ್ಚಿಸಿದೆ. ಹೊಸ ಹುಡುಗರಿಂದ ಅಭಿನಯವನ್ನು ಹೊರತೆಗೆಯುವಲ್ಲಿ ನಾಗರಾಜ್‌ ಯಶಸ್ವಿಯಾಗಿದ್ದಾರೆ. ಸುಮಾರು ಮೂರು ಗಂಟೆ ಇರುವ ‘ಝುಂಡ್‌’ ಮೊದಲಾರ್ಧ ವೇಗವಾಗಿದ್ದು, ದ್ವಿತೀಯಾರ್ಧ ಸ್ವಲ್ಪ ನಿಧಾನವೆನಿಸಿದರೂ ವ್ಯವಸ್ಥೆಯನ್ನು ವಿಮರ್ಶೆಗೊಡ್ಡುತ್ತದೆ.


ಇದನ್ನೂ ಓದಿರಿ: ನಟಿ ಸಂಜನಾರಿಗೆ ಅಶ್ಲೀಲ ಮೆಸೇಜ್‌‌: ಆ್ಯಡಂ ಬಿದ್ದಪ್ಪ ಅರೆಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...