Homeಮುಖಪುಟಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

- Advertisement -
- Advertisement -

ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹವೊಂದು ಪತ್ತೆಯಾಗಿದೆ. ಮೃತದೇಹ ಯಾರದ್ದು ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕೆಲವು ಮೂಲಗಳ ಪ್ರಕಾರ ಮೃತ ವ್ಯಕ್ತಿ ಸುಧಾಂಗ್ಶು ದಾಸ್ ಎಂದು ಹೇಳಲಾಗುತ್ತಿದ್ದರೂ, ಪೊಲೀಸರು ಖಚಿತಪಡಿಸಿಲ್ಲ. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕ್ಯಾಚಾರ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ”ಯಾರಾದರೂ ಸತ್ತ ವ್ಯಕ್ತಿಯ ಪರಿಚಯವಿದ್ದರೆ, ಅವರು ಮುಂದೆ ಬಂದು ತಿಳಿಸಬೇಕು ಎಂದು ಜನರಿಗೆ ಮನವಿ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.

”ಯಾವ ಸಂದರ್ಭದಲ್ಲಿ ಈ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂಬುದೂ ತಿಳಿದಿಲ್ಲ. ಆದರೆ ಶವಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ವ್ಯಕ್ತಿ ಸ್ವಾಭಾವಿಕವಾಗಿ ಸಾವನ್ನಪ್ಪಿದ್ದಾನೆಯೇ ಅಥವಾ ಅವನನ್ನು ಕೊಲೆ ಮಾಡಲಾಗಿದೆಯಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಕ್ಯಾಚಾರ್‌ನ ಪೊಲೀಸ್ ಅಧೀಕ್ಷಕ ನುಮಲ್ ಮಹತ್ತಾ ಮಾತನಾಡಿ, ”ತನಿಖೆ ನಡೆಯುತ್ತಿದೆ ಮತ್ತು ಸಾಧ್ಯವಿರುವ ಎಲ್ಲ ದೃಷ್ಟಿಕೋನಗಳಲ್ಲೂ ವಿಚಾರಣೆ ನಡೆಸಲಾಗುತ್ತದೆ” ಎಂದು ಹೇಳಿದ್ದಾರೆ.

ಮೃತ ವ್ಯಕ್ತಿ ಸುಧಾಂಗ್ಶು ದಾಸ್ ಕಳೆದ ಒಂದು ವರ್ಷದಿಂದ ನಂಟು ರಾಯ್ ಎನ್ನುವವರೊಂದಿಗೆ ಕೆಲಸ ಮಾಡಿದ್ದಾರೆ ಎಂದು ವರದಿಯಾಗಿದೆ. ನಂಟು ರಾಯ್ ಕ್ಯಾಂಟೀನ್ ಉದ್ಯೋಗಿಯಾಗಿದ್ದು, ಮೃತ ವ್ಯಕ್ತಿಯು ಮಲಗಿದ್ದ ಕೊಠಡಿಯು ಮುಚ್ಚಿದ್ದರಿಂದ ತೆರೆಯಲು ಸಾಧ್ಯವಾಗದಿದ್ದಾರೆ ಬಿಜೆಪಿ ಜಿಲ್ಲಾಧ್ಯಕ್ಷ ಬಿಮಲೇಂದು ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ.

ದಾಸ್ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ ಅಥವಾ ಬುಧವಾರ ರಾತ್ರಿ ಕಚೇರಿಯಲ್ಲಿ ಮಲಗಿದ್ದಾನೆ ಎಂಬುದು ತನಗೆ ತಿಳಿದಿರಲಿಲ್ಲ ಎಂದು ಬಿಮಲೇಂದು ರಾಯ್ ಹೇಳಿದ್ದಾರೆ. ದಾಸ್ ಬಿಜೆಪಿ ಕಚೇರಿಯ ಉದ್ಯೋಗಿ ಅಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

”ಪ್ರತಿದಿನದಂತೆ ಬೆಳಿಗ್ಗೆ ಕೊಠಡಿಯನ್ನು ತೆರೆಯಲು ಸಾಧ್ಯವಾಗಲಿಲ್ಲ ಎಂದು ನಂಟು ರಾಯ್ ನನಗೆ ಫೋನ್ ಮೂಲಕ ತಿಳಿಸಿದರು. ಆನಂತರ ನಾನು ಪೊಲೀಸರಿಗೆ ತಿಳಿಸಿದೆ, ಬಾಗಿಲು ಒಡೆದು ತೆರೆದ ನಂತರ ಶವ ಪತ್ತೆಯಾಗಿದೆ” ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಿಮಲೇಂದು ರಾಯ್ ತಿಳಿಸಿದ್ದಾರೆ.

ಕ್ಯಾಚಾರ್‌ ಬಿಜೆಪಿ ಕಚೇರಿಯಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಹಾಗೂ ಕಚೇರಿಯ ಮೂಲೆ ಮೂಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಮಧ್ಯೆ, ಮೃತ ವ್ಯಕ್ತಿ ನಂಟು ರಾಯ್‌ಗೆ ಕನಿಷ್ಠ ಒಂದು ವರ್ಷದಿಂದ ಪರಿಚಿತನಾಗಿದ್ದರೂ, ಆ ವ್ಯಕ್ತಿಯ ಸರಿಯಾದ ವಿಳಾಸವನ್ನು ನೀಡಿರಲಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...