Homeಕರ್ನಾಟಕರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: 'ನಮ್ದು ಬ್ರ್ಯಾಂಡ್' ಆರಂಭ

ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

- Advertisement -
- Advertisement -

ಚಾಮರಾಜನಗರದಲ್ಲಿ ವಿಷಮುಕ್ತ ಆಹಾರೋತ್ಪನ್ನಗಳ ನೇರ ಮಾರಾಟದ “ನಮ್ದು ಬ್ರ್ಯಾಂಡ್” ಮಳಿಗೆ ನಿನ್ನೆ (ಗಾಂಧಿ ಜಯಂತಿ) ಉದ್ಘಾಟನೆಯಾಗಿದ್ದು, ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

ಇಂದು ಸರ್ಕಾರಗಳು ರೈತಪರವಾಗಿಲ್ಲ. ಬೀಜ ಗೊಬ್ಬರ ಸೇರಿ ಎಲ್ಲದರ ಬೆಲೆ ಏರಿಸುವುದರೊಂದಗೆ ಕನಿಷ್ಟ ಬೆಂಬಲ ಬೆಲೆ ನೀಡಲು ವಿಫಲವಾಗುತ್ತಿವೆ. ಇಂಥಹ ಕಷ್ಟದ ಪರಿಸ್ಥಿತಿಯಲ್ಲಿ ರೈತರು ಒಳ್ಳೆಯ ಬೆಳೆ ಬೆಳೆದರೂ ಅವರಿಗೆ ಲಾಭವಾಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಇನ್ನು ಹೆಚ್ಚಿನ ಇಳುವರಿಯ ಮೋಹಕ್ಕೆ ಬಿದ್ದು ಕೃಷಿಯಲ್ಲಿ ರಾಸಯನಿಕಗಳನ್ನು ಬಳಸುವವರೆ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಅಮೃತಭೂಮಿ ಸುಸ್ಥಿರ ಅಭಿವೃದ್ದಿ ಕೇಂದ್ರ ಮತ್ತು ಕ.ರಾ.ರೈ.ಸಂಘ, ಹಸಿರು ಸೇನೆ ಮಾಡುತ್ತಿರುವ ವಿನೂತನ ಪ್ರಯೋಗವೇ ‘ನಮ್ದು’ ಬ್ರ್ಯಾಂಡ್ ಆಗಿದೆ.

ಮಧ್ಯವರ್ತಿಗಳ ಹಾವಳಿಯಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಹಿಂದೆಂದಿಗಿಂತ ಇಂದು ಅತಿ ಮುಖ್ಯವಾಗಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕೂಡ ರೈತರಿಗಿದ್ದ ಅಲ್ಪಸ್ವಲ್ಪ ಮಾರುಕಟ್ಟೆಯ ಭದ್ರತೆಯನ್ನು ಕಸಿದುಕೊಂಡು ಕೃಷಿ ಮಾರುಕಟ್ಟೆಯನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ಹೊರಟಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಂದ ನೇರ ಗ್ರಾಹಕರಿಗೆ ತಲುಪಿಸಲು ನಮ್ದು ಬ್ರ್ಯಾಂಡ್‌ನ ಉದ್ದೇಶ ಎಂದು ಅಮೃತಭೂಮಿ ಟ್ರಸ್ಟ್ ಹೇಳಿದೆ.

