Homeಮುಖಪುಟಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

ಟ್ರಂಪ್‌ ಗುಜರಾತ್‌ ಭೇಟಿ ಹಿನ್ನೆಲೆ; ಗೋಡೆ ಆಯ್ತು, ಈಗ ಸ್ಲಂ ಎತ್ತಂಗಡಿಗೆ ಮುಂದಾದ ಅಧಿಕಾರಿಗಳು

- Advertisement -
- Advertisement -

ಫೆಬ್ರವರಿ 24 ರಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಮುಂಚಿತವಾಗಿ ಅಹಮದಾಬಾದ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ಮೊಟೆರಾ ಕ್ರೀಡಾಂಗಣದ ಬಳಿಯ ಕೊಳೆಗೇರಿಯಲ್ಲಿ ವಾಸಿಸುತ್ತಿರುವ ಸುಮಾರು 45 ಕುಟುಂಬಗಳಿಗೆ ಅಲ್ಲಿಂದ ತೆರವು ಮಾಡುವಂತೆ ನೋಟೀಸ್ ನೀಡಲಾಗಿದೆ.

ಅಹಮದಾಬಾದ್‌ನ ಕೊಳೆಗೇರಿ ನಿವಾಸಿಗಳು “ತಾವು ಒಂದು ದಶಕದಿಂದ ಇಲ್ಲಿ ವಾಸಿಸುತ್ತಿದ್ದೇವೆ ಆದರೆ ಡೊನಾಲ್ಡ್ ಟ್ರಂಪ್ ಭೇಟಿಯ ಸಿದ್ಧತೆಗಳ ಮಧ್ಯೆ ಇಲ್ಲಿಂದ ಹೊರಹೋಗುವಂತೆ ನೋಟಿಸ್ ನೀಡಲಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತವರು ರಾಜ್ಯಕ್ಕೆ ಅಮೆರಿಕ ಅಧ್ಯಕ್ಷ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಹಾದು ಹೋಗುವ ಮಾರ್ಗದ ಕೊಳೆಗೇರಿಯ ಉದ್ದಕ್ಕೂ ಸ್ಥಳೀಯ ಸಂಸ್ಥೆ 400 ಮೀಟರ್ ಗೋಡೆ ನಿರ್ಮಿಸಿ ಟೀಕೆಗೆ ಒಳಗಾಗಿತ್ತು. ಈಗ ನೋಟಿಸ್‌ ಸಹ ನೀಡಿ ಮತ್ತಷ್ಟು ವಿವಾದ ಸೃಷ್ಟಿಸಿದೆ.

ನೋಟಿಸ್‌ನಲ್ಲಿ “ನೀವು ಎಎಂಸಿಗೆ ಸೇರಿದ ಜಮೀನನ್ನು ಅತಿಕ್ರಮಣ ಮಾಡಿದ್ದೀರಿ. ಇನ್ನು ಏಳು ದಿನಗಳಲ್ಲಿ ನಿಮ್ಮ ಮನೆಯ ವಸ್ತುಗಳನ್ನು ತೆಗೆದುಕೊಂಡು ಇಲ್ಲಿಂದ ಬೇರೆ ಸ್ಥಳಕ್ಕೆ ಹೋಗಬೇಕು. ಇಲ್ಲದಿದ್ದಲ್ಲಿ ಇಲಾಖೆಯು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ನೀವು ಯಾವುದೇ ಪ್ರಾತಿನಿಧ್ಯವನ್ನು ನೀಡಬೇಕಾದರೆ, ಫೆಬ್ರವರಿ 19 ರಂದು ಮಧ್ಯಾಹ್ನ 3 ಗಂಟೆಯ ಒಳಗೆ ನೀಡಬೇಕೆಂದು” ಬರೆದಿದೆ ಎಂದು ಪಿಟಿಐ ವರದಿ ಮಾಡಿದೆ.

“ನಾವು ಒಂದು ದಶಕದಿಂದ ಇಲ್ಲಿ ವಾಸಿಸುತ್ತಿದ್ದೇವೆ. ಈ ಹಿಂದೆ ನಮಗೆ ಯಾವುದೇ ಉಚ್ಚಾಟನೆಯ ಸೂಚನೆ ನೀಡಿರಲಿಲ್ಲ. ಆದರೆ ಈಗ ಏಕೆ ಹೀಗೆ ಮಾಡುತ್ತಿದ್ದಾರೆ ಎಂದು ಗೊತ್ತಾಗುತ್ತಿಲ್ಲ” ಎಂದು ಕೂಲಿ ಕಾರ್ಮಿಕ ದಿನೇಶ್ ‌ಎಂಬುವವರು ಪ್ರಶ್ನಿಸಿದ್ದಾರೆ.

“ನಿವಾಸಿಗಳನ್ನು ಬಲವಂತವಾಗಿ ಹೊರಹಾಕಿದರೆ ನಮಗೆ ಪರ್ಯಾಯ ಆಶ್ರಯವಿಲ್ಲ. ನಾವು ಖಾಲಿ ಮಾಡಲು ಸಿದ್ಧರಿದ್ದೇವೆ, ಆದರೆ ನಮಗೆ ಪರ್ಯಾಯ ಜಾಗ ಮತ್ತು ಮೂಲಸೌಕರ್ಯಗಳು ಬೇಕಾಗುತ್ತದೆ. ಇಲ್ಲವೆಂದರೆ ನಾವು ರಸ್ತೆಬದಿಯಲ್ಲಿ ವಾಸಿಸಬೇಕಾಗುತ್ತದೆ. ನಮ್ಮೊಂದಿಗೆ ಮಹಿಳೆಯರು ಮತ್ತು ಮಕ್ಕಳು ಇದ್ದಾರೆ. ಬದುಕಲು ನಮಗೆ ಪರ್ಯಾಯ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಡಲಿ ಎಂದು ಪ್ರಾರ್ಥಿಸುತ್ತೇವೆ” ಎಂದು ಕೊಳಗೇರಿ ನಿವಾಸಿಗಳು ಹೇಳಿದ್ದಾರೆ.

“ಕೊಳಗೇರಿಯಿಂದ ಅಲ್ಲಿನ ಸ್ಲಂ ಜನರನ್ನು ಹೊರಹಾಕುವ ನೋಟಿಸ್‌ಗೂ “ನಮಸ್ತೆ ಟ್ರಂಪ್” ಕಾರ್ಯಕ್ರಮಕ್ಕೂ ಯಾವುದೇ ಸಂಬಂಧವಿಲ್ಲ. ಕೊಳೆಗೇರಿ ನಿವಾಸಿಗಳಿಗೆ ಪಟ್ಟಣ ಯೋಜನಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ನೋಟೀಸ್ ನೀಡಲಾಗಿದೆ. ಕೊಳಗೇರಿ ಇರುವ ಜಾಗ ಎಎಂಸಿಗೆ ಸೇರಿದೆ. ಜನವರಿಯಲ್ಲಿ ನಡೆಸಿದ ಸ್ಥಳ ಸಮೀಕ್ಷೆಯಂತೆ ಈ ನೋಟೀಸನ್ನು ನೀಡಲಾಗಿದೆ” ಎಂದು ಎಎಂಸಿಯ ಪಶ್ಚಿಮ ವಲಯದ ಉಪ ಅಧಿಕಾರಿ ಚೈತನ್ಯಾ ಶಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...