Homeಕರ್ನಾಟಕರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: 'ನಮ್ದು ಬ್ರ್ಯಾಂಡ್' ಆರಂಭ

ರೈತರಿಂದ ನೇರ ಗ್ರಾಹಕರಿಗೆ ವಿಷಮುಕ್ತ ಆಹಾರೋತ್ಪನ್ನ ಮಾರಲು ಪಣ: ‘ನಮ್ದು ಬ್ರ್ಯಾಂಡ್’ ಆರಂಭ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

- Advertisement -
- Advertisement -

ಚಾಮರಾಜನಗರದಲ್ಲಿ ವಿಷಮುಕ್ತ ಆಹಾರೋತ್ಪನ್ನಗಳ ನೇರ ಮಾರಾಟದ “ನಮ್ದು ಬ್ರ್ಯಾಂಡ್” ಮಳಿಗೆ ನಿನ್ನೆ (ಗಾಂಧಿ ಜಯಂತಿ) ಉದ್ಘಾಟನೆಯಾಗಿದ್ದು, ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಈ ಕನಸು ಕೊನೆಗೂ ನನಸಾಗಿದೆ.

ಇಂದು ಸರ್ಕಾರಗಳು ರೈತಪರವಾಗಿಲ್ಲ. ಬೀಜ ಗೊಬ್ಬರ ಸೇರಿ ಎಲ್ಲದರ ಬೆಲೆ ಏರಿಸುವುದರೊಂದಗೆ ಕನಿಷ್ಟ ಬೆಂಬಲ ಬೆಲೆ ನೀಡಲು ವಿಫಲವಾಗುತ್ತಿವೆ. ಇಂಥಹ ಕಷ್ಟದ ಪರಿಸ್ಥಿತಿಯಲ್ಲಿ ರೈತರು ಒಳ್ಳೆಯ ಬೆಳೆ ಬೆಳೆದರೂ ಅವರಿಗೆ ಲಾಭವಾಗದೇ ಮಧ್ಯವರ್ತಿಗಳ ಪಾಲಾಗುತ್ತಿದೆ. ಇನ್ನು ಹೆಚ್ಚಿನ ಇಳುವರಿಯ ಮೋಹಕ್ಕೆ ಬಿದ್ದು ಕೃಷಿಯಲ್ಲಿ ರಾಸಯನಿಕಗಳನ್ನು ಬಳಸುವವರೆ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ಅಮೃತಭೂಮಿ ಸುಸ್ಥಿರ ಅಭಿವೃದ್ದಿ ಕೇಂದ್ರ ಮತ್ತು ಕ.ರಾ.ರೈ.ಸಂಘ, ಹಸಿರು ಸೇನೆ ಮಾಡುತ್ತಿರುವ ವಿನೂತನ ಪ್ರಯೋಗವೇ ‘ನಮ್ದು’ ಬ್ರ್ಯಾಂಡ್ ಆಗಿದೆ.

ಮಧ್ಯವರ್ತಿಗಳ ಹಾವಳಿಯಿಂದ ತತ್ತರಿಸಿರುವ ರೈತ ಸಮುದಾಯಕ್ಕೆ ಒಂದು ಶಾಶ್ವತ ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಹಿಂದೆಂದಿಗಿಂತ ಇಂದು ಅತಿ ಮುಖ್ಯವಾಗಿದೆ. ಇತ್ತೀಚೆಗೆ ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕೂಡ ರೈತರಿಗಿದ್ದ ಅಲ್ಪಸ್ವಲ್ಪ ಮಾರುಕಟ್ಟೆಯ ಭದ್ರತೆಯನ್ನು ಕಸಿದುಕೊಂಡು ಕೃಷಿ ಮಾರುಕಟ್ಟೆಯನ್ನು ಸಂಪೂರ್ಣ ಖಾಸಗೀಕರಣಗೊಳಿಸಲು ಹೊರಟಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರಿಂದ ನೇರ ಗ್ರಾಹಕರಿಗೆ ತಲುಪಿಸಲು ನಮ್ದು ಬ್ರ್ಯಾಂಡ್‌ನ ಉದ್ದೇಶ ಎಂದು ಅಮೃತಭೂಮಿ ಟ್ರಸ್ಟ್ ಹೇಳಿದೆ.

ಅದರ ಮೊದಲ ಮಾರಾಟ ಮಳಿಗೆಯು ಚಾಮರಾಜನಗರದಲ್ಲಿ ಆರಂಭವಾಗಿದ್ದು, ಇಲ್ಲಿ ರೈತರು ಬೆಳೆದ ಸಿರಿಧಾನ್ಯಗಳು, ದವಸ ಧಾನ್ಯಗಳು, ಹಣ್ಣು, ತರಕಾರಿ, ಸೊಪ್ಪು, ಜೇನುತುಪ್ಪ, ಬೆಲ್ಲ, ಗಾಣದಲ್ಲಿ ತಯಾರಿಸಿದ ಎಣ್ಣೆ ಮೊದಲಾದ ಆಹಾರ ಪದಾರ್ಥಗಳನ್ನು ರೈತರೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲಿದ್ದಾರೆ.

