Homeಕರ್ನಾಟಕಹೊಸ ಸಂಸತ್‌ ಕಟ್ಟಡಕ್ಕೆ ‘ಅಂಬೇಡ್ಕರ್‌’ ಹೆಸರಿಡಿ: ಕೇಂದ್ರಕ್ಕೆ ತೆಲಂಗಾಣ ಸರ್ಕಾರ ಒತ್ತಾಯ

ಹೊಸ ಸಂಸತ್‌ ಕಟ್ಟಡಕ್ಕೆ ‘ಅಂಬೇಡ್ಕರ್‌’ ಹೆಸರಿಡಿ: ಕೇಂದ್ರಕ್ಕೆ ತೆಲಂಗಾಣ ಸರ್ಕಾರ ಒತ್ತಾಯ

- Advertisement -
- Advertisement -

ತೆಲಂಗಾಣ ವಿಧಾನಸಭೆಯು ಮಂಗಳವಾರ ಎರಡು ನಿರ್ಣಯಗಳನ್ನು ಅಂಗೀಕರಿಸಿದೆ. ದೆಹಲಿಯ ಹೊಸ ಸಂಸತ್‌ ಕಟ್ಟಡಕ್ಕೆ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಹೆಸರಿಡಬೇಕು ಎಂದು ಕೇಂದ್ರ ಸರ್ಕಾರವನ್ನು ಒಂದು ನಿರ್ಣಯ ಒತ್ತಾಯಿಸಿದರೆ, ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಹೊಸ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ವಾಪಸ್‌ ಪಡೆಯುವಂತೆ ಮತ್ತೊಂದು ನಿರ್ಣಯ ಒತ್ತಾಯಿಸಿದೆ.

ಡಾ.ಅಂಬೇಡ್ಕರ್ ಕುರಿತು ನಿರ್ಣಯ ಮಂಡಿಸಿದ ಸಚಿವ ಕೆ.ಟಿ.ರಾಮರಾವ್, ಸಂವಿಧಾನ ರಚನೆಯಲ್ಲಿ ಅವರ ಕೊಡುಗೆಯನ್ನು ಶ್ಲಾಘಿಸಿದರು. ಹೊಸ ರಾಜ್ಯಗಳ ರಚನೆಗೆ ಸಂಬಂಧಿಸಿದ ಸಂವಿಧಾನದ 3 ನೇ ಪರಿಚ್ಛೇದದಿಂದಾಗಿ ತೆಲಂಗಾಣ ರಚನೆಯಾಗಿದೆ ಎಂದು ಬಣ್ಣಿಸಿದ್ದಾರೆ.

ಜೂನ್ 2, 2014ರಂದು ಆಂಧ್ರ ಪ್ರದೇಶವನ್ನು ಇಬ್ಬಾಗ ಮಾಡಿ ತೆಲಂಗಾಣ ರಾಜ್ಯವನ್ನು ರಚಿಸಲಾಯಿತು. “ಭಾರತವು ಪ್ರಜಾಸತ್ತಾತ್ಮಕ ಗಣರಾಜ್ಯವಾಗಲು ಅಂಬೇಡ್ಕರ್ ಕಾರಣ” ಎಂದು ಕೆ.ಟಿ.ಆರ್‌. ಬಣ್ಣಿಸಿದ್ದಾರೆ.

“ಹೊಸ ಸಂಸತ್ತಿನ ಕಟ್ಟಡಕ್ಕೆ ಅಂಬೇಡ್ಕರ್‌ರವರ ಹೆಸರನ್ನು ಇಡುವುದಕ್ಕಿಂತ ಉತ್ತಮವಾದ ಶ್ರದ್ಧಾಂಜಲಿ ಇನ್ನೊಂದಿಲ್ಲ” ಎಂದು ಅವರು ಹೇಳಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಈ ನಿರ್ಣಯವನ್ನು ಬೆಂಬಲಿಸಿವೆ. ಧ್ವನಿ ಮತದ ಮೂಲಕ ಸರ್ವಾನುಮತದಿಂದ ನಿರ್ಣಯ ಅಂಗೀಕಾರವಾಗಿದೆ.

