Homeಮುಖಪುಟಟ್ರಂಪ್ ಭೇಟಿ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

ಟ್ರಂಪ್ ಭೇಟಿ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

ಸಂಜಯ್‌ ಗಾಂಧಿಗೂ ನರೇಂದ್ರ ಮೋದಿಗೂ ವ್ಯತ್ಯಾಸವೇನು? ಗೋಡೆ ಹಿಂದಿದೆ ಭಾರತದ ಕರಾಳ ಅಧ್ಯಾಯ..

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೂ ಗೋಡೆಗೂ ಎಲ್ಲಿಲ್ಲದ ನಂಟಿದೆ. ನಿಮಗಿದು ತಮಾಷೆ ಏನಿಸಿದರೂ ನಿಜ..! 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ಟ್ರಂಪ್ ವೀರಾವೇಶದ ಭಾಷಣ ಮಾಡಿದ್ದರು. ಅಮೆರಿಕ ಅಮೆಕನ್ನರಿಗೆ ಮಾತ್ರ. ಹೀಗಾಗಿ ಅಕ್ರಮ ವಲಸಿಗರನ್ನು ದೇಶದಿಂದ ಹೊರ ಹಾಕಲಾಗುವುದು. ಮೆಕ್ಸಿಕೋ ದೇಶದಿಂದ ಅಮೆರಿಕದ ಒಳಗೆ ನುಸುಳುವವರನ್ನು ತಡೆಯಲು ಅಮೆರಿಕ-ಮೆಕ್ಸಿಕೋ ಗಡಿಯುದ್ದಕ್ಕೂ ಬೃಹತ್ ಗೋಡೆಯನ್ನು ಕಟ್ಟಲಾಗುವುದು ಎಂದಿದ್ದರು.

ರಾಜಕೀಯ ಅನನುಭವಿಯ ಈ ವೀರಾವೇಶದ ಭಾಷಣಕ್ಕೆ ಇಡೀ ಜಗತ್ತು ಮುಸಿಮುಸಿ ನಕ್ಕಿತ್ತು. ಆದರೆ, ಬಲಪಂಥೀಯ ವಿಚಾರ ಧೋರಣೆಗಳು ಇಡೀ ವಿಶ್ವದಾದ್ಯಂತ ಗಟ್ಟಿಯಾಗಿ ಬೇರು ಬಿಡುತ್ತಿದ್ದ ಪರಿಣಾಮವೋ ಏನೋ? ಟ್ರಂಪ್ ಆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ, 6 ಸಾವಿರ ಮೈಲಿಯುದ್ದಕ್ಕೂ ಗೋಡೆ ಕಟ್ಟುವುದು ಭಾಷಣ ಮಾಡಿದಷ್ಟು ಸುಲಭವಲ್ಲ ಎಂಬುದು ನಂತರ ಟ್ರಂಪ್‌ಗೆ ಅರಿವಾಯಿತೇನೋ? ನಂತರ ಗೋಡೆ ಕುರಿತ ಚಿಂತೆಯನ್ನೇ ಬಿಟ್ಟುಬಿಟ್ಟಿದ್ದಾರೆ.

ಆದರೆ, ಟ್ರಂಪ್ ಮಾತನ್ನು ಶಿರಸಾವಹಿಸಿ ಪಾಲಿಸುವ ಅವರ ಆಪ್ತ ಗೆಳೆಯ ನರೇಂದ್ರ ಮೋದಿ ಇದೀಗ ಭಾರತ ದೇಶದಲ್ಲಿ ಸಣ್ಣ ಪ್ರಮಾಣದ ಗೋಡೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಆ ಮೂಲಕ ಭಾರತದಲ್ಲಿ ಸ್ಲಂ ಇಲ್ಲ, ಬಡತನ, ಹಸಿವು, ನಿರುದ್ಯೋಗ ಸಮಸ್ಯೆ ಇಲ್ಲ, ಮಹಿಳೆಯರ ಮಕ್ಕಳ ಅಪೌಷ್ಠಿಕತೆ, ಶಿಶು ಮರಣವಂತೂ ಇಲ್ಲವೇ ಇಲ್ಲ ಎಂದು ಹೇಳಲು ಹೊರಟಿದ್ದಾರೆ. ಯಕಶ್ಚಿತ್ 7-8 ಅಡಿ ಎತ್ತರ ಗೋಡೆಯ ಆ ಬದಿಯಲ್ಲಿರುವ ಮತ್ತೊಂದ ನೈಜ ಭಾರತವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ.