ಅದರ ಮೊದಲ ಮಾರಾಟ ಮಳಿಗೆಯು ಚಾಮರಾಜನಗರದಲ್ಲಿ ಆರಂಭವಾಗಿದ್ದು, ಇಲ್ಲಿ ರೈತರು ಬೆಳೆದ ಸಿರಿಧಾನ್ಯಗಳು, ದವಸ ಧಾನ್ಯಗಳು, ಹಣ್ಣು, ತರಕಾರಿ, ಸೊಪ್ಪು, ಜೇನುತುಪ್ಪ, ಬೆಲ್ಲ, ಗಾಣದಲ್ಲಿ ತಯಾರಿಸಿದ ಎಣ್ಣೆ ಮೊದಲಾದ ಆಹಾರ ಪದಾರ್ಥಗಳನ್ನು ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಕನಸುಗಳಲ್ಲಿ, ಮಧ್ಯವರ್ತಿಗಳಿಲ್ಲದ ನೇರ ಮಾರುಕಟ್ಟೆ ಕಲ್ಪನೆಯೂ ಕೂಡ ಒಂದಾಗಿತ್ತು. ಸಹಕಾರ ವ್ಯವಸ್ಥೆಯಲ್ಲಿ ಯಶಸ್ಸು ಕಂಡಿರುವ ಹಾಲು ಮತ್ತು ಹಾಲಿನ ಉಪಉತ್ಪನ್ನಗಳ ರೀತಿಯೇ ರೈತರು ಬೆಳೆಯುವ ಎಲ್ಲಾ ರೀತಿಯ ದವಸ ಧಾನ್ಯಗಳು, ಹಣ್ಣು ತರಕಾರಿಗಳು ಮತ್ತು ಅದರ ಉಪ ಉತ್ಪನ್ನಗಳನ್ನು ಇಡೀ ಕರ್ನಾಟಕದ ರೈತರು ಒಂದೇ ಬ್ರಾಂಡ್‌ನ ಕೆಳಗೆ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ವ್ಯವಸ್ಥೆಯನ್ನು ಕಟ್ಟುವುದರ ಮೂಲಕ ಗಾಂಧೀಜಿಯವರು ಕಂಡಿದ್ದ ಗ್ರಾಮಸ್ವ ರಾಜ್ಯದ ಕನಸನ್ನು ನನಸು ಮಾಡಲು ಪ್ರಯತ್ನಪಟ್ಟಿದ್ದರು. ಈ ಬ್ರಾಂಡ್‌ಗೆ “ನಮ್ದು” ಎನ್ನುವ ಹೆಸರನ್ನು ಕೂಡ ಕೊಟ್ಟಿದ್ದರು ಅದನ್ನೇ ನಾವು ಮುಂದುವರೆಸಿದ್ದೇವೆ ಎಂದು ಟ್ರಸ್ಟ್ ಹೇಳಿದೆ.

ಇದನ್ನೂ ಓದಿ: ಗಾಂಧಿ ಜಯಂತಿಯಂದು ಕೃಷಿ ಮಸೂದೆ ವಿರೋಧಿಸಿ ’ಅನ್ನದಾತ’ರ ಉಪವಾಸ ಸತ್ಯಾಗ್ರಹ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಮೃತಭೂಮಿ ಅಂತರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಕೇಂದ್ರ, ನಿಸರ್ಗ ಟ್ರಸ್ಟ್, ನಿಸರ್ಗ ನೈಸರ್ಗಿಕ ಸಾವಯವ ಕೃಷಿಕರ ಸಂಘ, ಗುರುಮಲ್ಲೇಶ್ವರ ಸಾವಯವ ಕೃಷಿಕರ ಸಂಘ, ಮಹದೇಶ್ವರ ಜಿಲ್ಲಾ ಸಾವಯವ ಕೃಷಿಕರ ಸಂಘಗಳ ಸಹಯೋಗದಲ್ಲಿ ಈ ಮಳಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚೆಗೆ ಸಾವಯವ ಕೃಷಿ ಮತ್ತು ಸಾವಯವ ಉತ್ಪನ್ನಗಳಿಗೆ ಮಹತ್ವ ಹೆಚ್ಚಾಗುತ್ತಿರುವುದು ಒಂದು ಒಳ್ಳೆಯ ಬೆಳವಣಿಗೆಯಾಗಿದೆ. ಕೃಷಿ ಕ್ಷೇತ್ರಕ್ಕೆ ಉಳಿಗಾಲವಿಲ್ಲದಂತೆ ಹುನ್ನಾರ ಮಾಡುತ್ತಿರುವ ಕಾರ್ಪೋರೇಟ್ ಪ್ರಣೀತ ಸರ್ಕಾರಗಳ ಯೋಜನೆ ಮತ್ತು ಕಾನೂನುಗಳ ನಡುವೆ ಇಂತಹ ಸಣ್ಣ ಸಣ್ಣ ಕೆಲಸಗಳು ಮರುಭೂಮಿಯಲ್ಲಿ ಓಯಸಿಸ್‌ನಂತೆ ಕಾಣಿಸುತ್ತದೆ. ಹಾಗಾಗಿ ಇದನ್ನು ಬೆಂಬಲಿಸಿ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗುವಂತೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕನ ಕರ್ತವ್ಯವಾಗಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...