Homeಕರ್ನಾಟಕರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: 'ನಮ್ದು ಬ್ರ್ಯಾಂಡ್' ಆರಂಭ

ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

- Advertisement -
- Advertisement -

ಚಾಮರಾಜನಗರದಲ್ಲಿ ವಿಷಮುಕ್ತ ಆಹಾರೋತ್ಪನ್ನಗಳ ನೇರ ಮಾರಾಟದ “ನಮ್ದು ಬ್ರ್ಯಾಂಡ್” ಮಳಿಗೆ ನಿನ್ನೆ (ಗಾಂಧಿ ಜಯಂತಿ) ಉದ್ಘಾಟನೆಯಾಗಿದ್ದು, ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

ಇಂದು ಸರ್ಕಾರಗಳು ರೈತಪರವಾಗಿಲ್ಲ. ಬೀಜ ಗೊಬ್ಬರ ಸೇರಿ ಎಲ್ಲದರ ಬೆಲೆ ಏರಿಸುವುದರೊಂದಗೆ ಕನಿಷ್ಟ ಬೆಂಬಲ ಬೆಲೆ ನೀಡಲು ವಿಫಲವಾಗುತ್ತಿವೆ. ಇಂಥಹ ಕಷ್ಟದ ಪರಿಸ್ಥಿತಿಯಲ್ಲಿ ರೈತರು ಒಳ್ಳೆಯ ಬೆಳೆ ಬೆಳೆದರೂ ಅವರಿಗೆ ಲಾಭವಾಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಇನ್ನು ಹೆಚ್ಚಿನ ಇಳುವರಿಯ ಮೋಹಕ್ಕೆ ಬಿದ್ದು ಕೃಷಿಯಲ್ಲಿ ರಾಸಯನಿಕಗಳನ್ನು ಬಳಸುವವರೆ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಅಮೃತಭೂಮಿ ಸುಸ್ಥಿರ ಅಭಿವೃದ್ದಿ ಕೇಂದ್ರ ಮತ್ತು ಕ.ರಾ.ರೈ.ಸಂಘ, ಹಸಿರು ಸೇನೆ ಮಾಡುತ್ತಿರುವ ವಿನೂತನ ಪ್ರಯೋಗವೇ ‘ನಮ್ದು’ ಬ್ರ್ಯಾಂಡ್ ಆಗಿದೆ.

ಮಧ್ಯವರ್ತಿಗಳ ಹಾವಳಿಯಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಹಿಂದೆಂದಿಗಿಂತ ಇಂದು ಅತಿ ಮುಖ್ಯವಾಗಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕೂಡ ರೈತರಿಗಿದ್ದ ಅಲ್ಪಸ್ವಲ್ಪ ಮಾರುಕಟ್ಟೆಯ ಭದ್ರತೆಯನ್ನು ಕಸಿದುಕೊಂಡು ಕೃಷಿ ಮಾರುಕಟ್ಟೆಯನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ಹೊರಟಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಂದ ನೇರ ಗ್ರಾಹಕರಿಗೆ ತಲುಪಿಸಲು ನಮ್ದು ಬ್ರ್ಯಾಂಡ್‌ನ ಉದ್ದೇಶ ಎಂದು ಅಮೃತಭೂಮಿ ಟ್ರಸ್ಟ್ ಹೇಳಿದೆ.