ಅಸಲಿಗೆ ಭಾರತದಲ್ಲಿನ ಬಡತನ, ಹಸಿವು, ನಿರುದ್ಯೋಗಗಳಂತಹ ಗಂಭೀರ ಸಮಸ್ಯೆಗಳನ್ನು ಮರೆಮಾಚುವ ಯತ್ನ ಇದೇ ಮೊದಲೇನಲ್ಲ. ಈ ಹಿಂದೆಯೂ ಭಾರತದಲ್ಲಿ ಇಂತಹದ್ದೇ ಒಂದು ಘಟನೆ ನಡೆದಿತ್ತು. ಭಾಗಶಃ ಸ್ವಾತಂತ್ರ್ಯ ಭಾರತದ ಮೊದಲ ಕಪ್ಪು ಇತಿಹಾಸಕ್ಕೆ ಅಂಕಿತ ಹಾಕಿದ ಘಟನೆ ಎಂದೇ ಇದನ್ನು ಬಿಂಬಿಸಲಾಗುತ್ತದೆ.

ಸಂಜಯ್ ಗಾಂಧಿ ಮತ್ತು 150 ಸ್ಲಂ ಜನರ ಸಾವು

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಹಿಂದೆಂದೂ ಕಾಣದ ರಾಜಕೀಯ ಸಂದಿಗ್ಧತೆಗೆ ಒಳಗಾಗಿದ್ದ ಕಾಲ ಅದು. ಇಂದಿರಾ ಗಾಂಧಿ ಈ ದೇಶದ ಪ್ರಧಾನಿಯಾಗಿದ್ದರು, ಅವರ ಮಗ ಸಂಜಯ್ ಗಾಂಧಿ ಅವರ ನೆರಳಿನಂತೆ ವಾಸ್ತವದಲ್ಲಿ ಸೂಪರ್ ಪಿಎಂ ಎಂಬಂತೆ ಕೆಲಸ ನಿರ್ವಹಿಸುತ್ತಿದ್ದರು. ಅವರ ಪ್ರೇರಣೆಯಿಂದಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವಂತಹ ತುರ್ತು ಪರಿಸ್ಥಿತಿಯನ್ನು 1975ರಲ್ಲಿ ಭಾರತದ ಮೇಲೆ ಹೇರಲಾಗಿತ್ತು ಎನ್ನುತ್ತದೆ ಈ ದೇಶದ ಇತಿಹಾಸ.

ದೇಶದಲ್ಲಿ ಹಸಿವನ್ನು ನೀಗಿಸಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿದ್ದ ಇಂದಿರಾ ಗಾಂಧಿ ಹಸಿರು ಕ್ರಾಂತಿಯ ಘೋಷಣೆ ಕೂಗಿದ್ದರು. ಗರೀಬಿ ಹಠಾವೋ ನಂತಹ ಯೋಜನೆಗಳ ಮೂಲಕ ಈ ದೇಶದಿಂದ ಹಸಿವನ್ನು ಶಾಶ್ವತವಾಗಿ ನೀಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದರು ಎಂಬುದು ಎಷ್ಟು ಸತ್ಯವೋ? ಅವರ ಮಗ ಸಂಜಯ್ ಗಾಂಧಿ ಇಂದಿರಾ ಗುಣಕ್ಕೆ ತದ್ವಿರುದ್ದ ಧೃವದಂತಿದ್ದರು ಎಂಬುದು ಅಷ್ಟೇ ಸತ್ಯ.

