Homeಮುಖಪುಟಟ್ರಂಪ್ ಭೇಟಿ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

ಟ್ರಂಪ್ ಭೇಟಿ ಮತ್ತು ಸ್ಲಂ ಸುತ್ತಲಿನ ಗೋಡೆ; ಅಸಲಿಗೆ ಮೋದಿ ಪ್ರತಿನಿಧಿಸುತ್ತಿರುವ ಭಾರತ ಯಾವುದು?

ಸಂಜಯ್‌ ಗಾಂಧಿಗೂ ನರೇಂದ್ರ ಮೋದಿಗೂ ವ್ಯತ್ಯಾಸವೇನು? ಗೋಡೆ ಹಿಂದಿದೆ ಭಾರತದ ಕರಾಳ ಅಧ್ಯಾಯ..

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೂ ಗೋಡೆಗೂ ಎಲ್ಲಿಲ್ಲದ ನಂಟಿದೆ. ನಿಮಗಿದು ತಮಾಷೆ ಏನಿಸಿದರೂ ನಿಜ..! 2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಂದರ್ಭದಲ್ಲಿ ಟ್ರಂಪ್ ವೀರಾವೇಶದ ಭಾಷಣ ಮಾಡಿದ್ದರು. ಅಮೆರಿಕ ಅಮೆಕನ್ನರಿಗೆ ಮಾತ್ರ. ಹೀಗಾಗಿ ಅಕ್ರಮ ವಲಸಿಗರನ್ನು ದೇಶದಿಂದ ಹೊರ ಹಾಕಲಾಗುವುದು. ಮೆಕ್ಸಿಕೋ ದೇಶದಿಂದ ಅಮೆರಿಕದ ಒಳಗೆ ನುಸುಳುವವರನ್ನು ತಡೆಯಲು ಅಮೆರಿಕ-ಮೆಕ್ಸಿಕೋ ಗಡಿಯುದ್ದಕ್ಕೂ ಬೃಹತ್ ಗೋಡೆಯನ್ನು ಕಟ್ಟಲಾಗುವುದು ಎಂದಿದ್ದರು.

ರಾಜಕೀಯ ಅನನುಭವಿಯ ಈ ವೀರಾವೇಶದ ಭಾಷಣಕ್ಕೆ ಇಡೀ ಜಗತ್ತು ಮುಸಿಮುಸಿ ನಕ್ಕಿತ್ತು. ಆದರೆ, ಬಲಪಂಥೀಯ ವಿಚಾರ ಧೋರಣೆಗಳು ಇಡೀ ವಿಶ್ವದಾದ್ಯಂತ ಗಟ್ಟಿಯಾಗಿ ಬೇರು ಬಿಡುತ್ತಿದ್ದ ಪರಿಣಾಮವೋ ಏನೋ? ಟ್ರಂಪ್ ಆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ, 6 ಸಾವಿರ ಮೈಲಿಯುದ್ದಕ್ಕೂ ಗೋಡೆ ಕಟ್ಟುವುದು ಭಾಷಣ ಮಾಡಿದಷ್ಟು ಸುಲಭವಲ್ಲ ಎಂಬುದು ನಂತರ ಟ್ರಂಪ್‌ಗೆ ಅರಿವಾಯಿತೇನೋ? ನಂತರ ಗೋಡೆ ಕುರಿತ ಚಿಂತೆಯನ್ನೇ ಬಿಟ್ಟುಬಿಟ್ಟಿದ್ದಾರೆ.

ಆದರೆ, ಟ್ರಂಪ್ ಮಾತನ್ನು ಶಿರಸಾವಹಿಸಿ ಪಾಲಿಸುವ ಅವರ ಆಪ್ತ ಗೆಳೆಯ ನರೇಂದ್ರ ಮೋದಿ ಇದೀಗ ಭಾರತ ದೇಶದಲ್ಲಿ ಸಣ್ಣ ಪ್ರಮಾಣದ ಗೋಡೆ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಆ ಮೂಲಕ ಭಾರತದಲ್ಲಿ ಸ್ಲಂ ಇಲ್ಲ, ಬಡತನ, ಹಸಿವು, ನಿರುದ್ಯೋಗ ಸಮಸ್ಯೆ ಇಲ್ಲ, ಮಹಿಳೆಯರ ಮಕ್ಕಳ ಅಪೌಷ್ಠಿಕತೆ, ಶಿಶು ಮರಣವಂತೂ ಇಲ್ಲವೇ ಇಲ್ಲ ಎಂದು ಹೇಳಲು ಹೊರಟಿದ್ದಾರೆ. ಯಕಶ್ಚಿತ್ 7-8 ಅಡಿ ಎತ್ತರ ಗೋಡೆಯ ಆ ಬದಿಯಲ್ಲಿರುವ ಮತ್ತೊಂದ ನೈಜ ಭಾರತವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ.

