Homeಕರ್ನಾಟಕಹೊಸ ಸಂಸತ್‌ ಕಟ್ಟಡಕ್ಕೆ ‘ಅಂಬೇಡ್ಕರ್‌’ ಹೆಸರಿಡಿ: ಕೇಂದ್ರಕ್ಕೆ ತೆಲಂಗಾಣ ಸರ್ಕಾರ ಒತ್ತಾಯ

ಹೊಸ ಸಂಸತ್‌ ಕಟ್ಟಡಕ್ಕೆ ‘ಅಂಬೇಡ್ಕರ್‌’ ಹೆಸರಿಡಿ: ಕೇಂದ್ರಕ್ಕೆ ತೆಲಂಗಾಣ ಸರ್ಕಾರ ಒತ್ತಾಯ

- Advertisement -
- Advertisement -

ತೆಲಂಗಾಣ ವಿಧಾನಸಭೆಯು ಮಂಗಳವಾರ ಎರಡು ನಿರ್ಣಯಗಳನ್ನು ಅಂಗೀಕರಿಸಿದೆ. ದೆಹಲಿಯ ಹೊಸ ಸಂಸತ್‌ ಕಟ್ಟಡಕ್ಕೆ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಹೆಸರಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒಂದು ನಿರ್ಣಯ ಒತ್ತಾಯಿಸಿದರೆ, ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಹೊಸ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ವಾಪಸ್‌ ಪಡೆಯುವಂತೆ ಮತ್ತೊಂದು ನಿರ್ಣಯ ಒತ್ತಾಯಿಸಿದೆ.

ಡಾ.ಅಂಬೇಡ್ಕರ್ ಕುರಿತು ನಿರ್ಣಯ ಮಂಡಿಸಿದ ಸಚಿವ ಕೆ.ಟಿ.ರಾಮರಾವ್, ಸಂವಿಧಾನ ರಚನೆಯಲ್ಲಿ ಅವರ ಕೊಡುಗೆಯನ್ನು ಶ್ಲಾಘಿಸಿದರು. ಹೊಸ ರಾಜ್ಯಗಳ ರಚನೆಗೆ ಸಂಬಂಧಿಸಿದ ಸಂವಿಧಾನದ 3 ನೇ ಪರಿಚ್ಛೇದದಿಂದಾಗಿ ತೆಲಂಗಾಣ ರಚನೆಯಾಗಿದೆ ಎಂದು ಬಣ್ಣಿಸಿದ್ದಾರೆ.

ಜೂನ್ 2, 2014ರಂದು ಆಂಧ್ರ ಪ್ರದೇಶವನ್ನು ಇಬ್ಬಾಗ ಮಾಡಿ ತೆಲಂಗಾಣ ರಾಜ್ಯವನ್ನು ರಚಿಸಲಾಯಿತು. “ಭಾರತವು ಪ್ರಜಾಸತ್ತಾತ್ಮಕ ಗಣರಾಜ್ಯವಾಗಲು ಅಂಬೇಡ್ಕರ್ ಕಾರಣ” ಎಂದು ಕೆ.ಟಿ.ಆರ್‌. ಬಣ್ಣಿಸಿದ್ದಾರೆ.

“ಹೊಸ ಸಂಸತ್ತಿನ ಕಟ್ಟಡಕ್ಕೆ ಅಂಬೇಡ್ಕರ್‌ರವರ ಹೆಸರನ್ನು ಇಡುವುದಕ್ಕಿಂತ ಉತ್ತಮವಾದ ಶ್ರದ್ಧಾಂಜಲಿ ಇನ್ನೊಂದಿಲ್ಲ” ಎಂದು ಅವರು ಹೇಳಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಈ ನಿರ್ಣಯವನ್ನು ಬೆಂಬಲಿಸಿವೆ. ಧ್ವನಿ ಮತದ ಮೂಲಕ ಸರ್ವಾನುಮತದಿಂದ ನಿರ್ಣಯ ಅಂಗೀಕಾರವಾಗಿದೆ.

ವಿದ್ಯುತ್ ತಿದ್ದುಪಡಿ ಮಸೂದೆಯನ್ನು ವಿರೋಧಿಸುವ ನಿರ್ಣಯವನ್ನು ಇಂಧನ ಸಚಿವ ಜಿ ಜಗದೀಶ್ ರೆಡ್ಡಿ ಮಂಗಳವಾರ ಮಂಡಿಸಿದರು. ಉದ್ದೇಶಿತ ಶಾಸನವು ರೈತರು, ಸಮಾಜದ ಬಡ ವರ್ಗದ ಜನರು ಮತ್ತು ವಿದ್ಯುತ್ ಕ್ಷೇತ್ರದ ನೌಕರರ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿದೆ ಎಂದು ಎಚ್ಚರಿಸಿದರು.

ರಾಜ್ಯ ವಿಧಾನಸಭೆಯಲ್ಲೂ ಈ ಕುರಿತು ಚರ್ಚೆಯಾಗಿದ್ದು, ಮಸೂದೆಯನ್ನು ವಾಪಸ್‌ ಪಡೆಯಬೇಕು ಎಂದು ಕೋರಲಾಯಿತು.

ಮಸೂದೆಯನ್ನು ಆಗಸ್ಟ್ 8 ರಂದು ಲೋಕಸಭೆಯಲ್ಲಿ ಮಂಡಿಸಲಾಯಿತು. ವಿದ್ಯುತ್ ಕಾಯಿದೆ- 2003 ಅನ್ನು ತಿದ್ದುಪಡಿ ಮಾಡಲು ಉದ್ದೇಶಿಸಿರುವ ಈ ಮಸೂದೆಗೆ ವಿರೋಧ ಪಕ್ಷಗಳು ವ್ಯಾಪಕ ಟೀಕೆ ವ್ಯಕ್ತಪಡಿಸಿವೆ. ಬಳಿಕ ಮಸೂದೆಯನ್ನು ಪರಿಶೀಲನೆಗಾಗಿ ಇಂಧನ ಸಂಸದೀಯ ಸ್ಥಾಯಿ ಸಮಿತಿಗೆ ಕಳುಹಿಸಲಾಗಿದೆ.

ಇದನ್ನೂ ಓದಿರಿ: ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ವಿದ್ಯುತ್ ತಿದ್ದುಪಡಿ ಮಸೂದೆ 2022- ಒಂದು ಪ್ರದೇಶದಲ್ಲಿ ಬಹು ಸೇವಾ ಪೂರೈಕೆದಾರರಿಗೆ ಅವಕಾಶ ನೀಡುತ್ತದೆ. ಗ್ರಾಹಕರಿಗೆ ಆಯ್ಕೆಗಳನ್ನು ಒದಗಿಸುವ ಮೂಲಕ ವಿದ್ಯುತ್ ವಿತರಣಾ ವಲಯದಲ್ಲಿ ಸ್ಪರ್ಧೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತದೆ.

ಮಸೂದೆಯು ಖಾಸಗೀಕರಣವನ್ನು ಉತ್ತೇಜಿಸಬಹುದು. ಸಹಕಾರಿ ಒಕ್ಕೂಟ ವ್ಯವಸ್ಥೆಗೆ ತೊಂದರೆ ಉಂಟುಮಾಡಬಹುದು ಎಂದು ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸಿವೆ. ವಿದ್ಯುತ್‌ ಪೂರೈಕೆಯಲ್ಲಿ ರೈತರಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ಕಿತ್ತುಕೊಳ್ಳುವ ಆತಂಕವೂ ಈ ಮಸೂದೆಯಿಂದ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...