Homeಮುಖಪುಟರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!

ಜೈಲು ಕಿರುಕುಳ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿರುವಾಗ ತನ್ನನ್ನು ಕೊಲ್ಲುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ ಎಂದು ಇನ್ನೊಬ್ಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಹೇಳಿದ್ದಾಳೆ.

- Advertisement -
- Advertisement -

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್, ಮತ್ತೊಬ್ಬ ಅಪರಾಧಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಚಾರಣೆ ನಡೆಸುವಾಗ, ಕಳೆದ ರಾತ್ರಿ ಜೈಲಿನಲ್ಲಿ ತಾನೇ ಅತ್ಮಹತ್ಯೆ ಬೆದರಿಕೆ ಹಾಕಿದ್ದಾಳೆ ಎಂದು ತಮಿಳುನಾಡಿನ ಉನ್ನತ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

“ಇದು ಬ್ಲ್ಯಾಕ್ ಮೇಲ್ ಅಥವಾ ಬೆದರಿಕೆಯಂತೆಯೇ ಇತ್ತು. ಅವರು ಆತ್ಮಹತ್ಯೆಗೆ ಪ್ರಯತ್ನಿಸಲಿಲ್ಲ” ಎಂದು ತಮಿಳುನಾಡು ಕಾರಾಗೃಹ ವಿಭಾಗದ ಮುಖ್ಯಸ್ಥ ಸುನಿಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ವೆಲ್ಲೂರು ಮಹಿಳಾ ಜೈಲಿನಲ್ಲಿ ಈ ಘಟನೆ ನಡೆದಿದ್ದು, 55 ವರ್ಷದ ನಳಿನಿ ಸುಮಾರು ಮೂರು ದಶಕಗಳಿಂದ ಜೈಲಿನಲ್ಲಿದ್ದಾರೆ.

ಜೈಲು ಕಿರುಕುಳ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿರುವಾಗ ತನ್ನನ್ನು ಕೊಲ್ಲುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ ಎಂದು ಇನ್ನೊಬ್ಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಹೇಳಿದ್ದಾಳೆ.

ಮಹಿಳೆಯನ್ನು ಸ್ಥಳಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ” ಎಂದು ಸಿಂಗ್ ಹೇಳಿದ್ದಾರೆ .

ಜೈಲಿನ ಅಧಿಕಾರಿಗಳು ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ ನಳಿನಿ ಪರ ವಕೀಲರು, ನಳಿನಿಯನ್ನು ಮತ್ತೊಂದು ಜೈಲಿಗೆ ವರ್ಗಾಯಿಸಲು ವ್ಯವಸ್ಥೆ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು.

“ರಾತ್ರಿ 8:30 ಕ್ಕೆ ಜೈಲರ್ ನಳಿನಿಯ ವಿಭಾಗಕ್ಕೆ ಹೋಗಿ ದೂರಿನ ಬಗ್ಗೆ ವಿಚಾರಿಸಿದರು. ವಿಚಾರಣೆಯ ವೇಳೆ ಜೈಲರ್ ಮತ್ತು ನಳಿನಿ ನಡುವೆ ಜಗಳ ನಡೆಯಿತು. ಅವಳು ಅಸಮಾಧಾನಗೊಂಡು ಆತ್ಮಹತ್ಯೆಗೆ ಯತ್ನಿಸಿದಳು” ಎಂದು ಪುಗಲೆಂತಿ ಎಎನ್‌ಐಗೆ ತಿಳಿಸಿದ್ದಾರೆ.

“ಇದು ಅಧಿಕಾರಿಗಳ ದೃಷ್ಟಿಕೋನ. ನಾವು ಇದನ್ನು ನಂಬುವುದಿಲ್ಲ. ಅವರು ಕಳೆದ 30 ವರ್ಷಗಳ ಜೈಲುವಾಸ ಅನುಭವಿಸಿದ್ದಾರೆ. ಇಂತಹ ಕ್ರಮಗಳನ್ನು ತೆಗೆದುಕೊಳ್ಳಲು ಎಂದಿಗೂ ಪ್ರಯತ್ನಿಸಲಿಲ್ಲ. ಜೈಲಿನ ಅಧಿಕಾರಿಗಳು ಅವಳನ್ನು ಹಿಂಸಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ವಕೀಲರು ವಿಚಾರಣೆಗೆ ಒತ್ತಾಯಿಸಿದ್ದಾರೆ.

ನಳಿನಿ ಅವರ ಪ್ರಾಣಕ್ಕೆ ಅಪಾಯವಿದೆ ಎಂದಿರುವ ವಕೀಲರು, ಜೈಲಿನ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಇ ಪಳನಿಸಾಮಿ ಅವರ ಬಳಿ ಚೆನ್ನೈನ ಜೈಲಿಗೆ ವರ್ಗಾಯಿಸುವಂತೆ ಕೋರಿದ್ದಾರೆ.

1991 ರಲ್ಲಿ ರಾಜೀವ್ ಗಾಂಧಿ ಅವರನ್ನು ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಲಂ (ಎಲ್‌ಟಿಟಿಇ) ಯ ಆತ್ಮಾಹುತಿ ಬಾಂಬರ್ ಹತ್ಯೆಗೈದ ಪ್ರಕರಣದಲ್ಲಿ ನಳಿನಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು.

ಆದರೆ ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ ಅವರ ಮನವಿಯ ಮೇಲೆ ಶಿಕ್ಷೆಯನ್ನು ಜೀವಾವಧಿ ಅವಧಿಗೆ ಇಳಿಸಲಾಯಿತು. ವರ್ಷಗಳ ನಂತರ, ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳ ಶಿಕ್ಷೆಯನ್ನು ರದ್ದುಗೊಳಿಸಿತು.

ಕಳೆದ ವರ್ಷ ನಳಿನಿಗೆ ಅವರ ಮಗಳು ಹರಿತ್ರಾಳ ಮದುವೆಗೆ ಒಂದು ತಿಂಗಳು ಪೆರೋಲ್ ನೀಡಲಾಗಿತ್ತು. ಮಗಳು ಯುಕೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾಳೆ.

ಇತ್ತೀಚೆಗೆ, ಯುಕೆ ಮತ್ತು ಶ್ರೀಲಂಕಾದಲ್ಲಿರುವ ತನ್ನ ಕುಟುಂಬಕ್ಕೆ ವಾಟ್ಸಾಪ್ ಕರೆ ಮಾಡಲು ಅವಕಾಶ ನೀಡುವಂತೆ ನಳಿನಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಅಪರಾಧಿಗಳಿಗೆ ವಿದೇಶಿ ಕರೆಗಳನ್ನು ಅನುಮತಿಸಲಾಗುವುದಿಲ್ಲ. ಇದನ್ನು ಕೇಂದ್ರ ಮಾತ್ರ ನಿರ್ಧರಿಸಬಹುದು ಎಂದು ಜೈಲಿನ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದರು.


ಇದನ್ನೂ ಓದಿ: ದೇಶಭಕ್ತನ ಮಗನಾಗಿರುವುದಕ್ಕೆ ಹೆಮ್ಮೆಯಿದೆ; ರಾಜೀವ್ ಗಾಂಧಿ ಪುಣ್ಯಸ್ಮರಣೆ ಮಾಡಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...