ಅದರ ಮೊದಲ ಮಾರಾಟ ಮಳಿಗೆಯು ಚಾಮರಾಜನಗರದಲ್ಲಿ ಆರಂಭವಾಗಿದ್ದು, ಇಲ್ಲಿ ರೈತರು ಬೆಳೆದ ಸಿರಿಧಾನ್ಯಗಳು, ದವಸ ಧಾನ್ಯಗಳು, ಹಣ್ಣು, ತರಕಾರಿ, ಸೊಪ್ಪು, ಜೇನುತುಪ್ಪ, ಬೆಲ್ಲ, ಗಾಣದಲ್ಲಿ ತಯಾರಿಸಿದ ಎಣ್ಣೆ ಮೊದಲಾದ ಆಹಾರ ಪದಾರ್ಥಗಳನ್ನು ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಕನಸುಗಳಲ್ಲಿ, ಮಧ್ಯವರ್ತಿಗಳಿಲ್ಲದ ನೇರ ಮಾರುಕಟ್ಟೆ ಕಲ್ಪನೆಯೂ ಕೂಡ ಒಂದಾಗಿತ್ತು. ಸಹಕಾರ ವ್ಯವಸ್ಥೆಯಲ್ಲಿ ಯಶಸ್ಸು ಕಂಡಿರುವ ಹಾಲು ಮತ್ತು ಹಾಲಿನ ಉಪಉತ್ಪನ್ನಗಳ ರೀತಿಯೇ ರೈತರು ಬೆಳೆಯುವ ಎಲ್ಲಾ ರೀತಿಯ ದವಸ ಧಾನ್ಯಗಳು, ಹಣ್ಣು ತರಕಾರಿಗಳು ಮತ್ತು ಅದರ ಉಪ ಉತ್ಪನ್ನಗಳನ್ನು ಇಡೀ ಕರ್ನಾಟಕದ ರೈತರು ಒಂದೇ ಬ್ರಾಂಡ್‌ನ ಕೆಳಗೆ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ವ್ಯವಸ್ಥೆಯನ್ನು ಕಟ್ಟುವುದರ ಮೂಲಕ ಗಾಂಧೀಜಿಯವರು ಕಂಡಿದ್ದ ಗ್ರಾಮಸ್ವ ರಾಜ್ಯದ ಕನಸನ್ನು ನನಸು ಮಾಡಲು ಪ್ರಯತ್ನಪಟ್ಟಿದ್ದರು. ಈ ಬ್ರಾಂಡ್‌ಗೆ “ನಮ್ದು” ಎನ್ನುವ ಹೆಸರನ್ನು ಕೂಡ ಕೊಟ್ಟಿದ್ದರು ಅದನ್ನೇ ನಾವು ಮುಂದುವರೆಸಿದ್ದೇವೆ ಎಂದು ಟ್ರಸ್ಟ್ ಹೇಳಿದೆ.

ಇದನ್ನೂ ಓದಿ: ಗಾಂಧಿ ಜಯಂತಿಯಂದು ಕೃಷಿ ಮಸೂದೆ ವಿರೋಧಿಸಿ ’ಅನ್ನದಾತ’ರ ಉಪವಾಸ ಸತ್ಯಾಗ್ರಹ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಮೃತಭೂಮಿ ಅಂತರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಕೇಂದ್ರ, ನಿಸರ್ಗ ಟ್ರಸ್ಟ್, ನಿಸರ್ಗ ನೈಸರ್ಗಿಕ ಸಾವಯವ ಕೃಷಿಕರ ಸಂಘ, ಗುರುಮಲ್ಲೇಶ್ವರ ಸಾವಯವ ಕೃಷಿಕರ ಸಂಘ, ಮಹದೇಶ್ವರ ಜಿಲ್ಲಾ ಸಾವಯವ ಕೃಷಿಕರ ಸಂಘಗಳ ಸಹಯೋಗದಲ್ಲಿ ಈ ಮಳಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚೆಗೆ ಸಾವಯವ ಕೃಷಿ ಮತ್ತು ಸಾವಯವ ಉತ್ಪನ್ನಗಳಿಗೆ ಮಹತ್ವ ಹೆಚ್ಚಾಗುತ್ತಿರುವುದು ಒಂದು ಒಳ್ಳೆಯ ಬೆಳವಣಿಗೆಯಾಗಿದೆ. ಕೃಷಿ ಕ್ಷೇತ್ರಕ್ಕೆ ಉಳಿಗಾಲವಿಲ್ಲದಂತೆ ಹುನ್ನಾರ ಮಾಡುತ್ತಿರುವ ಕಾರ್ಪೋರೇಟ್ ಪ್ರಣೀತ ಸರ್ಕಾರಗಳ ಯೋಜನೆ ಮತ್ತು ಕಾನೂನುಗಳ ನಡುವೆ ಇಂತಹ ಸಣ್ಣ ಸಣ್ಣ ಕೆಲಸಗಳು ಮರುಭೂಮಿಯಲ್ಲಿ ಓಯಸಿಸ್‌ನಂತೆ ಕಾಣಿಸುತ್ತದೆ. ಹಾಗಾಗಿ ಇದನ್ನು ಬೆಂಬಲಿಸಿ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗುವಂತೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕನ ಕರ್ತವ್ಯವಾಗಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...