Homeಮುಖಪುಟಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಅನ್ನು ಸಹಿಸುವುದಿಲ್ಲ: ಹರಿಯಾಣ ಸಿಎಂ

ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಅನ್ನು ಸಹಿಸುವುದಿಲ್ಲ: ಹರಿಯಾಣ ಸಿಎಂ

- Advertisement -
- Advertisement -

ಗುರುಗಾವ್‌ನಲ್ಲಿನ ತೆರೆದ ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಮಾಡುವುದನ್ನು ಸಹಿಸುವುದಿಲ್ಲ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ. ಈ ಮೊದಲು ಅಲ್ಲಿನ ಹಲವಾರು ಸ್ಥಳಗಳಲ್ಲಿ ನಮಾಜ್ ಮಾಡಲು ಸ್ಥಳೀಯ ಆಡಳಿತ ಅವಕಾಶ ಮಾಡಿಕೊಟ್ಟಿದ್ದನ್ನು ವಾಪಸ್ ಪಡೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರತಿ ಶುಕ್ರವಾರ ಗುರುಗಾವ್‌ನ ಹಲವಾರು ಸಾರ್ವಜನಿಕ ಸ್ಥಳಗಳಲ್ಲಿ ಹಿಂದಿನಿಂದಲೂ ಮುಸ್ಲಿಮರು ನಮಾಜ್ ಮಾಡುತ್ತಾ ಬಂದಿದ್ದರು. ಆದರೆ ಹಿಂದುತ್ವ ಸಂಘಟನೆಗಳ ಆಕ್ಷೇಪ ಮತ್ತು ತಡೆಯಿಂದಾಗಿ ಕೆಲ ತಿಂಗಳುಗಳಿಂದ ಇಲ್ಲಿ ನಮಾಜ್ ಮಾಡಲು ಅಡ್ಡಿಪಡಿಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಟ್ಟರ್ “ಈ ಸಮಸ್ಯೆಯನ್ನು ಬಗೆಹರಿಸುವಂತೆ ಡೆಪ್ಯುಟಿ ಕಮಿಷನರ್ ಮತ್ತು ಪೊಲೀಸರಿಗೆ ಸೂಚಿಸಿದ್ದೇನೆ. ಎಲ್ಲರೂ ತಮ್ಮ ಸ್ವಂತ ಸ್ಥಳಗಳಲ್ಲಿ ಪ್ರಾರ್ಥನೆ, ಪೂಜೆ, ನಮಾಜ್ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಧಾರ್ಮಿಕ ಕೇಂದ್ರಗಳನ್ನು ಅದಕ್ಕಾಗಿಯೇ ಸ್ಥಾಪಿಸಿದ್ದು ಅಲ್ಲಿಯೇ ಹೋಗಿ ಪ್ರಾರ್ಥನೆ ಮಾಡತಕ್ಕದ್ದು. ಆದರೆ ತೆರೆದ ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಮಾಡುವುದನ್ನು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಹಿಂದುತ್ವ ಸಂಘಟನೆಗಳು ಮುಸ್ಲಿಮರ ಪ್ರ್ರಾರ್ಥನೆಗೆ ಅಡ್ಡಿಪಡಿಸುತ್ತಿವೆ. ಸೆಕ್ಟರ್ 37 ರ ಸೈಟ್‌ನಲ್ಲಿ ಡಿಸೆಂಬರ್ 10 ರಂದು ಸಹ ಪ್ರಾರ್ಥನೆಗೆ ಅಡ್ಡಿಪಡಿಸಲಾಗಿದೆ. ಅಲ್ಲಿಗೆ ದೊಡ್ಡ ದೊಡ್ಡ ಲಾರಿಗಳು ಮತ್ತು ವಾಹನಗಳನ್ನು ತಂದು ನಿಲ್ಲಿಸಿದ್ದಲ್ಲದೆ ಜೈಶ್ರೀರಾಂ ಘೋಷಣೆ ಕೂಗಲಾಗಿದೆ. ಇಲ್ಲಿ ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಜನರಲ್ ಬಿಪಿನ್ ರಾವತ್‌ರವರ ಸ್ಮರಣಾ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದ್ದಾರೆ.

