Homeಮುಖಪುಟರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!

ಜೈಲು ಕಿರುಕುಳ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿರುವಾಗ ತನ್ನನ್ನು ಕೊಲ್ಲುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ ಎಂದು ಇನ್ನೊಬ್ಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಹೇಳಿದ್ದಾಳೆ.

- Advertisement -
- Advertisement -

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್, ಮತ್ತೊಬ್ಬ ಅಪರಾಧಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಚಾರಣೆ ನಡೆಸುವಾಗ, ಕಳೆದ ರಾತ್ರಿ ಜೈಲಿನಲ್ಲಿ ತಾನೇ ಅತ್ಮಹತ್ಯೆ ಬೆದರಿಕೆ ಹಾಕಿದ್ದಾಳೆ ಎಂದು ತಮಿಳುನಾಡಿನ ಉನ್ನತ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

“ಇದು ಬ್ಲ್ಯಾಕ್ ಮೇಲ್ ಅಥವಾ ಬೆದರಿಕೆಯಂತೆಯೇ ಇತ್ತು. ಅವರು ಆತ್ಮಹತ್ಯೆಗೆ ಪ್ರಯತ್ನಿಸಲಿಲ್ಲ” ಎಂದು ತಮಿಳುನಾಡು ಕಾರಾಗೃಹ ವಿಭಾಗದ ಮುಖ್ಯಸ್ಥ ಸುನಿಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ವೆಲ್ಲೂರು ಮಹಿಳಾ ಜೈಲಿನಲ್ಲಿ ಈ ಘಟನೆ ನಡೆದಿದ್ದು, 55 ವರ್ಷದ ನಳಿನಿ ಸುಮಾರು ಮೂರು ದಶಕಗಳಿಂದ ಜೈಲಿನಲ್ಲಿದ್ದಾರೆ.

ಜೈಲು ಕಿರುಕುಳ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿರುವಾಗ ತನ್ನನ್ನು ಕೊಲ್ಲುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ ಎಂದು ಇನ್ನೊಬ್ಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಹೇಳಿದ್ದಾಳೆ.

ಮಹಿಳೆಯನ್ನು ಸ್ಥಳಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ” ಎಂದು ಸಿಂಗ್ ಹೇಳಿದ್ದಾರೆ .

ಜೈಲಿನ ಅಧಿಕಾರಿಗಳು ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ ನಳಿನಿ ಪರ ವಕೀಲರು, ನಳಿನಿಯನ್ನು ಮತ್ತೊಂದು ಜೈಲಿಗೆ ವರ್ಗಾಯಿಸಲು ವ್ಯವಸ್ಥೆ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು.

“ರಾತ್ರಿ 8:30 ಕ್ಕೆ ಜೈಲರ್ ನಳಿನಿಯ ವಿಭಾಗಕ್ಕೆ ಹೋಗಿ ದೂರಿನ ಬಗ್ಗೆ ವಿಚಾರಿಸಿದರು. ವಿಚಾರಣೆಯ ವೇಳೆ ಜೈಲರ್ ಮತ್ತು ನಳಿನಿ ನಡುವೆ ಜಗಳ ನಡೆಯಿತು. ಅವಳು ಅಸಮಾಧಾನಗೊಂಡು ಆತ್ಮಹತ್ಯೆಗೆ ಯತ್ನಿಸಿದಳು” ಎಂದು ಪುಗಲೆಂತಿ ಎಎನ್‌ಐಗೆ ತಿಳಿಸಿದ್ದಾರೆ.

“ಇದು ಅಧಿಕಾರಿಗಳ ದೃಷ್ಟಿಕೋನ. ನಾವು ಇದನ್ನು ನಂಬುವುದಿಲ್ಲ. ಅವರು ಕಳೆದ 30 ವರ್ಷಗಳ ಜೈಲುವಾಸ ಅನುಭವಿಸಿದ್ದಾರೆ. ಇಂತಹ ಕ್ರಮಗಳನ್ನು ತೆಗೆದುಕೊಳ್ಳಲು ಎಂದಿಗೂ ಪ್ರಯತ್ನಿಸಲಿಲ್ಲ. ಜೈಲಿನ ಅಧಿಕಾರಿಗಳು ಅವಳನ್ನು ಹಿಂಸಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ವಕೀಲರು ವಿಚಾರಣೆಗೆ ಒತ್ತಾಯಿಸಿದ್ದಾರೆ.

ನಳಿನಿ ಅವರ ಪ್ರಾಣಕ್ಕೆ ಅಪಾಯವಿದೆ ಎಂದಿರುವ ವಕೀಲರು, ಜೈಲಿನ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಇ ಪಳನಿಸಾಮಿ ಅವರ ಬಳಿ ಚೆನ್ನೈನ ಜೈಲಿಗೆ ವರ್ಗಾಯಿಸುವಂತೆ ಕೋರಿದ್ದಾರೆ.

1991 ರಲ್ಲಿ ರಾಜೀವ್ ಗಾಂಧಿ ಅವರನ್ನು ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಲಂ (ಎಲ್‌ಟಿಟಿಇ) ಯ ಆತ್ಮಾಹುತಿ ಬಾಂಬರ್ ಹತ್ಯೆಗೈದ ಪ್ರಕರಣದಲ್ಲಿ ನಳಿನಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು.

ಆದರೆ ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ ಅವರ ಮನವಿಯ ಮೇಲೆ ಶಿಕ್ಷೆಯನ್ನು ಜೀವಾವಧಿ ಅವಧಿಗೆ ಇಳಿಸಲಾಯಿತು. ವರ್ಷಗಳ ನಂತರ, ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳ ಶಿಕ್ಷೆಯನ್ನು ರದ್ದುಗೊಳಿಸಿತು.

ಕಳೆದ ವರ್ಷ ನಳಿನಿಗೆ ಅವರ ಮಗಳು ಹರಿತ್ರಾಳ ಮದುವೆಗೆ ಒಂದು ತಿಂಗಳು ಪೆರೋಲ್ ನೀಡಲಾಗಿತ್ತು. ಮಗಳು ಯುಕೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾಳೆ.

ಇತ್ತೀಚೆಗೆ, ಯುಕೆ ಮತ್ತು ಶ್ರೀಲಂಕಾದಲ್ಲಿರುವ ತನ್ನ ಕುಟುಂಬಕ್ಕೆ ವಾಟ್ಸಾಪ್ ಕರೆ ಮಾಡಲು ಅವಕಾಶ ನೀಡುವಂತೆ ನಳಿನಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಅಪರಾಧಿಗಳಿಗೆ ವಿದೇಶಿ ಕರೆಗಳನ್ನು ಅನುಮತಿಸಲಾಗುವುದಿಲ್ಲ. ಇದನ್ನು ಕೇಂದ್ರ ಮಾತ್ರ ನಿರ್ಧರಿಸಬಹುದು ಎಂದು ಜೈಲಿನ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದರು.


ಇದನ್ನೂ ಓದಿ: ದೇಶಭಕ್ತನ ಮಗನಾಗಿರುವುದಕ್ಕೆ ಹೆಮ್ಮೆಯಿದೆ; ರಾಜೀವ್ ಗಾಂಧಿ ಪುಣ್ಯಸ್ಮರಣೆ ಮಾಡಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...