ಅಸಲಿಗೆ ಭಾರತದಲ್ಲಿನ ಬಡತನ, ಹಸಿವು, ನಿರುದ್ಯೋಗಗಳಂತಹ ಗಂಭೀರ ಸಮಸ್ಯೆಗಳನ್ನು ಮರೆಮಾಚುವ ಯತ್ನ ಇದೇ ಮೊದಲೇನಲ್ಲ. ಈ ಹಿಂದೆಯೂ ಭಾರತದಲ್ಲಿ ಇಂತಹದ್ದೇ ಒಂದು ಘಟನೆ ನಡೆದಿತ್ತು. ಭಾಗಶಃ ಸ್ವಾತಂತ್ರ್ಯ ಭಾರತದ ಮೊದಲ ಕಪ್ಪು ಇತಿಹಾಸಕ್ಕೆ ಅಂಕಿತ ಹಾಕಿದ ಘಟನೆ ಎಂದೇ ಇದನ್ನು ಬಿಂಬಿಸಲಾಗುತ್ತದೆ.

ಸಂಜಯ್ ಗಾಂಧಿ ಮತ್ತು 150 ಸ್ಲಂ ಜನರ ಸಾವು

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಹಿಂದೆಂದೂ ಕಾಣದ ರಾಜಕೀಯ ಸಂದಿಗ್ಧತೆಗೆ ಒಳಗಾಗಿದ್ದ ಕಾಲ ಅದು. ಇಂದಿರಾ ಗಾಂಧಿ ಈ ದೇಶದ ಪ್ರಧಾನಿಯಾಗಿದ್ದರು, ಅವರ ಮಗ ಸಂಜಯ್ ಗಾಂಧಿ ಅವರ ನೆರಳಿನಂತೆ ವಾಸ್ತವದಲ್ಲಿ ಸೂಪರ್ ಪಿಎಂ ಎಂಬಂತೆ ಕೆಲಸ ನಿರ್ವಹಿಸುತ್ತಿದ್ದರು. ಅವರ ಪ್ರೇರಣೆಯಿಂದಲೇ ಪ್ರಜಾಪ್ರಭುತ್ವದ ಕತ್ತು ಹಿಸುಕುವಂತಹ ತುರ್ತು ಪರಿಸ್ಥಿತಿಯನ್ನು 1975ರಲ್ಲಿ ಭಾರತದ ಮೇಲೆ ಹೇರಲಾಗಿತ್ತು ಎನ್ನುತ್ತದೆ ಈ ದೇಶದ ಇತಿಹಾಸ.

ದೇಶದಲ್ಲಿ ಹಸಿವನ್ನು ನೀಗಿಸಬೇಕು ಎಂಬ ಮಹತ್ವಾಕಾಂಕ್ಷೆ ಹೊಂದಿದ್ದ ಇಂದಿರಾ ಗಾಂಧಿ ಹಸಿರು ಕ್ರಾಂತಿಯ ಘೋಷಣೆ ಕೂಗಿದ್ದರು. ಗರೀಬಿ ಹಠಾವೋ ನಂತಹ ಯೋಜನೆಗಳ ಮೂಲಕ ಈ ದೇಶದಿಂದ ಹಸಿವನ್ನು ಶಾಶ್ವತವಾಗಿ ನೀಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದರು ಎಂಬುದು ಎಷ್ಟು ಸತ್ಯವೋ? ಅವರ ಮಗ ಸಂಜಯ್ ಗಾಂಧಿ ಇಂದಿರಾ ಗುಣಕ್ಕೆ ತದ್ವಿರುದ್ದ ಧೃವದಂತಿದ್ದರು ಎಂಬುದು ಅಷ್ಟೇ ಸತ್ಯ.

