Homeಮುಖಪುಟಪಾಲ್ಘರ್ ನಕಲಿ ಎನ್‌ಕೌಂಟರ್‌ ಪ್ರಕರಣ: ಇಬ್ಬರು ಪೊಲೀಸರು ಬಂಧನ

ಪಾಲ್ಘರ್ ನಕಲಿ ಎನ್‌ಕೌಂಟರ್‌ ಪ್ರಕರಣ: ಇಬ್ಬರು ಪೊಲೀಸರು ಬಂಧನ

- Advertisement -
- Advertisement -

ಪಾಲ್ಘರ್ ಜಿಲ್ಲೆಯ ನಲಸೋಪಾರಾ ಪ್ರದೇಶದಲ್ಲಿ 2018ರಲ್ಲಿ ಕಳ್ಳತನ ಪ್ರಕರಣದ ಆರೋಪಿಯ ನಕಲಿ ಎನ್‌ಕೌಂಟರ್‌ಗೆ ಸಂಬಂಧಿಸಿ ಇಬ್ಬರು ಪೊಲೀಸರನ್ನು ವಿಶೇಷ ತನಿಖಾ ತಂಡವು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮೀರಾ ಭಯಾಂಡರ್ ವಸಾಯಿ ಪೊಲೀಸ್ ಠಾಣೆಯ ಪೊಲೀಸ್‌ ಮಂಗೇಶ್ ಚವಾಣ್ ಮತ್ತು ಮನೋಜ್ ಸಕ್ಪಾಲ್ ಬಂಧಿತರು ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ ಜೋಗಿಂದರ್ ರಾಣಾ  ನಕಲಿ ಎನ್‌ಕೌಂಟರ್ ಬಗ್ಗೆ ತನಿಖೆ ನಡೆಸಲು ಬಾಂಬೆ ಹೈಕೋರ್ಟ್ ಎಸ್‌ಐಟಿಯನ್ನು ಸ್ಥಾಪಿಸಲು ಆದೇಶಿಸಿತ್ತು. ರಾಣಾ ಅವರ ಸಹೋದರ ಸುರೇಂದ್ರ ರಾಣಾ ಅವರು ನಕಲಿ ಎನ್‌ಕೌಂಟರ್‌ನ್ನು ನಲಸೋಪಾರಾದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ಸ್ಥಳೀಯ ಅಪರಾಧ ವಿಭಾಗದ ಪೊಲೀಸರಾದ ಮನೋಜ್ ಸಕ್ಪಾಲ್ ಮತ್ತು ಹೆಡ್ ಪೊಲೀಸ್ ಕಾನ್‌ಸ್ಟೆಬಲ್ ಮಂಗೇಶ್ ಚವಾಣ್ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಈ ಕುರಿತು ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಪೊಲೀಸರು 2023ರಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ ಶಿಕ್ಷೆ) ಮತ್ತು 201 (ಸಾಕ್ಷ್ಯ ಕಣ್ಮರೆಯಾಗಲು ಕಾರಣ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ಆರೋಪಿ ಪೊಲೀಸರನ್ನು ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಮಾರ್ಚ್ 11 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಮಂಜುಷಾ ದೇಶಪಾಂಡೆ ಅವರ ಪೀಠವು ತನಿಖೆಯ ಪ್ರಗತಿಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿತ್ತು. 2018ರಲ್ಲಿ ಥಾಣೆ ಪೊಲೀಸ್ ಕಮಿಷನರ್ ಜೈಜೀತ್ ಸಿಂಗ್ ನೇತೃತ್ವದ ಎಸ್‌ಐಟಿ ರಚನೆಯಾದ ನಂತರ ಯಾವುದೇ ಮಹತ್ವದ ಬೆಳವಣಿಗೆ ಪ್ರಕರಣದಲ್ಲಿ ಆಗಿಲ್ಲ ಎಂದು ಗಮನಿಸಿತ್ತು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಾದ ನಂತರ ಅತ್ಯಗತ್ಯವಾದ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದ ಪೊಲೀಸರನ್ನು ನ್ಯಾಯಾಲಯ ಟೀಕಿಸಿದೆ. 2023ರ ನವೆಂಬರ್‌ನಲ್ಲಿ 12 ವಾರಗಳಲ್ಲಿ ತನಿಖೆ ಪೂರ್ಣಗೊಳ್ಳಲಿದೆ ಎಂದು ಉಲ್ಲಾಸ್‌ನಗರದ ಉಪ ಪೊಲೀಸ್ ಆಯುಕ್ತರು ನೀಡಿದ ಭರವಸೆಗಳ ಸಿಂಧುತ್ವವನ್ನು ಸಹ ಕೂಡ ಪ್ರಶ್ನಿಸಿತ್ತು. ತನಿಖೆಯ ಪ್ರತಿಯೊಂದು ಸಣ್ಣ ಅಂಶವನ್ನು ಮೇಲ್ವಿಚಾರಣೆ ಮಾಡಲು ಸಾಧ್ಯವಿಲ್ಲ ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಜಿಲ್ಲಾಧಿಕಾರಿಯವರೊಂದಿಗೆ ವಿಚಾರಣೆ ನಡೆಸಿ ಮುಂದಿನ ವಿಚಾರಣೆಯಲ್ಲಿ ಪ್ರಕರಣದ ಬೆಳವಣಿಗೆಗಳ ಬಗ್ಗೆ ವಿವರವಾದ ಹೇಳಿಕೆ ನೀಡುವಂತೆ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಪಿಪಿ ಶಿಂಧೆ ಅವರನ್ನು ಕೋರಿದ್ದು, ಸೋಮವಾರಕ್ಕೆ ಪ್ರಕರಣವನ್ನು ಮುಂದೂಡಲಾಗಿತ್ತು.

ಜೋಗಿಂದರ್ ರಾಣಾ ಅವರ ಸಹೋದರ ಸುರೇಂದ್ರ ರಾಣಾ ಅವರು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ತನಿಖೆ ಅಥವಾ ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯನ್ನು ಕೋರಿ 2018ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು, ನಂತರ ಪ್ರಕರಣವು ಭಾರೀ ಸುದ್ದು ಮಾಡಿದೆ.

ಎನ್‌ಕೌಂಟರ್‌ಗೆ ಸಂಬಂಧಿಸಿದ ವೀಡಿಯೊಗಳು ಮತ್ತು ಫೋಟೋಗಳು ಸೇರಿದಂತೆ ಸಾಕಷ್ಟು ಪುರಾವೆಗಳ ಹೊರತಾಗಿಯೂ ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದರು ಮತ್ತು ಬದಲಿಗೆ ಆಕಸ್ಮಿಕ ಸಾವು ಎಂದು ವರದಿಯನ್ನು ದಾಖಲಿಸಿದ್ದಾರೆ ಎಂದು ರಾಣಾ ಅವರು ದೂರಿನಲ್ಲಿ ಆರೋಪಿಸಿದ್ದರು.

ಇದನ್ನು ಓದಿ: ಉತ್ತರ ಭಾರತದ ರಾಜ್ಯಗಳೇ ಟಾರ್ಗೆಟ್‌: 30 ದಿನಗಳಲ್ಲಿ ಗೂಗಲ್‌ ಜಾಹೀರಾತಿಗೆ 30 ಕೋಟಿ ವ್ಯಯಿಸಿದ ಬಿಜೆಪಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...