Homeಮುಖಪುಟರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!

ಜೈಲು ಕಿರುಕುಳ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿರುವಾಗ ತನ್ನನ್ನು ಕೊಲ್ಲುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ ಎಂದು ಇನ್ನೊಬ್ಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಹೇಳಿದ್ದಾಳೆ.

- Advertisement -
- Advertisement -

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್, ಮತ್ತೊಬ್ಬ ಅಪರಾಧಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಚಾರಣೆ ನಡೆಸುವಾಗ, ಕಳೆದ ರಾತ್ರಿ ಜೈಲಿನಲ್ಲಿ ತಾನೇ ಅತ್ಮಹತ್ಯೆ ಬೆದರಿಕೆ ಹಾಕಿದ್ದಾಳೆ ಎಂದು ತಮಿಳುನಾಡಿನ ಉನ್ನತ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

“ಇದು ಬ್ಲ್ಯಾಕ್ ಮೇಲ್ ಅಥವಾ ಬೆದರಿಕೆಯಂತೆಯೇ ಇತ್ತು. ಅವರು ಆತ್ಮಹತ್ಯೆಗೆ ಪ್ರಯತ್ನಿಸಲಿಲ್ಲ” ಎಂದು ತಮಿಳುನಾಡು ಕಾರಾಗೃಹ ವಿಭಾಗದ ಮುಖ್ಯಸ್ಥ ಸುನಿಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ವೆಲ್ಲೂರು ಮಹಿಳಾ ಜೈಲಿನಲ್ಲಿ ಈ ಘಟನೆ ನಡೆದಿದ್ದು, 55 ವರ್ಷದ ನಳಿನಿ ಸುಮಾರು ಮೂರು ದಶಕಗಳಿಂದ ಜೈಲಿನಲ್ಲಿದ್ದಾರೆ.

ಜೈಲು ಕಿರುಕುಳ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿರುವಾಗ ತನ್ನನ್ನು ಕೊಲ್ಲುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ ಎಂದು ಇನ್ನೊಬ್ಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಹೇಳಿದ್ದಾಳೆ.

ಮಹಿಳೆಯನ್ನು ಸ್ಥಳಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ” ಎಂದು ಸಿಂಗ್ ಹೇಳಿದ್ದಾರೆ .

ಜೈಲಿನ ಅಧಿಕಾರಿಗಳು ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ ನಳಿನಿ ಪರ ವಕೀಲರು, ನಳಿನಿಯನ್ನು ಮತ್ತೊಂದು ಜೈಲಿಗೆ ವರ್ಗಾಯಿಸಲು ವ್ಯವಸ್ಥೆ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು.

“ರಾತ್ರಿ 8:30 ಕ್ಕೆ ಜೈಲರ್ ನಳಿನಿಯ ವಿಭಾಗಕ್ಕೆ ಹೋಗಿ ದೂರಿನ ಬಗ್ಗೆ ವಿಚಾರಿಸಿದರು. ವಿಚಾರಣೆಯ ವೇಳೆ ಜೈಲರ್ ಮತ್ತು ನಳಿನಿ ನಡುವೆ ಜಗಳ ನಡೆಯಿತು. ಅವಳು ಅಸಮಾಧಾನಗೊಂಡು ಆತ್ಮಹತ್ಯೆಗೆ ಯತ್ನಿಸಿದಳು” ಎಂದು ಪುಗಲೆಂತಿ ಎಎನ್‌ಐಗೆ ತಿಳಿಸಿದ್ದಾರೆ.

“ಇದು ಅಧಿಕಾರಿಗಳ ದೃಷ್ಟಿಕೋನ. ನಾವು ಇದನ್ನು ನಂಬುವುದಿಲ್ಲ. ಅವರು ಕಳೆದ 30 ವರ್ಷಗಳ ಜೈಲುವಾಸ ಅನುಭವಿಸಿದ್ದಾರೆ. ಇಂತಹ ಕ್ರಮಗಳನ್ನು ತೆಗೆದುಕೊಳ್ಳಲು ಎಂದಿಗೂ ಪ್ರಯತ್ನಿಸಲಿಲ್ಲ. ಜೈಲಿನ ಅಧಿಕಾರಿಗಳು ಅವಳನ್ನು ಹಿಂಸಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ವಕೀಲರು ವಿಚಾರಣೆಗೆ ಒತ್ತಾಯಿಸಿದ್ದಾರೆ.

ನಳಿನಿ ಅವರ ಪ್ರಾಣಕ್ಕೆ ಅಪಾಯವಿದೆ ಎಂದಿರುವ ವಕೀಲರು, ಜೈಲಿನ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಇ ಪಳನಿಸಾಮಿ ಅವರ ಬಳಿ ಚೆನ್ನೈನ ಜೈಲಿಗೆ ವರ್ಗಾಯಿಸುವಂತೆ ಕೋರಿದ್ದಾರೆ.

1991 ರಲ್ಲಿ ರಾಜೀವ್ ಗಾಂಧಿ ಅವರನ್ನು ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಲಂ (ಎಲ್‌ಟಿಟಿಇ) ಯ ಆತ್ಮಾಹುತಿ ಬಾಂಬರ್ ಹತ್ಯೆಗೈದ ಪ್ರಕರಣದಲ್ಲಿ ನಳಿನಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು.

ಆದರೆ ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ ಅವರ ಮನವಿಯ ಮೇಲೆ ಶಿಕ್ಷೆಯನ್ನು ಜೀವಾವಧಿ ಅವಧಿಗೆ ಇಳಿಸಲಾಯಿತು. ವರ್ಷಗಳ ನಂತರ, ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳ ಶಿಕ್ಷೆಯನ್ನು ರದ್ದುಗೊಳಿಸಿತು.

ಕಳೆದ ವರ್ಷ ನಳಿನಿಗೆ ಅವರ ಮಗಳು ಹರಿತ್ರಾಳ ಮದುವೆಗೆ ಒಂದು ತಿಂಗಳು ಪೆರೋಲ್ ನೀಡಲಾಗಿತ್ತು. ಮಗಳು ಯುಕೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾಳೆ.

ಇತ್ತೀಚೆಗೆ, ಯುಕೆ ಮತ್ತು ಶ್ರೀಲಂಕಾದಲ್ಲಿರುವ ತನ್ನ ಕುಟುಂಬಕ್ಕೆ ವಾಟ್ಸಾಪ್ ಕರೆ ಮಾಡಲು ಅವಕಾಶ ನೀಡುವಂತೆ ನಳಿನಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಅಪರಾಧಿಗಳಿಗೆ ವಿದೇಶಿ ಕರೆಗಳನ್ನು ಅನುಮತಿಸಲಾಗುವುದಿಲ್ಲ. ಇದನ್ನು ಕೇಂದ್ರ ಮಾತ್ರ ನಿರ್ಧರಿಸಬಹುದು ಎಂದು ಜೈಲಿನ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದರು.


ಇದನ್ನೂ ಓದಿ: ದೇಶಭಕ್ತನ ಮಗನಾಗಿರುವುದಕ್ಕೆ ಹೆಮ್ಮೆಯಿದೆ; ರಾಜೀವ್ ಗಾಂಧಿ ಪುಣ್ಯಸ್ಮರಣೆ ಮಾಡಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....