Homeಮುಖಪುಟಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

- Advertisement -
- Advertisement -

ಫೆಬ್ರವರಿ 24 ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಮುಂಚಿತವಾಗಿ ಅಹಮದಾಬಾದ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ಮೊಟೆರಾ ಕ್ರೀಡಾಂಗಣದ ಬಳಿಯ ಕೊಳೆಗೇರಿಯಲ್ಲಿ ವಾಸಿಸುತ್ತಿರುವ ಸುಮಾರು 45 ಕುಟುಂಬಗಳಿಗೆ ಅಲ್ಲಿಂದ ತೆರವು ಮಾಡುವಂತೆ ನೋಟೀಸ್ ನೀಡಲಾಗಿದೆ.

ಅಹಮದಾಬಾದ್‌ನ ಕೊಳೆಗೇರಿ ನಿವಾಸಿಗಳು “ತಾವು ಒಂದು ದಶಕದಿಂದ ಇಲ್ಲಿ ವಾಸಿಸುತ್ತಿದ್ದೇವೆ ಆದರೆ ಡೊನಾಲ್ಡ್ ಟ್ರಂಪ್ ಭೇಟಿಯ ಸಿದ್ಧತೆಗಳ ಮಧ್ಯೆ ಇಲ್ಲಿಂದ ಹೊರಹೋಗುವಂತೆ ನೋಟಿಸ್ ನೀಡಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತವರು ರಾಜ್ಯಕ್ಕೆ ಅಮೆರಿಕ ಅಧ್ಯಕ್ಷ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಹಾದು ಹೋಗುವ ಮಾರ್ಗದ ಕೊಳೆಗೇರಿಯ ಉದ್ದಕ್ಕೂ ಸ್ಥಳೀಯ ಸಂಸ್ಥೆ 400 ಮೀಟರ್ ಗೋಡೆ ನಿರ್ಮಿಸಿ ಟೀಕೆಗೆ ಒಳಗಾಗಿತ್ತು. ಈಗ ನೋಟಿಸ್‌ ಸಹ ನೀಡಿ ಮತ್ತಷ್ಟು ವಿವಾದ ಸೃಷ್ಟಿಸಿದೆ.

ನೋಟಿಸ್‌ನಲ್ಲಿ “ನೀವು ಎಎಂಸಿಗೆ ಸೇರಿದ ಜಮೀನನ್ನು ಅತಿಕ್ರಮಣ ಮಾಡಿದ್ದೀರಿ. ಇನ್ನು ಏಳು ದಿನಗಳಲ್ಲಿ ನಿಮ್ಮ ಮನೆಯ ವಸ್ತುಗಳನ್ನು ತೆಗೆದುಕೊಂಡು ಇಲ್ಲಿಂದ ಬೇರೆ ಸ್ಥಳಕ್ಕೆ ಹೋಗಬೇಕು. ಇಲ್ಲದಿದ್ದಲ್ಲಿ ಇಲಾಖೆಯು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ನೀವು ಯಾವುದೇ ಪ್ರಾತಿನಿಧ್ಯವನ್ನು ನೀಡಬೇಕಾದರೆ, ಫೆಬ್ರವರಿ 19 ರಂದು ಮಧ್ಯಾಹ್ನ 3 ಗಂಟೆಯ ಒಳಗೆ ನೀಡಬೇಕೆಂದು” ಬರೆದಿದೆ ಎಂದು ಪಿಟಿಐ ವರದಿ ಮಾಡಿದೆ.

“ನಾವು ಒಂದು ದಶಕದಿಂದ ಇಲ್ಲಿ ವಾಸಿಸುತ್ತಿದ್ದೇವೆ. ಈ ಹಿಂದೆ ನಮಗೆ ಯಾವುದೇ ಉಚ್ಚಾಟನೆಯ ಸೂಚನೆ ನೀಡಿರಲಿಲ್ಲ. ಆದರೆ ಈಗ ಏಕೆ ಹೀಗೆ ಮಾಡುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ” ಎಂದು ಕೂಲಿ ಕಾರ್ಮಿಕ ದಿನೇಶ್ ‌ಎಂಬುವವರು ಪ್ರಶ್ನಿಸಿದ್ದಾರೆ.

“ನಿವಾಸಿಗಳನ್ನು ಬಲವಂತವಾಗಿ ಹೊರಹಾಕಿದರೆ ನಮಗೆ ಪರ್ಯಾಯ ಆಶ್ರಯವಿಲ್ಲ. ನಾವು ಖಾಲಿ ಮಾಡಲು ಸಿದ್ಧರಿದ್ದೇವೆ, ಆದರೆ ನಮಗೆ ಪರ್ಯಾಯ ಜಾಗ ಮತ್ತು ಮೂಲಸೌಕರ್ಯಗಳು ಬೇಕಾಗುತ್ತದೆ. ಇಲ್ಲವೆಂದರೆ ನಾವು ರಸ್ತೆಬದಿಯಲ್ಲಿ ವಾಸಿಸಬೇಕಾಗುತ್ತದೆ. ನಮ್ಮೊಂದಿಗೆ ಮಹಿಳೆಯರು ಮತ್ತು ಮಕ್ಕಳು ಇದ್ದಾರೆ. ಬದುಕಲು ನಮಗೆ ಪರ್ಯಾಯ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಡಲಿ ಎಂದು ಪ್ರಾರ್ಥಿಸುತ್ತೇವೆ” ಎಂದು ಕೊಳಗೇರಿ ನಿವಾಸಿಗಳು ಹೇಳಿದ್ದಾರೆ.

“ಕೊಳಗೇರಿಯಿಂದ ಅಲ್ಲಿನ ಸ್ಲಂ ಜನರನ್ನು ಹೊರಹಾಕುವ ನೋಟಿಸ್‌ಗೂ “ನಮಸ್ತೆ ಟ್ರಂಪ್” ಕಾರ್ಯಕ್ರಮಕ್ಕೂ ಯಾವುದೇ ಸಂಬಂಧವಿಲ್ಲ. ಕೊಳೆಗೇರಿ ನಿವಾಸಿಗಳಿಗೆ ಪಟ್ಟಣ ಯೋಜನಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ನೋಟೀಸ್ ನೀಡಲಾಗಿದೆ. ಕೊಳಗೇರಿ ಇರುವ ಜಾಗ ಎಎಂಸಿಗೆ ಸೇರಿದೆ. ಜನವರಿಯಲ್ಲಿ ನಡೆಸಿದ ಸ್ಥಳ ಸಮೀಕ್ಷೆಯಂತೆ ಈ ನೋಟೀಸನ್ನು ನೀಡಲಾಗಿದೆ” ಎಂದು ಎಎಂಸಿಯ ಪಶ್ಚಿಮ ವಲಯದ ಉಪ ಅಧಿಕಾರಿ ಚೈತನ್ಯಾ ಶಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...