ದೆಹಲಿಯಲ್ಲಿರುವ ಸ್ಲಂಗಳನ್ನು ಅಕ್ಷರಶಃ ಈ ದೇಶದ ಶಾಪವೇನೋ ಎಂಬಂತೆ ಪರಿಗಣಿಸಿದ್ದ ಸಂಜಯ್ ಗಾಂಧಿ, ದೆಹಲಿಯನ್ನು ಸ್ಲಂ ಮುಕ್ತ ಹಾಗೂ ವಿದೇಶಿ ಗುಣಮಟ್ಟದ ನಗರವನ್ನಾಗಿ ಮಾಡಬೇಕು ಎಂಬ ಕನಸನ್ನು ಕಂಡಿದ್ದರು. ಅಕ್ಷರಶಃ ಬಡವರ ಭಾವನೆಗೆ ಸ್ಪಂದಿಸುವ ಯಾವ ಔದಾರ್ಯವೂ ಅವರಲ್ಲಿ ಉಳಿದಿರಲಿಲ್ಲ.

ಅದು 1976 ಏಪ್ರಿಲ್ 13ರ ಬೆಳಗ್ಗಿನ ಜಾವ. ರಾಷ್ಟ್ರ ರಾಜಧಾನಿಯ ಗರ್ಭದಲ್ಲಿದ್ದ ತುರ್ಕ್‌ಮನ್ ಗೇಟ್ ಸ್ಲಂ ಪ್ರದೇಶವನ್ನು ಖಾಲಿ ಮಾಡುವ ಸಲುವಾಗಿ ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಜಗಮೋಹನ್ ಹಾಗೂ ಬ್ರಿಜ್ ವರ್ಧನ್ ಅವರೊಂದಿಗೆ ಈ ಸ್ಲಂ ಪ್ರದೇಶಕ್ಕೆ ಭೇಟಿ ನೀಡಿದ್ದರು ಸಂಜಯ್ ಗಾಂಧಿ.

ಸಂಜಯ್ ಗಾಂಧಿ

ಸ್ಲಂನಲ್ಲಿನ ಗುಡಿಸಲುಗಳ ಮೇಲೆ ಏಕಾಏಕಿ ಬುಲ್ಡೋಜರ್‌ಗಳನ್ನು ಹರಿಸಲಾಗಿತ್ತು. ತೀರಾ ಅಮಾನವೀಯವಾಗಿ ಇಡೀ ಸ್ಲಂ ಅನ್ನು ನೆಲಸಮಗೊಳಿಸಲಾಗಿತ್ತು. ಇದನ್ನು ತಡೆಯಲು ಬಂದಂತಹ ಜನರ ಮೇಲೆ ದೆಹಲಿ ಪೊಲೀಸರು ನಿರ್ದಾಕ್ಷೀಣ್ಯವಾಗಿ ಗುಂಡಿನ ಮಳೆಗೆರೆದಿದ್ದರು. ಈ ಘಟನೆಯಲ್ಲಿ ಕನಿಷ್ಟ 150 ಜನ ಬಡವರು-ನಿರ್ಗತಿಕರು ಸಾವನ್ನಪ್ಪಿದ್ದರು. ಕೊನೆಗೆ ಇಲ್ಲಿ ವಾಸವಾಗಿದ್ದ ಸುಮಾರು 70,000 ಜನರನ್ನು ಯಮುನಾ ನದಿ ತೀರದಲ್ಲಿ ಇನ್ನೂ ಅಭಿವೃದ್ಧಿಯಾಗದ ವಸತಿ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು.

ಭಾಗಶಃ ಬ್ರಿಟೀಷ್ ಭಾರತದಲ್ಲೂ ಸಹ ಜಲಿಯನ್ ವಾಲಾಬಾಗ್ ಹೊರತಾಗಿ ಭಾರತೀಯರ ಮೇಲೆ ಹೀಗೊಂದು ಅಮಾನವೀಯ ಸಾಮೂಹಿಕ ಶೂಟ್ಔಟ್ ನಡೆಸಿರುವ ಉದಾಹರಣೆಗಳಿಲ್ಲ. ಆದರೆ, ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು ಕೇವಲ 29 ವರ್ಷದಲ್ಲಿ ಪ್ರಭುತ್ವವೇ ತನ್ನ ಜನರನ್ನು ಅನಾಮತ್ತಾಗಿ ಬೀದಿ ಹೆಣದಂತೆ ಕೇವಲ ಸ್ಲಂ ತೆರವುಗೊಳಿಸುವ ಸಲುವಾಗಿ ಹೊಡೆದು ಹಾಕಿತ್ತು. ಪ್ರಜಾಪ್ರಭುತ್ವದಲ್ಲಿ ಹೀಗೊಂದು ಕರಾಳ ಇತಿಹಾಸಕ್ಕೆ ಅಂಕಿತ ಹಾಕಲಾಗಿತ್ತು.

