Homeಮುಖಪುಟಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಅನ್ನು ಸಹಿಸುವುದಿಲ್ಲ: ಹರಿಯಾಣ ಸಿಎಂ

ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಅನ್ನು ಸಹಿಸುವುದಿಲ್ಲ: ಹರಿಯಾಣ ಸಿಎಂ

- Advertisement -
- Advertisement -

ಗುರುಗಾವ್‌ನಲ್ಲಿನ ತೆರೆದ ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಮಾಡುವುದನ್ನು ಸಹಿಸುವುದಿಲ್ಲ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ. ಈ ಮೊದಲು ಅಲ್ಲಿನ ಹಲವಾರು ಸ್ಥಳಗಳಲ್ಲಿ ನಮಾಜ್ ಮಾಡಲು ಸ್ಥಳೀಯ ಆಡಳಿತ ಅವಕಾಶ ಮಾಡಿಕೊಟ್ಟಿದ್ದನ್ನು ವಾಪಸ್ ಪಡೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರತಿ ಶುಕ್ರವಾರ ಗುರುಗಾವ್‌ನ ಹಲವಾರು ಸಾರ್ವಜನಿಕ ಸ್ಥಳಗಳಲ್ಲಿ ಹಿಂದಿನಿಂದಲೂ ಮುಸ್ಲಿಮರು ನಮಾಜ್ ಮಾಡುತ್ತಾ ಬಂದಿದ್ದರು. ಆದರೆ ಹಿಂದುತ್ವ ಸಂಘಟನೆಗಳ ಆಕ್ಷೇಪ ಮತ್ತು ತಡೆಯಿಂದಾಗಿ ಕೆಲ ತಿಂಗಳುಗಳಿಂದ ಇಲ್ಲಿ ನಮಾಜ್ ಮಾಡಲು ಅಡ್ಡಿಪಡಿಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಟ್ಟರ್ “ಈ ಸಮಸ್ಯೆಯನ್ನು ಬಗೆಹರಿಸುವಂತೆ ಡೆಪ್ಯುಟಿ ಕಮಿಷನರ್ ಮತ್ತು ಪೊಲೀಸರಿಗೆ ಸೂಚಿಸಿದ್ದೇನೆ. ಎಲ್ಲರೂ ತಮ್ಮ ಸ್ವಂತ ಸ್ಥಳಗಳಲ್ಲಿ ಪ್ರಾರ್ಥನೆ, ಪೂಜೆ, ನಮಾಜ್ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಧಾರ್ಮಿಕ ಕೇಂದ್ರಗಳನ್ನು ಅದಕ್ಕಾಗಿಯೇ ಸ್ಥಾಪಿಸಿದ್ದು ಅಲ್ಲಿಯೇ ಹೋಗಿ ಪ್ರಾರ್ಥನೆ ಮಾಡತಕ್ಕದ್ದು. ಆದರೆ ತೆರೆದ ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಮಾಡುವುದನ್ನು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಹಿಂದುತ್ವ ಸಂಘಟನೆಗಳು ಮುಸ್ಲಿಮರ ಪ್ರ್ರಾರ್ಥನೆಗೆ ಅಡ್ಡಿಪಡಿಸುತ್ತಿವೆ. ಸೆಕ್ಟರ್ 37 ರ ಸೈಟ್‌ನಲ್ಲಿ ಡಿಸೆಂಬರ್ 10 ರಂದು ಸಹ ಪ್ರಾರ್ಥನೆಗೆ ಅಡ್ಡಿಪಡಿಸಲಾಗಿದೆ. ಅಲ್ಲಿಗೆ ದೊಡ್ಡ ದೊಡ್ಡ ಲಾರಿಗಳು ಮತ್ತು ವಾಹನಗಳನ್ನು ತಂದು ನಿಲ್ಲಿಸಿದ್ದಲ್ಲದೆ ಜೈಶ್ರೀರಾಂ ಘೋಷಣೆ ಕೂಗಲಾಗಿದೆ. ಇಲ್ಲಿ ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಜನರಲ್ ಬಿಪಿನ್ ರಾವತ್‌ರವರ ಸ್ಮರಣಾ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದ್ದಾರೆ.