ದೆಹಲಿಯಲ್ಲಿರುವ ಸ್ಲಂಗಳನ್ನು ಅಕ್ಷರಶಃ ಈ ದೇಶದ ಶಾಪವೇನೋ ಎಂಬಂತೆ ಪರಿಗಣಿಸಿದ್ದ ಸಂಜಯ್ ಗಾಂಧಿ, ದೆಹಲಿಯನ್ನು ಸ್ಲಂ ಮುಕ್ತ ಹಾಗೂ ವಿದೇಶಿ ಗುಣಮಟ್ಟದ ನಗರವನ್ನಾಗಿ ಮಾಡಬೇಕು ಎಂಬ ಕನಸನ್ನು ಕಂಡಿದ್ದರು. ಅಕ್ಷರಶಃ ಬಡವರ ಭಾವನೆಗೆ ಸ್ಪಂದಿಸುವ ಯಾವ ಔದಾರ್ಯವೂ ಅವರಲ್ಲಿ ಉಳಿದಿರಲಿಲ್ಲ.

ಅದು 1976 ಏಪ್ರಿಲ್ 13ರ ಬೆಳಗ್ಗಿನ ಜಾವ. ರಾಷ್ಟ್ರ ರಾಜಧಾನಿಯ ಗರ್ಭದಲ್ಲಿದ್ದ ತುರ್ಕ್‌ಮನ್ ಗೇಟ್ ಸ್ಲಂ ಪ್ರದೇಶವನ್ನು ಖಾಲಿ ಮಾಡುವ ಸಲುವಾಗಿ ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಜಗಮೋಹನ್ ಹಾಗೂ ಬ್ರಿಜ್ ವರ್ಧನ್ ಅವರೊಂದಿಗೆ ಈ ಸ್ಲಂ ಪ್ರದೇಶಕ್ಕೆ ಭೇಟಿ ನೀಡಿದ್ದರು ಸಂಜಯ್ ಗಾಂಧಿ.

ಸಂಜಯ್ ಗಾಂಧಿ

ಸ್ಲಂನಲ್ಲಿನ ಗುಡಿಸಲುಗಳ ಮೇಲೆ ಏಕಾಏಕಿ ಬುಲ್ಡೋಜರ್‌ಗಳನ್ನು ಹರಿಸಲಾಗಿತ್ತು. ತೀರಾ ಅಮಾನವೀಯವಾಗಿ ಇಡೀ ಸ್ಲಂ ಅನ್ನು ನೆಲಸಮಗೊಳಿಸಲಾಗಿತ್ತು. ಇದನ್ನು ತಡೆಯಲು ಬಂದಂತಹ ಜನರ ಮೇಲೆ ದೆಹಲಿ ಪೊಲೀಸರು ನಿರ್ದಾಕ್ಷೀಣ್ಯವಾಗಿ ಗುಂಡಿನ ಮಳೆಗೆರೆದಿದ್ದರು. ಈ ಘಟನೆಯಲ್ಲಿ ಕನಿಷ್ಟ 150 ಜನ ಬಡವರು-ನಿರ್ಗತಿಕರು ಸಾವನ್ನಪ್ಪಿದ್ದರು. ಕೊನೆಗೆ ಇಲ್ಲಿ ವಾಸವಾಗಿದ್ದ ಸುಮಾರು 70,000 ಜನರನ್ನು ಯಮುನಾ ನದಿ ತೀರದಲ್ಲಿ ಇನ್ನೂ ಅಭಿವೃದ್ಧಿಯಾಗದ ವಸತಿ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು.

ಭಾಗಶಃ ಬ್ರಿಟೀಷ್ ಭಾರತದಲ್ಲೂ ಸಹ ಜಲಿಯನ್ ವಾಲಾಬಾಗ್ ಹೊರತಾಗಿ ಭಾರತೀಯರ ಮೇಲೆ ಹೀಗೊಂದು ಅಮಾನವೀಯ ಸಾಮೂಹಿಕ ಶೂಟ್ಔಟ್ ನಡೆಸಿರುವ ಉದಾಹರಣೆಗಳಿಲ್ಲ. ಆದರೆ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು ಕೇವಲ 29 ವರ್ಷದಲ್ಲಿ ಪ್ರಭುತ್ವವೇ ತನ್ನ ಜನರನ್ನು ಅನಾಮತ್ತಾಗಿ ಬೀದಿ ಹೆಣದಂತೆ ಕೇವಲ ಸ್ಲಂ ತೆರವುಗೊಳಿಸುವ ಸಲುವಾಗಿ ಹೊಡೆದು ಹಾಕಿತ್ತು. ಪ್ರಜಾಪ್ರಭುತ್ವದಲ್ಲಿ ಹೀಗೊಂದು ಕರಾಳ ಇತಿಹಾಸಕ್ಕೆ ಅಂಕಿತ ಹಾಕಲಾಗಿತ್ತು.