ವಿದ್ಯುತ್ ತಿದ್ದುಪಡಿ ಮಸೂದೆಯನ್ನು ವಿರೋಧಿಸುವ ನಿರ್ಣಯವನ್ನು ಇಂಧನ ಸಚಿವ ಜಿ ಜಗದೀಶ್ ರೆಡ್ಡಿ ಮಂಗಳವಾರ ಮಂಡಿಸಿದರು. ಉದ್ದೇಶಿತ ಶಾಸನವು ರೈತರು, ಸಮಾಜದ ಬಡ ವರ್ಗದ ಜನರು ಮತ್ತು ವಿದ್ಯುತ್ ಕ್ಷೇತ್ರದ ನೌಕರರ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿದೆ ಎಂದು ಎಚ್ಚರಿಸಿದರು.

ರಾಜ್ಯ ವಿಧಾನಸಭೆಯಲ್ಲೂ ಈ ಕುರಿತು ಚರ್ಚೆಯಾಗಿದ್ದು, ಮಸೂದೆಯನ್ನು ವಾಪಸ್‌ ಪಡೆಯಬೇಕು ಎಂದು ಕೋರಲಾಯಿತು.

ಮಸೂದೆಯನ್ನು ಆಗಸ್ಟ್ 8 ರಂದು ಲೋಕಸಭೆಯಲ್ಲಿ ಮಂಡಿಸಲಾಯಿತು. ವಿದ್ಯುತ್ ಕಾಯಿದೆ- 2003 ಅನ್ನು ತಿದ್ದುಪಡಿ ಮಾಡಲು ಉದ್ದೇಶಿಸಿರುವ ಈ ಮಸೂದೆಗೆ ವಿರೋಧ ಪಕ್ಷಗಳು ವ್ಯಾಪಕ ಟೀಕೆ ವ್ಯಕ್ತಪಡಿಸಿವೆ. ಬಳಿಕ ಮಸೂದೆಯನ್ನು ಪರಿಶೀಲನೆಗಾಗಿ ಇಂಧನ ಸಂಸದೀಯ ಸ್ಥಾಯಿ ಸಮಿತಿಗೆ ಕಳುಹಿಸಲಾಗಿದೆ.

ಇದನ್ನೂ ಓದಿರಿ: ಅಂಬೇಡ್ಕರ್‌ವಾದಿ ದೃಷ್ಟಿಯಲ್ಲಿ ಸಾವರ್ಕರ್‌ ನೋಡುತ್ತಿದ್ದೇನೆ: ಎನ್‌.ಮಹೇಶ್‌

ವಿದ್ಯುತ್ ತಿದ್ದುಪಡಿ ಮಸೂದೆ 2022- ಒಂದು ಪ್ರದೇಶದಲ್ಲಿ ಬಹು ಸೇವಾ ಪೂರೈಕೆದಾರರಿಗೆ ಅವಕಾಶ ನೀಡುತ್ತದೆ. ಗ್ರಾಹಕರಿಗೆ ಆಯ್ಕೆಗಳನ್ನು ಒದಗಿಸುವ ಮೂಲಕ ವಿದ್ಯುತ್ ವಿತರಣಾ ವಲಯದಲ್ಲಿ ಸ್ಪರ್ಧೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತದೆ.

ಮಸೂದೆಯು ಖಾಸಗೀಕರಣವನ್ನು ಉತ್ತೇಜಿಸಬಹುದು. ಸಹಕಾರಿ ಒಕ್ಕೂಟ ವ್ಯವಸ್ಥೆಗೆ ತೊಂದರೆ ಉಂಟುಮಾಡಬಹುದು ಎಂದು ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸಿವೆ. ವಿದ್ಯುತ್‌ ಪೂರೈಕೆಯಲ್ಲಿ ರೈತರಿಗೆ ನೀಡುತ್ತಿದ್ದ ಸಬ್ಸಿಡಿಯನ್ನು ಕಿತ್ತುಕೊಳ್ಳುವ ಆತಂಕವೂ ಈ ಮಸೂದೆಯಿಂದ ಎದುರಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...