Homeಮುಖಪುಟರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ...

ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತೊಮ್ಮೆ ತಮ್ಮ ನಾಲಿಗೆ ಹರಿಯ ಬಿಟ್ಟಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯನವರನ್ನು ಟೀಕಿಸುವ ಭರದಲ್ಲಿ ಕೀಳು ಮಟ್ಟದ ಅಸಹ್ಯಕರ ಹೇಳಿಕೆ ನೀಡಿದ್ದಾರೆ. ಉದ್ದೇಶ ಪೂರ್ವಕವಾಗಿ ವೈಯಕ್ತಿಯ ತೇಜೋವಧೆ ಮಾಡುವ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಟೀಲ್, “ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ 19 ಲಸಿಕೆ ತೆಗೆದುಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಆದರೆ ರಾತ್ರಿ ವೇಳೆ ಕದ್ದು ರಾಹುಲ್ ಗಾಂಧಿ, ಸಿದ್ದರಾಮಯ್ಯ ಲಸಿಕೆ ತೆಗೆದುಕೊಂಡರು. ಅದಕ್ಕೆ ಮೊನ್ನೆ ನಮ್ಮ ಎಂಎಲ್‌ಸಿ ಮಂಜುನಾಥ್ ಹೇಳಿದರು, ಅದಕ್ಕೆ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ. ಏಕೆಂದರೆ ಹೇಗೂ ಅವರಿಗೆ ಮಕ್ಕಳಾಗುವುದಿಲ್ಲ ಅಂತ” ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಮೌಖಿಕ ಅತಿಸಾರದಿಂದ ಬಳಲುತ್ತಿದ್ದಾರೆ – ಕಾಂಗ್ರೆಸ್

“ಕರ್ನಾಟಕದ ಬಿಜೆಪಿಯ ಸರ್ಕಸ್‌ನಲ್ಲಿ ಜೋಕರ್ ಒಬ್ಬ ಶಾಶ್ವತ ಮೌಖಿಕ ಅತಿಸಾರದಿಂದ ಬಳಲುತ್ತಿದ್ದಾರೆ. ದೈಹಿಕ ಮತ್ತು ಮಾನಸಿಕ ಎರಡೂ ವಿಷಯದಲ್ಲಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ಸುದ್ದಿಯಾಗಲು ಅವಿವೇಕದ ಹೇಳಿಕೆಗಳನ್ನು ನೀಡುತ್ತಾರೆ. ಅವರೆ ನಳೀನ್ ಕುಮಾರ್ ಕಟೀಲ್ ಆಗಿದ್ದು ದಯವಿಟ್ಟು ಆತನನ್ನು ನಿರ್ಲಕ್ಷಿಸಿ” ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣ್‌ದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.

ಮುಂದುವರಿದು “ಇಂತಹ ಮೂರ್ಖತನಗಳು ಯಾವಾಗಲೂ ಹೇಡಿಗಳು ಮತ್ತು ಮೂರ್ಖರ ಆಶ್ರಯವಾಗಿದೆ – ಇದು ಬಿಜೆಪಿಯ ಹುಟ್ಟುಗುಣವಾಗಿದೆ. ಅವರು ವಿಜ್ಞಾನ ಮತ್ತು ವಿಜ್ಞಾನಿಗಳನ್ನು ಅವಮಾನಿಸುತ್ತಾರೆ. ಅವರು ವೈಜ್ಞಾನಿಕ ಮನೋಭಾವವನ್ನು ವಿರೋಧಿಸುತ್ತಾರೆ. ಅವರು ಸಾಂಪ್ರದಾಯಿಕತೆಯನ್ನು ಉತ್ತೇಜಿಸುತ್ತಾರೆ. ಅವರನ್ನು ಇತಿಹಾಸದ ಕಸದ ಬುಟ್ಟಿಗೆ ಎಸೆಯಬೇಕು” ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿದ್ದು, “ನಮ್ಮ ಅಧ್ಯಕ್ಷರು ಯಾವ ಸಂದರ್ಭದಲ್ಲಿ ಆ ಟೀಕೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ. ಆದರೆ ನಾನು ಆ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಮತ್ತು ಅದರಿಂದ ದೂರವಿರಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಖ್ಯಾತ ಕಾರ್ಟೂನಿಸ್ಟ್ ಸತೀಶ್ ಆಚಾರ್ಯರವರು “ಎಷ್ಟೊಂದು ಅಸಹ್ಯಕರ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿಯವರಾಗಲಿ, ಸಿದ್ದರಾಮಯ್ಯನವರಾಗಲಿ ಕೋವಿಡ್ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂಬ ಹೇಳಿಕೆಯನ್ನು ಎಂದೂ ನೀಡಿಲ್ಲ. ರಾಹುಲ್ ಗಾಂಧಿ ಮದುವೆಯಾಗದಿರುವುದು ಅವರ ವೈಯಕ್ತಿಕ ವಿಷಯ. ಆದರೂ ಅನಾವಶ್ಯಕವಾಗಿ ಅವರ ಹೆಸರನ್ನು ಎಳೆದುತಂದು ನಳೀನ್ ಕುಮಾರ್ ಕಟೀಲ್ ಅಸಹ್ಯವಾಗಿ ಅಪಹಾಸ್ಯ ಮಾಡುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...