ಆದರೆ, ಅಂದು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಭಾರತದ ಕರಾಳ ಇತಿಹಾಸಕ್ಕೆ ಸಂಜಯ್ ಗಾಂಧಿ ಹಾಕಿಹೋಗಿದ್ದ ಅಂಕಿತವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನುಸರಿಸುತ್ತಿದೆಯೇ ಎಂಬ ಅನುಮಾನ ಇದೀಗ ಎಲ್ಲೆಡೆ ಮೂಡುತ್ತಿದೆ.

ಮೋದಿ ಮಾಡುತ್ತಿರುವುದೇನು?

ಅಸಲಿಗೆ ವ್ಯಾಪಾರ ವಹಿವಾಟು ಸೇರಿದಂತೆ ಅನೇಕ ವಿಚಾರಗಳಲ್ಲಿ ಅಮೆರಿಕ-ಭಾರತ ಎರಡು ದೇಶಗಳ ನಡುವಿನ ಸಂಬಂಧದ ಕುರಿತು ಮಾತುಕತೆ ನಡೆಸುವ ಸಲುವಾಗಿ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ಕ್ಕೆ ಭಾರತಕ್ಕೆ ಎರಡು ದಿನದ ಪ್ರವಾಸದ ಮೇಲೆ ಆಗಮಿಸುತ್ತಿದ್ದಾರೆ.

ಮೊದಲ ದಿನವೇ ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ’ನಮಸ್ತೆ ಟ್ರಂಪ್’ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ. ಅದ್ದೂರಿಯಾಗಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕನಿಷ್ಟ 1 ಲಕ್ಷ ಜನ ಭಾಗವಹಿಸಲಿದ್ದು, ಮೋದಿ ಹಾಗೂ ಟ್ರಂಪ್ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಮೆರಿಕಾದಿಂದ ನೇರವಾಗಿ ಗುಜರಾತ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುವ ಟ್ರಂಪ್ ಅಲ್ಲಿಂದ ಇಂದಿರಾ ಬ್ರಿಡ್ಜ್ ತನಕ ರಸ್ತೆ ಮಾರ್ಗದಲ್ಲಿ ಚಲಿಸಲಿದ್ದಾರೆ. ಹೀಗಾಗಿ ಈ ಮಾರ್ಗದಲ್ಲಿರುವ ಸ್ಲಂಗಳು ಕಾಣದಂತೆ ಅಲ್ಲಿನ ನಗರಾಡಳಿತ ಮೊದಲು ಸ್ಲಂ ಸುತ್ತಾ 6 ರಿಂದ 7 ಅಡಿ ಎತ್ತರದ ಗೋಡೆ ಕಟ್ಟಿ ಸ್ಲಂಗಳು ಕಾಣದಂತೆ ಮಾಡಲು ಮುಂದಾಗಿವೆ.

ಅಲ್ಲದೆ, ಈಗ ಮೊಟೆರಾ ಕ್ರೀಡಾಂಗಣದ ಪಕ್ಕದಲ್ಲೇ ಇರುವ ಸ್ಲಂ ಜನರನ್ನು ಜಾಗ ಖಾಲಿ ಮಾಡುವಂತೆ ನೋಟೀಸ್ ನೀಡಲಾಗಿದೆ. 45 ಕುಟುಂಬಗಳಲ್ಲಿ ಒಟ್ಟು 200ಕ್ಕೂ ಹೆಚ್ಚು ಜನರು ವಾಸವಿರುವ ಜನರನ್ನು 7 ದಿನಗಳ ಒಳಗಾಗಿ ಜಾಗ ಖಾಲಿ ಮಾಡುವಂತೆ ತಾಕೀತು ಮಾಡಲಾಗಿದೆ.

