Homeಮುಖಪುಟರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿಯಿಂದ ಆತ್ಮಹತ್ಯೆ ಬೆದರಿಕೆ!

ಜೈಲು ಕಿರುಕುಳ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿರುವಾಗ ತನ್ನನ್ನು ಕೊಲ್ಲುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ ಎಂದು ಇನ್ನೊಬ್ಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಹೇಳಿದ್ದಾಳೆ.

- Advertisement -
- Advertisement -

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್, ಮತ್ತೊಬ್ಬ ಅಪರಾಧಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಚಾರಣೆ ನಡೆಸುವಾಗ, ಕಳೆದ ರಾತ್ರಿ ಜೈಲಿನಲ್ಲಿ ತಾನೇ ಅತ್ಮಹತ್ಯೆ ಬೆದರಿಕೆ ಹಾಕಿದ್ದಾಳೆ ಎಂದು ತಮಿಳುನಾಡಿನ ಉನ್ನತ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

“ಇದು ಬ್ಲ್ಯಾಕ್ ಮೇಲ್ ಅಥವಾ ಬೆದರಿಕೆಯಂತೆಯೇ ಇತ್ತು. ಅವರು ಆತ್ಮಹತ್ಯೆಗೆ ಪ್ರಯತ್ನಿಸಲಿಲ್ಲ” ಎಂದು ತಮಿಳುನಾಡು ಕಾರಾಗೃಹ ವಿಭಾಗದ ಮುಖ್ಯಸ್ಥ ಸುನಿಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ವೆಲ್ಲೂರು ಮಹಿಳಾ ಜೈಲಿನಲ್ಲಿ ಈ ಘಟನೆ ನಡೆದಿದ್ದು, 55 ವರ್ಷದ ನಳಿನಿ ಸುಮಾರು ಮೂರು ದಶಕಗಳಿಂದ ಜೈಲಿನಲ್ಲಿದ್ದಾರೆ.

ಜೈಲು ಕಿರುಕುಳ ದೂರಿನ ಬಗ್ಗೆ ವಿಚಾರಣೆ ನಡೆಸುತ್ತಿರುವಾಗ ತನ್ನನ್ನು ಕೊಲ್ಲುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ ಎಂದು ಇನ್ನೊಬ್ಬ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ ಹೇಳಿದ್ದಾಳೆ.

ಮಹಿಳೆಯನ್ನು ಸ್ಥಳಾಂತರಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಳಿನಿ ಬೆದರಿಕೆ ಹಾಕಿದ್ದಾಳೆ” ಎಂದು ಸಿಂಗ್ ಹೇಳಿದ್ದಾರೆ .

ಜೈಲಿನ ಅಧಿಕಾರಿಗಳು ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ ನಳಿನಿ ಪರ ವಕೀಲರು, ನಳಿನಿಯನ್ನು ಮತ್ತೊಂದು ಜೈಲಿಗೆ ವರ್ಗಾಯಿಸಲು ವ್ಯವಸ್ಥೆ ಮಾಡುವಂತೆ ತಮಿಳುನಾಡು ಸರ್ಕಾರಕ್ಕೆ ಮನವಿ ಮಾಡಿದರು.

“ರಾತ್ರಿ 8:30 ಕ್ಕೆ ಜೈಲರ್ ನಳಿನಿಯ ವಿಭಾಗಕ್ಕೆ ಹೋಗಿ ದೂರಿನ ಬಗ್ಗೆ ವಿಚಾರಿಸಿದರು. ವಿಚಾರಣೆಯ ವೇಳೆ ಜೈಲರ್ ಮತ್ತು ನಳಿನಿ ನಡುವೆ ಜಗಳ ನಡೆಯಿತು. ಅವಳು ಅಸಮಾಧಾನಗೊಂಡು ಆತ್ಮಹತ್ಯೆಗೆ ಯತ್ನಿಸಿದಳು” ಎಂದು ಪುಗಲೆಂತಿ ಎಎನ್‌ಐಗೆ ತಿಳಿಸಿದ್ದಾರೆ.

