Homeಕರ್ನಾಟಕರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: 'ನಮ್ದು ಬ್ರ್ಯಾಂಡ್' ಆರಂಭ

ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

- Advertisement -
- Advertisement -

ಚಾಮರಾಜನಗರದಲ್ಲಿ ವಿಷಮುಕ್ತ ಆಹಾರೋತ್ಪನ್ನಗಳ ನೇರ ಮಾರಾಟದ “ನಮ್ದು ಬ್ರ್ಯಾಂಡ್” ಮಳಿಗೆ ನಿನ್ನೆ (ಗಾಂಧಿ ಜಯಂತಿ) ಉದ್ಘಾಟನೆಯಾಗಿದ್ದು, ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

ಇಂದು ಸರ್ಕಾರಗಳು ರೈತಪರವಾಗಿಲ್ಲ. ಬೀಜ ಗೊಬ್ಬರ ಸೇರಿ ಎಲ್ಲದರ ಬೆಲೆ ಏರಿಸುವುದರೊಂದಗೆ ಕನಿಷ್ಟ ಬೆಂಬಲ ಬೆಲೆ ನೀಡಲು ವಿಫಲವಾಗುತ್ತಿವೆ. ಇಂಥಹ ಕಷ್ಟದ ಪರಿಸ್ಥಿತಿಯಲ್ಲಿ ರೈತರು ಒಳ್ಳೆಯ ಬೆಳೆ ಬೆಳೆದರೂ ಅವರಿಗೆ ಲಾಭವಾಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಇನ್ನು ಹೆಚ್ಚಿನ ಇಳುವರಿಯ ಮೋಹಕ್ಕೆ ಬಿದ್ದು ಕೃಷಿಯಲ್ಲಿ ರಾಸಯನಿಕಗಳನ್ನು ಬಳಸುವವರೆ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಅಮೃತಭೂಮಿ ಸುಸ್ಥಿರ ಅಭಿವೃದ್ದಿ ಕೇಂದ್ರ ಮತ್ತು ಕ.ರಾ.ರೈ.ಸಂಘ, ಹಸಿರು ಸೇನೆ ಮಾಡುತ್ತಿರುವ ವಿನೂತನ ಪ್ರಯೋಗವೇ ‘ನಮ್ದು’ ಬ್ರ್ಯಾಂಡ್ ಆಗಿದೆ.

ಮಧ್ಯವರ್ತಿಗಳ ಹಾವಳಿಯಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಹಿಂದೆಂದಿಗಿಂತ ಇಂದು ಅತಿ ಮುಖ್ಯವಾಗಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕೂಡ ರೈತರಿಗಿದ್ದ ಅಲ್ಪಸ್ವಲ್ಪ ಮಾರುಕಟ್ಟೆಯ ಭದ್ರತೆಯನ್ನು ಕಸಿದುಕೊಂಡು ಕೃಷಿ ಮಾರುಕಟ್ಟೆಯನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ಹೊರಟಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಂದ ನೇರ ಗ್ರಾಹಕರಿಗೆ ತಲುಪಿಸಲು ನಮ್ದು ಬ್ರ್ಯಾಂಡ್‌ನ ಉದ್ದೇಶ ಎಂದು ಅಮೃತಭೂಮಿ ಟ್ರಸ್ಟ್ ಹೇಳಿದೆ.

ಅದರ ಮೊದಲ ಮಾರಾಟ ಮಳಿಗೆಯು ಚಾಮರಾಜನಗರದಲ್ಲಿ ಆರಂಭವಾಗಿದ್ದು, ಇಲ್ಲಿ ರೈತರು ಬೆಳೆದ ಸಿರಿಧಾನ್ಯಗಳು, ದವಸ ಧಾನ್ಯಗಳು, ಹಣ್ಣು, ತರಕಾರಿ, ಸೊಪ್ಪು, ಜೇನುತುಪ್ಪ, ಬೆಲ್ಲ, ಗಾಣದಲ್ಲಿ ತಯಾರಿಸಿದ ಎಣ್ಣೆ ಮೊದಲಾದ ಆಹಾರ ಪದಾರ್ಥಗಳನ್ನು ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಕನಸುಗಳಲ್ಲಿ, ಮಧ್ಯವರ್ತಿಗಳಿಲ್ಲದ ನೇರ ಮಾರುಕಟ್ಟೆ ಕಲ್ಪನೆಯೂ ಕೂಡ ಒಂದಾಗಿತ್ತು. ಸಹಕಾರ ವ್ಯವಸ್ಥೆಯಲ್ಲಿ ಯಶಸ್ಸು ಕಂಡಿರುವ ಹಾಲು ಮತ್ತು ಹಾಲಿನ ಉಪಉತ್ಪನ್ನಗಳ ರೀತಿಯೇ ರೈತರು ಬೆಳೆಯುವ ಎಲ್ಲಾ ರೀತಿಯ ದವಸ ಧಾನ್ಯಗಳು, ಹಣ್ಣು ತರಕಾರಿಗಳು ಮತ್ತು ಅದರ ಉಪ ಉತ್ಪನ್ನಗಳನ್ನು ಇಡೀ ಕರ್ನಾಟಕದ ರೈತರು ಒಂದೇ ಬ್ರಾಂಡ್‌ನ ಕೆಳಗೆ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ವ್ಯವಸ್ಥೆಯನ್ನು ಕಟ್ಟುವುದರ ಮೂಲಕ ಗಾಂಧೀಜಿಯವರು ಕಂಡಿದ್ದ ಗ್ರಾಮಸ್ವ ರಾಜ್ಯದ ಕನಸನ್ನು ನನಸು ಮಾಡಲು ಪ್ರಯತ್ನಪಟ್ಟಿದ್ದರು. ಈ ಬ್ರಾಂಡ್‌ಗೆ “ನಮ್ದು” ಎನ್ನುವ ಹೆಸರನ್ನು ಕೂಡ ಕೊಟ್ಟಿದ್ದರು ಅದನ್ನೇ ನಾವು ಮುಂದುವರೆಸಿದ್ದೇವೆ ಎಂದು ಟ್ರಸ್ಟ್ ಹೇಳಿದೆ.

ಇದನ್ನೂ ಓದಿ: ಗಾಂಧಿ ಜಯಂತಿಯಂದು ಕೃಷಿ ಮಸೂದೆ ವಿರೋಧಿಸಿ ’ಅನ್ನದಾತ’ರ ಉಪವಾಸ ಸತ್ಯಾಗ್ರಹ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಮೃತಭೂಮಿ ಅಂತರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಕೇಂದ್ರ, ನಿಸರ್ಗ ಟ್ರಸ್ಟ್, ನಿಸರ್ಗ ನೈಸರ್ಗಿಕ ಸಾವಯವ ಕೃಷಿಕರ ಸಂಘ, ಗುರುಮಲ್ಲೇಶ್ವರ ಸಾವಯವ ಕೃಷಿಕರ ಸಂಘ, ಮಹದೇಶ್ವರ ಜಿಲ್ಲಾ ಸಾವಯವ ಕೃಷಿಕರ ಸಂಘಗಳ ಸಹಯೋಗದಲ್ಲಿ ಈ ಮಳಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚೆಗೆ ಸಾವಯವ ಕೃಷಿ ಮತ್ತು ಸಾವಯವ ಉತ್ಪನ್ನಗಳಿಗೆ ಮಹತ್ವ ಹೆಚ್ಚಾಗುತ್ತಿರುವುದು ಒಂದು ಒಳ್ಳೆಯ ಬೆಳವಣಿಗೆಯಾಗಿದೆ. ಕೃಷಿ ಕ್ಷೇತ್ರಕ್ಕೆ ಉಳಿಗಾಲವಿಲ್ಲದಂತೆ ಹುನ್ನಾರ ಮಾಡುತ್ತಿರುವ ಕಾರ್ಪೋರೇಟ್ ಪ್ರಣೀತ ಸರ್ಕಾರಗಳ ಯೋಜನೆ ಮತ್ತು ಕಾನೂನುಗಳ ನಡುವೆ ಇಂತಹ ಸಣ್ಣ ಸಣ್ಣ ಕೆಲಸಗಳು ಮರುಭೂಮಿಯಲ್ಲಿ ಓಯಸಿಸ್‌ನಂತೆ ಕಾಣಿಸುತ್ತದೆ. ಹಾಗಾಗಿ ಇದನ್ನು ಬೆಂಬಲಿಸಿ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗುವಂತೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕನ ಕರ್ತವ್ಯವಾಗಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...