ಆದರೆ, ಅಂದು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಭಾರತದ ಕರಾಳ ಇತಿಹಾಸಕ್ಕೆ ಸಂಜಯ್ ಗಾಂಧಿ ಹಾಕಿಹೋಗಿದ್ದ ಅಂಕಿತವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅನುಸರಿಸುತ್ತಿದೆಯೇ ಎಂಬ ಅನುಮಾನ ಇದೀಗ ಎಲ್ಲೆಡೆ ಮೂಡುತ್ತಿದೆ.

ಮೋದಿ ಮಾಡುತ್ತಿರುವುದೇನು?

ಅಸಲಿಗೆ ವ್ಯಾಪಾರ ವಹಿವಾಟು ಸೇರಿದಂತೆ ಅನೇಕ ವಿಚಾರಗಳಲ್ಲಿ ಅಮೆರಿಕ-ಭಾರತ ಎರಡು ದೇಶಗಳ ನಡುವಿನ ಸಂಬಂಧದ ಕುರಿತು ಮಾತುಕತೆ ನಡೆಸುವ ಸಲುವಾಗಿ ಡೊನಾಲ್ಡ್ ಟ್ರಂಪ್ ಫೆಬ್ರವರಿ 24ಕ್ಕೆ ಭಾರತಕ್ಕೆ ಎರಡು ದಿನದ ಪ್ರವಾಸದ ಮೇಲೆ ಆಗಮಿಸುತ್ತಿದ್ದಾರೆ.

ಮೊದಲ ದಿನವೇ ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ’ನಮಸ್ತೆ ಟ್ರಂಪ್’ ಎಂಬ ಕಾರ್ಯಕ್ರಮ ಆಯೋಜಿಸಲಾಗಿದೆ. ಅದ್ದೂರಿಯಾಗಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕನಿಷ್ಟ 1 ಲಕ್ಷ ಜನ ಭಾಗವಹಿಸಲಿದ್ದು, ಮೋದಿ ಹಾಗೂ ಟ್ರಂಪ್ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅಮೆರಿಕಾದಿಂದ ನೇರವಾಗಿ ಗುಜರಾತ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುವ ಟ್ರಂಪ್ ಅಲ್ಲಿಂದ ಇಂದಿರಾ ಬ್ರಿಡ್ಜ್ ತನಕ ರಸ್ತೆ ಮಾರ್ಗದಲ್ಲಿ ಚಲಿಸಲಿದ್ದಾರೆ. ಹೀಗಾಗಿ ಈ ಮಾರ್ಗದಲ್ಲಿರುವ ಸ್ಲಂಗಳು ಕಾಣದಂತೆ ಅಲ್ಲಿನ ನಗರಾಡಳಿತ ಮೊದಲು ಸ್ಲಂ ಸುತ್ತಾ 6 ರಿಂದ 7 ಅಡಿ ಎತ್ತರದ ಗೋಡೆ ಕಟ್ಟಿ ಸ್ಲಂಗಳು ಕಾಣದಂತೆ ಮಾಡಲು ಮುಂದಾಗಿವೆ.

ಅಲ್ಲದೆ, ಈಗ ಮೊಟೆರಾ ಕ್ರೀಡಾಂಗಣದ ಪಕ್ಕದಲ್ಲೇ ಇರುವ ಸ್ಲಂ ಜನರನ್ನು ಜಾಗ ಖಾಲಿ ಮಾಡುವಂತೆ ನೋಟೀಸ್ ನೀಡಲಾಗಿದೆ. 45 ಕುಟುಂಬಗಳಲ್ಲಿ ಒಟ್ಟು 200ಕ್ಕೂ ಹೆಚ್ಚು ಜನರು ವಾಸವಿರುವ ಜನರನ್ನು 7 ದಿನಗಳ ಒಳಗಾಗಿ ಜಾಗ ಖಾಲಿ ಮಾಡುವಂತೆ ತಾಕೀತು ಮಾಡಲಾಗಿದೆ.