ಇದನ್ನೂ ಓದಿ: ರೈತರಿಂದ ನೇರ ಗ್ರಾಹಕರಿಗೆ’ ಫೇಸ್‌ಬುಕ್‌ ಗ್ರೂಪ್: ವಿಭಿನ್ನ ಪ್ರಯೋಗಕ್ಕೆ ಅಭೂತಪೂರ್ವ ಪ್ರತಿಕ್ರಿಯೆ

ರೈತ ಮುಖಂಡರಾಗಿದ್ದ ಪ್ರೊ.ಎಂ.ಡಿ ನಂಜುಂಡಸ್ವಾಮಿಯವರ ತಮ್ಮ ಕಡೆಯ ದಿನಗಳಲ್ಲಿ ಕಂಡಿದ್ದ ಕನಸುಗಳಲ್ಲಿ, ಮಧ್ಯವರ್ತಿಗಳಿಲ್ಲದ ನೇರ ಮಾರುಕಟ್ಟೆ ಕಲ್ಪನೆಯೂ ಕೂಡ ಒಂದಾಗಿತ್ತು. ಸಹಕಾರ ವ್ಯವಸ್ಥೆಯಲ್ಲಿ ಯಶಸ್ಸು ಕಂಡಿರುವ ಹಾಲು ಮತ್ತು ಹಾಲಿನ ಉಪಉತ್ಪನ್ನಗಳ ರೀತಿಯೇ ರೈತರು ಬೆಳೆಯುವ ಎಲ್ಲಾ ರೀತಿಯ ದವಸ ಧಾನ್ಯಗಳು, ಹಣ್ಣು ತರಕಾರಿಗಳು ಮತ್ತು ಅದರ ಉಪ ಉತ್ಪನ್ನಗಳನ್ನು ಇಡೀ ಕರ್ನಾಟಕದ ರೈತರು ಒಂದೇ ಬ್ರಾಂಡ್‌ನ ಕೆಳಗೆ ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡುವ ವ್ಯವಸ್ಥೆಯನ್ನು ಕಟ್ಟುವುದರ ಮೂಲಕ ಗಾಂಧೀಜಿಯವರು ಕಂಡಿದ್ದ ಗ್ರಾಮಸ್ವ ರಾಜ್ಯದ ಕನಸನ್ನು ನನಸು ಮಾಡಲು ಪ್ರಯತ್ನಪಟ್ಟಿದ್ದರು. ಈ ಬ್ರಾಂಡ್‌ಗೆ “ನಮ್ದು” ಎನ್ನುವ ಹೆಸರನ್ನು ಕೂಡ ಕೊಟ್ಟಿದ್ದರು ಅದನ್ನೇ ನಾವು ಮುಂದುವರೆಸಿದ್ದೇವೆ ಎಂದು ಟ್ರಸ್ಟ್ ಹೇಳಿದೆ.

ಇದನ್ನೂ ಓದಿ: ಗಾಂಧಿ ಜಯಂತಿಯಂದು ಕೃಷಿ ಮಸೂದೆ ವಿರೋಧಿಸಿ ’ಅನ್ನದಾತ’ರ ಉಪವಾಸ ಸತ್ಯಾಗ್ರಹ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಅಮೃತಭೂಮಿ ಅಂತರಾಷ್ಟ್ರೀಯ ಸುಸ್ಥಿರ ಅಭಿವೃದ್ಧಿ ಕೇಂದ್ರ, ನಿಸರ್ಗ ಟ್ರಸ್ಟ್, ನಿಸರ್ಗ ನೈಸರ್ಗಿಕ ಸಾವಯವ ಕೃಷಿಕರ ಸಂಘ, ಗುರುಮಲ್ಲೇಶ್ವರ ಸಾವಯವ ಕೃಷಿಕರ ಸಂಘ, ಮಹದೇಶ್ವರ ಜಿಲ್ಲಾ ಸಾವಯವ ಕೃಷಿಕರ ಸಂಘಗಳ ಸಹಯೋಗದಲ್ಲಿ ಈ ಮಳಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚೆಗೆ ಸಾವಯವ ಕೃಷಿ ಮತ್ತು ಸಾವಯವ ಉತ್ಪನ್ನಗಳಿಗೆ ಮಹತ್ವ ಹೆಚ್ಚಾಗುತ್ತಿರುವುದು ಒಂದು ಒಳ್ಳೆಯ ಬೆಳವಣಿಗೆಯಾಗಿದೆ. ಕೃಷಿ ಕ್ಷೇತ್ರಕ್ಕೆ ಉಳಿಗಾಲವಿಲ್ಲದಂತೆ ಹುನ್ನಾರ ಮಾಡುತ್ತಿರುವ ಕಾರ್ಪೋರೇಟ್ ಪ್ರಣೀತ ಸರ್ಕಾರಗಳ ಯೋಜನೆ ಮತ್ತು ಕಾನೂನುಗಳ ನಡುವೆ ಇಂತಹ ಸಣ್ಣ ಸಣ್ಣ ಕೆಲಸಗಳು ಮರುಭೂಮಿಯಲ್ಲಿ ಓಯಸಿಸ್‌ನಂತೆ ಕಾಣಿಸುತ್ತದೆ. ಹಾಗಾಗಿ ಇದನ್ನು ಬೆಂಬಲಿಸಿ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಯಶಸ್ವಿಯಾಗುವಂತೆ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕನ ಕರ್ತವ್ಯವಾಗಿದೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...