Homeಮುಖಪುಟಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಅನ್ನು ಸಹಿಸುವುದಿಲ್ಲ: ಹರಿಯಾಣ ಸಿಎಂ

ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಅನ್ನು ಸಹಿಸುವುದಿಲ್ಲ: ಹರಿಯಾಣ ಸಿಎಂ

- Advertisement -
- Advertisement -

ಗುರುಗಾವ್‌ನಲ್ಲಿನ ತೆರೆದ ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಮಾಡುವುದನ್ನು ಸಹಿಸುವುದಿಲ್ಲ ಎಂದು ಹರಿಯಾಣ ಸಿಎಂ ಮನೋಹರ್ ಲಾಲ್ ಕಟ್ಟರ್ ಹೇಳಿದ್ದಾರೆ. ಈ ಮೊದಲು ಅಲ್ಲಿನ ಹಲವಾರು ಸ್ಥಳಗಳಲ್ಲಿ ನಮಾಜ್ ಮಾಡಲು ಸ್ಥಳೀಯ ಆಡಳಿತ ಅವಕಾಶ ಮಾಡಿಕೊಟ್ಟಿದ್ದನ್ನು ವಾಪಸ್ ಪಡೆಯಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರತಿ ಶುಕ್ರವಾರ ಗುರುಗಾವ್‌ನ ಹಲವಾರು ಸಾರ್ವಜನಿಕ ಸ್ಥಳಗಳಲ್ಲಿ ಹಿಂದಿನಿಂದಲೂ ಮುಸ್ಲಿಮರು ನಮಾಜ್ ಮಾಡುತ್ತಾ ಬಂದಿದ್ದರು. ಆದರೆ ಹಿಂದುತ್ವ ಸಂಘಟನೆಗಳ ಆಕ್ಷೇಪ ಮತ್ತು ತಡೆಯಿಂದಾಗಿ ಕೆಲ ತಿಂಗಳುಗಳಿಂದ ಇಲ್ಲಿ ನಮಾಜ್ ಮಾಡಲು ಅಡ್ಡಿಪಡಿಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕಟ್ಟರ್ “ಈ ಸಮಸ್ಯೆಯನ್ನು ಬಗೆಹರಿಸುವಂತೆ ಡೆಪ್ಯುಟಿ ಕಮಿಷನರ್ ಮತ್ತು ಪೊಲೀಸರಿಗೆ ಸೂಚಿಸಿದ್ದೇನೆ. ಎಲ್ಲರೂ ತಮ್ಮ ಸ್ವಂತ ಸ್ಥಳಗಳಲ್ಲಿ ಪ್ರಾರ್ಥನೆ, ಪೂಜೆ, ನಮಾಜ್ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಧಾರ್ಮಿಕ ಕೇಂದ್ರಗಳನ್ನು ಅದಕ್ಕಾಗಿಯೇ ಸ್ಥಾಪಿಸಿದ್ದು ಅಲ್ಲಿಯೇ ಹೋಗಿ ಪ್ರಾರ್ಥನೆ ಮಾಡತಕ್ಕದ್ದು. ಆದರೆ ತೆರೆದ ಸಾರ್ವಜನಿಕ ಸ್ಥಳಗಳಲ್ಲಿನ ನಮಾಜ್‌ ಮಾಡುವುದನ್ನು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಹಿಂದುತ್ವ ಸಂಘಟನೆಗಳು ಮುಸ್ಲಿಮರ ಪ್ರ್ರಾರ್ಥನೆಗೆ ಅಡ್ಡಿಪಡಿಸುತ್ತಿವೆ. ಸೆಕ್ಟರ್ 37 ರ ಸೈಟ್‌ನಲ್ಲಿ ಡಿಸೆಂಬರ್ 10 ರಂದು ಸಹ ಪ್ರಾರ್ಥನೆಗೆ ಅಡ್ಡಿಪಡಿಸಲಾಗಿದೆ. ಅಲ್ಲಿಗೆ ದೊಡ್ಡ ದೊಡ್ಡ ಲಾರಿಗಳು ಮತ್ತು ವಾಹನಗಳನ್ನು ತಂದು ನಿಲ್ಲಿಸಿದ್ದಲ್ಲದೆ ಜೈಶ್ರೀರಾಂ ಘೋಷಣೆ ಕೂಗಲಾಗಿದೆ. ಇಲ್ಲಿ ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಜನರಲ್ ಬಿಪಿನ್ ರಾವತ್‌ರವರ ಸ್ಮರಣಾ ಕಾರ್ಯಕ್ರಮ ನಡೆಸುವುದಾಗಿ ತಿಳಿಸಿದ್ದಾರೆ.

2018 ರಲ್ಲಿ ಇದೇ ರೀತಿಯ ಘರ್ಷಣೆಯಾಗಿ ನಂತರ ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಒಪ್ಪಂದ ನಡೆದು ಸೆಕ್ಟರ್ 37 ನಲ್ಲಿರುವ ಮೈದಾನವು ನಮಾಜ್‌ಗಾಗಿ ಮೀಸಲಿಡಲಾಗಿತ್ತು. ಅಂದು ಗೊತ್ತು ಪಡಿಸಲಾಗಿದ್ದ 29 ಸೈಟ್‌ಗಳಲ್ಲಿ ಇದೂ ಒಂದಾಗಿದೆ.

