Homeಮುಖಪುಟಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

- Advertisement -
- Advertisement -

ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹವೊಂದು ಪತ್ತೆಯಾಗಿದೆ. ಮೃತದೇಹ ಯಾರದ್ದು ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸ್‌ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಕೆಲವು ಮೂಲಗಳ ಪ್ರಕಾರ ಮೃತ ವ್ಯಕ್ತಿ ಸುಧಾಂಗ್ಶು ದಾಸ್ ಎಂದು ಹೇಳಲಾಗುತ್ತಿದ್ದರೂ, ಪೊಲೀಸರು ಖಚಿತಪಡಿಸಿಲ್ಲ. ಈ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕ್ಯಾಚಾರ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ”ಯಾರಾದರೂ ಸತ್ತ ವ್ಯಕ್ತಿಯ ಪರಿಚಯವಿದ್ದರೆ, ಅವರು ಮುಂದೆ ಬಂದು ತಿಳಿಸಬೇಕು ಎಂದು ಜನರಿಗೆ ಮನವಿ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.

”ಯಾವ ಸಂದರ್ಭದಲ್ಲಿ ಈ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂಬುದೂ ತಿಳಿದಿಲ್ಲ. ಆದರೆ ಶವಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ವ್ಯಕ್ತಿ ಸ್ವಾಭಾವಿಕವಾಗಿ ಸಾವನ್ನಪ್ಪಿದ್ದಾನೆಯೇ ಅಥವಾ ಅವನನ್ನು ಕೊಲೆ ಮಾಡಲಾಗಿದೆಯಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಕ್ಯಾಚಾರ್‌ನ ಪೊಲೀಸ್ ಅಧೀಕ್ಷಕ ನುಮಲ್ ಮಹತ್ತಾ ಮಾತನಾಡಿ, ”ತನಿಖೆ ನಡೆಯುತ್ತಿದೆ ಮತ್ತು ಸಾಧ್ಯವಿರುವ ಎಲ್ಲ ದೃಷ್ಟಿಕೋನಗಳಲ್ಲೂ ವಿಚಾರಣೆ ನಡೆಸಲಾಗುತ್ತದೆ” ಎಂದು ಹೇಳಿದ್ದಾರೆ.

ಮೃತ ವ್ಯಕ್ತಿ ಸುಧಾಂಗ್ಶು ದಾಸ್ ಕಳೆದ ಒಂದು ವರ್ಷದಿಂದ ನಂಟು ರಾಯ್ ಎನ್ನುವವರೊಂದಿಗೆ ಕೆಲಸ ಮಾಡಿದ್ದಾರೆ ಎಂದು ವರದಿಯಾಗಿದೆ. ನಂಟು ರಾಯ್ ಕ್ಯಾಂಟೀನ್ ಉದ್ಯೋಗಿಯಾಗಿದ್ದು, ಮೃತ ವ್ಯಕ್ತಿಯು ಮಲಗಿದ್ದ ಕೊಠಡಿಯು ಮುಚ್ಚಿದ್ದರಿಂದ ತೆರೆಯಲು ಸಾಧ್ಯವಾಗದಿದ್ದಾರೆ ಬಿಜೆಪಿ ಜಿಲ್ಲಾಧ್ಯಕ್ಷ ಬಿಮಲೇಂದು ರಾಯ್ ಅವರಿಗೆ ಮಾಹಿತಿ ನೀಡಿದ್ದಾರೆ.

ದಾಸ್ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ ಅಥವಾ ಬುಧವಾರ ರಾತ್ರಿ ಕಚೇರಿಯಲ್ಲಿ ಮಲಗಿದ್ದಾನೆ ಎಂಬುದು ತನಗೆ ತಿಳಿದಿರಲಿಲ್ಲ ಎಂದು ಬಿಮಲೇಂದು ರಾಯ್ ಹೇಳಿದ್ದಾರೆ. ದಾಸ್ ಬಿಜೆಪಿ ಕಚೇರಿಯ ಉದ್ಯೋಗಿ ಅಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

”ಪ್ರತಿದಿನದಂತೆ ಬೆಳಿಗ್ಗೆ ಕೊಠಡಿಯನ್ನು ತೆರೆಯಲು ಸಾಧ್ಯವಾಗಲಿಲ್ಲ ಎಂದು ನಂಟು ರಾಯ್ ನನಗೆ ಫೋನ್ ಮೂಲಕ ತಿಳಿಸಿದರು. ಆನಂತರ ನಾನು ಪೊಲೀಸರಿಗೆ ತಿಳಿಸಿದೆ, ಬಾಗಿಲು ಒಡೆದು ತೆರೆದ ನಂತರ ಶವ ಪತ್ತೆಯಾಗಿದೆ” ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಬಿಮಲೇಂದು ರಾಯ್ ತಿಳಿಸಿದ್ದಾರೆ.

ಕ್ಯಾಚಾರ್‌ ಬಿಜೆಪಿ ಕಚೇರಿಯಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಹಾಗೂ ಕಚೇರಿಯ ಮೂಲೆ ಮೂಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಈ ಮಧ್ಯೆ, ಮೃತ ವ್ಯಕ್ತಿ ನಂಟು ರಾಯ್‌ಗೆ ಕನಿಷ್ಠ ಒಂದು ವರ್ಷದಿಂದ ಪರಿಚಿತನಾಗಿದ್ದರೂ, ಆ ವ್ಯಕ್ತಿಯ ಸರಿಯಾದ ವಿಳಾಸವನ್ನು ನೀಡಿರಲಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ: ಬಾಲಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

0
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಏಳು ವರ್ಷದ ಬಾಲಕ ಸಾವನ್ನಪ್ಪಿದ್ದು, ಇತರ ಇಬ್ಬರು ಅಪ್ರಾಪ್ತ ಬಾಲಕರಿಗೂ ತೀವ್ರ ಗಾಯಗಳಾಗಿದೆ. ಮೃತ ಬಾಲಕನನ್ನು ರಾಜ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ...