Homeಕರ್ನಾಟಕರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: 'ನಮ್ದು ಬ್ರ್ಯಾಂಡ್' ಆರಂಭ

ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

- Advertisement -
- Advertisement -

ಚಾಮರಾಜನಗರದಲ್ಲಿ ವಿಷಮುಕ್ತ ಆಹಾರೋತ್ಪನ್ನಗಳ ನೇರ ಮಾರಾಟದ “ನಮ್ದು ಬ್ರ್ಯಾಂಡ್” ಮಳಿಗೆ ನಿನ್ನೆ (ಗಾಂಧಿ ಜಯಂತಿ) ಉದ್ಘಾಟನೆಯಾಗಿದ್ದು, ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

ಇಂದು ಸರ್ಕಾರಗಳು ರೈತಪರವಾಗಿಲ್ಲ. ಬೀಜ ಗೊಬ್ಬರ ಸೇರಿ ಎಲ್ಲದರ ಬೆಲೆ ಏರಿಸುವುದರೊಂದಗೆ ಕನಿಷ್ಟ ಬೆಂಬಲ ಬೆಲೆ ನೀಡಲು ವಿಫಲವಾಗುತ್ತಿವೆ. ಇಂಥಹ ಕಷ್ಟದ ಪರಿಸ್ಥಿತಿಯಲ್ಲಿ ರೈತರು ಒಳ್ಳೆಯ ಬೆಳೆ ಬೆಳೆದರೂ ಅವರಿಗೆ ಲಾಭವಾಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಇನ್ನು ಹೆಚ್ಚಿನ ಇಳುವರಿಯ ಮೋಹಕ್ಕೆ ಬಿದ್ದು ಕೃಷಿಯಲ್ಲಿ ರಾಸಯನಿಕಗಳನ್ನು ಬಳಸುವವರೆ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಅಮೃತಭೂಮಿ ಸುಸ್ಥಿರ ಅಭಿವೃದ್ದಿ ಕೇಂದ್ರ ಮತ್ತು ಕ.ರಾ.ರೈ.ಸಂಘ, ಹಸಿರು ಸೇನೆ ಮಾಡುತ್ತಿರುವ ವಿನೂತನ ಪ್ರಯೋಗವೇ ‘ನಮ್ದು’ ಬ್ರ್ಯಾಂಡ್ ಆಗಿದೆ.

ಮಧ್ಯವರ್ತಿಗಳ ಹಾವಳಿಯಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಹಿಂದೆಂದಿಗಿಂತ ಇಂದು ಅತಿ ಮುಖ್ಯವಾಗಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕೂಡ ರೈತರಿಗಿದ್ದ ಅಲ್ಪಸ್ವಲ್ಪ ಮಾರುಕಟ್ಟೆಯ ಭದ್ರತೆಯನ್ನು ಕಸಿದುಕೊಂಡು ಕೃಷಿ ಮಾರುಕಟ್ಟೆಯನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ಹೊರಟಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಂದ ನೇರ ಗ್ರಾಹಕರಿಗೆ ತಲುಪಿಸಲು ನಮ್ದು ಬ್ರ್ಯಾಂಡ್‌ನ ಉದ್ದೇಶ ಎಂದು ಅಮೃತಭೂಮಿ ಟ್ರಸ್ಟ್ ಹೇಳಿದೆ.

