Homeಮುಖಪುಟಮಸೀದಿಯಲ್ಲಿ ನಮಾಜ್‌ ಮಾಡಿದ ಹಿಂದೂ ವ್ಯಾಪಾರಿಯ 'ಶುದ್ಧೀಕರಣ'ಕ್ಕೆ ಪ್ರಯತ್ನಿಸಿದ ಬಿಜೆಪಿ ಪರ ದುಷ್ಕರ್ಮಿಗಳು!

ಮಸೀದಿಯಲ್ಲಿ ನಮಾಜ್‌ ಮಾಡಿದ ಹಿಂದೂ ವ್ಯಾಪಾರಿಯ ‘ಶುದ್ಧೀಕರಣ’ಕ್ಕೆ ಪ್ರಯತ್ನಿಸಿದ ಬಿಜೆಪಿ ಪರ ದುಷ್ಕರ್ಮಿಗಳು!

- Advertisement -
- Advertisement -

ಉತ್ತರ ಪ್ರದೇಶದ ಅಲಿಗಢ್‌ನ ಸ್ಥಳೀಯ ಮಸೀದಿಯೊಂದರಲ್ಲಿ ಸ್ವಯಂಪ್ರೇರಿತ ನಮಾಜ್ ಮಾಡಿದ್ದ ಹಿಂದೂ ವ್ಯಾಪಾರಿಯೊಬ್ಬರ ನಡೆಗೆ ಬಿಜೆಪಿಯ ಬಲಪಂಥೀಯ ದುಷ್ಕರ್ಮಿಗಳ ಗುಂಪು ವಿರೋಧ ವ್ಯಕ್ತಪಡಿದೆ. ನಮಾಜ್‌ ಮಾಡಿರುವ ವ್ಯಾಪಾರಿಯು ಔಪಚಾರಿಕವಾಗಿ ”ಶುದ್ದೀಕರಣ” ಆಗಬೇಕು ಎಂದು ದುಷ್ಕರ್ಮಿಗಳ ಸಂಘಟನೆ ಒತ್ತಾಯಿಸಿವೆ. ಮಸೀದಿಯಲ್ಲಿ ನಮಾಜ್‌

ಹಲವಾರು ಸಮುದಾಯಗಳು ವಾಸಿಸುವ ಮಾಮೂ ಭಂಜಾ ಪ್ರದೇಶದವರಾಗಿರುವ ಸುನಿಲ್ ರಜನಿ ಅವರು ಗುರುವಾರ ಸಂಜೆ ತಮ್ಮ ಮುಸ್ಲಿಂ ಗೆಳೆಯರೊಂದಿಗೆ ಮಸೀದಿಯಲ್ಲಿ ನಮಾಜ್‌ ಮಾಡಿದ್ದರು. ಅವರ ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಅದಾಗ್ಯೂ, ಬಿಜೆಪಿಯ ಯುವ ಮೋರ್ಚಾ(ಬಿಜೆವೈಎಂ)ದ ಸ್ಥಳೀಯ ನಾಯಕ ಮೋನು ಅಗರ್ವಾಲ್ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, “ರಜನಿ ಅವರ ನಡೆಯು ಧರ್ಮಕ್ಕೆ ಅಪಚಾರ ಎಸಗುವ ಕೃತ್ಯ ಎಂದು ಪರಿಗಣಿಸಲಾಗಿದೆ. ಅವರು ಈ ಬಗ್ಗೆ ಸಾರ್ವಜನಿಕ ಕ್ಷಮೆಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಅಷ್ಟೆ ಅಲ್ಲದೆ, ರಜನಿ ಅವರು ದೇವಸ್ಥಾನದಲ್ಲಿ “ಶುದ್ಧಿಕರಣ” ಕೂಡಾ ನಡೆಸಬೇಕೆಂದು ಮೋನು ಅಗರ್ವಾಲ್ ಒತ್ತಾಯಿಸಿದ್ದಾರೆ. ಮಸೀದಿಯಲ್ಲಿ ನಮಾಜ್‌

ಅಷ್ಟೆ ಅಲ್ಲದೆ, ರಜನಿ ಅವರು ಮಸೀದಿಯಿಂದ ಹೊರಬಂದ ನಂತರ ಕೆಲವು ಬಿಜೆಪಿ ಪರ ಬಲಪಂಥೀಯ ದುಷ್ಕರ್ಮಿಗಳ ಸಂಘಟನೆ ಸದಸ್ಯರು ಅವರ ನಡೆಯು ”ಪ್ರಚೋದನೆ” ಉಂಟು ಮಾಡುತ್ತದೆ ಎಂದು ಆರೋಪಿಸಿದ್ದು, ಅವರಿಗೆ ‘ಗಂಗಾಜಲ’ ಸಿಂಪಡಿಸುವ ಮೂಲಕ ತಕ್ಷಣದ “ಸ್ವಯಂ ಶುದ್ಧೀಕರಣ”ಕ್ಕೆ ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ. ಅದಾಗ್ಯೂ, ಈ ವಿಷಯದ ಬಗ್ಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ವರದಿಗಳು ಉಲ್ಲೇಖಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನೇಪಾಳ | ರಾಜಪ್ರಭುತ್ವ ಮರುಸ್ಥಾಪನೆಗಾಗಿ ಪ್ರತಿಭಟನೆ; ಇಬ್ಬರು ಸಾವು, 45 ಜನರಿಗೆ ಗಾಯ

ನೇಪಾಳ | ರಾಜಪ್ರಭುತ್ವ ಮರುಸ್ಥಾಪನೆಗಾಗಿ ಪ್ರತಿಭಟನೆ; ಇಬ್ಬರು ಸಾವು, 45 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....