Homeಕರ್ನಾಟಕರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಾವಣೆಯಿಂದ ಹಿಂದೆ ಸರಿಯದಿದ್ದರೆ ಹೋರಾಟ ಅನಿವಾರ್ಯ: ಎಚ್‌.ಡಿ.ಕೆ

ರಾಮನಗರ ಹೆಸರು ಬದಲಿಸುವುದು ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -
- Advertisement -

ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ ‘ದೇವೇಗೌಡ ಬ್ಯಾರೇಜ್’ ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮಾರ್ಮಿಕವಾಗಿ ಯಡಿಯೂರಪ್ಪ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಮನಗರವನ್ನು ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದೆಯೇ ಬಿಎಸ್ವೈ ಅವರೇ? ಹಾಗಿದ್ದರೆ ಜಿಲ್ಲೆಗೆ ನಾನು ನನ್ನ ಬಜೆಟ್‌ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ ಎಂದಿದ್ದಾರೆ.

ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನು ಮುಂದೆ ಹೋಗಬಾರದು ಎಂದು ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪವಾಗಿದೆ ಎಂದಿದ್ದಾರೆ.

ಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗದೇ ಇರಲಿ. ಕೆರೆಗಳು ಮುಚ್ಚದೇ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೇ ಇರಲಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ? ಇಡುವರೆ ಎಂದು ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು. ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್‌ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ ಎಂದಿದ್ದಾರೆ.

ರಾಮನಗರ ತಾಲೂಕು ಮೊದಲು ‘ಕ್ಲೋಸ್ ಪೇಟೆ’ ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ ಎಂದಿದ್ದಾರೆ.

ಈ ಜಿಲ್ಲೆ ಗಂಗರು ಆಳಿದ ನಾಡು. ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ ಎಂದು ಅವರು ಹೇಳಿದ್ದಾರೆ.

ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....