2018 ರಲ್ಲಿ ಇದೇ ರೀತಿಯ ಘರ್ಷಣೆಯಾಗಿ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಒಪ್ಪಂದ ನಡೆದು ಸೆಕ್ಟರ್ 37 ನಲ್ಲಿರುವ ಮೈದಾನವು ನಮಾಜ್‌ಗಾಗಿ ಮೀಸಲಿಡಲಾಗಿತ್ತು. ಅಂದು ಗೊತ್ತು ಪಡಿಸಲಾಗಿದ್ದ 29 ಸೈಟ್‌ಗಳಲ್ಲಿ ಇದೂ ಒಂದಾಗಿದೆ.

ಗುರ್ಗಾಂವ್‌ನ ಪಿಡಬ್ಲ್ಯೂಡಿ ವಿಶ್ರಾಂತಿ ಗೃಹದಲ್ಲಿ ಗುರುಗ್ರಾಮ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ (ಜಿಎಂಡಿಎ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಟ್ಟರ್‌ರವರು, “ನಮಾಜ್‌ಗೆ ಅನುಮತಿ ನೀಡಬೇಕಾದ ಹಲವಾರು ಸ್ಥಳಗಳನ್ನು ಅವರು (ಮುಸ್ಲಿಂ ಸಮುದಾಯ) ಹೊಂದಿದ್ದಾರೆಂದು ಹೇಳಿದ್ದಾರೆ. ಅವರ ಕೆಲವು ಆಸ್ತಿಗಳು ಅಥವಾ ವಕ್ಫ್ ಬೋರ್ಡ್ ಅಡಿಯಲ್ಲಿ ಇರುವ ಆಸ್ತಿಗಳನ್ನು ಅತಿಕ್ರಮಿಸಲಾಗಿದೆ … ಅವು ವಾಪಸ್ ಅವರಿಗೆ ಹೇಗೆ ಲಭ್ಯವಾಗುವಂತೆ ಮಾಡಬಹುದು ಎಂಬುದನ್ನು ಚರ್ಚಿಸಲಾಗುತ್ತಿದೆ ಅಥವಾ ಅವರು ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಸಮುದಾಯದವರೊಂದಿಗೆ ಚರ್ಚಿಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲಾಗುವುದು. ಬಹಿರಂಗವಾಗಿ ನಮಾಜ್ ಮಾಡುವುದರಿಂದ ಅಹಿತಕರ ಘಟನೆಗಳು ನಡೆಯುತ್ತವೆ, ನಾವು ಈ ಘರ್ಷಣೆಯನ್ನು ಮುಂದುವರಿಸಲು ಬಿಡುವುದಿಲ್ಲ. ಹಾಗಾಗಿ ಈ ಹಿಂದೆ ನಮಾಜ್‌ಗೆ ನೀಡಿದ್ದ ಅನುಮತಿಗಳನ್ನು ವಾಸಪ್ ಪಡೆದಿದ್ದೇವೆ. ಹೊಸದಾಗಿ ಮಾತುಕತೆ ನಡೆಯುತ್ತದೆ” ಎಂದು ಹೇಳಿದ್ದಾರೆ.

ನಮಾಜ್‌ಗೆ ಅಡ್ಡಿ ಹಿನ್ನೆಲೆಯಲ್ಲಿ ಹರಿಯಾಣ-ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಆಹ್ವಾನ ನೀಡಿದೆ. ಬಹಳಷ್ಟು ಮುಸ್ಲಿಮರು ಅಲ್ಲಿ ಪ್ರಾರ್ಥನೆ ಸಹ ಸಲ್ಲಿಸಿದ್ದಾರೆ.

ಅಲ್ಲದೆ ಗುರುಗ್ರಾಮದ ಸೆಕ್ಟರ್‌ 12 ರಲ್ಲಿ ಕಿರಾಣಿ ಅಂಗಡಿ ನಡೆಸುವ ಅಕ್ಷಯ್ ಯಾದವ್ ಎಂಬುವವರು ನಮಾಜ್‌ಗಾಗಿ ತಮ್ಮ ಅಂಗಡಿ ಸ್ಥಳವನ್ನು ಬಿಟ್ಟುಕೊಡುವುದಾಗಿ ಘೋಷಿಸಿದ್ದು ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ. ಒಂದು ಬಾರಿಗೆ 15 ಜನ ನಮಾಜ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...