ಅಸಲಿಗೆ 44 ವರ್ಷಗಳ ಹಿಂದೆ ಸಂಜಯ್ ಗಾಂಧಿ ಮಾಡಿದ ಕೆಲಸಕ್ಕೂ, ಇಂದು ನರೇಂದ್ರ ಮೋದಿ ಮಾಡುತ್ತಿರುವ ಕೆಲಸಕ್ಕೂ ಹೆಚ್ಚೇನು ವ್ಯತ್ಯಾಸವಿಲ್ಲ. ಸಂಜಯ್ ಗಾಂಧಿ ಕಾಲದಲ್ಲಿ ಸ್ಲಂ ತೆರವಿಗೆ ಒತ್ತಾಯಪೂರ್ವಕವಾಗಿ ರಕ್ತಪಾತ ನಡೆಸಲಾಗಿದ್ದರೆ, ಮೋದಿ ಕಾಲದಲ್ಲಿ ನಗರ ನಾಗರೀಕತೆ ಮತ್ತು ಸ್ಲಂಗಳ ನಡುವೆ ಗೋಡೆ ಎಬ್ಬಿಸಲಾಗುತ್ತಿದೆ ಅಷ್ಟೇ. ಆದರೆ, ಈ ಇಬ್ಬರೂ ನಾಯಕರ ಉದ್ದೇಶ ಒಂದೇ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಎಂಬುದು ಇನ್ನೂ ಅಭಿವೃದ್ಧಿ ಹೊಂದುತ್ತಿರುವ ತೃತೀಯ ಜಗತ್ತಿನ ರಾಷ್ಟ್ರ. ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವುದು ಈ ದೇಶವನ್ನೇ. ಸ್ಲಂ ಜನರು, ಬಡವರು ಹಾಗೂ ನಿರುದ್ಯೋಗಿಗಳು ಇರುವ ಈ ಭಾರತವನ್ನೇ ಪ್ರಧಾನಿ ಮೋದಿ ಪ್ರತಿನಿಧಿಸುತ್ತಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಗಮಿಸುತ್ತಿರುವುದು ಸಹ ಈ ಎಲ್ಲಾ ರೀತಿಯ ಜನರನ್ನೂ ತನ್ನ ಒಡಲಲ್ಲಿಟ್ಟುಕೊಂಡಿರುವ ಭಾರತಕ್ಕೆ.

ಹೀಗಾಗಿ ಇವರು ಗೋಡೆಗಳನ್ನು ಕಟ್ಟಿ ಏನನ್ನು ಮೆರೆಮಾಚಲು ಹೊರಟಿದ್ದಾರೆ. ಇಡೀ ವಿಶ್ವದ ಗುರು ಭಾರತ ಎಂದು ಹೆಮ್ಮೆ ಪಡುವ ಇದೇ ಜನರಿಗೆ ನೈಜ ಭಾರತವನ್ನು ಇಡೀ ವಿಶ್ವಕ್ಕೆ ಪರಿಚಯಿಸಲು ಮುಜುಗುರವೇಕೆ? ಇಲ್ಲಿ ಗೋಡೆ ಕಟ್ಟಲು ಬಳಸಿದ ಅದೇ ಇಟ್ಟಿಗೆ, ಸಿಮೆಂಟು ಬಳಸಿ ಈ ಸ್ಲಂ ಜನರಿಗೆ ಒಂದು ಸೂರನ್ನು, ಉತ್ತಮ ಬದುಕನ್ನು ಕಟ್ಟಿಕೊಡಬಹುದಲ್ಲವೇ? ಈ ಕುರಿತು ಭಾರತೀಯ ಪ್ರಭುತ್ವ ಎಂದಿಗೂ ಯೋಚಿಸಿಯೇ ಇಲ್ಲವೇಕೆ?

ಇವು ಭಾರತದ ಮಟ್ಟಿಗೆ ಗೋಡೆಗಳ ನೆಪದಲ್ಲಿ ಹುಟ್ಟಿದ ಉತ್ತರವಿಲ್ಲದ ಪ್ರಶ್ನೆಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...