ಅದರ ಮೊದಲ ಮಾರಾಟ ಮಳಿಗೆಯು ಚಾಮರಾಜನಗರದಲ್ಲಿ ಆರಂಭವಾಗಿದ್ದು, ಇಲ್ಲಿ ರೈತರು ಬೆಳೆದ ಸಿರಿಧಾನ್ಯಗಳು, ದವಸ ಧಾನ್ಯಗಳು, ಹಣ್ಣು, ತರಕಾರಿ, ಸೊಪ್ಪು, ಜೇನುತುಪ್ಪ, ಬೆಲ್ಲ, ಗಾಣದಲ್ಲಿ ತಯಾರಿಸಿದ ಎಣ್ಣೆ ಮೊದಲಾದ ಆಹಾರ ಪದಾರ್ಥಗಳನ್ನು ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಕನಸುಗಳಲ್ಲಿ, ಮಧ್ಯವರ್ತಿಗಳಿಲ್ಲದ ನೇರ ಮಾರುಕಟ್ಟೆ ಕಲ್ಪನೆಯೂ ಕೂಡ ಒಂದಾಗಿತ್ತು. ಸಹಕಾರ ವ್ಯವಸ್ಥೆಯಲ್ಲಿ ಯಶಸ್ಸು ಕಂಡಿರುವ ಹಾಲು ಮತ್ತು ಹಾಲಿನ ಉಪಉತ್ಪನ್ನಗಳ ರೀತಿಯೇ ರೈತರು ಬೆಳೆಯುವ ಎಲ್ಲಾ ರೀತಿಯ ದವಸ ಧಾನ್ಯಗಳು, ಹಣ್ಣು ತರಕಾರಿಗಳು ಮತ್ತು ಅದರ ಉಪ ಉತ್ಪನ್ನಗಳನ್ನು ಇಡೀ ಕರ್ನಾಟಕದ ರೈತರು ಒಂದೇ ಬ್ರಾಂಡ್‌ನ ಕೆಳಗೆ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ವ್ಯವಸ್ಥೆಯನ್ನು ಕಟ್ಟುವುದರ ಮೂಲಕ ಗಾಂಧೀಜಿಯವರು ಕಂಡಿದ್ದ ಗ್ರಾಮಸ್ವ ರಾಜ್ಯದ ಕನಸನ್ನು ನನಸು ಮಾಡಲು ಪ್ರಯತ್ನಪಟ್ಟಿದ್ದರು. ಈ ಬ್ರಾಂಡ್‌ಗೆ “ನಮ್ದು” ಎನ್ನುವ ಹೆಸರನ್ನು ಕೂಡ ಕೊಟ್ಟಿದ್ದರು ಅದನ್ನೇ ನಾವು ಮುಂದುವರೆಸಿದ್ದೇವೆ ಎಂದು ಟ್ರಸ್ಟ್ ಹೇಳಿದೆ.

ಇದನ್ನೂ ಓದಿ: ಗಾಂಧಿ ಜಯಂತಿಯಂದು ಕೃಷಿ ಮಸೂದೆ ವಿರೋಧಿಸಿ ’ಅನ್ನದಾತ’ರ ಉಪವಾಸ ಸತ್ಯಾಗ್ರಹ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಮೃತಭೂಮಿ ಅಂತರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಕೇಂದ್ರ, ನಿಸರ್ಗ ಟ್ರಸ್ಟ್, ನಿಸರ್ಗ ನೈಸರ್ಗಿಕ ಸಾವಯವ ಕೃಷಿಕರ ಸಂಘ, ಗುರುಮಲ್ಲೇಶ್ವರ ಸಾವಯವ ಕೃಷಿಕರ ಸಂಘ, ಮಹದೇಶ್ವರ ಜಿಲ್ಲಾ ಸಾವಯವ ಕೃಷಿಕರ ಸಂಘಗಳ ಸಹಯೋಗದಲ್ಲಿ ಈ ಮಳಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚೆಗೆ ಸಾವಯವ ಕೃಷಿ ಮತ್ತು ಸಾವಯವ ಉತ್ಪನ್ನಗಳಿಗೆ ಮಹತ್ವ ಹೆಚ್ಚಾಗುತ್ತಿರುವುದು ಒಂದು ಒಳ್ಳೆಯ ಬೆಳವಣಿಗೆಯಾಗಿದೆ. ಕೃಷಿ ಕ್ಷೇತ್ರಕ್ಕೆ ಉಳಿಗಾಲವಿಲ್ಲದಂತೆ ಹುನ್ನಾರ ಮಾಡುತ್ತಿರುವ ಕಾರ್ಪೋರೇಟ್ ಪ್ರಣೀತ ಸರ್ಕಾರಗಳ ಯೋಜನೆ ಮತ್ತು ಕಾನೂನುಗಳ ನಡುವೆ ಇಂತಹ ಸಣ್ಣ ಸಣ್ಣ ಕೆಲಸಗಳು ಮರುಭೂಮಿಯಲ್ಲಿ ಓಯಸಿಸ್‌ನಂತೆ ಕಾಣಿಸುತ್ತದೆ. ಹಾಗಾಗಿ ಇದನ್ನು ಬೆಂಬಲಿಸಿ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗುವಂತೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕನ ಕರ್ತವ್ಯವಾಗಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...