“ಇದು ಅಧಿಕಾರಿಗಳ ದೃಷ್ಟಿಕೋನ. ನಾವು ಇದನ್ನು ನಂಬುವುದಿಲ್ಲ. ಅವರು ಕಳೆದ 30 ವರ್ಷಗಳ ಜೈಲುವಾಸ ಅನುಭವಿಸಿದ್ದಾರೆ. ಇಂತಹ ಕ್ರಮಗಳನ್ನು ತೆಗೆದುಕೊಳ್ಳಲು ಎಂದಿಗೂ ಪ್ರಯತ್ನಿಸಲಿಲ್ಲ. ಜೈಲಿನ ಅಧಿಕಾರಿಗಳು ಅವಳನ್ನು ಹಿಂಸಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ವಕೀಲರು ವಿಚಾರಣೆಗೆ ಒತ್ತಾಯಿಸಿದ್ದಾರೆ.

ನಳಿನಿ ಅವರ ಪ್ರಾಣಕ್ಕೆ ಅಪಾಯವಿದೆ ಎಂದಿರುವ ವಕೀಲರು, ಜೈಲಿನ ಅಧಿಕಾರಿಗಳು ಮತ್ತು ಮುಖ್ಯಮಂತ್ರಿ ಇ ಪಳನಿಸಾಮಿ ಅವರ ಬಳಿ ಚೆನ್ನೈನ ಜೈಲಿಗೆ ವರ್ಗಾಯಿಸುವಂತೆ ಕೋರಿದ್ದಾರೆ.

1991 ರಲ್ಲಿ ರಾಜೀವ್ ಗಾಂಧಿ ಅವರನ್ನು ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಲಂ (ಎಲ್‌ಟಿಟಿಇ) ಯ ಆತ್ಮಾಹುತಿ ಬಾಂಬರ್ ಹತ್ಯೆಗೈದ ಪ್ರಕರಣದಲ್ಲಿ ನಳಿನಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು.

ಆದರೆ ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ ಅವರ ಮನವಿಯ ಮೇಲೆ ಶಿಕ್ಷೆಯನ್ನು ಜೀವಾವಧಿ ಅವಧಿಗೆ ಇಳಿಸಲಾಯಿತು. ವರ್ಷಗಳ ನಂತರ, ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಇನ್ನೂ ಆರು ಆರೋಪಿಗಳ ಶಿಕ್ಷೆಯನ್ನು ರದ್ದುಗೊಳಿಸಿತು.

ಕಳೆದ ವರ್ಷ ನಳಿನಿಗೆ ಅವರ ಮಗಳು ಹರಿತ್ರಾಳ ಮದುವೆಗೆ ಒಂದು ತಿಂಗಳು ಪೆರೋಲ್ ನೀಡಲಾಗಿತ್ತು. ಮಗಳು ಯುಕೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾಳೆ.

ಇತ್ತೀಚೆಗೆ, ಯುಕೆ ಮತ್ತು ಶ್ರೀಲಂಕಾದಲ್ಲಿರುವ ತನ್ನ ಕುಟುಂಬಕ್ಕೆ ವಾಟ್ಸಾಪ್ ಕರೆ ಮಾಡಲು ಅವಕಾಶ ನೀಡುವಂತೆ ನಳಿನಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ ಅಪರಾಧಿಗಳಿಗೆ ವಿದೇಶಿ ಕರೆಗಳನ್ನು ಅನುಮತಿಸಲಾಗುವುದಿಲ್ಲ. ಇದನ್ನು ಕೇಂದ್ರ ಮಾತ್ರ ನಿರ್ಧರಿಸಬಹುದು ಎಂದು ಜೈಲಿನ ಅಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದರು.


ಇದನ್ನೂ ಓದಿ: ದೇಶಭಕ್ತನ ಮಗನಾಗಿರುವುದಕ್ಕೆ ಹೆಮ್ಮೆಯಿದೆ; ರಾಜೀವ್ ಗಾಂಧಿ ಪುಣ್ಯಸ್ಮರಣೆ ಮಾಡಿದ ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...