ಅಸಲಿಗೆ 44 ವರ್ಷಗಳ ಹಿಂದೆ ಸಂಜಯ್ ಗಾಂಧಿ ಮಾಡಿದ ಕೆಲಸಕ್ಕೂ, ಇಂದು ನರೇಂದ್ರ ಮೋದಿ ಮಾಡುತ್ತಿರುವ ಕೆಲಸಕ್ಕೂ ಹೆಚ್ಚೇನು ವ್ಯತ್ಯಾಸವಿಲ್ಲ. ಸಂಜಯ್ ಗಾಂಧಿ ಕಾಲದಲ್ಲಿ ಸ್ಲಂ ತೆರವಿಗೆ ಒತ್ತಾಯಪೂರ್ವಕವಾಗಿ ರಕ್ತಪಾತ ನಡೆಸಲಾಗಿದ್ದರೆ, ಮೋದಿ ಕಾಲದಲ್ಲಿ ನಗರ ನಾಗರೀಕತೆ ಮತ್ತು ಸ್ಲಂಗಳ ನಡುವೆ ಗೋಡೆ ಎಬ್ಬಿಸಲಾಗುತ್ತಿದೆ ಅಷ್ಟೇ. ಆದರೆ, ಈ ಇಬ್ಬರೂ ನಾಯಕರ ಉದ್ದೇಶ ಒಂದೇ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಎಂಬುದು ಇನ್ನೂ ಅಭಿವೃದ್ಧಿ ಹೊಂದುತ್ತಿರುವ ತೃತೀಯ ಜಗತ್ತಿನ ರಾಷ್ಟ್ರ. ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವುದು ಈ ದೇಶವನ್ನೇ. ಸ್ಲಂ ಜನರು, ಬಡವರು ಹಾಗೂ ನಿರುದ್ಯೋಗಿಗಳು ಇರುವ ಈ ಭಾರತವನ್ನೇ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮಿಸುತ್ತಿರುವುದು ಸಹ ಈ ಎಲ್ಲಾ ರೀತಿಯ ಜನರನ್ನೂ ತನ್ನ ಒಡಲಲ್ಲಿಟ್ಟುಕೊಂಡಿರುವ ಭಾರತಕ್ಕೆ.

ಹೀಗಾಗಿ ಇವರು ಗೋಡೆಗಳನ್ನು ಕಟ್ಟಿ ಏನನ್ನು ಮೆರೆಮಾಚಲು ಹೊರಟಿದ್ದಾರೆ. ಇಡೀ ವಿಶ್ವದ ಗುರು ಭಾರತ ಎಂದು ಹೆಮ್ಮೆ ಪಡುವ ಇದೇ ಜನರಿಗೆ ನೈಜ ಭಾರತವನ್ನು ಇಡೀ ವಿಶ್ವಕ್ಕೆ ಪರಿಚಯಿಸಲು ಮುಜುಗುರವೇಕೆ? ಇಲ್ಲಿ ಗೋಡೆ ಕಟ್ಟಲು ಬಳಸಿದ ಅದೇ ಇಟ್ಟಿಗೆ, ಸಿಮೆಂಟು ಬಳಸಿ ಈ ಸ್ಲಂ ಜನರಿಗೆ ಒಂದು ಸೂರನ್ನು, ಉತ್ತಮ ಬದುಕನ್ನು ಕಟ್ಟಿಕೊಡಬಹುದಲ್ಲವೇ? ಈ ಕುರಿತು ಭಾರತೀಯ ಪ್ರಭುತ್ವ ಎಂದಿಗೂ ಯೋಚಿಸಿಯೇ ಇಲ್ಲವೇಕೆ?

ಇವು ಭಾರತದ ಮಟ್ಟಿಗೆ ಗೋಡೆಗಳ ನೆಪದಲ್ಲಿ ಹುಟ್ಟಿದ ಉತ್ತರವಿಲ್ಲದ ಪ್ರಶ್ನೆಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...