Homeಮುಖಪುಟರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ...

ರಾಹುಲ್ ಗಾಂಧಿ, ಸಿದ್ದರಾಮಯ್ಯ ವಿರುದ್ಧ ಕೀಳು ಮಟ್ಟದ ಹೇಳಿಕೆ ನೀಡಿದ ನಳೀನ್ ಕುಮಾರ್ ಕಟೀಲ್: ತೀವ್ರ ಟೀಕೆ

- Advertisement -
- Advertisement -

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತೊಮ್ಮೆ ತಮ್ಮ ನಾಲಿಗೆ ಹರಿಯ ಬಿಟ್ಟಿದ್ದಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯನವರನ್ನು ಟೀಕಿಸುವ ಭರದಲ್ಲಿ ಕೀಳು ಮಟ್ಟದ ಅಸಹ್ಯಕರ ಹೇಳಿಕೆ ನೀಡಿದ್ದಾರೆ. ಉದ್ದೇಶ ಪೂರ್ವಕವಾಗಿ ವೈಯಕ್ತಿಯ ತೇಜೋವಧೆ ಮಾಡುವ ವಿವಾದಾತ್ಮಕ ಹೇಳಿಕೆ ನೀಡಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಟೀಲ್, “ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ 19 ಲಸಿಕೆ ತೆಗೆದುಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಆದರೆ ರಾತ್ರಿ ವೇಳೆ ಕದ್ದು ರಾಹುಲ್ ಗಾಂಧಿ, ಸಿದ್ದರಾಮಯ್ಯ ಲಸಿಕೆ ತೆಗೆದುಕೊಂಡರು. ಅದಕ್ಕೆ ಮೊನ್ನೆ ನಮ್ಮ ಎಂಎಲ್‌ಸಿ ಮಂಜುನಾಥ್ ಹೇಳಿದರು, ಅದಕ್ಕೆ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ. ಏಕೆಂದರೆ ಹೇಗೂ ಅವರಿಗೆ ಮಕ್ಕಳಾಗುವುದಿಲ್ಲ ಅಂತ” ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ಮೌಖಿಕ ಅತಿಸಾರದಿಂದ ಬಳಲುತ್ತಿದ್ದಾರೆ – ಕಾಂಗ್ರೆಸ್

“ಕರ್ನಾಟಕದ ಬಿಜೆಪಿಯ ಸರ್ಕಸ್‌ನಲ್ಲಿ ಜೋಕರ್ ಒಬ್ಬ ಶಾಶ್ವತ ಮೌಖಿಕ ಅತಿಸಾರದಿಂದ ಬಳಲುತ್ತಿದ್ದಾರೆ. ದೈಹಿಕ ಮತ್ತು ಮಾನಸಿಕ ಎರಡೂ ವಿಷಯದಲ್ಲಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ಸುದ್ದಿಯಾಗಲು ಅವಿವೇಕದ ಹೇಳಿಕೆಗಳನ್ನು ನೀಡುತ್ತಾರೆ. ಅವರೆ ನಳೀನ್ ಕುಮಾರ್ ಕಟೀಲ್ ಆಗಿದ್ದು ದಯವಿಟ್ಟು ಆತನನ್ನು ನಿರ್ಲಕ್ಷಿಸಿ” ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣ್‌ದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.

ಮುಂದುವರಿದು “ಇಂತಹ ಮೂರ್ಖತನಗಳು ಯಾವಾಗಲೂ ಹೇಡಿಗಳು ಮತ್ತು ಮೂರ್ಖರ ಆಶ್ರಯವಾಗಿದೆ – ಇದು ಬಿಜೆಪಿಯ ಹುಟ್ಟುಗುಣವಾಗಿದೆ. ಅವರು ವಿಜ್ಞಾನ ಮತ್ತು ವಿಜ್ಞಾನಿಗಳನ್ನು ಅವಮಾನಿಸುತ್ತಾರೆ. ಅವರು ವೈಜ್ಞಾನಿಕ ಮನೋಭಾವವನ್ನು ವಿರೋಧಿಸುತ್ತಾರೆ. ಅವರು ಸಾಂಪ್ರದಾಯಿಕತೆಯನ್ನು ಉತ್ತೇಜಿಸುತ್ತಾರೆ. ಅವರನ್ನು ಇತಿಹಾಸದ ಕಸದ ಬುಟ್ಟಿಗೆ ಎಸೆಯಬೇಕು” ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಪ್ರತಿಕ್ರಿಯಿಸಿದ್ದು, “ನಮ್ಮ ಅಧ್ಯಕ್ಷರು ಯಾವ ಸಂದರ್ಭದಲ್ಲಿ ಆ ಟೀಕೆ ಮಾಡಿದ್ದಾರೆಂದು ನನಗೆ ಗೊತ್ತಿಲ್ಲ. ಆದರೆ ನಾನು ಆ ಹೇಳಿಕೆಯನ್ನು ಬೆಂಬಲಿಸುವುದಿಲ್ಲ ಮತ್ತು ಅದರಿಂದ ದೂರವಿರಲು ಬಯಸುತ್ತೇನೆ” ಎಂದು ತಿಳಿಸಿದ್ದಾರೆ.

ಖ್ಯಾತ ಕಾರ್ಟೂನಿಸ್ಟ್ ಸತೀಶ್ ಆಚಾರ್ಯರವರು “ಎಷ್ಟೊಂದು ಅಸಹ್ಯಕರ” ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿಯವರಾಗಲಿ, ಸಿದ್ದರಾಮಯ್ಯನವರಾಗಲಿ ಕೋವಿಡ್ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂಬ ಹೇಳಿಕೆಯನ್ನು ಎಂದೂ ನೀಡಿಲ್ಲ. ರಾಹುಲ್ ಗಾಂಧಿ ಮದುವೆಯಾಗದಿರುವುದು ಅವರ ವೈಯಕ್ತಿಕ ವಿಷಯ. ಆದರೂ ಅನಾವಶ್ಯಕವಾಗಿ ಅವರ ಹೆಸರನ್ನು ಎಳೆದುತಂದು ನಳೀನ್ ಕುಮಾರ್ ಕಟೀಲ್ ಅಸಹ್ಯವಾಗಿ ಅಪಹಾಸ್ಯ ಮಾಡುವುದು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಬಿಜೆಪಿ ಶಾಸಕನ ಪುತ್ರನ ಲಂಚದ ಬೇಡಿಕೆಯನ್ನು ಸೆರೆ ಹಿಡಿದ ಸ್ಮಾರ್ಟ್‌ ವಾಚ್: ಪ್ರಶಾಂತ್ ಮಾಡಾಳ್ ಸಿಕ್ಕಿಬಿದ್ದಿದ್ದು ಹೀಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...