Homeಕರ್ನಾಟಕರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಿಸುವುದು ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -
- Advertisement -

ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ ‘ದೇವೇಗೌಡ ಬ್ಯಾರೇಜ್’ ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನಗರವನ್ನು ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದೆಯೇ ಬಿಎಸ್ವೈ ಅವರೇ? ಹಾಗಿದ್ದರೆ ಜಿಲ್ಲೆಗೆ ನಾನು ನನ್ನ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ ಎಂದಿದ್ದಾರೆ.

ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನು ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪವಾಗಿದೆ ಎಂದಿದ್ದಾರೆ.

ಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗದೇ ಇರಲಿ. ಕೆರೆಗಳು ಮುಚ್ಚದೇ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೇ ಇರಲಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ? ಇಡುವರೆ ಎಂದು ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್‌ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ ಎಂದಿದ್ದಾರೆ.

ರಾಮನಗರ ತಾಲೂಕು ಮೊದಲು ‘ಕ್ಲೋಸ್ ಪೇಟೆ’ ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ ಎಂದಿದ್ದಾರೆ.

ಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ ಎಂದು ಅವರು ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...