ಗುರ್ಗಾಂವ್‌ನ ಪಿಡಬ್ಲ್ಯೂಡಿ ವಿಶ್ರಾಂತಿ ಗೃಹದಲ್ಲಿ ಗುರುಗ್ರಾಮ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ (ಜಿಎಂಡಿಎ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಟ್ಟರ್‌ರವರು, “ನಮಾಜ್‌ಗೆ ಅನುಮತಿ ನೀಡಬೇಕಾದ ಹಲವಾರು ಸ್ಥಳಗಳನ್ನು ಅವರು (ಮುಸ್ಲಿಂ ಸಮುದಾಯ) ಹೊಂದಿದ್ದಾರೆಂದು ಹೇಳಿದ್ದಾರೆ. ಅವರ ಕೆಲವು ಆಸ್ತಿಗಳು ಅಥವಾ ವಕ್ಫ್ ಬೋರ್ಡ್ ಅಡಿಯಲ್ಲಿ ಇರುವ ಆಸ್ತಿಗಳನ್ನು ಅತಿಕ್ರಮಿಸಲಾಗಿದೆ … ಅವು ವಾಪಸ್ ಅವರಿಗೆ ಹೇಗೆ ಲಭ್ಯವಾಗುವಂತೆ ಮಾಡಬಹುದು ಎಂಬುದನ್ನು ಚರ್ಚಿಸಲಾಗುತ್ತಿದೆ ಅಥವಾ ಅವರು ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಸಮುದಾಯದವರೊಂದಿಗೆ ಚರ್ಚಿಸಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲಾಗುವುದು. ಬಹಿರಂಗವಾಗಿ ನಮಾಜ್ ಮಾಡುವುದರಿಂದ ಅಹಿತಕರ ಘಟನೆಗಳು ನಡೆಯುತ್ತವೆ, ನಾವು ಈ ಘರ್ಷಣೆಯನ್ನು ಮುಂದುವರಿಸಲು ಬಿಡುವುದಿಲ್ಲ. ಹಾಗಾಗಿ ಈ ಹಿಂದೆ ನಮಾಜ್‌ಗೆ ನೀಡಿದ್ದ ಅನುಮತಿಗಳನ್ನು ವಾಸಪ್ ಪಡೆದಿದ್ದೇವೆ. ಹೊಸದಾಗಿ ಮಾತುಕತೆ ನಡೆಯುತ್ತದೆ” ಎಂದು ಹೇಳಿದ್ದಾರೆ.

ನಮಾಜ್‌ಗೆ ಅಡ್ಡಿ ಹಿನ್ನೆಲೆಯಲ್ಲಿ ಹರಿಯಾಣ-ದೆಹಲಿ ಗಡಿಯಲ್ಲಿರುವ 5 ಸಿಖ್ ಗುರುದ್ವಾರಗಳ ಮೇಲ್ವಿಚಾರಣ ಸಮಿತಿಯು ತಮ್ಮ ಗುರುದ್ವಾರಗಳನ್ನು ಮುಸ್ಲಿಮರು ನಮಾಜ್ ಮಾಡಲು ಬಳಸಬಹುದು ಎಂದು ಆಹ್ವಾನ ನೀಡಿದೆ. ಬಹಳಷ್ಟು ಮುಸ್ಲಿಮರು ಅಲ್ಲಿ ಪ್ರಾರ್ಥನೆ ಸಹ ಸಲ್ಲಿಸಿದ್ದಾರೆ.

ಅಲ್ಲದೆ ಗುರುಗ್ರಾಮದ ಸೆಕ್ಟರ್‌ 12 ರಲ್ಲಿ ಕಿರಾಣಿ ಅಂಗಡಿ ನಡೆಸುವ ಅಕ್ಷಯ್ ಯಾದವ್ ಎಂಬುವವರು ನಮಾಜ್‌ಗಾಗಿ ತಮ್ಮ ಅಂಗಡಿ ಸ್ಥಳವನ್ನು ಬಿಟ್ಟುಕೊಡುವುದಾಗಿ ಘೋಷಿಸಿದ್ದು ಮುಸ್ಲಿಮರು ಬಂದು ಪ್ರಾರ್ಥನೆ ಸಲ್ಲಿಸಬಹುದು ಎಂದು ಆಹ್ವಾನ ನೀಡಿದ್ದಾರೆ. ಒಂದು ಬಾರಿಗೆ 15 ಜನ ನಮಾಜ್ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ಗುರುಗ್ರಾಮದಲ್ಲಿ ಮುಸ್ಲಿಮರು ಪ್ರಾರ್ಥನೆ ಮಾಡಲು ಹಿಂದುತ್ವ ಸಂಘಟನೆಗಳ ಅಡ್ಡಿ: ನಮ್ಮಲ್ಲಿಗೆ ಬನ್ನಿ ಎಂದ ಸಿಖ್ ಗುರುದ್ವಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...