2018 ರಲ್ಲಿ ಇದೇ ರೀತಿಯ ಘರ್ಷಣೆಯಾಗಿ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಒಪ್ಪಂದ ನಡೆದು ಸೆಕ್ಟರ್ 37 ನಲ್ಲಿರುವ ಮೈದಾನವು ನಮಾಜ್‌ಗಾಗಿ ಮೀಸಲಿಡಲಾಗಿತ್ತು. ಅಂದು ಗೊತ್ತು ಪಡಿಸಲಾಗಿದ್ದ 29 ಸೈಟ್‌ಗಳಲ್ಲಿ ಇದೂ ಒಂದಾಗಿದೆ.

ಗುರ್ಗಾಂವ್‌ನ ಪಿಡಬ್ಲ್ಯೂಡಿ ವಿಶ್ರಾಂತಿ ಗೃಹದಲ್ಲಿ ಗುರುಗ್ರಾಮ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ (ಜಿಎಂಡಿಎ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಟ್ಟರ್‌ರವರು, “ನಮಾಜ್‌ಗೆ ಅನುಮತಿ ನೀಡಬೇಕಾದ ಹಲವಾರು ಸ್ಥಳಗಳನ್ನು ಅವರು (ಮುಸ್ಲಿಂ ಸಮುದಾಯ) ಹೊಂದಿದ್ದಾರೆಂದು ಹೇಳಿದ್ದಾರೆ. ಅವರ ಕೆಲವು ಆಸ್ತಿಗಳು ಅಥವಾ ವಕ್ಫ್ ಬೋರ್ಡ್ ಅಡಿಯಲ್ಲಿ ಇರುವ ಆಸ್ತಿಗಳನ್ನು ಅತಿಕ್ರಮಿಸಲಾಗಿದೆ … ಅವು ವಾಪಸ್ ಅವರಿಗೆ ಹೇಗೆ ಲಭ್ಯವಾಗುವಂತೆ ಮಾಡಬಹುದು ಎಂಬುದನ್ನು ಚರ್ಚಿಸಲಾಗುತ್ತಿದೆ ಅಥವಾ ಅವರು ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಸಮುದಾಯದವರೊಂದಿಗೆ ಚರ್ಚಿಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲಾಗುವುದು. ಬಹಿರಂಗವಾಗಿ ನಮಾಜ್ ಮಾಡುವುದರಿಂದ ಅಹಿತಕರ ಘಟನೆಗಳು ನಡೆಯುತ್ತವೆ, ನಾವು ಈ ಘರ್ಷಣೆಯನ್ನು ಮುಂದುವರಿಸಲು ಬಿಡುವುದಿಲ್ಲ. ಹಾಗಾಗಿ ಈ ಹಿಂದೆ ನಮಾಜ್‌ಗೆ ನೀಡಿದ್ದ ಅನುಮತಿಗಳನ್ನು ವಾಸಪ್ ಪಡೆದಿದ್ದೇವೆ. ಹೊಸದಾಗಿ ಮಾತುಕತೆ ನಡೆಯುತ್ತದೆ” ಎಂದು ಹೇಳಿದ್ದಾರೆ.

ನಮಾಜ್‌ಗೆ ಅಡ್ಡಿ ಹಿನ್ನೆಲೆಯಲ್ಲಿ ಹರಿಯಾಣ-ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಆಹ್ವಾನ ನೀಡಿದೆ. ಬಹಳಷ್ಟು ಮುಸ್ಲಿಮರು ಅಲ್ಲಿ ಪ್ರಾರ್ಥನೆ ಸಹ ಸಲ್ಲಿಸಿದ್ದಾರೆ.

ಅಲ್ಲದೆ ಗುರುಗ್ರಾಮದ ಸೆಕ್ಟರ್‌ 12 ರಲ್ಲಿ ಕಿರಾಣಿ ಅಂಗಡಿ ನಡೆಸುವ ಅಕ್ಷಯ್ ಯಾದವ್ ಎಂಬುವವರು ನಮಾಜ್‌ಗಾಗಿ ತಮ್ಮ ಅಂಗಡಿ ಸ್ಥಳವನ್ನು ಬಿಟ್ಟುಕೊಡುವುದಾಗಿ ಘೋಷಿಸಿದ್ದು ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ. ಒಂದು ಬಾರಿಗೆ 15 ಜನ ನಮಾಜ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....